Homeಕರ್ನಾಟಕಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಪ್ರಕಟಿಸಿದ ‘ದಿ ಫೈಲ್‌’ಗೆ ಪೊಲೀಸರಿಂದ ನೋಟಿಸ್

ಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಪ್ರಕಟಿಸಿದ ‘ದಿ ಫೈಲ್‌’ಗೆ ಪೊಲೀಸರಿಂದ ನೋಟಿಸ್

ಇದು ತನಿಖಾ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಎಂದು ‘ದಿ ಫೈಲ್’ ಸಂಪಾದಕರು ಆರೋಪಿಸಿದ್ದಾರೆ

- Advertisement -
- Advertisement -

ಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಮಾಡಿದ್ದ ಕನ್ನಡದ ಖ್ಯಾತ ತನಿಖಾ ಪೋರ್ಟಲ್ ‘ದಿ ಫೈಲ್‌’ಗೆ ಸೈಬರ್‌ ಪೊಲೀಸ್ ಕೇಂದ್ರ ವಿಭಾಗವೂ ನೋಟಿಸ್ ನೀಡಿದ್ದು, ವರದಿಗಾಗಿ ಸರ್ಕಾರಿ ಕಚೇರಿಯ ಇ-ದಾಖಲೆಗಳನ್ನು ನೀಡಿರುವ ಮಾಹಿತಿದಾರರ ವಿವರಗಳನ್ನು ಒದಗಿಸುಂತೆ ಕೇಳಿಕೊಂಡಿದೆ. ಪೊಲೀಸರ ಈ ಕ್ರಮವನ್ನು ಖಂಡಿಸಿರುವ ‘ದಿ ಫೈಲ್’ ಸಂಸ್ಥಾಪಕ ಜಿ. ಮಹಾಂತೇಶ್‌, ತನಿಖಾ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಎಂದು ಆರೋಪಿಸಿದ್ದಾರೆ.

ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ ಸೇರಿದಂತೆ ಒಟ್ಟು ಮೂವರನ್ನು ಸೇವೆಗೆ ಪುನರ್‌ ಸ್ಥಾಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯ ಬಗ್ಗೆಗಿನ ವರದಿಯನ್ನು ದಾಖಲೆ ಸಹಿತ ‘ದಿ ಫೈಲ್’ ದಿನಾಂಕ 2022 ರ ನವೆಂಬರ್‌ 10 ರಂದು ಪ್ರಕಟಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೀಗಾಗಿ ಮಾಹಿತಿ ತಂತ್ರಜ್ಞಾನ ಕಾಯಿದೆ – 2000 ರ ಸೆಕ್ಷನ್ 66 ರ ಅಡಿಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದು, ಇಲಾಖೆಯ ಇ-ಆಫೀಸ್ ಪೋರ್ಟಲ್‌ಗೆ ಅಕ್ರಮವಾಗಿ ಪ್ರವೇಶಿಸಿದ್ದಕ್ಕೆ ಮತ್ತು ದಾಖಲೆಯನ್ನು ಸೋರಿಕೆ ಮಾಡಿದ್ದಕ್ಕಾಗಿ ಹೆಸರಿಸದ ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದೆ.

ಅಲ್ಲದೆ, ಸೈಬರ್‌ ಪೊಲೀಸರು ‘ದಿ ಫೈಲ್‌’ಗೆ ನೋಟಿಸ್ ಜಾರಿ ಮಾಡಿದ್ದು, ‘ದಿ ಫೈಲ್‌’ಗೆ ಮಾಹಿತಿ ನೀಡಿದವರ ಹೆಸರು, ಫೋನ್‌ ನಂಬರ್‌, ಐ.ಡಿ. ಫ್ರೂಫ್‌ ಹಾಗೂ ವಿಳಾಸವನ್ನು ತನಿಖೆಗೆ ಒದಗಿಸಬೇಕು ಎಂದು ನೋಟೀಸ್‌ನಲ್ಲಿ ಸೂಚಿಸಿದೆ.

ಸೈಬರ್‌‌‌ ಪೊಲೀಸರ ನೋಟಿಸ್‌ಗೆ ‘ದಿ ಫೈಲ್’ ಉತ್ತರಿಸಿದ್ದು, ಈ ವರೆಗೆ ಪೊಲೀಸರಿಂದ ಪ್ರತ್ಯುತ್ತರ ಬಂದಿಲ್ಲ ಎಂದು ‘ದಿ ಫೈಲ್’ ಸಂಪಾದಕ ಜಿ. ಮಹಾಂತೇಶ್‌ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಪೊಲೀಸರಿಗೆ ನೀಡಿದ ಉತ್ತರದಲ್ಲಿ,“ ‘ದಿ ಫೈಲ್’ ಸ್ವತಂತ್ರ ಮಾಧ್ಯಮವಾಗಿದ್ದು, ಅದು ತನ್ನ ಸುದ್ದಿಗಳನ್ನು ವೆಬ್‌ಸೈಟ್ ಮುಖಾಂತರ ವರದಿಯನ್ನು ಪ್ರಕಟಿಸುತ್ತದೆ. ಪೊಲೀಸರು ಉಲ್ಲೇಖಿಸಿದ ಪ್ರಕರಣದ ಮಾಹಿತಿಯು ಸರ್ಕಾರಿ ದಾಖಲೆಯ ವಿಷಯವಾಗಿದ್ದು, ಅದು ಸಾರ್ವಜನಿಕ ವಿಷಯಕ್ಕೆ ಸಂಬಂಧಿಸಿದ ಮಾಹಿತಿಯಾಗಿರುತ್ತದೆ. ಅದಲ್ಲದೇ ಸಂವಿಧಾನದ ವಿಧಿ 19(1)(ಎ) ಅಡಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿರುತ್ತದೆ” ಎಂದು ಹೇಳಿದೆ.

“ಮಾಧ್ಯಮ ಸಂಸ್ಥೆಯಾಗಿ ಸುದ್ದಿಯ ಮೂಲದ ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕಾಗಿರುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ಅದಲ್ಲದೇ ನೀವು ಕೇಳಿದ ಪ್ರಕರಣ ಮತ್ತುಅದರ ಮಾಹಿತಿಯು ಸರ್ಕಾರಿ ಗೌಪ್ಯತೆ ಕಾಯ್ದೆ 1923 ರ ಅಡಿಯಲ್ಲಿ ಬರುತ್ತದೆಯೋ ಎಂಬ ವಿಷಯವನ್ನು ತಿಳಿಸಿರುವುದಿಲ್ಲ. ಹೀಗಾಗಿ ಪ್ರಕರಣ ಸರ್ಕಾರಿ ಗೌಪ್ಯತಾ ಕಾಯ್ದೆ 1923ರ ಅಡಿಯಲ್ಲಿ ಬರುವ ವಿಷಯವಾಗಿದ್ದಲ್ಲಿ, ನಮಗೆ ತಿಳಿಸಿದಲ್ಲಿ, ನಾವು ತಾವು ಕೇಳಿದ ವಿವರಗಳನ್ನು ಕೊಡುವ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಪೊಲೀಸರಿಗೆ ‘ದಿ ಫೈಲ್’ ಪ್ರತಿಕ್ರಿಯೆ ನೀಡಿದೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಜಿ. ಮಹಾಂತೇಶ್‌, “ಮಾಹಿತಿದಾರರ ಮೂಲವನ್ನು ಕೇಳಿ ಮಾಧ್ಯಮ ಸಂಸ್ಥೆಗೆ ನೋಟಿಸ್ ಜಾರಿ ಮಾಡುತ್ತಿರುವುದು ಇದುವೆ ಮೊದಲ ಬಾರಿಯಾಗಿದೆ. ಪೊಲೀಸ್ ನೋಟಿಸ್‌ಗೆ ನಾವು ಪ್ರತಿಕ್ರಿಯೆ ನೀಡಿದ್ದು, ಈ ವೆರೆಗೆ ಪ್ರತ್ಯುತ್ತರ ಬಂದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...