Homeಮುಖಪುಟತಸ್ತೀಕ್ ಹಣ ಮರಳಿಸುವಂತೆ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್; ವಿರೋಧದ ನಂತರ ಆದೇಶ ವಾಪಸ್

ತಸ್ತೀಕ್ ಹಣ ಮರಳಿಸುವಂತೆ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್; ವಿರೋಧದ ನಂತರ ಆದೇಶ ವಾಪಸ್

- Advertisement -
- Advertisement -

ಈವರೆಗೆ ಪಾವತಿಸಿರುವ ತಸ್ತೀಕ್ ಹಣ ದೇವಾಲಯದ ಆದಾಯಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆ ಹಣ ಹಿಂದಿರುಗಿಸುವಂತೆ ‘ಕನ್ನಡದ ಪೂಜಾರಿ’ ಎಂದು ಕರೆಸಿಕೊಳ್ಳುವ ಹಿರೇಮಗಳೂರು ಕಣ್ಣನ್ ಅವರಿಗೆ ಮುಜರಾಯಿ ಇಲಾಖೆ ನೋಟಿಸ್ ನೀಡಿದ್ದು, ವಿರೋಧ ಹೆಚ್ಚಾದ ನಂತರ ತನ್ನ ಆದೇಶ ವಾಪಸ್ ಪಡೆದಿದೆ.

‘ತಸ್ತೀಕ್ ಹಣ ದೇವಾಲಯದ ಆದಾಯಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆ ₹4.75 ಲಕ್ಷ ಹಣವನ್ನು ಇಲಾಖೆಗೆ ಮರಳಿಸಬೇಕು’ ಎಂದು ಹಿರೇಮಗಳೂರು ಕಣ್ಣನ್ ಅವರಿಗೆ ಮುಜರಾಯಿ ಇಲಾಖೆ ನೋಟಿಸ್ ನೀಡಿತ್ತು.

‘ಚಿಕ್ಕಮಗಳೂರಿನ ಹಿರೇಮಗಳೂರು ಕೋದಂಡ ರಾಮಚಂದ್ರ ದೇಗುಲಕ್ಕೆ 2013-14ನೇ ಸಾಲಿನಿಂದ ಈವರೆಗೆ 5.10 ಲಕ್ಷ ಸಂಗ್ರಹವಾಗಿದೆ. ಅದೇ ಅವಧಿಯಲ್ಲಿ ತಮಗೆ ತಸ್ತೀಕ್ ಮೊತ್ತವಾಗಿ ಒಟ್ಟು 8.10 ಲಕ್ಷ ಪಾವತಿಸಲಾಗಿದೆ. ದೇವಾಲಯದ ವಾರ್ಷಿಕ ಆದಾಯಕ್ಕಿಂತ ವೆಚ್ಚ ಜಾಸ್ತಿ ಇದೆ. ಸರ್ಕಾರದಿಂದ ಬಿಡುಗಡೆಯಾಗಿರುವ ಮೊತ್ತಕ್ಕಿಂತ ಹೆಚ್ಚುವರಿ ತಮ್ಮ ಖಾತೆಗೆ ಜಮಾ ಮಾಡಲಾಗಿದೆ. ಆದ್ದರಿಂದ ಬಾಕಿ 4.74 ಲಕ್ಷ ಹಿಂದಿರುಗಿಸಬೇಕು’ ಎಂದು ಇಲಾಖೆಯ ನೋಟಿಸ್ ನಲ್ಲಿ ತಿಳಿಸಲಾಗಿತ್ತು.

ಕಣ್ಣನ್ ಬೇಸರ:

ತಾವು ಪೂಜೆ ಸಲ್ಲಿಸುವ ದೇವಾಲಯದಲ್ಲಿ ಹೆಚ್ಚಿನ ಆದಾಯವಿಲ್ಲದ ಕಾರಣಕ್ಕೆ ವೇತನದ ಒಂದಷ್ಟು ಭಾಗವನ್ನು ಹಿಂತಿರುಗಿಸಬೇಕೆಂದು ನೀಡಿದ್ದ ಇಲಾಖೆ ನೋಟಿಸಿಗೆ ಹೀರೇಮಗಳೂರು ಕಣ್ಣನ್ ಬೇಸರ ವ್ಯಕ್ತಪಡಿಸಿದ್ದಾರೆ.

‘ಮುಜರಾಯಿ ಇಲಾಖೆ ಮೂಲಕ ದೇವಾಲಯಗಳನ್ನು ಸಂರಕ್ಷಿಸಬೇಕು. 44 ವರ್ಷದಿಂದ ದೇವಾಲಯದಲ್ಲಿ ಅರ್ಚಕನಾಗಿ ಕೆಲಸ ಮಾಡಿದ್ದೇನೆ. ದೇವಾಲಯಕ್ಕೆ ಆದಾಯ ಇಲ್ಲ ಎಂದು ಸಂಬಳ ತಡೆಹಿಡಿದು, ನೀಡಿದ್ದ ವೇತನ ವಾಪಸ್ ಕೇಳುವುದು ಸರಿಯಲ್ಲ. ದೇವಾಲಯಗಳಲ್ಲಿ ಅರ್ಚಕರ ಕೊರತೆ ಇದೆ. ಬಡ ಅರ್ಚಕರ ವೇತನವನ್ನು ವಾಪಸ್ ಕೇಳುವುದು ಎಷ್ಟು ಸರಿ. ಜಿಲ್ಲಾಡಳಿತದ ಈ ನಡೆ ಅಚ್ಚರಿ ಮತ್ತು ಬೇಸರ ತರಿಸಿದೆ’ ಎಂದು ಕಣ್ಣನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ:

ಕಣ್ಣನ್ ಅವರಿಗೆ ನೀಡಿದ್ದ ನೋಟಿಸ್ ವಿಚಾರ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ‘ಹಿರೇಮಗಳೂರು ಕಣ್ಣನ್ ಅವರು ನೋಟಿಸ್ ನಿಂದ ದೃತಿಗೆಡುವುದು ಬೇಡ.. ಇದು ತಹಶೀಲ್ದಾರ್ ತಪ್ಪಿನಿಂದಾಗಿದ್ದು, ಹಣ ಪಾವತಿಸುವಂತೆ ಅವರಿಗೆ ನೋಟಿಸ್ ಜಾರಿ ಮಾಡುತ್ತೇವೆ. ತಹಶೀಲ್ದಾರ್ ಅವರು ಹೆಚ್ಚುವರಿ ಹಣ ಪಾವತಿಸಿ ಸಮಸ್ಯೆ ಸೃಷ್ಟಿಸಿದ್ದಾರೆ. ಬೇರೆ ಯಾವುದೇ ಮುಜರಾಯಿ ದೇಗುಲದಲ್ಲಿ ಈ ಸಮಸ್ಯೆ ಆಗಿಲ್ಲ. ಹೀಗಾಗಿ, ಸ್ಥಳೀಯ ತಹಶೀಲ್ದಾರ್ ಗೆ ಹಣ ಪಾವತಿಸುವಂತೆ ನೋಟಿಸ್ ನೀಡುತ್ತೇವೆ. ಈ ಸಮಸ್ಯೆಯನ್ನು ನಾನು ಕೂಡಲೇ ಬಗೆಹರಿಸುತ್ತೇನೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ:

‘ಪ್ರಭು ಶ್ರೀರಾಮನನ್ನು ಬಹಿಷ್ಕರಿಸಿದ ಕಾಂಗ್ರೆಸ್ ಸರ್ಕಾರ, ರಾಜ್ಯದಲ್ಲಿ ರಾಮ ಭಕ್ತರ ಸಂಭ್ರಮಾಚರಣೆಗೆ ನಿರ್ಬಂಧ ಹೇರಿತು. ಇದೀಗ ರಾಜ್ಯದ ಅರ್ಚಕರಿಂದ ಸಂಬಳ ವಾಪಸ್ಸಾತಿಗೆ ನೋಟಿಸ್ ನೀಡಿ ತುಘಲಕ್ ದರ್ಬಾರ್ ನಡೆಸಿದೆ’ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಬಿಜೆಪಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ‘ಅರ್ಚಕ, ಕನ್ನಡ ಪಂಡಿತರಾದ ಹಿರೇಮಗಳೂರು ಕಣ್ಣನ್ ಅವರು, 50 ವರ್ಷದಿಂದ ಕೋದಂಡರಾಮ ದೇವಾಲಯದಲ್ಲಿ ಹಿರಿಯ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀರಾಮನ ವಿರುದ್ಧ ಸಿದ್ದರಾಮಯ್ಯ ಅವರ ಸರ್ಕಾರ ದ್ವೇಷ ಸಾಧಿಸಲು, ಇದೀಗ ಕೋದಂಡರಾಮ ದೇವಾಲಯದ ಹಿರಿಯ ಅರ್ಚಕ ಕಣ್ಣನ್ ಅವರಿಂದ 10 ವರ್ಷದ ಸಂಬಳವನ್ನು ವಾಪಸ್ ಕೇಳಿ ನೋಟಿಸ್ ಕೊಟ್ಟು ಸೇಡು ತೀರಿಸಿಕೊಳ್ಳಲು ಹೊರಟಿದೆ. ಕಾರಣ ಕಾಂಗ್ರೆಸ್ಸಿಗರ ಇಚ್ಛೆಯಂತೆ ಗೋಧ್ರಾದಂತಹ ಘಟನೆ ನಡೆಯಲಿಲ್ಲ ಎನ್ನುವುದು ಇರಬಹುದು’ ಎಂದು ಬಿಜೆಪಿ ಕಿಡಿಕಾರಿದೆ.

‘ಕಾಂಗ್ರೆಸ್ ಸರ್ಕಾರದ ಆಡಳಿತ ತುಘಲಕ್ ಹಾದಿಯಲ್ಲಿ ನಡೆದಿದೆ, ಹಿಂದೂ ಧರ್ಮಿಯರ ಧಾರ್ಮಿಕ ಕ್ಷೇತ್ರದಲ್ಲಿಯೂ ಆದಾಯ ಗಳಿಕೆಯನ್ನು ಮಾನದಂಡವನ್ನಾಗಿಸಿಕೊಂಡು ಹಿರೇಮಗಳೂರು ಕಣ್ಣನ್ ಅವರಂತಹ ನಾಡಿನ ಶ್ರೇಷ್ಠ ಕನ್ನಡ ವಿದ್ವಾಂಸ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಿಗೆ ನೋಟಿಸ್ ನೀಡಿರುವ ಕ್ರಮ ಅತ್ಯಂತ ಹಾಸ್ಯಾಸ್ಪದ ಹಾಗೂ ಖಂಡನೀಯ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಹಿಂದೂ ಆಚಾರ-ವಿಚಾರ ಹಾಗೂ ಧಾರ್ಮಿಕ ಕೇಂದ್ರಗಳನ್ನೇ ಗುರಿಯನ್ನಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ಆಗಾಗ ಸರಣೀ ರೂಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಧರ್ಮನಿಷ್ಠರ ಸಹನೆಯನ್ನು ಕೆಣಕುವಂತಿದೆ. ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ಅನ್ನು ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಿ ಸರ್ಕಾರ ವಾಪಸ್ ಪಡೆಯಬೇಕು, ಇಂಥಾ ಅಸಂಬದ್ಧ ನೋಟಿಸ್ ನೀಡಿದ ಅವಿವೇಕಿ ಅಧಿಕಾರಿಯನ್ನು ಕೂಡಲೇ ಅಮಾನತ್ತಿನಲ್ಲಿಡಲಿ’ ಎಂದು ಆಗ್ರಹಿಸಿದ್ದಾರೆ.

‘ಸಿಎಂ ಸಿದ್ದರಾಮಯ್ಯ ಅವರ ಹಿಂದೂ ದ್ವೇಷ ಯಾವ ಪರಾಕಾಷ್ಠೆಗೆ ತಲುಪಿದೆ ಎಂದರೆ 10 ವರ್ಷಗಳ ಸಂಬಳ ವಾಪಸ್ಸು ನೀಡುವಂತೆ ಚಿಕ್ಕಮಗಳೂರಿನ ರಾಮನ ದೇವಸ್ಥಾನದ ಆಚರ್ಕರಿಗೆ ನೋಟಿಸ್ ಕೊಡಿಸಿದ್ದಾರೆ. 7 ತಿಂಗಳಲ್ಲೇ ರಾಜ್ಯದ ಬೊಕ್ಕಸವನ್ನ ಬರಿದು ಮಾಡಿ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರ ದೇವಸ್ಥಾನದ ಅರ್ಚಕರಿಗೆ ನೀಡುವ ಸಂಬಳಕ್ಕೂ ಕತ್ತರಿ ಹಾಕುತ್ತಿದ್ದಾರೆ. ಹಿಂದೂಗಳನ್ನ ಕಂಡರೆ, ಹಿಂದೂಗಳ ದೇವಸ್ಥಾನಗಳನ್ನ ಕಂಡರೆ, ಅಲ್ಲಿ ಪೂಜೆ ಮಾಡುವವರನ್ನು ಕಂಡರೆ ನಿಮಗೆ ಯಾಕಿಷ್ಟು ದ್ವೇಷ ಸಿಎಂ ಸಿದ್ದರಾಮಯ್ಯನವರೇ’ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...