Homeಕರೋನಾ ತಲ್ಲಣಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆಸ್ಪತ್ರೆಗೆ ನೋಟಿಸ್

ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆಸ್ಪತ್ರೆಗೆ ನೋಟಿಸ್

ಐಸಿಎಂಆರ್‌ನ ಮಾರ್ಗಸೂಚಿಗಳು ಮತ್ತು ಸರ್ಕಾರಗಳ ಆದೇಶವನ್ನು ಉಲ್ಲಂಘಿಸಿ ಕೊರೊನಾ ಪರೀಕ್ಷೆಗೆ ಅಧಿಕವಾಗಿ ಶುಲ್ಕ ವಿಧಿಸಿದ ಆರೋಪ.

- Advertisement -
- Advertisement -

ಐಸಿಎಂಆರ್‌ನ ಮಾರ್ಗಸೂಚಿಗಳು ಮತ್ತು ಸರ್ಕಾರಗಳ ಆದೇಶವನ್ನು ಉಲ್ಲಂಘಿಸಿ ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆರೋಪದ ಮೇಲೆ ಕರ್ನಾಟಕದ ರಾಷ್ಟ್ರೀಯ ಆರೋಗ್ಯ ಮಿಷನ್, ಶೇಷಾದ್ರಿಪುರಂನ ಅಪೊಲೊ ಆಸ್ಪತ್ರೆಗಳಿಗೆ ನೋಟಿಸ್ ನೀಡಿದೆ.

ಕೋವಿಡ್ ಪರೀಕ್ಷೆಗೆ ಆಸ್ಪತ್ರೆಯು 4,500 ರೂ. ಮತ್ತು “ಮಾದರಿ ನಿರ್ವಹಣೆ” ಗಾಗಿ 1,500 ರೂ. ಒಟ್ಟು 6,000 ರೂ.ಗಳು ವಿಧಿಸಿದ್ದು, ಇದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ.

ಅಖಿಲ ಭಾರತ ಡ್ರಗ್ ಆಕ್ಷನ್ ನೆಟ್‌ವರ್ಕ್‌ನ ಸಹ-ಕನ್ವೀನರ್ ಮಾಲಿನಿ ಐಸೋಲಾ ಅವರು ಜೂನ್ 25 ರ ಬಿಲ್ಲನ್ನು ಸೋಮವಾರ ಮುಂಜಾನೆ ಟ್ವೀಟ್ ಮಾಡಿದ್ದರು. ಇದರಲ್ಲಿ ಆಸ್ಪತ್ರೆಯೂ ಅಧಿಕ ಶುಲ್ಕ ವಿಧಿಸಿರುವುದು ತೋರಿಸುತ್ತದೆ.

ಈ ಬಗ್ಗೆ ಮಾಧ್ಯಮಗಳು ರಶೀತಿಯ ಪ್ರತಿಯನ್ನು ರಾಜ್ಯ ಆರೋಗ್ಯ ಆಯುಕ್ತ ಪಂಕಜ್ ಕುಮಾರ್ ಪಾಂಡೆಗೆ ಕಳುಹಿಸಿದ್ದು ಅವರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸಂಜೆಯ ಹೊತ್ತಿಗೆ, ಕರ್ನಾಟಕದ ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕರು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಸ್ಪತ್ರೆಗೆ ನೋಟಿಸ್ ಕಳುಹಿಸಿದ್ದಾರೆ ಹಾಗೂ ನೋಟಿಸ್ ತಲುಪಿದ ಎರಡು ದಿನಗಳಲ್ಲಿ ವಿವರಣೆಯನ್ನು ಕೋರಿದ್ದಾರೆ.

“ಯಾವುದೇ ಉತ್ತರವನ್ನು ನೀಡದಿದ್ದರೆ, ನಿಯಮಗಳ ಪ್ರಕಾರ ಕ್ರಮವನ್ನು ಕೈಗೊಳ್ಳಬೇಕಾಗುತ್ತದೆ” ಎಂದು ನೋಟಿಸ್ ಎಚ್ಚರಿಸಿದೆ.

ಈ ಬಗ್ಗೆ ಅಪೊಲೊ ಆಸ್ಪತ್ರೆಗಳ ಘಟಕದ ಮುಖ್ಯಸ್ಥ ಶೇಷಾದ್ರಿಪುರಂ ಉದಯ್ ದಾವ್ಡಾ ಮಾತನಾಡಿ “ನಾವು ನಮ್ಮ ಮಾದರಿಗಳನ್ನು ಕ್ಯಾನ್ಸೈಟ್ ಪ್ರಯೋಗಾಲಯಕ್ಕೆ ಹೊರಗುತ್ತಿಗೆ ನೀಡುತ್ತೇವೆ, ಅವರು ನಮಗೆ 4,500 ರೂ. ಶುಲ್ಕ ವಿಧಿಸುತ್ತಾರೆ. ಅವರು ಮಾದರಿಗಳನ್ನು ಸಾಗಿಸುವ ಹಾಗೂ ಪಿಪಿಇ ವೆಚ್ಚವನ್ನು ಸರಿದೂಗಿಸುವ ಸೌಲಭ್ಯವನ್ನು ನೀಡುತ್ತಿಲ್ಲ. ಅದನ್ನು ನಾವು ರೋಗಿಗಳಿಗೆ ನಿರ್ವಹಣಾ ಶುಲ್ಕವೆಂದು ಹಾಕುತ್ತೇವೆ” ಎಂದು ಹೇಳಿದ್ದಾರೆ.

ಈ ಶುಲ್ಕ ವಿಧಿಸದಂತೆ ಆರೋಗ್ಯ ಇಲಾಖೆ ಕೇಳಿಕೊಂಡಿದೆ ಆದ್ದರಿಂದ ಆಸ್ಪತ್ರೆಯು ಈಗ ನಿರ್ವಹಣಾ ಶುಲ್ಕವನ್ನು ಭರಿಸಲಿದೆ ಎಂದು ಅವರು ಹೇಳಿದರು.

“ಕೋವಿಡ್ ಪರೀಕ್ಷೆಗೆ ಒಳಗಾದ ಎಲ್ಲಾ ರೋಗಿಗಳ ಮಾಹಿತಿಯನ್ನು ಪಡೆದು, ರೋಗಿಗಳಿಗೆ ಮರುಪಾವತಿ ಮಾಡಲು ನಾನು ಕೇಳಿಕೊಂಡಿದ್ದೇನೆ. ರೋಗಿಯ ಕುಟುಂಬದೊಂದಿಗೆ ನಾನು ಮಾತನಾಡಿದ್ದೇನೆ. ಇನ್ನುಮುಂದೆ, ನಾವು ನಿರ್ವಹಣಾ ಶುಲ್ಕವನ್ನು ಭರಿಸುತ್ತೇವೆ” ಎಂದು ಅವರು ಹೇಳಿದರು.

“ನಾವು ಈಗಾಗಲೇ ಮರುಪಾವತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ದರಗಳನ್ನು ಪರಿಷ್ಕರಿಸಲಾಗಿದೆ.” ಎಂದು ಆಸ್ಪತ್ರೆ ಹೇಳಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪ್ರಸ್ತುತ, ಸರ್ಕಾರವು ಖಾಸಗಿ ಪ್ರಯೋಗಾಲಯಗಳಿಗೆ ಕಳುಹಿಸಿದ ಮಾದರಿಗಳಿಗೆ ಬೆಲೆ 2,250 ರೂ. ಆಗಿದ್ದು, ಇದು ಸ್ಕ್ರೀನಿಂಗ್ ಪರೀಕ್ಷೆಯ ವೆಚ್ಚ ಮತ್ತು ದೃಡೀಕರಣ ಪರೀಕ್ಷೆಯನ್ನು ಒಳಗೊಂಡಿದೆ.


ಓದಿ: ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...