Homeಮುಖಪುಟತಸ್ತೀಕ್ ಹಣ ಮರಳಿಸುವಂತೆ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್; ವಿರೋಧದ ನಂತರ ಆದೇಶ ವಾಪಸ್

ತಸ್ತೀಕ್ ಹಣ ಮರಳಿಸುವಂತೆ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್; ವಿರೋಧದ ನಂತರ ಆದೇಶ ವಾಪಸ್

- Advertisement -
- Advertisement -

ಈವರೆಗೆ ಪಾವತಿಸಿರುವ ತಸ್ತೀಕ್ ಹಣ ದೇವಾಲಯದ ಆದಾಯಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆ ಹಣ ಹಿಂದಿರುಗಿಸುವಂತೆ ‘ಕನ್ನಡದ ಪೂಜಾರಿ’ ಎಂದು ಕರೆಸಿಕೊಳ್ಳುವ ಹಿರೇಮಗಳೂರು ಕಣ್ಣನ್ ಅವರಿಗೆ ಮುಜರಾಯಿ ಇಲಾಖೆ ನೋಟಿಸ್ ನೀಡಿದ್ದು, ವಿರೋಧ ಹೆಚ್ಚಾದ ನಂತರ ತನ್ನ ಆದೇಶ ವಾಪಸ್ ಪಡೆದಿದೆ.

‘ತಸ್ತೀಕ್ ಹಣ ದೇವಾಲಯದ ಆದಾಯಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆ ₹4.75 ಲಕ್ಷ ಹಣವನ್ನು ಇಲಾಖೆಗೆ ಮರಳಿಸಬೇಕು’ ಎಂದು ಹಿರೇಮಗಳೂರು ಕಣ್ಣನ್ ಅವರಿಗೆ ಮುಜರಾಯಿ ಇಲಾಖೆ ನೋಟಿಸ್ ನೀಡಿತ್ತು.

‘ಚಿಕ್ಕಮಗಳೂರಿನ ಹಿರೇಮಗಳೂರು ಕೋದಂಡ ರಾಮಚಂದ್ರ ದೇಗುಲಕ್ಕೆ 2013-14ನೇ ಸಾಲಿನಿಂದ ಈವರೆಗೆ 5.10 ಲಕ್ಷ ಸಂಗ್ರಹವಾಗಿದೆ. ಅದೇ ಅವಧಿಯಲ್ಲಿ ತಮಗೆ ತಸ್ತೀಕ್ ಮೊತ್ತವಾಗಿ ಒಟ್ಟು 8.10 ಲಕ್ಷ ಪಾವತಿಸಲಾಗಿದೆ. ದೇವಾಲಯದ ವಾರ್ಷಿಕ ಆದಾಯಕ್ಕಿಂತ ವೆಚ್ಚ ಜಾಸ್ತಿ ಇದೆ. ಸರ್ಕಾರದಿಂದ ಬಿಡುಗಡೆಯಾಗಿರುವ ಮೊತ್ತಕ್ಕಿಂತ ಹೆಚ್ಚುವರಿ ತಮ್ಮ ಖಾತೆಗೆ ಜಮಾ ಮಾಡಲಾಗಿದೆ. ಆದ್ದರಿಂದ ಬಾಕಿ 4.74 ಲಕ್ಷ ಹಿಂದಿರುಗಿಸಬೇಕು’ ಎಂದು ಇಲಾಖೆಯ ನೋಟಿಸ್ ನಲ್ಲಿ ತಿಳಿಸಲಾಗಿತ್ತು.

ಕಣ್ಣನ್ ಬೇಸರ:

ತಾವು ಪೂಜೆ ಸಲ್ಲಿಸುವ ದೇವಾಲಯದಲ್ಲಿ ಹೆಚ್ಚಿನ ಆದಾಯವಿಲ್ಲದ ಕಾರಣಕ್ಕೆ ವೇತನದ ಒಂದಷ್ಟು ಭಾಗವನ್ನು ಹಿಂತಿರುಗಿಸಬೇಕೆಂದು ನೀಡಿದ್ದ ಇಲಾಖೆ ನೋಟಿಸಿಗೆ ಹೀರೇಮಗಳೂರು ಕಣ್ಣನ್ ಬೇಸರ ವ್ಯಕ್ತಪಡಿಸಿದ್ದಾರೆ.

‘ಮುಜರಾಯಿ ಇಲಾಖೆ ಮೂಲಕ ದೇವಾಲಯಗಳನ್ನು ಸಂರಕ್ಷಿಸಬೇಕು. 44 ವರ್ಷದಿಂದ ದೇವಾಲಯದಲ್ಲಿ ಅರ್ಚಕನಾಗಿ ಕೆಲಸ ಮಾಡಿದ್ದೇನೆ. ದೇವಾಲಯಕ್ಕೆ ಆದಾಯ ಇಲ್ಲ ಎಂದು ಸಂಬಳ ತಡೆಹಿಡಿದು, ನೀಡಿದ್ದ ವೇತನ ವಾಪಸ್ ಕೇಳುವುದು ಸರಿಯಲ್ಲ. ದೇವಾಲಯಗಳಲ್ಲಿ ಅರ್ಚಕರ ಕೊರತೆ ಇದೆ. ಬಡ ಅರ್ಚಕರ ವೇತನವನ್ನು ವಾಪಸ್ ಕೇಳುವುದು ಎಷ್ಟು ಸರಿ. ಜಿಲ್ಲಾಡಳಿತದ ಈ ನಡೆ ಅಚ್ಚರಿ ಮತ್ತು ಬೇಸರ ತರಿಸಿದೆ’ ಎಂದು ಕಣ್ಣನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ:

ಕಣ್ಣನ್ ಅವರಿಗೆ ನೀಡಿದ್ದ ನೋಟಿಸ್ ವಿಚಾರ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ‘ಹಿರೇಮಗಳೂರು ಕಣ್ಣನ್ ಅವರು ನೋಟಿಸ್ ನಿಂದ ದೃತಿಗೆಡುವುದು ಬೇಡ.. ಇದು ತಹಶೀಲ್ದಾರ್ ತಪ್ಪಿನಿಂದಾಗಿದ್ದು, ಹಣ ಪಾವತಿಸುವಂತೆ ಅವರಿಗೆ ನೋಟಿಸ್ ಜಾರಿ ಮಾಡುತ್ತೇವೆ. ತಹಶೀಲ್ದಾರ್ ಅವರು ಹೆಚ್ಚುವರಿ ಹಣ ಪಾವತಿಸಿ ಸಮಸ್ಯೆ ಸೃಷ್ಟಿಸಿದ್ದಾರೆ. ಬೇರೆ ಯಾವುದೇ ಮುಜರಾಯಿ ದೇಗುಲದಲ್ಲಿ ಈ ಸಮಸ್ಯೆ ಆಗಿಲ್ಲ. ಹೀಗಾಗಿ, ಸ್ಥಳೀಯ ತಹಶೀಲ್ದಾರ್ ಗೆ ಹಣ ಪಾವತಿಸುವಂತೆ ನೋಟಿಸ್ ನೀಡುತ್ತೇವೆ. ಈ ಸಮಸ್ಯೆಯನ್ನು ನಾನು ಕೂಡಲೇ ಬಗೆಹರಿಸುತ್ತೇನೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ:

‘ಪ್ರಭು ಶ್ರೀರಾಮನನ್ನು ಬಹಿಷ್ಕರಿಸಿದ ಕಾಂಗ್ರೆಸ್ ಸರ್ಕಾರ, ರಾಜ್ಯದಲ್ಲಿ ರಾಮ ಭಕ್ತರ ಸಂಭ್ರಮಾಚರಣೆಗೆ ನಿರ್ಬಂಧ ಹೇರಿತು. ಇದೀಗ ರಾಜ್ಯದ ಅರ್ಚಕರಿಂದ ಸಂಬಳ ವಾಪಸ್ಸಾತಿಗೆ ನೋಟಿಸ್ ನೀಡಿ ತುಘಲಕ್ ದರ್ಬಾರ್ ನಡೆಸಿದೆ’ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಬಿಜೆಪಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ‘ಅರ್ಚಕ, ಕನ್ನಡ ಪಂಡಿತರಾದ ಹಿರೇಮಗಳೂರು ಕಣ್ಣನ್ ಅವರು, 50 ವರ್ಷದಿಂದ ಕೋದಂಡರಾಮ ದೇವಾಲಯದಲ್ಲಿ ಹಿರಿಯ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀರಾಮನ ವಿರುದ್ಧ ಸಿದ್ದರಾಮಯ್ಯ ಅವರ ಸರ್ಕಾರ ದ್ವೇಷ ಸಾಧಿಸಲು, ಇದೀಗ ಕೋದಂಡರಾಮ ದೇವಾಲಯದ ಹಿರಿಯ ಅರ್ಚಕ ಕಣ್ಣನ್ ಅವರಿಂದ 10 ವರ್ಷದ ಸಂಬಳವನ್ನು ವಾಪಸ್ ಕೇಳಿ ನೋಟಿಸ್ ಕೊಟ್ಟು ಸೇಡು ತೀರಿಸಿಕೊಳ್ಳಲು ಹೊರಟಿದೆ. ಕಾರಣ ಕಾಂಗ್ರೆಸ್ಸಿಗರ ಇಚ್ಛೆಯಂತೆ ಗೋಧ್ರಾದಂತಹ ಘಟನೆ ನಡೆಯಲಿಲ್ಲ ಎನ್ನುವುದು ಇರಬಹುದು’ ಎಂದು ಬಿಜೆಪಿ ಕಿಡಿಕಾರಿದೆ.

‘ಕಾಂಗ್ರೆಸ್ ಸರ್ಕಾರದ ಆಡಳಿತ ತುಘಲಕ್ ಹಾದಿಯಲ್ಲಿ ನಡೆದಿದೆ, ಹಿಂದೂ ಧರ್ಮಿಯರ ಧಾರ್ಮಿಕ ಕ್ಷೇತ್ರದಲ್ಲಿಯೂ ಆದಾಯ ಗಳಿಕೆಯನ್ನು ಮಾನದಂಡವನ್ನಾಗಿಸಿಕೊಂಡು ಹಿರೇಮಗಳೂರು ಕಣ್ಣನ್ ಅವರಂತಹ ನಾಡಿನ ಶ್ರೇಷ್ಠ ಕನ್ನಡ ವಿದ್ವಾಂಸ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಿಗೆ ನೋಟಿಸ್ ನೀಡಿರುವ ಕ್ರಮ ಅತ್ಯಂತ ಹಾಸ್ಯಾಸ್ಪದ ಹಾಗೂ ಖಂಡನೀಯ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಹಿಂದೂ ಆಚಾರ-ವಿಚಾರ ಹಾಗೂ ಧಾರ್ಮಿಕ ಕೇಂದ್ರಗಳನ್ನೇ ಗುರಿಯನ್ನಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ಆಗಾಗ ಸರಣೀ ರೂಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಧರ್ಮನಿಷ್ಠರ ಸಹನೆಯನ್ನು ಕೆಣಕುವಂತಿದೆ. ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ಅನ್ನು ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಿ ಸರ್ಕಾರ ವಾಪಸ್ ಪಡೆಯಬೇಕು, ಇಂಥಾ ಅಸಂಬದ್ಧ ನೋಟಿಸ್ ನೀಡಿದ ಅವಿವೇಕಿ ಅಧಿಕಾರಿಯನ್ನು ಕೂಡಲೇ ಅಮಾನತ್ತಿನಲ್ಲಿಡಲಿ’ ಎಂದು ಆಗ್ರಹಿಸಿದ್ದಾರೆ.

‘ಸಿಎಂ ಸಿದ್ದರಾಮಯ್ಯ ಅವರ ಹಿಂದೂ ದ್ವೇಷ ಯಾವ ಪರಾಕಾಷ್ಠೆಗೆ ತಲುಪಿದೆ ಎಂದರೆ 10 ವರ್ಷಗಳ ಸಂಬಳ ವಾಪಸ್ಸು ನೀಡುವಂತೆ ಚಿಕ್ಕಮಗಳೂರಿನ ರಾಮನ ದೇವಸ್ಥಾನದ ಆಚರ್ಕರಿಗೆ ನೋಟಿಸ್ ಕೊಡಿಸಿದ್ದಾರೆ. 7 ತಿಂಗಳಲ್ಲೇ ರಾಜ್ಯದ ಬೊಕ್ಕಸವನ್ನ ಬರಿದು ಮಾಡಿ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರ ದೇವಸ್ಥಾನದ ಅರ್ಚಕರಿಗೆ ನೀಡುವ ಸಂಬಳಕ್ಕೂ ಕತ್ತರಿ ಹಾಕುತ್ತಿದ್ದಾರೆ. ಹಿಂದೂಗಳನ್ನ ಕಂಡರೆ, ಹಿಂದೂಗಳ ದೇವಸ್ಥಾನಗಳನ್ನ ಕಂಡರೆ, ಅಲ್ಲಿ ಪೂಜೆ ಮಾಡುವವರನ್ನು ಕಂಡರೆ ನಿಮಗೆ ಯಾಕಿಷ್ಟು ದ್ವೇಷ ಸಿಎಂ ಸಿದ್ದರಾಮಯ್ಯನವರೇ’ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...