Homeಮುಖಪುಟತಸ್ತೀಕ್ ಹಣ ಮರಳಿಸುವಂತೆ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್; ವಿರೋಧದ ನಂತರ ಆದೇಶ ವಾಪಸ್

ತಸ್ತೀಕ್ ಹಣ ಮರಳಿಸುವಂತೆ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್; ವಿರೋಧದ ನಂತರ ಆದೇಶ ವಾಪಸ್

- Advertisement -
- Advertisement -

ಈವರೆಗೆ ಪಾವತಿಸಿರುವ ತಸ್ತೀಕ್ ಹಣ ದೇವಾಲಯದ ಆದಾಯಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆ ಹಣ ಹಿಂದಿರುಗಿಸುವಂತೆ ‘ಕನ್ನಡದ ಪೂಜಾರಿ’ ಎಂದು ಕರೆಸಿಕೊಳ್ಳುವ ಹಿರೇಮಗಳೂರು ಕಣ್ಣನ್ ಅವರಿಗೆ ಮುಜರಾಯಿ ಇಲಾಖೆ ನೋಟಿಸ್ ನೀಡಿದ್ದು, ವಿರೋಧ ಹೆಚ್ಚಾದ ನಂತರ ತನ್ನ ಆದೇಶ ವಾಪಸ್ ಪಡೆದಿದೆ.

‘ತಸ್ತೀಕ್ ಹಣ ದೇವಾಲಯದ ಆದಾಯಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆ ₹4.75 ಲಕ್ಷ ಹಣವನ್ನು ಇಲಾಖೆಗೆ ಮರಳಿಸಬೇಕು’ ಎಂದು ಹಿರೇಮಗಳೂರು ಕಣ್ಣನ್ ಅವರಿಗೆ ಮುಜರಾಯಿ ಇಲಾಖೆ ನೋಟಿಸ್ ನೀಡಿತ್ತು.

‘ಚಿಕ್ಕಮಗಳೂರಿನ ಹಿರೇಮಗಳೂರು ಕೋದಂಡ ರಾಮಚಂದ್ರ ದೇಗುಲಕ್ಕೆ 2013-14ನೇ ಸಾಲಿನಿಂದ ಈವರೆಗೆ 5.10 ಲಕ್ಷ ಸಂಗ್ರಹವಾಗಿದೆ. ಅದೇ ಅವಧಿಯಲ್ಲಿ ತಮಗೆ ತಸ್ತೀಕ್ ಮೊತ್ತವಾಗಿ ಒಟ್ಟು 8.10 ಲಕ್ಷ ಪಾವತಿಸಲಾಗಿದೆ. ದೇವಾಲಯದ ವಾರ್ಷಿಕ ಆದಾಯಕ್ಕಿಂತ ವೆಚ್ಚ ಜಾಸ್ತಿ ಇದೆ. ಸರ್ಕಾರದಿಂದ ಬಿಡುಗಡೆಯಾಗಿರುವ ಮೊತ್ತಕ್ಕಿಂತ ಹೆಚ್ಚುವರಿ ತಮ್ಮ ಖಾತೆಗೆ ಜಮಾ ಮಾಡಲಾಗಿದೆ. ಆದ್ದರಿಂದ ಬಾಕಿ 4.74 ಲಕ್ಷ ಹಿಂದಿರುಗಿಸಬೇಕು’ ಎಂದು ಇಲಾಖೆಯ ನೋಟಿಸ್ ನಲ್ಲಿ ತಿಳಿಸಲಾಗಿತ್ತು.

ಕಣ್ಣನ್ ಬೇಸರ:

ತಾವು ಪೂಜೆ ಸಲ್ಲಿಸುವ ದೇವಾಲಯದಲ್ಲಿ ಹೆಚ್ಚಿನ ಆದಾಯವಿಲ್ಲದ ಕಾರಣಕ್ಕೆ ವೇತನದ ಒಂದಷ್ಟು ಭಾಗವನ್ನು ಹಿಂತಿರುಗಿಸಬೇಕೆಂದು ನೀಡಿದ್ದ ಇಲಾಖೆ ನೋಟಿಸಿಗೆ ಹೀರೇಮಗಳೂರು ಕಣ್ಣನ್ ಬೇಸರ ವ್ಯಕ್ತಪಡಿಸಿದ್ದಾರೆ.

‘ಮುಜರಾಯಿ ಇಲಾಖೆ ಮೂಲಕ ದೇವಾಲಯಗಳನ್ನು ಸಂರಕ್ಷಿಸಬೇಕು. 44 ವರ್ಷದಿಂದ ದೇವಾಲಯದಲ್ಲಿ ಅರ್ಚಕನಾಗಿ ಕೆಲಸ ಮಾಡಿದ್ದೇನೆ. ದೇವಾಲಯಕ್ಕೆ ಆದಾಯ ಇಲ್ಲ ಎಂದು ಸಂಬಳ ತಡೆಹಿಡಿದು, ನೀಡಿದ್ದ ವೇತನ ವಾಪಸ್ ಕೇಳುವುದು ಸರಿಯಲ್ಲ. ದೇವಾಲಯಗಳಲ್ಲಿ ಅರ್ಚಕರ ಕೊರತೆ ಇದೆ. ಬಡ ಅರ್ಚಕರ ವೇತನವನ್ನು ವಾಪಸ್ ಕೇಳುವುದು ಎಷ್ಟು ಸರಿ. ಜಿಲ್ಲಾಡಳಿತದ ಈ ನಡೆ ಅಚ್ಚರಿ ಮತ್ತು ಬೇಸರ ತರಿಸಿದೆ’ ಎಂದು ಕಣ್ಣನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ:

ಕಣ್ಣನ್ ಅವರಿಗೆ ನೀಡಿದ್ದ ನೋಟಿಸ್ ವಿಚಾರ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ‘ಹಿರೇಮಗಳೂರು ಕಣ್ಣನ್ ಅವರು ನೋಟಿಸ್ ನಿಂದ ದೃತಿಗೆಡುವುದು ಬೇಡ.. ಇದು ತಹಶೀಲ್ದಾರ್ ತಪ್ಪಿನಿಂದಾಗಿದ್ದು, ಹಣ ಪಾವತಿಸುವಂತೆ ಅವರಿಗೆ ನೋಟಿಸ್ ಜಾರಿ ಮಾಡುತ್ತೇವೆ. ತಹಶೀಲ್ದಾರ್ ಅವರು ಹೆಚ್ಚುವರಿ ಹಣ ಪಾವತಿಸಿ ಸಮಸ್ಯೆ ಸೃಷ್ಟಿಸಿದ್ದಾರೆ. ಬೇರೆ ಯಾವುದೇ ಮುಜರಾಯಿ ದೇಗುಲದಲ್ಲಿ ಈ ಸಮಸ್ಯೆ ಆಗಿಲ್ಲ. ಹೀಗಾಗಿ, ಸ್ಥಳೀಯ ತಹಶೀಲ್ದಾರ್ ಗೆ ಹಣ ಪಾವತಿಸುವಂತೆ ನೋಟಿಸ್ ನೀಡುತ್ತೇವೆ. ಈ ಸಮಸ್ಯೆಯನ್ನು ನಾನು ಕೂಡಲೇ ಬಗೆಹರಿಸುತ್ತೇನೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ:

‘ಪ್ರಭು ಶ್ರೀರಾಮನನ್ನು ಬಹಿಷ್ಕರಿಸಿದ ಕಾಂಗ್ರೆಸ್ ಸರ್ಕಾರ, ರಾಜ್ಯದಲ್ಲಿ ರಾಮ ಭಕ್ತರ ಸಂಭ್ರಮಾಚರಣೆಗೆ ನಿರ್ಬಂಧ ಹೇರಿತು. ಇದೀಗ ರಾಜ್ಯದ ಅರ್ಚಕರಿಂದ ಸಂಬಳ ವಾಪಸ್ಸಾತಿಗೆ ನೋಟಿಸ್ ನೀಡಿ ತುಘಲಕ್ ದರ್ಬಾರ್ ನಡೆಸಿದೆ’ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಬಿಜೆಪಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ‘ಅರ್ಚಕ, ಕನ್ನಡ ಪಂಡಿತರಾದ ಹಿರೇಮಗಳೂರು ಕಣ್ಣನ್ ಅವರು, 50 ವರ್ಷದಿಂದ ಕೋದಂಡರಾಮ ದೇವಾಲಯದಲ್ಲಿ ಹಿರಿಯ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀರಾಮನ ವಿರುದ್ಧ ಸಿದ್ದರಾಮಯ್ಯ ಅವರ ಸರ್ಕಾರ ದ್ವೇಷ ಸಾಧಿಸಲು, ಇದೀಗ ಕೋದಂಡರಾಮ ದೇವಾಲಯದ ಹಿರಿಯ ಅರ್ಚಕ ಕಣ್ಣನ್ ಅವರಿಂದ 10 ವರ್ಷದ ಸಂಬಳವನ್ನು ವಾಪಸ್ ಕೇಳಿ ನೋಟಿಸ್ ಕೊಟ್ಟು ಸೇಡು ತೀರಿಸಿಕೊಳ್ಳಲು ಹೊರಟಿದೆ. ಕಾರಣ ಕಾಂಗ್ರೆಸ್ಸಿಗರ ಇಚ್ಛೆಯಂತೆ ಗೋಧ್ರಾದಂತಹ ಘಟನೆ ನಡೆಯಲಿಲ್ಲ ಎನ್ನುವುದು ಇರಬಹುದು’ ಎಂದು ಬಿಜೆಪಿ ಕಿಡಿಕಾರಿದೆ.

‘ಕಾಂಗ್ರೆಸ್ ಸರ್ಕಾರದ ಆಡಳಿತ ತುಘಲಕ್ ಹಾದಿಯಲ್ಲಿ ನಡೆದಿದೆ, ಹಿಂದೂ ಧರ್ಮಿಯರ ಧಾರ್ಮಿಕ ಕ್ಷೇತ್ರದಲ್ಲಿಯೂ ಆದಾಯ ಗಳಿಕೆಯನ್ನು ಮಾನದಂಡವನ್ನಾಗಿಸಿಕೊಂಡು ಹಿರೇಮಗಳೂರು ಕಣ್ಣನ್ ಅವರಂತಹ ನಾಡಿನ ಶ್ರೇಷ್ಠ ಕನ್ನಡ ವಿದ್ವಾಂಸ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಿಗೆ ನೋಟಿಸ್ ನೀಡಿರುವ ಕ್ರಮ ಅತ್ಯಂತ ಹಾಸ್ಯಾಸ್ಪದ ಹಾಗೂ ಖಂಡನೀಯ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಹಿಂದೂ ಆಚಾರ-ವಿಚಾರ ಹಾಗೂ ಧಾರ್ಮಿಕ ಕೇಂದ್ರಗಳನ್ನೇ ಗುರಿಯನ್ನಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ಆಗಾಗ ಸರಣೀ ರೂಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಧರ್ಮನಿಷ್ಠರ ಸಹನೆಯನ್ನು ಕೆಣಕುವಂತಿದೆ. ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ಅನ್ನು ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಿ ಸರ್ಕಾರ ವಾಪಸ್ ಪಡೆಯಬೇಕು, ಇಂಥಾ ಅಸಂಬದ್ಧ ನೋಟಿಸ್ ನೀಡಿದ ಅವಿವೇಕಿ ಅಧಿಕಾರಿಯನ್ನು ಕೂಡಲೇ ಅಮಾನತ್ತಿನಲ್ಲಿಡಲಿ’ ಎಂದು ಆಗ್ರಹಿಸಿದ್ದಾರೆ.

‘ಸಿಎಂ ಸಿದ್ದರಾಮಯ್ಯ ಅವರ ಹಿಂದೂ ದ್ವೇಷ ಯಾವ ಪರಾಕಾಷ್ಠೆಗೆ ತಲುಪಿದೆ ಎಂದರೆ 10 ವರ್ಷಗಳ ಸಂಬಳ ವಾಪಸ್ಸು ನೀಡುವಂತೆ ಚಿಕ್ಕಮಗಳೂರಿನ ರಾಮನ ದೇವಸ್ಥಾನದ ಆಚರ್ಕರಿಗೆ ನೋಟಿಸ್ ಕೊಡಿಸಿದ್ದಾರೆ. 7 ತಿಂಗಳಲ್ಲೇ ರಾಜ್ಯದ ಬೊಕ್ಕಸವನ್ನ ಬರಿದು ಮಾಡಿ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರ ದೇವಸ್ಥಾನದ ಅರ್ಚಕರಿಗೆ ನೀಡುವ ಸಂಬಳಕ್ಕೂ ಕತ್ತರಿ ಹಾಕುತ್ತಿದ್ದಾರೆ. ಹಿಂದೂಗಳನ್ನ ಕಂಡರೆ, ಹಿಂದೂಗಳ ದೇವಸ್ಥಾನಗಳನ್ನ ಕಂಡರೆ, ಅಲ್ಲಿ ಪೂಜೆ ಮಾಡುವವರನ್ನು ಕಂಡರೆ ನಿಮಗೆ ಯಾಕಿಷ್ಟು ದ್ವೇಷ ಸಿಎಂ ಸಿದ್ದರಾಮಯ್ಯನವರೇ’ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...