Homeಕರ್ನಾಟಕಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಪ್ರಕಟಿಸಿದ ‘ದಿ ಫೈಲ್‌’ಗೆ ಪೊಲೀಸರಿಂದ ನೋಟಿಸ್

ಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಪ್ರಕಟಿಸಿದ ‘ದಿ ಫೈಲ್‌’ಗೆ ಪೊಲೀಸರಿಂದ ನೋಟಿಸ್

ಇದು ತನಿಖಾ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಎಂದು ‘ದಿ ಫೈಲ್’ ಸಂಪಾದಕರು ಆರೋಪಿಸಿದ್ದಾರೆ

- Advertisement -
- Advertisement -

ಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಮಾಡಿದ್ದ ಕನ್ನಡದ ಖ್ಯಾತ ತನಿಖಾ ಪೋರ್ಟಲ್ ‘ದಿ ಫೈಲ್‌’ಗೆ ಸೈಬರ್‌ ಪೊಲೀಸ್ ಕೇಂದ್ರ ವಿಭಾಗವೂ ನೋಟಿಸ್ ನೀಡಿದ್ದು, ವರದಿಗಾಗಿ ಸರ್ಕಾರಿ ಕಚೇರಿಯ ಇ-ದಾಖಲೆಗಳನ್ನು ನೀಡಿರುವ ಮಾಹಿತಿದಾರರ ವಿವರಗಳನ್ನು ಒದಗಿಸುಂತೆ ಕೇಳಿಕೊಂಡಿದೆ. ಪೊಲೀಸರ ಈ ಕ್ರಮವನ್ನು ಖಂಡಿಸಿರುವ ‘ದಿ ಫೈಲ್’ ಸಂಸ್ಥಾಪಕ ಜಿ. ಮಹಾಂತೇಶ್‌, ತನಿಖಾ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಎಂದು ಆರೋಪಿಸಿದ್ದಾರೆ.

ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ ಸೇರಿದಂತೆ ಒಟ್ಟು ಮೂವರನ್ನು ಸೇವೆಗೆ ಪುನರ್‌ ಸ್ಥಾಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯ ಬಗ್ಗೆಗಿನ ವರದಿಯನ್ನು ದಾಖಲೆ ಸಹಿತ ‘ದಿ ಫೈಲ್’ ದಿನಾಂಕ 2022 ರ ನವೆಂಬರ್‌ 10 ರಂದು ಪ್ರಕಟಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೀಗಾಗಿ ಮಾಹಿತಿ ತಂತ್ರಜ್ಞಾನ ಕಾಯಿದೆ – 2000 ರ ಸೆಕ್ಷನ್ 66 ರ ಅಡಿಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದು, ಇಲಾಖೆಯ ಇ-ಆಫೀಸ್ ಪೋರ್ಟಲ್‌ಗೆ ಅಕ್ರಮವಾಗಿ ಪ್ರವೇಶಿಸಿದ್ದಕ್ಕೆ ಮತ್ತು ದಾಖಲೆಯನ್ನು ಸೋರಿಕೆ ಮಾಡಿದ್ದಕ್ಕಾಗಿ ಹೆಸರಿಸದ ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದೆ.

ಅಲ್ಲದೆ, ಸೈಬರ್‌ ಪೊಲೀಸರು ‘ದಿ ಫೈಲ್‌’ಗೆ ನೋಟಿಸ್ ಜಾರಿ ಮಾಡಿದ್ದು, ‘ದಿ ಫೈಲ್‌’ಗೆ ಮಾಹಿತಿ ನೀಡಿದವರ ಹೆಸರು, ಫೋನ್‌ ನಂಬರ್‌, ಐ.ಡಿ. ಫ್ರೂಫ್‌ ಹಾಗೂ ವಿಳಾಸವನ್ನು ತನಿಖೆಗೆ ಒದಗಿಸಬೇಕು ಎಂದು ನೋಟೀಸ್‌ನಲ್ಲಿ ಸೂಚಿಸಿದೆ.

ಸೈಬರ್‌‌‌ ಪೊಲೀಸರ ನೋಟಿಸ್‌ಗೆ ‘ದಿ ಫೈಲ್’ ಉತ್ತರಿಸಿದ್ದು, ಈ ವರೆಗೆ ಪೊಲೀಸರಿಂದ ಪ್ರತ್ಯುತ್ತರ ಬಂದಿಲ್ಲ ಎಂದು ‘ದಿ ಫೈಲ್’ ಸಂಪಾದಕ ಜಿ. ಮಹಾಂತೇಶ್‌ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಪೊಲೀಸರಿಗೆ ನೀಡಿದ ಉತ್ತರದಲ್ಲಿ,“ ‘ದಿ ಫೈಲ್’ ಸ್ವತಂತ್ರ ಮಾಧ್ಯಮವಾಗಿದ್ದು, ಅದು ತನ್ನ ಸುದ್ದಿಗಳನ್ನು ವೆಬ್‌ಸೈಟ್ ಮುಖಾಂತರ ವರದಿಯನ್ನು ಪ್ರಕಟಿಸುತ್ತದೆ. ಪೊಲೀಸರು ಉಲ್ಲೇಖಿಸಿದ ಪ್ರಕರಣದ ಮಾಹಿತಿಯು ಸರ್ಕಾರಿ ದಾಖಲೆಯ ವಿಷಯವಾಗಿದ್ದು, ಅದು ಸಾರ್ವಜನಿಕ ವಿಷಯಕ್ಕೆ ಸಂಬಂಧಿಸಿದ ಮಾಹಿತಿಯಾಗಿರುತ್ತದೆ. ಅದಲ್ಲದೇ ಸಂವಿಧಾನದ ವಿಧಿ 19(1)(ಎ) ಅಡಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿರುತ್ತದೆ” ಎಂದು ಹೇಳಿದೆ.

“ಮಾಧ್ಯಮ ಸಂಸ್ಥೆಯಾಗಿ ಸುದ್ದಿಯ ಮೂಲದ ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕಾಗಿರುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ಅದಲ್ಲದೇ ನೀವು ಕೇಳಿದ ಪ್ರಕರಣ ಮತ್ತುಅದರ ಮಾಹಿತಿಯು ಸರ್ಕಾರಿ ಗೌಪ್ಯತೆ ಕಾಯ್ದೆ 1923 ರ ಅಡಿಯಲ್ಲಿ ಬರುತ್ತದೆಯೋ ಎಂಬ ವಿಷಯವನ್ನು ತಿಳಿಸಿರುವುದಿಲ್ಲ. ಹೀಗಾಗಿ ಪ್ರಕರಣ ಸರ್ಕಾರಿ ಗೌಪ್ಯತಾ ಕಾಯ್ದೆ 1923ರ ಅಡಿಯಲ್ಲಿ ಬರುವ ವಿಷಯವಾಗಿದ್ದಲ್ಲಿ, ನಮಗೆ ತಿಳಿಸಿದಲ್ಲಿ, ನಾವು ತಾವು ಕೇಳಿದ ವಿವರಗಳನ್ನು ಕೊಡುವ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಪೊಲೀಸರಿಗೆ ‘ದಿ ಫೈಲ್’ ಪ್ರತಿಕ್ರಿಯೆ ನೀಡಿದೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಜಿ. ಮಹಾಂತೇಶ್‌, “ಮಾಹಿತಿದಾರರ ಮೂಲವನ್ನು ಕೇಳಿ ಮಾಧ್ಯಮ ಸಂಸ್ಥೆಗೆ ನೋಟಿಸ್ ಜಾರಿ ಮಾಡುತ್ತಿರುವುದು ಇದುವೆ ಮೊದಲ ಬಾರಿಯಾಗಿದೆ. ಪೊಲೀಸ್ ನೋಟಿಸ್‌ಗೆ ನಾವು ಪ್ರತಿಕ್ರಿಯೆ ನೀಡಿದ್ದು, ಈ ವೆರೆಗೆ ಪ್ರತ್ಯುತ್ತರ ಬಂದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....