Homeಕರ್ನಾಟಕಜ.22ರಂದು ದೇವಸ್ಥಾನಗಳಲ್ಲಿ 'ವಿಶೇಷ' ಪೂಜೆಗೆ ಸೂಚನೆ; ‘ಮೃದು ಹಿಂದುತ್ವ’ದ ಮೊರೆ ಹೋಯ್ತಾ ಕಾಂಗ್ರೆಸ್?

ಜ.22ರಂದು ದೇವಸ್ಥಾನಗಳಲ್ಲಿ ‘ವಿಶೇಷ’ ಪೂಜೆಗೆ ಸೂಚನೆ; ‘ಮೃದು ಹಿಂದುತ್ವ’ದ ಮೊರೆ ಹೋಯ್ತಾ ಕಾಂಗ್ರೆಸ್?

- Advertisement -
- Advertisement -

‘ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಜ.22 ರಂದು ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸೂಚನೆ ನೀಡಿದ್ದೇನೆ’ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಮಗಾರೆಡ್ಡಿ ನೀಡಿರುವ ಹೇಳಿಕೆಯು, ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ‘ಮೃದು ಹಿಂದುತ್ವ’ದ ಮೊರೆ ಹೋಯಿತಾ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ. ರೆಡ್ಡಿ ಅವರ ಎಕ್ಸ್‌ ಪೋಸ್ಟಿಗೆ ಬಿಜೆಪಿ ಬೆಂಬಲಿಗರೆ ಟೀಕೆ ವ್ಯಕ್ತಪಡಿಸಿದ್ದಾರೆ.

‘ರಾಮ ಜನ್ಮ ಭೂಮಿಯ ವಿವಾದವು ಈಗ ಮುಗಿದ ಅಧ್ಯಾಯವಾಗಿರುವುದರಿಂದ ಹೊಸ ರಾಮಮಂದಿರವನ್ನು ತೆರೆಯಲಾಗುತ್ತಿದೆ’ ಎಂದು ಹೇಳಿರುವ ಅವರು, ಜನವರಿ 22 ರಂದು ಮಧ್ಯಾಹ್ನ 12:29 ರಿಂದ 1:32 ರ ನಡುವೆ ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಮಹತ್ವದ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಮಹಾ ಮಂಗಳಾರತಿ ಮತ್ತು ವಿಶೇಷ ಪೂಜೆಗಳನ್ನು ನಡೆಸುವಂತೆ ಸಚಿವ ರೆಡ್ಡಿ ಸೂಚನೆ ನೀಡಿದ್ದಾರೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಕಾಂಗ್ರೆಸ್ ಸಂಸದೀಯ ಮಂಡಳಿಯ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಳ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ಬಂದಿದೆ ಎಂದು ಪಕ್ಷ ಹೇಳಿದೆ.

ಚುನಾವಣೆ ಹೊಸ್ತಿಲಲ್ಲಿ ಹಿಂದೂ ಮತ ಬ್ಯಾಂಕ್ನ ವಿರೋಧ ಕಟ್ಟಿಕೊಳ್ಳಲು ಸಿದ್ಧವಿಲ್ಲದ ಕಾಂಗ್ರೆಸ್, ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ಪಕ್ಷದ ನಾಯಕರಿಗೆ ಯಾವುದೇ ಕಟ್ಟುಪಾಡುಗಳಿಲ್ಲ ಎಂದು ಖರ್ಗೆ ಹೇಳಿದ್ದಾರೆ ಎನ್ನಲಾಗಿದೆ. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಬಯಸುವ ಯಾರಾದರೂ ಅಲ್ಲಿಗೆ ಹೋಗಲು ಸ್ವತಂತ್ರರು ಎಂದು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಚಿವರ ಆದೇಶಕ್ಕೆ ರಾಜ್ಯ ಬಿಜೆಪಿ ಟೀಕೆ:

ಸಚಿವ ರಾಮಲಿಂಗಾರೆಡ್ಡಿ ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ, ‘ಇಲ್ಲ..ಇದು ಡೀಪ್ ಫೇಕ್ ವಿಡಿಯೋ ಅಲ್ಲ, ಪ್ರಭು ಶ್ರೀರಾಮನ ನಿಜವಾದ ಶಕ್ತಿ’ ಎಂದು ಕಾಂಗ್ರೆಸ್ ಪಕ್ಷದ ಕಾಲೆಳೆದಿದೆ.

‘ಪ್ರಭು ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸುವುದಕ್ಕೂ, ಅಪಹಾಸ್ಯ ಮಾಡುವುದಕ್ಕೂ ಹೆಸರಾಗಿರುವ ಕಾಂಗ್ರೆಸ್ ಪಕ್ಷ ಈಗ ರಾಮಜಪ ಮಾಡುತ್ತಿರುವುದು ವಿಪರ್ಯಾಸವೇ ಸರಿ. ರಾಮಸೇನೆಯು ರಾವಣ ಮತ್ತು ಅವನ ಇಡೀ ಸಾಮ್ರಾಜ್ಯವನ್ನು ಹೇಗೆ ನಾಶಮಾಡಿತು ಎಂಬುದನ್ನು ಹಿಂದಿನವರು ಸಾಬೀತುಪಡಿಸಿದ್ದಾರೆ. ಅದೇ ರೀತಿ ಇಂದು ರಾಮಭಕ್ತರು ಕಾಂಗ್ರೆಸನ್ನು ಅಂಚಿಗೆ ತಳ್ಳಿ ತಮ್ಮ ಅಂತ್ಯ ಸಮೀಪಿಸಿದೆ ಎಂದು ಅರಿವಾಗುವಂತೆ ಮಾಡಿದ್ದಾರೆ’ ಎಂದು ಟೀಕಿಸಿದೆ.

‘ರಾಮಾಯಣದ ಕಾಲಾತೀತ ಪಾಠವು ಮುಂದುವರಿಯುತ್ತದೆ “ಕೆಟ್ಟವರು ನಾಶವಾಗುತ್ತಾರೆ”. ಆದ್ದರಿಂದ, ಕಾಂಗ್ರೆಸ್ ಮಾಡುವ ಕುತಂತ್ರಗಳನ್ನು ಲೆಕ್ಕಿಸದೆ, ಅವರ ಅಂತ್ಯವು ಅನಿವಾರ್ಯವಾಗಿದೆ. ಇದು ಶಾಶ್ವತ ಚಕ್ರ, ಧರ್ಮದ ಶಕ್ತಿ’ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಸಚಿವ ರೆಡ್ಡಿ ಸಮರ್ಥನೆ:

ತನ್ನ ನಿರ್ಧಾರದ ಬಗ್ಗೆ ಲೇವಡಿ ಮಾಡಿರುವ ಬಿಜೆಪಿಗೆ ತಿರುಗೇಟು ನೀಡಿರುವ ಸಚಿವ ರಾಮಲಿಂಗಾ ರೆಡ್ಡಿ, ‘ಹಿಂದೂ ದೇವಾಲಯಗಳಲ್ಲಿ ಶುಭ ದಿನಗಳು ಮತ್ತು ಹಬ್ಬಗಳಂದು ವಿಶೇಷ ಪೂಜೆಗಳನ್ನು ವಾಡಿಕೆಯಂತೆ ನಡೆಸಲಾಗಿದೆ. ಜನವರಿ 22ರಂದು ಎಲ್ಲ ಹಿಂದೂಗಳಿಗೆ ಅಂತಹ ಒಂದು ವಿಶೇಷ ದಿನವಾಗಿದೆ; ರಾಮ ಜನ್ಮ ಭೂಮಿಯ ವಿವಾದವು ಈಗ ಮುಗಿದ ಅಧ್ಯಾಯವಾಗಿರುವುದರಿಂದ ಹೊಸ ರಾಮಮಂದಿರವನ್ನು ತೆರೆಯಲಾಗುತ್ತಿದೆ’ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

‘ಬಿಜೆಪಿಯಲ್ಲಿರುವವರು ಮಾತ್ರ ಶ್ರೀರಾಮನ ಭಕ್ತರು; ಉಳಿದವರು ಭಕ್ತರಲ್ಲ ಎಂದು ಹೇಳಿಕೊಳ್ಳುವುದು ಸರಿಯಲ್ಲ. ಬಿಜೆಪಿ ಇದ್ದರೂ ಇಲ್ಲದಿದ್ದರೂ ವಿಶೇಷ ಪೂಜೆ ನಡೆಯುತ್ತಿತ್ತು. ನಾವು ಪ್ರಭು ಶ್ರೀರಾಮಚಂದ್ರನ ತತ್ವಗಳನ್ನು ಪೂಜಿಸುತ್ತೇವೆ. ಪ್ರತಿಯೊಬ್ಬ ಹಿಂದೂ ಅವನನ್ನು ಮರ್ಯಾದಾ ಪುರುಷನಂತೆ ನೋಡುತ್ತಾನೆ. ಕಾಂಗ್ರೆಸ್ ಒಂದು ಪಕ್ಷವಾಗಿ ತಮ್ಮ ನಂಬಿಕೆಗಳ ಜತೆಗೆ, ಇತರ ಧರ್ಮದ ಸದಸ್ಯರ ಭಾವನೆಗಳನ್ನು ಸಹ ಗೌರವಿಸುತ್ತದೆ. ಬಿಜೆಪಿ ಇಲ್ಲಿ ಒಡೆದು ಆಳುವ ರಾಜಕಾರಣ ಮಾಡಲು ಮತ್ತು ಪ್ರಭು ಶ್ರೀರಾಮನ ಮೇಲಿನ ಜನರ ಭಕ್ತಿಯನ್ನು ವ್ಯಾಪಾರ ಮಾಡಲು ಪ್ರಯತ್ನಿಸುತ್ತಿದೆ’ ಎಂದು ಹೇಳಿದ್ದಾರೆ.

‘ಭಗವಾನ್ ಶ್ರೀರಾಮನ ಶಕ್ತಿಯನ್ನು ತನ್ನದು ಎಂದು ಹೇಳಿಕೊಳ್ಳುವ ಬಿಜೆಪಿಯ ಬೆತ್ತಲೆ ಪ್ರಯತ್ನಗಳನ್ನು ಜನರು ನೋಡುತ್ತಾರೆ. ದುಷ್ಟರ ಮೇಲೆ ಧರ್ಮ ಮೇಲುಗೈ ಸಾಧಿಸಿದ್ದರಿಂದ ಬಿಜೆಪಿ ಕರ್ನಾಟಕವನ್ನು ಕಳೆದುಕೊಂಡಿತು’ ಎಂದಿದ್ದಾರೆ.

ಇದನ್ನೂ ಓದಿ; ಬಿಲ್ಕಿಸ್ ಬಾನು ಪ್ರಕರಣ; 2 ವಾರಗಳಲ್ಲಿ ಜೈಲಿಗೆ ಮರಳುವಂತೆ 11 ಅಪರಾಧಿಗಳಿಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...