Homeಕರ್ನಾಟಕ''ಭ್ರಷ್ಟಾಚಾರದ ರೇಟ್ ಕಾರ್ಡ್'' ಜಾಹೀರಾತು ವಿಚಾರಕ್ಕೆ ನೋಟಿಸ್: ಚುನಾವಣಾ ಆಯೋಗ ಪಕ್ಷಪಾತಿಯಾಗಿದೆ ಎಂದ ಕಾಂಗ್ರೆಸ್‌

”ಭ್ರಷ್ಟಾಚಾರದ ರೇಟ್ ಕಾರ್ಡ್” ಜಾಹೀರಾತು ವಿಚಾರಕ್ಕೆ ನೋಟಿಸ್: ಚುನಾವಣಾ ಆಯೋಗ ಪಕ್ಷಪಾತಿಯಾಗಿದೆ ಎಂದ ಕಾಂಗ್ರೆಸ್‌

- Advertisement -
- Advertisement -

”ಭ್ರಷ್ಟಾಚಾರದ ರೇಟ್ ಕಾರ್ಡ್” ಜಾಹೀರಾತುಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕರ್ನಾಟಕದ ಕಾಂಗ್ರೆಸ್ ಘಟಕಕ್ಕೆ ನೋಟಿಸ್ ನೀಡಿತ್ತು. ಇದರ ಬೆನ್ನಲ್ಲೇ ಚುನಾವಣಾ ಆಯೋಗವು ಪಕ್ಷಪಾತಿಯಾಗಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರ, ಉದ್ಯೋಗ ನೇಮಕಾತಿ ಮತ್ತು ವರ್ಗಾವಣೆಗಳಿಗೆ ಜನರು ಪಾವತಿಸಬೇಕಾದ ಲಂಚದ ದರವನ್ನು ನಿಗದಿಪಡಿಸಿದೆ ಎಂದು ಆ ಜಾಹೀರಾತು ಆರೋಪಿಸಿತ್ತು.

ಶನಿವಾರ ಬಿಜೆಪಿ ದೂರಿಗೆ ಪ್ರತಿಕ್ರಿಯೆಯಾಗಿ ಚುನಾವಣಾ ಆಯೋಗವು ಕಾಂಗ್ರೆಸ್‌ಗೆ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಪಕ್ಷ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ನೋಟಿಸ್ ಹೇಳಿದೆ.

ಭಾನುವಾರ ಸಂಜೆ 7 ಗಂಟೆಯೊಳಗೆ ಭ್ರಷ್ಟಾಚಾರ ಆರೋಪದ ಕುರಿತು ಪ್ರಾಯೋಗಿಕ ಸಾಕ್ಷ್ಯಗಳನ್ನು ತೋರಿಸುವಂತೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ಸೂಚಿಸಿತ್ತು.

ಇದನ್ನೂ ಓದಿ: ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ, ‘ಧಾರ್ಮಿಕ’ ಘೋಷಣೆ ಕೂಗಿದ್ದು ಆಶ್ಚರ್ಯ ತಂದಿದೆ: ಶರದ್ ಪವಾರ್

ಸೋಮವಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ಚುನಾವಣಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿರುವ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದರೂ, ಚುನಾವಣಾ ಆಯೋಗ ಮಾತ್ರ ಯಾವುದೇ ನೋಟಿಸ್ ನೀಡಿಲ್ಲ ಎಂದು ಪಿಟಿಐ ವರದಿ ಮಾಡಿದೆ.

”ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗದಿಂದ ಅನ್ಯಾಯ ಮತ್ತು ಅಸಮಾನ ವರ್ತನೆಗೆ ಒಳಗಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಪಕ್ಷ ಹೇಳಿದೆ.

”ಚುನಾವಣಾ ಮಾನದಂಡಗಳನ್ನು ಕೇವಲ ಪ್ರತಿಪಕ್ಷಗಳಿಗೆ ಮಾತ್ರ ಮೀಸಲಿಟ್ಟಂತೆ ತೋರುತ್ತಿದೆ. ಸಣ್ಣದೊಂದು ತಪ್ಪಾದರೂ ತಮ್ಮನ್ನು ವಿವರಣೆ ಕೇಳಲು ಕರೆಸಿದ್ದಾರೆ” ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ರಾಜಕೀಯ ಜಾಹೀರಾತಿಗೆ ಪುರಾವೆಗಳನ್ನು ಒದಗಿಸಲು ಚುನಾವಣಾ ಆಯೋಗವು ರಾಷ್ಟ್ರೀಯ ಪಕ್ಷವನ್ನು ಕರೆಸಿರುವುದು ಇದೇ ಮೊದಲು ಎಂದು ಕಾಂಗ್ರೆಸ್ ಹೇಳಿದೆ.

”ಚುನಾವಣಾ ಆಯೋಗವು ಆ ಆರೋಪಗಳ ತನಿಖೆ ನಡೆಸಲು ಹೇಳಬಹುದಿತ್ತು ಆ ಅಧಿಕಾರ ಆಯೋಗಕ್ಕೆ ಇದೆ. ಏಕೆಂದರೆ ಆ ಆರೋಪಗಳಿಗೆ ಪುರಾವೆಗಳು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿವೆ. ಆದರೆ ಚುನಾವಣಾ ಆಯೋಗವು ಆ ಭ್ರಷ್ಟಾಚಾರದ ಮೇಲೆ ಬೆಳಕು ಚೆಲ್ಲುವ ಪಕ್ಷವನ್ನು ಗುರಿಯಾಗಿಸಲು ತನ್ನ ಅಧಿಕಾರ ಬಳಸಿಕೊಂಡಿದೆ” ಎಂದು ಕಾಂಗ್ರೆಸ್ ಆರೋಪಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...