Homeಕರ್ನಾಟಕಜ.22ರಂದು ದೇವಸ್ಥಾನಗಳಲ್ಲಿ 'ವಿಶೇಷ' ಪೂಜೆಗೆ ಸೂಚನೆ; ‘ಮೃದು ಹಿಂದುತ್ವ’ದ ಮೊರೆ ಹೋಯ್ತಾ ಕಾಂಗ್ರೆಸ್?

ಜ.22ರಂದು ದೇವಸ್ಥಾನಗಳಲ್ಲಿ ‘ವಿಶೇಷ’ ಪೂಜೆಗೆ ಸೂಚನೆ; ‘ಮೃದು ಹಿಂದುತ್ವ’ದ ಮೊರೆ ಹೋಯ್ತಾ ಕಾಂಗ್ರೆಸ್?

- Advertisement -
- Advertisement -

‘ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಜ.22 ರಂದು ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸೂಚನೆ ನೀಡಿದ್ದೇನೆ’ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಮಗಾರೆಡ್ಡಿ ನೀಡಿರುವ ಹೇಳಿಕೆಯು, ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ‘ಮೃದು ಹಿಂದುತ್ವ’ದ ಮೊರೆ ಹೋಯಿತಾ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ. ರೆಡ್ಡಿ ಅವರ ಎಕ್ಸ್‌ ಪೋಸ್ಟಿಗೆ ಬಿಜೆಪಿ ಬೆಂಬಲಿಗರೆ ಟೀಕೆ ವ್ಯಕ್ತಪಡಿಸಿದ್ದಾರೆ.

‘ರಾಮ ಜನ್ಮ ಭೂಮಿಯ ವಿವಾದವು ಈಗ ಮುಗಿದ ಅಧ್ಯಾಯವಾಗಿರುವುದರಿಂದ ಹೊಸ ರಾಮಮಂದಿರವನ್ನು ತೆರೆಯಲಾಗುತ್ತಿದೆ’ ಎಂದು ಹೇಳಿರುವ ಅವರು, ಜನವರಿ 22 ರಂದು ಮಧ್ಯಾಹ್ನ 12:29 ರಿಂದ 1:32 ರ ನಡುವೆ ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಮಹತ್ವದ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಮಹಾ ಮಂಗಳಾರತಿ ಮತ್ತು ವಿಶೇಷ ಪೂಜೆಗಳನ್ನು ನಡೆಸುವಂತೆ ಸಚಿವ ರೆಡ್ಡಿ ಸೂಚನೆ ನೀಡಿದ್ದಾರೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಕಾಂಗ್ರೆಸ್ ಸಂಸದೀಯ ಮಂಡಳಿಯ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಳ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ಬಂದಿದೆ ಎಂದು ಪಕ್ಷ ಹೇಳಿದೆ.

ಚುನಾವಣೆ ಹೊಸ್ತಿಲಲ್ಲಿ ಹಿಂದೂ ಮತ ಬ್ಯಾಂಕ್ನ ವಿರೋಧ ಕಟ್ಟಿಕೊಳ್ಳಲು ಸಿದ್ಧವಿಲ್ಲದ ಕಾಂಗ್ರೆಸ್, ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ಪಕ್ಷದ ನಾಯಕರಿಗೆ ಯಾವುದೇ ಕಟ್ಟುಪಾಡುಗಳಿಲ್ಲ ಎಂದು ಖರ್ಗೆ ಹೇಳಿದ್ದಾರೆ ಎನ್ನಲಾಗಿದೆ. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಬಯಸುವ ಯಾರಾದರೂ ಅಲ್ಲಿಗೆ ಹೋಗಲು ಸ್ವತಂತ್ರರು ಎಂದು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಚಿವರ ಆದೇಶಕ್ಕೆ ರಾಜ್ಯ ಬಿಜೆಪಿ ಟೀಕೆ:

ಸಚಿವ ರಾಮಲಿಂಗಾರೆಡ್ಡಿ ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ, ‘ಇಲ್ಲ..ಇದು ಡೀಪ್ ಫೇಕ್ ವಿಡಿಯೋ ಅಲ್ಲ, ಪ್ರಭು ಶ್ರೀರಾಮನ ನಿಜವಾದ ಶಕ್ತಿ’ ಎಂದು ಕಾಂಗ್ರೆಸ್ ಪಕ್ಷದ ಕಾಲೆಳೆದಿದೆ.

‘ಪ್ರಭು ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸುವುದಕ್ಕೂ, ಅಪಹಾಸ್ಯ ಮಾಡುವುದಕ್ಕೂ ಹೆಸರಾಗಿರುವ ಕಾಂಗ್ರೆಸ್ ಪಕ್ಷ ಈಗ ರಾಮಜಪ ಮಾಡುತ್ತಿರುವುದು ವಿಪರ್ಯಾಸವೇ ಸರಿ. ರಾಮಸೇನೆಯು ರಾವಣ ಮತ್ತು ಅವನ ಇಡೀ ಸಾಮ್ರಾಜ್ಯವನ್ನು ಹೇಗೆ ನಾಶಮಾಡಿತು ಎಂಬುದನ್ನು ಹಿಂದಿನವರು ಸಾಬೀತುಪಡಿಸಿದ್ದಾರೆ. ಅದೇ ರೀತಿ ಇಂದು ರಾಮಭಕ್ತರು ಕಾಂಗ್ರೆಸನ್ನು ಅಂಚಿಗೆ ತಳ್ಳಿ ತಮ್ಮ ಅಂತ್ಯ ಸಮೀಪಿಸಿದೆ ಎಂದು ಅರಿವಾಗುವಂತೆ ಮಾಡಿದ್ದಾರೆ’ ಎಂದು ಟೀಕಿಸಿದೆ.

‘ರಾಮಾಯಣದ ಕಾಲಾತೀತ ಪಾಠವು ಮುಂದುವರಿಯುತ್ತದೆ “ಕೆಟ್ಟವರು ನಾಶವಾಗುತ್ತಾರೆ”. ಆದ್ದರಿಂದ, ಕಾಂಗ್ರೆಸ್ ಮಾಡುವ ಕುತಂತ್ರಗಳನ್ನು ಲೆಕ್ಕಿಸದೆ, ಅವರ ಅಂತ್ಯವು ಅನಿವಾರ್ಯವಾಗಿದೆ. ಇದು ಶಾಶ್ವತ ಚಕ್ರ, ಧರ್ಮದ ಶಕ್ತಿ’ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಸಚಿವ ರೆಡ್ಡಿ ಸಮರ್ಥನೆ:

ತನ್ನ ನಿರ್ಧಾರದ ಬಗ್ಗೆ ಲೇವಡಿ ಮಾಡಿರುವ ಬಿಜೆಪಿಗೆ ತಿರುಗೇಟು ನೀಡಿರುವ ಸಚಿವ ರಾಮಲಿಂಗಾ ರೆಡ್ಡಿ, ‘ಹಿಂದೂ ದೇವಾಲಯಗಳಲ್ಲಿ ಶುಭ ದಿನಗಳು ಮತ್ತು ಹಬ್ಬಗಳಂದು ವಿಶೇಷ ಪೂಜೆಗಳನ್ನು ವಾಡಿಕೆಯಂತೆ ನಡೆಸಲಾಗಿದೆ. ಜನವರಿ 22ರಂದು ಎಲ್ಲ ಹಿಂದೂಗಳಿಗೆ ಅಂತಹ ಒಂದು ವಿಶೇಷ ದಿನವಾಗಿದೆ; ರಾಮ ಜನ್ಮ ಭೂಮಿಯ ವಿವಾದವು ಈಗ ಮುಗಿದ ಅಧ್ಯಾಯವಾಗಿರುವುದರಿಂದ ಹೊಸ ರಾಮಮಂದಿರವನ್ನು ತೆರೆಯಲಾಗುತ್ತಿದೆ’ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

‘ಬಿಜೆಪಿಯಲ್ಲಿರುವವರು ಮಾತ್ರ ಶ್ರೀರಾಮನ ಭಕ್ತರು; ಉಳಿದವರು ಭಕ್ತರಲ್ಲ ಎಂದು ಹೇಳಿಕೊಳ್ಳುವುದು ಸರಿಯಲ್ಲ. ಬಿಜೆಪಿ ಇದ್ದರೂ ಇಲ್ಲದಿದ್ದರೂ ವಿಶೇಷ ಪೂಜೆ ನಡೆಯುತ್ತಿತ್ತು. ನಾವು ಪ್ರಭು ಶ್ರೀರಾಮಚಂದ್ರನ ತತ್ವಗಳನ್ನು ಪೂಜಿಸುತ್ತೇವೆ. ಪ್ರತಿಯೊಬ್ಬ ಹಿಂದೂ ಅವನನ್ನು ಮರ್ಯಾದಾ ಪುರುಷನಂತೆ ನೋಡುತ್ತಾನೆ. ಕಾಂಗ್ರೆಸ್ ಒಂದು ಪಕ್ಷವಾಗಿ ತಮ್ಮ ನಂಬಿಕೆಗಳ ಜತೆಗೆ, ಇತರ ಧರ್ಮದ ಸದಸ್ಯರ ಭಾವನೆಗಳನ್ನು ಸಹ ಗೌರವಿಸುತ್ತದೆ. ಬಿಜೆಪಿ ಇಲ್ಲಿ ಒಡೆದು ಆಳುವ ರಾಜಕಾರಣ ಮಾಡಲು ಮತ್ತು ಪ್ರಭು ಶ್ರೀರಾಮನ ಮೇಲಿನ ಜನರ ಭಕ್ತಿಯನ್ನು ವ್ಯಾಪಾರ ಮಾಡಲು ಪ್ರಯತ್ನಿಸುತ್ತಿದೆ’ ಎಂದು ಹೇಳಿದ್ದಾರೆ.

‘ಭಗವಾನ್ ಶ್ರೀರಾಮನ ಶಕ್ತಿಯನ್ನು ತನ್ನದು ಎಂದು ಹೇಳಿಕೊಳ್ಳುವ ಬಿಜೆಪಿಯ ಬೆತ್ತಲೆ ಪ್ರಯತ್ನಗಳನ್ನು ಜನರು ನೋಡುತ್ತಾರೆ. ದುಷ್ಟರ ಮೇಲೆ ಧರ್ಮ ಮೇಲುಗೈ ಸಾಧಿಸಿದ್ದರಿಂದ ಬಿಜೆಪಿ ಕರ್ನಾಟಕವನ್ನು ಕಳೆದುಕೊಂಡಿತು’ ಎಂದಿದ್ದಾರೆ.

ಇದನ್ನೂ ಓದಿ; ಬಿಲ್ಕಿಸ್ ಬಾನು ಪ್ರಕರಣ; 2 ವಾರಗಳಲ್ಲಿ ಜೈಲಿಗೆ ಮರಳುವಂತೆ 11 ಅಪರಾಧಿಗಳಿಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...