Homeಮುಖಪುಟಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ಲಕ್ಷದ್ವೀಪದ ಮಿನಿಕಾಯ್ ದ್ವೀಪದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲು ಖಾಸಗಿ ಕಂಪನಿಗೆ 75 ವರ್ಷಗಳ ಅವಧಿಗೆ 15 ಹೆಕ್ಟೇರ್ ಭೂಮಿಯನ್ನು ಸರ್ಕಾರ ಗುತ್ತಿಗೆಗೆ ನೀಡಲಿದೆ.

- Advertisement -
- Advertisement -

ಜನರ ತೀವ್ರ ಆಕ್ರೋಶಗಳು ಮತ್ತು ಪ್ರತಿಭಟನೆಗಳ ನಡುವೆಯು ಲಕ್ಷದ್ವೀಪ ಆಡಳಿತ ತನ್ನ ವಿಧ್ವಂಸಕ ನೀತಿಯನ್ನು ಮುಂದುವರಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಇತ್ತೀಚೆಗೆ ಹೊರಡಿಸಲಾಗಿರುವ ಆದೇಶಗಳಲ್ಲಿ, ಸಮುದ್ರ ತೀರದಿಂದ 20 ಮೀಟರ್ ಒಳಗೆ ಇರುವ ನೂರು ಮನೆಗಳನ್ನು ಧ್ವಂಸ ಮಾಡಲು ಹೇಳಲಾಗಿದೆ. ಈ ಹೊಸ ಆದೇಶದಲ್ಲಿ ತೀರದಿಂದ 20 ಮೀಟರ್‌‌ ಒಳಗೆ ಇರುವ ಶೌಚಾಲಯಗಳು ಮತ್ತು ನಿರ್ಜನ ದ್ವೀಪಗಳಲ್ಲಿ ನಿರ್ಮಿಸಲಾದ ತಾತ್ಕಾಲಿಕ ಮೀನುಗಾರಿಕಾ ಶೆಡ್‌ಗಳನ್ನು ಸಹ ಧ್ವಂಸ ಮಾಡಲು ಹೇಳಿದೆ.

ಲಕ್ಷದ್ವೀಪದ ಆಡಳಿತ ಕೇಂದ್ರವಾಗಿರುವ ಕವರತ್ತಿಯ 102 ಮನೆಗಳಿಗೆ ನೋಟಿಸ್ ಪಡೆದಿವೆ. ಅಷ್ಟೇ ಅಲ್ಲದೆ ಇನ್ನೂ 52 ಮನೆಗಳಿಗೆ ಶೀಘ್ರದಲ್ಲೇ ನೋಟಿಸ್‌‌ ನೀಡಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೆರಿಯಮ್, ಸುಹೆಲಿ ಪಾರ್ ಮತ್ತು ಕಲ್ಪೇನಿ ದ್ವೀಪಗಳ ಅನೇಕರು ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳಿಂದ ಇದೀ ರೀತಿಯ ನೋಟಿಸ್ ಪಡೆದಿದ್ದಾರೆ ಎಂದು ‘ಮಾಧ್ಯಮಂ’ ವರದಿ ಮಾಡಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಮನೆಗಳಿಗೆ ನೀಡಲಾದ ನೋಟಿಸ್‌ಗೆ ಉತ್ತರಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ಒಂದು ವೇಳೆ ನೋಟಿಸ್‌ ನೀಡಿದ ಕಟ್ಟಡಗಳನ್ನು ಧ್ವಂಸ ಮಾಡಲು ವಿಫಲವಾದರೆ ಅದನ್ನು ಅಧಿಕಾರಿಗಳೇ ಧ್ವಂಸ ಮಾಡಲಿದ್ದು, ಅದಕ್ಕೆ ತಗುಲುವ ವೆಚ್ಚವನ್ನು ಕಟ್ಟಡದ ಮಾಲಿಕರು ನೀಡಬೇಕಾಗುತ್ತದೆ.

ಸಮುದ್ರ ತೀರದಿಂದ 50 ಮೀಟರ್ ದೂರವಿರುವ ಕಟ್ಟಡಗಳಿಗೂ ನೋಟಿಸ್‌ ಬಂದಿದೆ ಎಂದು ದ್ವೀಪವಾಸಿಗಳು ಹೇಳಿದ್ದಾರೆ. ನೋಟಿಸ್ ಪಡೆದ ಹಲವು ಕಟ್ಟಡಗಳು ತೀರದಿಂದ 50 ಮೀಟರ್ ದೂರದಲ್ಲೆ ನಿರ್ಮಿಸಲ್ಪಟ್ಟಿತ್ತಾದರೂ, ಸಮುದ್ರ ಕೊರೆತದಿಂದ ಅದರ ಅಂತರ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

“ಇಂಟಿಗ್ರೇಟೆಡ್ ಐಲ್ಯಾಂಡ್ ಮ್ಯಾನೇಜ್ಮೆಂಟ್ ಪ್ಲ್ಯಾನ್ ಅಡಿಯಲ್ಲಿ ಕಾನೂನುಬಾಹಿರವಾಗಿ ಕಟ್ಟಲ್ಪಟ್ಟ ಕಟ್ಟವೆಂದು ಕಂಡುಬಂದವರಿಗೆ ಮಾತ್ರ ನೋಟಿಸ್ ನೀಡಲಾಗುತ್ತದೆ. ಅಲ್ಲದೆ, ಶಿಥಿಲವಾದ ಮನೆಗಳು ಮತ್ತು ಶೌಚಾಲಯಗಳನ್ನು ಮಾತ್ರ ಉರುಳಿಸುತ್ತಿದ್ದು, ಯಾರೂ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಐದು ಸ್ಥಳಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಲು ಬೇಕಾಗಿ ಕಟ್ಟಡಗಳನ್ನು ತೆಗೆದುಹಾಕಲಾಗುತ್ತದೆ” ಎಂದು ಅಧಿಕಾರಿಗಳು ಹೇಳುತ್ತಾರೆ.

ಇದನ್ನೂ ಓದಿ: ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಈ ಮಧ್ಯೆ, ದ್ವೀಪವಾಸಿಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಕಳಪೆ ತ್ಯಾಜ್ಯ ನಿರ್ವಹಣೆಗೆ ದಂಡ ವಿಧಿಸಲಿರುವ ಹೊಸ ಆದೇಶಕ್ಕೆ ಆಕ್ರೋಶಗಳು ಹೆಚ್ಚಿವೆ. ತ್ಯಾಜ್ಯ ನಿರ್ವಹಣೆಗೆ ಯಾವುದೆ ಮೂಲಸೌಕರ್ಯಗಳೇ ಇಲ್ಲದೆ ಇರುವಾಗ ದಂಡ ವಿಧಿಸುವಂತಹ ಆದೇಶಗಳು ಹೇಗೆ ತಾರ್ಕಿಕವಾಗುತ್ತದೆ ಎಂದು ದ್ವೀಪವಾಸಿಗಳು ವಾದಿಸುತ್ತಿದ್ದಾರೆ.

ಈ ಮೊದಲು ಚೆರಿಯಮ್ ದ್ವೀಪದಲ್ಲಿ, ಕಡಲತೀರದ ಉದ್ದಕ್ಕೂ ಇರುವ ಮೀನುಗಾರರ ನಿರ್ಮಾಣಗಳನ್ನು ಏಳು ದಿನಗಳಲ್ಲಿ ತೆರವುಗೊಳಿಸಲು ಆಡಳಿತವು ಆದೇಶಿಸಿತ್ತು. ಮೀನುಗಾರರು ಅದನ್ನು ಸ್ವಇಚ್ಛೆಯಿಂದ ಮಾಡದಿದ್ದರೆ, ಕಂದಾಯ ಇಲಾಖೆಯು ಇದನ್ನು ಮಾಡುತ್ತದೆ ಎಂದು ಆದೇಶವು ಉಲ್ಲೇಖಿಸಿತ್ತು.

ಲಕ್ಷದ್ವೀಪ ಆಡಳಿತವು ಈ ಮೊದಲು ಕೂಡಾ ಮೀನುಗಾರರ ನಿರ್ಮಾಣಗಳನ್ನು ಇದೇ ಮಾದರಿಯಲ್ಲಿ ಕಿತ್ತುಹಾಕಿತ್ತು. ಇದು ದ್ವೀಪವಾಸಿಗಳು ಸೇರಿದಂತೆ ಭಾರತದಾದ್ಯಂತ ಭಾರಿ ಆಕ್ರೋಶವನ್ನು ಹುಟ್ಟಹಾಕಿತ್ತು. ಪ್ರಫುಲ್ ಪಟೇಲ್ ನೇತೃತ್ವದ ಹೊಸ ಲಕ್ಷದ್ವೀಪ ಆಡಳಿತವು ಪರಿಚಯಿಸಿದ ಅನೇಕ ಕಠಿಣ ಯೋಜನೆಗಳಲ್ಲಿ ಇದು ಒಂದಾಗಿದೆ.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ಇದಕ್ಕೂ ಮುನ್ನ, ಶನಿವಾರದಂದು, ಪರಿಸರ ಕಾಳಜಿಗಳ ಬಗ್ಗೆ ತಜ್ಞರ ಎಚ್ಚರಿಕೆಗಳ ಹೊರತಾಗಿಯೂ, ಒಕ್ಕೂಟ ಸರ್ಕಾರವು ಲಕ್ಷದ್ವೀಪದಲ್ಲಿ ಪ್ರಮುಖ ಪ್ರವಾಸೋದ್ಯಮ ಯೋಜನೆಗೆ ಅನುಮೋದನೆ ನೀಡಿತ್ತು. ಲಕ್ಷದ್ವೀಪದ ಮಿನಿಕಾಯ್ ದ್ವೀಪದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲು ಖಾಸಗಿ ಕಂಪನಿಗೆ 75 ವರ್ಷಗಳ ಅವಧಿಗೆ 15 ಹೆಕ್ಟೇರ್ ಭೂಮಿಯನ್ನು ಸರ್ಕಾರ ಗುತ್ತಿಗೆಗೆ ನೀಡಲಿದೆ.

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು.

ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಡೈರಿ ಫಾರಂಗಳನ್ನು ಮುಚ್ಚುವ ಮತ್ತು ಶಾಲೆಯ ಮಧ್ಯಾಹ್ನದ ಊಟದಲ್ಲಿ ಮಾಂಸವನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಪ್ರಫುಲ್ ಪಟೇಲ್‌ ನೀಡಿದ್ದ ಎರಡು ವಿವಾದಾತ್ಮಕ ಆದೇಶಗಳನ್ನು ಕೇರಳ ಹೈಕೋರ್ಟ್ ತಡೆಹಿಡಿದಿತ್ತು.

ಇದನ್ನೂ ಓದಿ: ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...