Homeಮುಖಪುಟತಸ್ತೀಕ್ ಹಣ ಮರಳಿಸುವಂತೆ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್; ವಿರೋಧದ ನಂತರ ಆದೇಶ ವಾಪಸ್

ತಸ್ತೀಕ್ ಹಣ ಮರಳಿಸುವಂತೆ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್; ವಿರೋಧದ ನಂತರ ಆದೇಶ ವಾಪಸ್

- Advertisement -
- Advertisement -

ಈವರೆಗೆ ಪಾವತಿಸಿರುವ ತಸ್ತೀಕ್ ಹಣ ದೇವಾಲಯದ ಆದಾಯಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆ ಹಣ ಹಿಂದಿರುಗಿಸುವಂತೆ ‘ಕನ್ನಡದ ಪೂಜಾರಿ’ ಎಂದು ಕರೆಸಿಕೊಳ್ಳುವ ಹಿರೇಮಗಳೂರು ಕಣ್ಣನ್ ಅವರಿಗೆ ಮುಜರಾಯಿ ಇಲಾಖೆ ನೋಟಿಸ್ ನೀಡಿದ್ದು, ವಿರೋಧ ಹೆಚ್ಚಾದ ನಂತರ ತನ್ನ ಆದೇಶ ವಾಪಸ್ ಪಡೆದಿದೆ.

‘ತಸ್ತೀಕ್ ಹಣ ದೇವಾಲಯದ ಆದಾಯಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆ ₹4.75 ಲಕ್ಷ ಹಣವನ್ನು ಇಲಾಖೆಗೆ ಮರಳಿಸಬೇಕು’ ಎಂದು ಹಿರೇಮಗಳೂರು ಕಣ್ಣನ್ ಅವರಿಗೆ ಮುಜರಾಯಿ ಇಲಾಖೆ ನೋಟಿಸ್ ನೀಡಿತ್ತು.

‘ಚಿಕ್ಕಮಗಳೂರಿನ ಹಿರೇಮಗಳೂರು ಕೋದಂಡ ರಾಮಚಂದ್ರ ದೇಗುಲಕ್ಕೆ 2013-14ನೇ ಸಾಲಿನಿಂದ ಈವರೆಗೆ 5.10 ಲಕ್ಷ ಸಂಗ್ರಹವಾಗಿದೆ. ಅದೇ ಅವಧಿಯಲ್ಲಿ ತಮಗೆ ತಸ್ತೀಕ್ ಮೊತ್ತವಾಗಿ ಒಟ್ಟು 8.10 ಲಕ್ಷ ಪಾವತಿಸಲಾಗಿದೆ. ದೇವಾಲಯದ ವಾರ್ಷಿಕ ಆದಾಯಕ್ಕಿಂತ ವೆಚ್ಚ ಜಾಸ್ತಿ ಇದೆ. ಸರ್ಕಾರದಿಂದ ಬಿಡುಗಡೆಯಾಗಿರುವ ಮೊತ್ತಕ್ಕಿಂತ ಹೆಚ್ಚುವರಿ ತಮ್ಮ ಖಾತೆಗೆ ಜಮಾ ಮಾಡಲಾಗಿದೆ. ಆದ್ದರಿಂದ ಬಾಕಿ 4.74 ಲಕ್ಷ ಹಿಂದಿರುಗಿಸಬೇಕು’ ಎಂದು ಇಲಾಖೆಯ ನೋಟಿಸ್ ನಲ್ಲಿ ತಿಳಿಸಲಾಗಿತ್ತು.

ಕಣ್ಣನ್ ಬೇಸರ:

ತಾವು ಪೂಜೆ ಸಲ್ಲಿಸುವ ದೇವಾಲಯದಲ್ಲಿ ಹೆಚ್ಚಿನ ಆದಾಯವಿಲ್ಲದ ಕಾರಣಕ್ಕೆ ವೇತನದ ಒಂದಷ್ಟು ಭಾಗವನ್ನು ಹಿಂತಿರುಗಿಸಬೇಕೆಂದು ನೀಡಿದ್ದ ಇಲಾಖೆ ನೋಟಿಸಿಗೆ ಹೀರೇಮಗಳೂರು ಕಣ್ಣನ್ ಬೇಸರ ವ್ಯಕ್ತಪಡಿಸಿದ್ದಾರೆ.

‘ಮುಜರಾಯಿ ಇಲಾಖೆ ಮೂಲಕ ದೇವಾಲಯಗಳನ್ನು ಸಂರಕ್ಷಿಸಬೇಕು. 44 ವರ್ಷದಿಂದ ದೇವಾಲಯದಲ್ಲಿ ಅರ್ಚಕನಾಗಿ ಕೆಲಸ ಮಾಡಿದ್ದೇನೆ. ದೇವಾಲಯಕ್ಕೆ ಆದಾಯ ಇಲ್ಲ ಎಂದು ಸಂಬಳ ತಡೆಹಿಡಿದು, ನೀಡಿದ್ದ ವೇತನ ವಾಪಸ್ ಕೇಳುವುದು ಸರಿಯಲ್ಲ. ದೇವಾಲಯಗಳಲ್ಲಿ ಅರ್ಚಕರ ಕೊರತೆ ಇದೆ. ಬಡ ಅರ್ಚಕರ ವೇತನವನ್ನು ವಾಪಸ್ ಕೇಳುವುದು ಎಷ್ಟು ಸರಿ. ಜಿಲ್ಲಾಡಳಿತದ ಈ ನಡೆ ಅಚ್ಚರಿ ಮತ್ತು ಬೇಸರ ತರಿಸಿದೆ’ ಎಂದು ಕಣ್ಣನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ:

ಕಣ್ಣನ್ ಅವರಿಗೆ ನೀಡಿದ್ದ ನೋಟಿಸ್ ವಿಚಾರ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ‘ಹಿರೇಮಗಳೂರು ಕಣ್ಣನ್ ಅವರು ನೋಟಿಸ್ ನಿಂದ ದೃತಿಗೆಡುವುದು ಬೇಡ.. ಇದು ತಹಶೀಲ್ದಾರ್ ತಪ್ಪಿನಿಂದಾಗಿದ್ದು, ಹಣ ಪಾವತಿಸುವಂತೆ ಅವರಿಗೆ ನೋಟಿಸ್ ಜಾರಿ ಮಾಡುತ್ತೇವೆ. ತಹಶೀಲ್ದಾರ್ ಅವರು ಹೆಚ್ಚುವರಿ ಹಣ ಪಾವತಿಸಿ ಸಮಸ್ಯೆ ಸೃಷ್ಟಿಸಿದ್ದಾರೆ. ಬೇರೆ ಯಾವುದೇ ಮುಜರಾಯಿ ದೇಗುಲದಲ್ಲಿ ಈ ಸಮಸ್ಯೆ ಆಗಿಲ್ಲ. ಹೀಗಾಗಿ, ಸ್ಥಳೀಯ ತಹಶೀಲ್ದಾರ್ ಗೆ ಹಣ ಪಾವತಿಸುವಂತೆ ನೋಟಿಸ್ ನೀಡುತ್ತೇವೆ. ಈ ಸಮಸ್ಯೆಯನ್ನು ನಾನು ಕೂಡಲೇ ಬಗೆಹರಿಸುತ್ತೇನೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ:

‘ಪ್ರಭು ಶ್ರೀರಾಮನನ್ನು ಬಹಿಷ್ಕರಿಸಿದ ಕಾಂಗ್ರೆಸ್ ಸರ್ಕಾರ, ರಾಜ್ಯದಲ್ಲಿ ರಾಮ ಭಕ್ತರ ಸಂಭ್ರಮಾಚರಣೆಗೆ ನಿರ್ಬಂಧ ಹೇರಿತು. ಇದೀಗ ರಾಜ್ಯದ ಅರ್ಚಕರಿಂದ ಸಂಬಳ ವಾಪಸ್ಸಾತಿಗೆ ನೋಟಿಸ್ ನೀಡಿ ತುಘಲಕ್ ದರ್ಬಾರ್ ನಡೆಸಿದೆ’ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಬಿಜೆಪಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ‘ಅರ್ಚಕ, ಕನ್ನಡ ಪಂಡಿತರಾದ ಹಿರೇಮಗಳೂರು ಕಣ್ಣನ್ ಅವರು, 50 ವರ್ಷದಿಂದ ಕೋದಂಡರಾಮ ದೇವಾಲಯದಲ್ಲಿ ಹಿರಿಯ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀರಾಮನ ವಿರುದ್ಧ ಸಿದ್ದರಾಮಯ್ಯ ಅವರ ಸರ್ಕಾರ ದ್ವೇಷ ಸಾಧಿಸಲು, ಇದೀಗ ಕೋದಂಡರಾಮ ದೇವಾಲಯದ ಹಿರಿಯ ಅರ್ಚಕ ಕಣ್ಣನ್ ಅವರಿಂದ 10 ವರ್ಷದ ಸಂಬಳವನ್ನು ವಾಪಸ್ ಕೇಳಿ ನೋಟಿಸ್ ಕೊಟ್ಟು ಸೇಡು ತೀರಿಸಿಕೊಳ್ಳಲು ಹೊರಟಿದೆ. ಕಾರಣ ಕಾಂಗ್ರೆಸ್ಸಿಗರ ಇಚ್ಛೆಯಂತೆ ಗೋಧ್ರಾದಂತಹ ಘಟನೆ ನಡೆಯಲಿಲ್ಲ ಎನ್ನುವುದು ಇರಬಹುದು’ ಎಂದು ಬಿಜೆಪಿ ಕಿಡಿಕಾರಿದೆ.

‘ಕಾಂಗ್ರೆಸ್ ಸರ್ಕಾರದ ಆಡಳಿತ ತುಘಲಕ್ ಹಾದಿಯಲ್ಲಿ ನಡೆದಿದೆ, ಹಿಂದೂ ಧರ್ಮಿಯರ ಧಾರ್ಮಿಕ ಕ್ಷೇತ್ರದಲ್ಲಿಯೂ ಆದಾಯ ಗಳಿಕೆಯನ್ನು ಮಾನದಂಡವನ್ನಾಗಿಸಿಕೊಂಡು ಹಿರೇಮಗಳೂರು ಕಣ್ಣನ್ ಅವರಂತಹ ನಾಡಿನ ಶ್ರೇಷ್ಠ ಕನ್ನಡ ವಿದ್ವಾಂಸ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಿಗೆ ನೋಟಿಸ್ ನೀಡಿರುವ ಕ್ರಮ ಅತ್ಯಂತ ಹಾಸ್ಯಾಸ್ಪದ ಹಾಗೂ ಖಂಡನೀಯ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಹಿಂದೂ ಆಚಾರ-ವಿಚಾರ ಹಾಗೂ ಧಾರ್ಮಿಕ ಕೇಂದ್ರಗಳನ್ನೇ ಗುರಿಯನ್ನಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ಆಗಾಗ ಸರಣೀ ರೂಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಧರ್ಮನಿಷ್ಠರ ಸಹನೆಯನ್ನು ಕೆಣಕುವಂತಿದೆ. ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ಅನ್ನು ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಿ ಸರ್ಕಾರ ವಾಪಸ್ ಪಡೆಯಬೇಕು, ಇಂಥಾ ಅಸಂಬದ್ಧ ನೋಟಿಸ್ ನೀಡಿದ ಅವಿವೇಕಿ ಅಧಿಕಾರಿಯನ್ನು ಕೂಡಲೇ ಅಮಾನತ್ತಿನಲ್ಲಿಡಲಿ’ ಎಂದು ಆಗ್ರಹಿಸಿದ್ದಾರೆ.

‘ಸಿಎಂ ಸಿದ್ದರಾಮಯ್ಯ ಅವರ ಹಿಂದೂ ದ್ವೇಷ ಯಾವ ಪರಾಕಾಷ್ಠೆಗೆ ತಲುಪಿದೆ ಎಂದರೆ 10 ವರ್ಷಗಳ ಸಂಬಳ ವಾಪಸ್ಸು ನೀಡುವಂತೆ ಚಿಕ್ಕಮಗಳೂರಿನ ರಾಮನ ದೇವಸ್ಥಾನದ ಆಚರ್ಕರಿಗೆ ನೋಟಿಸ್ ಕೊಡಿಸಿದ್ದಾರೆ. 7 ತಿಂಗಳಲ್ಲೇ ರಾಜ್ಯದ ಬೊಕ್ಕಸವನ್ನ ಬರಿದು ಮಾಡಿ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರ ದೇವಸ್ಥಾನದ ಅರ್ಚಕರಿಗೆ ನೀಡುವ ಸಂಬಳಕ್ಕೂ ಕತ್ತರಿ ಹಾಕುತ್ತಿದ್ದಾರೆ. ಹಿಂದೂಗಳನ್ನ ಕಂಡರೆ, ಹಿಂದೂಗಳ ದೇವಸ್ಥಾನಗಳನ್ನ ಕಂಡರೆ, ಅಲ್ಲಿ ಪೂಜೆ ಮಾಡುವವರನ್ನು ಕಂಡರೆ ನಿಮಗೆ ಯಾಕಿಷ್ಟು ದ್ವೇಷ ಸಿಎಂ ಸಿದ್ದರಾಮಯ್ಯನವರೇ’ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...