Homeಕರ್ನಾಟಕಜ.22ರಂದು ದೇವಸ್ಥಾನಗಳಲ್ಲಿ 'ವಿಶೇಷ' ಪೂಜೆಗೆ ಸೂಚನೆ; ‘ಮೃದು ಹಿಂದುತ್ವ’ದ ಮೊರೆ ಹೋಯ್ತಾ ಕಾಂಗ್ರೆಸ್?

ಜ.22ರಂದು ದೇವಸ್ಥಾನಗಳಲ್ಲಿ ‘ವಿಶೇಷ’ ಪೂಜೆಗೆ ಸೂಚನೆ; ‘ಮೃದು ಹಿಂದುತ್ವ’ದ ಮೊರೆ ಹೋಯ್ತಾ ಕಾಂಗ್ರೆಸ್?

- Advertisement -
- Advertisement -

‘ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಜ.22 ರಂದು ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸೂಚನೆ ನೀಡಿದ್ದೇನೆ’ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಮಗಾರೆಡ್ಡಿ ನೀಡಿರುವ ಹೇಳಿಕೆಯು, ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ‘ಮೃದು ಹಿಂದುತ್ವ’ದ ಮೊರೆ ಹೋಯಿತಾ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ. ರೆಡ್ಡಿ ಅವರ ಎಕ್ಸ್‌ ಪೋಸ್ಟಿಗೆ ಬಿಜೆಪಿ ಬೆಂಬಲಿಗರೆ ಟೀಕೆ ವ್ಯಕ್ತಪಡಿಸಿದ್ದಾರೆ.

‘ರಾಮ ಜನ್ಮ ಭೂಮಿಯ ವಿವಾದವು ಈಗ ಮುಗಿದ ಅಧ್ಯಾಯವಾಗಿರುವುದರಿಂದ ಹೊಸ ರಾಮಮಂದಿರವನ್ನು ತೆರೆಯಲಾಗುತ್ತಿದೆ’ ಎಂದು ಹೇಳಿರುವ ಅವರು, ಜನವರಿ 22 ರಂದು ಮಧ್ಯಾಹ್ನ 12:29 ರಿಂದ 1:32 ರ ನಡುವೆ ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಮಹತ್ವದ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಮಹಾ ಮಂಗಳಾರತಿ ಮತ್ತು ವಿಶೇಷ ಪೂಜೆಗಳನ್ನು ನಡೆಸುವಂತೆ ಸಚಿವ ರೆಡ್ಡಿ ಸೂಚನೆ ನೀಡಿದ್ದಾರೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಕಾಂಗ್ರೆಸ್ ಸಂಸದೀಯ ಮಂಡಳಿಯ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಳ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ಬಂದಿದೆ ಎಂದು ಪಕ್ಷ ಹೇಳಿದೆ.

ಚುನಾವಣೆ ಹೊಸ್ತಿಲಲ್ಲಿ ಹಿಂದೂ ಮತ ಬ್ಯಾಂಕ್ನ ವಿರೋಧ ಕಟ್ಟಿಕೊಳ್ಳಲು ಸಿದ್ಧವಿಲ್ಲದ ಕಾಂಗ್ರೆಸ್, ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ಪಕ್ಷದ ನಾಯಕರಿಗೆ ಯಾವುದೇ ಕಟ್ಟುಪಾಡುಗಳಿಲ್ಲ ಎಂದು ಖರ್ಗೆ ಹೇಳಿದ್ದಾರೆ ಎನ್ನಲಾಗಿದೆ. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಬಯಸುವ ಯಾರಾದರೂ ಅಲ್ಲಿಗೆ ಹೋಗಲು ಸ್ವತಂತ್ರರು ಎಂದು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಚಿವರ ಆದೇಶಕ್ಕೆ ರಾಜ್ಯ ಬಿಜೆಪಿ ಟೀಕೆ:

ಸಚಿವ ರಾಮಲಿಂಗಾರೆಡ್ಡಿ ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ, ‘ಇಲ್ಲ..ಇದು ಡೀಪ್ ಫೇಕ್ ವಿಡಿಯೋ ಅಲ್ಲ, ಪ್ರಭು ಶ್ರೀರಾಮನ ನಿಜವಾದ ಶಕ್ತಿ’ ಎಂದು ಕಾಂಗ್ರೆಸ್ ಪಕ್ಷದ ಕಾಲೆಳೆದಿದೆ.

‘ಪ್ರಭು ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸುವುದಕ್ಕೂ, ಅಪಹಾಸ್ಯ ಮಾಡುವುದಕ್ಕೂ ಹೆಸರಾಗಿರುವ ಕಾಂಗ್ರೆಸ್ ಪಕ್ಷ ಈಗ ರಾಮಜಪ ಮಾಡುತ್ತಿರುವುದು ವಿಪರ್ಯಾಸವೇ ಸರಿ. ರಾಮಸೇನೆಯು ರಾವಣ ಮತ್ತು ಅವನ ಇಡೀ ಸಾಮ್ರಾಜ್ಯವನ್ನು ಹೇಗೆ ನಾಶಮಾಡಿತು ಎಂಬುದನ್ನು ಹಿಂದಿನವರು ಸಾಬೀತುಪಡಿಸಿದ್ದಾರೆ. ಅದೇ ರೀತಿ ಇಂದು ರಾಮಭಕ್ತರು ಕಾಂಗ್ರೆಸನ್ನು ಅಂಚಿಗೆ ತಳ್ಳಿ ತಮ್ಮ ಅಂತ್ಯ ಸಮೀಪಿಸಿದೆ ಎಂದು ಅರಿವಾಗುವಂತೆ ಮಾಡಿದ್ದಾರೆ’ ಎಂದು ಟೀಕಿಸಿದೆ.

‘ರಾಮಾಯಣದ ಕಾಲಾತೀತ ಪಾಠವು ಮುಂದುವರಿಯುತ್ತದೆ “ಕೆಟ್ಟವರು ನಾಶವಾಗುತ್ತಾರೆ”. ಆದ್ದರಿಂದ, ಕಾಂಗ್ರೆಸ್ ಮಾಡುವ ಕುತಂತ್ರಗಳನ್ನು ಲೆಕ್ಕಿಸದೆ, ಅವರ ಅಂತ್ಯವು ಅನಿವಾರ್ಯವಾಗಿದೆ. ಇದು ಶಾಶ್ವತ ಚಕ್ರ, ಧರ್ಮದ ಶಕ್ತಿ’ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಸಚಿವ ರೆಡ್ಡಿ ಸಮರ್ಥನೆ:

ತನ್ನ ನಿರ್ಧಾರದ ಬಗ್ಗೆ ಲೇವಡಿ ಮಾಡಿರುವ ಬಿಜೆಪಿಗೆ ತಿರುಗೇಟು ನೀಡಿರುವ ಸಚಿವ ರಾಮಲಿಂಗಾ ರೆಡ್ಡಿ, ‘ಹಿಂದೂ ದೇವಾಲಯಗಳಲ್ಲಿ ಶುಭ ದಿನಗಳು ಮತ್ತು ಹಬ್ಬಗಳಂದು ವಿಶೇಷ ಪೂಜೆಗಳನ್ನು ವಾಡಿಕೆಯಂತೆ ನಡೆಸಲಾಗಿದೆ. ಜನವರಿ 22ರಂದು ಎಲ್ಲ ಹಿಂದೂಗಳಿಗೆ ಅಂತಹ ಒಂದು ವಿಶೇಷ ದಿನವಾಗಿದೆ; ರಾಮ ಜನ್ಮ ಭೂಮಿಯ ವಿವಾದವು ಈಗ ಮುಗಿದ ಅಧ್ಯಾಯವಾಗಿರುವುದರಿಂದ ಹೊಸ ರಾಮಮಂದಿರವನ್ನು ತೆರೆಯಲಾಗುತ್ತಿದೆ’ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

‘ಬಿಜೆಪಿಯಲ್ಲಿರುವವರು ಮಾತ್ರ ಶ್ರೀರಾಮನ ಭಕ್ತರು; ಉಳಿದವರು ಭಕ್ತರಲ್ಲ ಎಂದು ಹೇಳಿಕೊಳ್ಳುವುದು ಸರಿಯಲ್ಲ. ಬಿಜೆಪಿ ಇದ್ದರೂ ಇಲ್ಲದಿದ್ದರೂ ವಿಶೇಷ ಪೂಜೆ ನಡೆಯುತ್ತಿತ್ತು. ನಾವು ಪ್ರಭು ಶ್ರೀರಾಮಚಂದ್ರನ ತತ್ವಗಳನ್ನು ಪೂಜಿಸುತ್ತೇವೆ. ಪ್ರತಿಯೊಬ್ಬ ಹಿಂದೂ ಅವನನ್ನು ಮರ್ಯಾದಾ ಪುರುಷನಂತೆ ನೋಡುತ್ತಾನೆ. ಕಾಂಗ್ರೆಸ್ ಒಂದು ಪಕ್ಷವಾಗಿ ತಮ್ಮ ನಂಬಿಕೆಗಳ ಜತೆಗೆ, ಇತರ ಧರ್ಮದ ಸದಸ್ಯರ ಭಾವನೆಗಳನ್ನು ಸಹ ಗೌರವಿಸುತ್ತದೆ. ಬಿಜೆಪಿ ಇಲ್ಲಿ ಒಡೆದು ಆಳುವ ರಾಜಕಾರಣ ಮಾಡಲು ಮತ್ತು ಪ್ರಭು ಶ್ರೀರಾಮನ ಮೇಲಿನ ಜನರ ಭಕ್ತಿಯನ್ನು ವ್ಯಾಪಾರ ಮಾಡಲು ಪ್ರಯತ್ನಿಸುತ್ತಿದೆ’ ಎಂದು ಹೇಳಿದ್ದಾರೆ.

‘ಭಗವಾನ್ ಶ್ರೀರಾಮನ ಶಕ್ತಿಯನ್ನು ತನ್ನದು ಎಂದು ಹೇಳಿಕೊಳ್ಳುವ ಬಿಜೆಪಿಯ ಬೆತ್ತಲೆ ಪ್ರಯತ್ನಗಳನ್ನು ಜನರು ನೋಡುತ್ತಾರೆ. ದುಷ್ಟರ ಮೇಲೆ ಧರ್ಮ ಮೇಲುಗೈ ಸಾಧಿಸಿದ್ದರಿಂದ ಬಿಜೆಪಿ ಕರ್ನಾಟಕವನ್ನು ಕಳೆದುಕೊಂಡಿತು’ ಎಂದಿದ್ದಾರೆ.

ಇದನ್ನೂ ಓದಿ; ಬಿಲ್ಕಿಸ್ ಬಾನು ಪ್ರಕರಣ; 2 ವಾರಗಳಲ್ಲಿ ಜೈಲಿಗೆ ಮರಳುವಂತೆ 11 ಅಪರಾಧಿಗಳಿಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...