Homeಕರ್ನಾಟಕಜ.22ರಂದು ದೇವಸ್ಥಾನಗಳಲ್ಲಿ 'ವಿಶೇಷ' ಪೂಜೆಗೆ ಸೂಚನೆ; ‘ಮೃದು ಹಿಂದುತ್ವ’ದ ಮೊರೆ ಹೋಯ್ತಾ ಕಾಂಗ್ರೆಸ್?

ಜ.22ರಂದು ದೇವಸ್ಥಾನಗಳಲ್ಲಿ ‘ವಿಶೇಷ’ ಪೂಜೆಗೆ ಸೂಚನೆ; ‘ಮೃದು ಹಿಂದುತ್ವ’ದ ಮೊರೆ ಹೋಯ್ತಾ ಕಾಂಗ್ರೆಸ್?

- Advertisement -
- Advertisement -

‘ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಜ.22 ರಂದು ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸೂಚನೆ ನೀಡಿದ್ದೇನೆ’ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಮಗಾರೆಡ್ಡಿ ನೀಡಿರುವ ಹೇಳಿಕೆಯು, ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ‘ಮೃದು ಹಿಂದುತ್ವ’ದ ಮೊರೆ ಹೋಯಿತಾ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ. ರೆಡ್ಡಿ ಅವರ ಎಕ್ಸ್‌ ಪೋಸ್ಟಿಗೆ ಬಿಜೆಪಿ ಬೆಂಬಲಿಗರೆ ಟೀಕೆ ವ್ಯಕ್ತಪಡಿಸಿದ್ದಾರೆ.

‘ರಾಮ ಜನ್ಮ ಭೂಮಿಯ ವಿವಾದವು ಈಗ ಮುಗಿದ ಅಧ್ಯಾಯವಾಗಿರುವುದರಿಂದ ಹೊಸ ರಾಮಮಂದಿರವನ್ನು ತೆರೆಯಲಾಗುತ್ತಿದೆ’ ಎಂದು ಹೇಳಿರುವ ಅವರು, ಜನವರಿ 22 ರಂದು ಮಧ್ಯಾಹ್ನ 12:29 ರಿಂದ 1:32 ರ ನಡುವೆ ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಮಹತ್ವದ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಮಹಾ ಮಂಗಳಾರತಿ ಮತ್ತು ವಿಶೇಷ ಪೂಜೆಗಳನ್ನು ನಡೆಸುವಂತೆ ಸಚಿವ ರೆಡ್ಡಿ ಸೂಚನೆ ನೀಡಿದ್ದಾರೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಕಾಂಗ್ರೆಸ್ ಸಂಸದೀಯ ಮಂಡಳಿಯ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಳ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ಬಂದಿದೆ ಎಂದು ಪಕ್ಷ ಹೇಳಿದೆ.

ಚುನಾವಣೆ ಹೊಸ್ತಿಲಲ್ಲಿ ಹಿಂದೂ ಮತ ಬ್ಯಾಂಕ್ನ ವಿರೋಧ ಕಟ್ಟಿಕೊಳ್ಳಲು ಸಿದ್ಧವಿಲ್ಲದ ಕಾಂಗ್ರೆಸ್, ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ಪಕ್ಷದ ನಾಯಕರಿಗೆ ಯಾವುದೇ ಕಟ್ಟುಪಾಡುಗಳಿಲ್ಲ ಎಂದು ಖರ್ಗೆ ಹೇಳಿದ್ದಾರೆ ಎನ್ನಲಾಗಿದೆ. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಬಯಸುವ ಯಾರಾದರೂ ಅಲ್ಲಿಗೆ ಹೋಗಲು ಸ್ವತಂತ್ರರು ಎಂದು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಚಿವರ ಆದೇಶಕ್ಕೆ ರಾಜ್ಯ ಬಿಜೆಪಿ ಟೀಕೆ:

ಸಚಿವ ರಾಮಲಿಂಗಾರೆಡ್ಡಿ ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ, ‘ಇಲ್ಲ..ಇದು ಡೀಪ್ ಫೇಕ್ ವಿಡಿಯೋ ಅಲ್ಲ, ಪ್ರಭು ಶ್ರೀರಾಮನ ನಿಜವಾದ ಶಕ್ತಿ’ ಎಂದು ಕಾಂಗ್ರೆಸ್ ಪಕ್ಷದ ಕಾಲೆಳೆದಿದೆ.

‘ಪ್ರಭು ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸುವುದಕ್ಕೂ, ಅಪಹಾಸ್ಯ ಮಾಡುವುದಕ್ಕೂ ಹೆಸರಾಗಿರುವ ಕಾಂಗ್ರೆಸ್ ಪಕ್ಷ ಈಗ ರಾಮಜಪ ಮಾಡುತ್ತಿರುವುದು ವಿಪರ್ಯಾಸವೇ ಸರಿ. ರಾಮಸೇನೆಯು ರಾವಣ ಮತ್ತು ಅವನ ಇಡೀ ಸಾಮ್ರಾಜ್ಯವನ್ನು ಹೇಗೆ ನಾಶಮಾಡಿತು ಎಂಬುದನ್ನು ಹಿಂದಿನವರು ಸಾಬೀತುಪಡಿಸಿದ್ದಾರೆ. ಅದೇ ರೀತಿ ಇಂದು ರಾಮಭಕ್ತರು ಕಾಂಗ್ರೆಸನ್ನು ಅಂಚಿಗೆ ತಳ್ಳಿ ತಮ್ಮ ಅಂತ್ಯ ಸಮೀಪಿಸಿದೆ ಎಂದು ಅರಿವಾಗುವಂತೆ ಮಾಡಿದ್ದಾರೆ’ ಎಂದು ಟೀಕಿಸಿದೆ.

‘ರಾಮಾಯಣದ ಕಾಲಾತೀತ ಪಾಠವು ಮುಂದುವರಿಯುತ್ತದೆ “ಕೆಟ್ಟವರು ನಾಶವಾಗುತ್ತಾರೆ”. ಆದ್ದರಿಂದ, ಕಾಂಗ್ರೆಸ್ ಮಾಡುವ ಕುತಂತ್ರಗಳನ್ನು ಲೆಕ್ಕಿಸದೆ, ಅವರ ಅಂತ್ಯವು ಅನಿವಾರ್ಯವಾಗಿದೆ. ಇದು ಶಾಶ್ವತ ಚಕ್ರ, ಧರ್ಮದ ಶಕ್ತಿ’ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಸಚಿವ ರೆಡ್ಡಿ ಸಮರ್ಥನೆ:

ತನ್ನ ನಿರ್ಧಾರದ ಬಗ್ಗೆ ಲೇವಡಿ ಮಾಡಿರುವ ಬಿಜೆಪಿಗೆ ತಿರುಗೇಟು ನೀಡಿರುವ ಸಚಿವ ರಾಮಲಿಂಗಾ ರೆಡ್ಡಿ, ‘ಹಿಂದೂ ದೇವಾಲಯಗಳಲ್ಲಿ ಶುಭ ದಿನಗಳು ಮತ್ತು ಹಬ್ಬಗಳಂದು ವಿಶೇಷ ಪೂಜೆಗಳನ್ನು ವಾಡಿಕೆಯಂತೆ ನಡೆಸಲಾಗಿದೆ. ಜನವರಿ 22ರಂದು ಎಲ್ಲ ಹಿಂದೂಗಳಿಗೆ ಅಂತಹ ಒಂದು ವಿಶೇಷ ದಿನವಾಗಿದೆ; ರಾಮ ಜನ್ಮ ಭೂಮಿಯ ವಿವಾದವು ಈಗ ಮುಗಿದ ಅಧ್ಯಾಯವಾಗಿರುವುದರಿಂದ ಹೊಸ ರಾಮಮಂದಿರವನ್ನು ತೆರೆಯಲಾಗುತ್ತಿದೆ’ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

‘ಬಿಜೆಪಿಯಲ್ಲಿರುವವರು ಮಾತ್ರ ಶ್ರೀರಾಮನ ಭಕ್ತರು; ಉಳಿದವರು ಭಕ್ತರಲ್ಲ ಎಂದು ಹೇಳಿಕೊಳ್ಳುವುದು ಸರಿಯಲ್ಲ. ಬಿಜೆಪಿ ಇದ್ದರೂ ಇಲ್ಲದಿದ್ದರೂ ವಿಶೇಷ ಪೂಜೆ ನಡೆಯುತ್ತಿತ್ತು. ನಾವು ಪ್ರಭು ಶ್ರೀರಾಮಚಂದ್ರನ ತತ್ವಗಳನ್ನು ಪೂಜಿಸುತ್ತೇವೆ. ಪ್ರತಿಯೊಬ್ಬ ಹಿಂದೂ ಅವನನ್ನು ಮರ್ಯಾದಾ ಪುರುಷನಂತೆ ನೋಡುತ್ತಾನೆ. ಕಾಂಗ್ರೆಸ್ ಒಂದು ಪಕ್ಷವಾಗಿ ತಮ್ಮ ನಂಬಿಕೆಗಳ ಜತೆಗೆ, ಇತರ ಧರ್ಮದ ಸದಸ್ಯರ ಭಾವನೆಗಳನ್ನು ಸಹ ಗೌರವಿಸುತ್ತದೆ. ಬಿಜೆಪಿ ಇಲ್ಲಿ ಒಡೆದು ಆಳುವ ರಾಜಕಾರಣ ಮಾಡಲು ಮತ್ತು ಪ್ರಭು ಶ್ರೀರಾಮನ ಮೇಲಿನ ಜನರ ಭಕ್ತಿಯನ್ನು ವ್ಯಾಪಾರ ಮಾಡಲು ಪ್ರಯತ್ನಿಸುತ್ತಿದೆ’ ಎಂದು ಹೇಳಿದ್ದಾರೆ.

‘ಭಗವಾನ್ ಶ್ರೀರಾಮನ ಶಕ್ತಿಯನ್ನು ತನ್ನದು ಎಂದು ಹೇಳಿಕೊಳ್ಳುವ ಬಿಜೆಪಿಯ ಬೆತ್ತಲೆ ಪ್ರಯತ್ನಗಳನ್ನು ಜನರು ನೋಡುತ್ತಾರೆ. ದುಷ್ಟರ ಮೇಲೆ ಧರ್ಮ ಮೇಲುಗೈ ಸಾಧಿಸಿದ್ದರಿಂದ ಬಿಜೆಪಿ ಕರ್ನಾಟಕವನ್ನು ಕಳೆದುಕೊಂಡಿತು’ ಎಂದಿದ್ದಾರೆ.

ಇದನ್ನೂ ಓದಿ; ಬಿಲ್ಕಿಸ್ ಬಾನು ಪ್ರಕರಣ; 2 ವಾರಗಳಲ್ಲಿ ಜೈಲಿಗೆ ಮರಳುವಂತೆ 11 ಅಪರಾಧಿಗಳಿಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...