Homeಕರ್ನಾಟಕ''ಭ್ರಷ್ಟಾಚಾರದ ರೇಟ್ ಕಾರ್ಡ್'' ಜಾಹೀರಾತು ವಿಚಾರಕ್ಕೆ ನೋಟಿಸ್: ಚುನಾವಣಾ ಆಯೋಗ ಪಕ್ಷಪಾತಿಯಾಗಿದೆ ಎಂದ ಕಾಂಗ್ರೆಸ್‌

”ಭ್ರಷ್ಟಾಚಾರದ ರೇಟ್ ಕಾರ್ಡ್” ಜಾಹೀರಾತು ವಿಚಾರಕ್ಕೆ ನೋಟಿಸ್: ಚುನಾವಣಾ ಆಯೋಗ ಪಕ್ಷಪಾತಿಯಾಗಿದೆ ಎಂದ ಕಾಂಗ್ರೆಸ್‌

- Advertisement -
- Advertisement -

”ಭ್ರಷ್ಟಾಚಾರದ ರೇಟ್ ಕಾರ್ಡ್” ಜಾಹೀರಾತುಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕರ್ನಾಟಕದ ಕಾಂಗ್ರೆಸ್ ಘಟಕಕ್ಕೆ ನೋಟಿಸ್ ನೀಡಿತ್ತು. ಇದರ ಬೆನ್ನಲ್ಲೇ ಚುನಾವಣಾ ಆಯೋಗವು ಪಕ್ಷಪಾತಿಯಾಗಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರ, ಉದ್ಯೋಗ ನೇಮಕಾತಿ ಮತ್ತು ವರ್ಗಾವಣೆಗಳಿಗೆ ಜನರು ಪಾವತಿಸಬೇಕಾದ ಲಂಚದ ದರವನ್ನು ನಿಗದಿಪಡಿಸಿದೆ ಎಂದು ಆ ಜಾಹೀರಾತು ಆರೋಪಿಸಿತ್ತು.

ಶನಿವಾರ ಬಿಜೆಪಿ ದೂರಿಗೆ ಪ್ರತಿಕ್ರಿಯೆಯಾಗಿ ಚುನಾವಣಾ ಆಯೋಗವು ಕಾಂಗ್ರೆಸ್‌ಗೆ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಪಕ್ಷ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ನೋಟಿಸ್ ಹೇಳಿದೆ.

ಭಾನುವಾರ ಸಂಜೆ 7 ಗಂಟೆಯೊಳಗೆ ಭ್ರಷ್ಟಾಚಾರ ಆರೋಪದ ಕುರಿತು ಪ್ರಾಯೋಗಿಕ ಸಾಕ್ಷ್ಯಗಳನ್ನು ತೋರಿಸುವಂತೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ಸೂಚಿಸಿತ್ತು.

ಇದನ್ನೂ ಓದಿ: ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ, ‘ಧಾರ್ಮಿಕ’ ಘೋಷಣೆ ಕೂಗಿದ್ದು ಆಶ್ಚರ್ಯ ತಂದಿದೆ: ಶರದ್ ಪವಾರ್

ಸೋಮವಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ಚುನಾವಣಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿರುವ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದರೂ, ಚುನಾವಣಾ ಆಯೋಗ ಮಾತ್ರ ಯಾವುದೇ ನೋಟಿಸ್ ನೀಡಿಲ್ಲ ಎಂದು ಪಿಟಿಐ ವರದಿ ಮಾಡಿದೆ.

”ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗದಿಂದ ಅನ್ಯಾಯ ಮತ್ತು ಅಸಮಾನ ವರ್ತನೆಗೆ ಒಳಗಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಪಕ್ಷ ಹೇಳಿದೆ.

”ಚುನಾವಣಾ ಮಾನದಂಡಗಳನ್ನು ಕೇವಲ ಪ್ರತಿಪಕ್ಷಗಳಿಗೆ ಮಾತ್ರ ಮೀಸಲಿಟ್ಟಂತೆ ತೋರುತ್ತಿದೆ. ಸಣ್ಣದೊಂದು ತಪ್ಪಾದರೂ ತಮ್ಮನ್ನು ವಿವರಣೆ ಕೇಳಲು ಕರೆಸಿದ್ದಾರೆ” ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ರಾಜಕೀಯ ಜಾಹೀರಾತಿಗೆ ಪುರಾವೆಗಳನ್ನು ಒದಗಿಸಲು ಚುನಾವಣಾ ಆಯೋಗವು ರಾಷ್ಟ್ರೀಯ ಪಕ್ಷವನ್ನು ಕರೆಸಿರುವುದು ಇದೇ ಮೊದಲು ಎಂದು ಕಾಂಗ್ರೆಸ್ ಹೇಳಿದೆ.

”ಚುನಾವಣಾ ಆಯೋಗವು ಆ ಆರೋಪಗಳ ತನಿಖೆ ನಡೆಸಲು ಹೇಳಬಹುದಿತ್ತು ಆ ಅಧಿಕಾರ ಆಯೋಗಕ್ಕೆ ಇದೆ. ಏಕೆಂದರೆ ಆ ಆರೋಪಗಳಿಗೆ ಪುರಾವೆಗಳು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿವೆ. ಆದರೆ ಚುನಾವಣಾ ಆಯೋಗವು ಆ ಭ್ರಷ್ಟಾಚಾರದ ಮೇಲೆ ಬೆಳಕು ಚೆಲ್ಲುವ ಪಕ್ಷವನ್ನು ಗುರಿಯಾಗಿಸಲು ತನ್ನ ಅಧಿಕಾರ ಬಳಸಿಕೊಂಡಿದೆ” ಎಂದು ಕಾಂಗ್ರೆಸ್ ಆರೋಪಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...