Homeಕರೋನಾ ತಲ್ಲಣಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆಸ್ಪತ್ರೆಗೆ ನೋಟಿಸ್

ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆಸ್ಪತ್ರೆಗೆ ನೋಟಿಸ್

ಐಸಿಎಂಆರ್‌ನ ಮಾರ್ಗಸೂಚಿಗಳು ಮತ್ತು ಸರ್ಕಾರಗಳ ಆದೇಶವನ್ನು ಉಲ್ಲಂಘಿಸಿ ಕೊರೊನಾ ಪರೀಕ್ಷೆಗೆ ಅಧಿಕವಾಗಿ ಶುಲ್ಕ ವಿಧಿಸಿದ ಆರೋಪ.

- Advertisement -
- Advertisement -

ಐಸಿಎಂಆರ್‌ನ ಮಾರ್ಗಸೂಚಿಗಳು ಮತ್ತು ಸರ್ಕಾರಗಳ ಆದೇಶವನ್ನು ಉಲ್ಲಂಘಿಸಿ ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆರೋಪದ ಮೇಲೆ ಕರ್ನಾಟಕದ ರಾಷ್ಟ್ರೀಯ ಆರೋಗ್ಯ ಮಿಷನ್, ಶೇಷಾದ್ರಿಪುರಂನ ಅಪೊಲೊ ಆಸ್ಪತ್ರೆಗಳಿಗೆ ನೋಟಿಸ್ ನೀಡಿದೆ.

ಕೋವಿಡ್ ಪರೀಕ್ಷೆಗೆ ಆಸ್ಪತ್ರೆಯು 4,500 ರೂ. ಮತ್ತು “ಮಾದರಿ ನಿರ್ವಹಣೆ” ಗಾಗಿ 1,500 ರೂ. ಒಟ್ಟು 6,000 ರೂ.ಗಳು ವಿಧಿಸಿದ್ದು, ಇದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ.

ಅಖಿಲ ಭಾರತ ಡ್ರಗ್ ಆಕ್ಷನ್ ನೆಟ್‌ವರ್ಕ್‌ನ ಸಹ-ಕನ್ವೀನರ್ ಮಾಲಿನಿ ಐಸೋಲಾ ಅವರು ಜೂನ್ 25 ರ ಬಿಲ್ಲನ್ನು ಸೋಮವಾರ ಮುಂಜಾನೆ ಟ್ವೀಟ್ ಮಾಡಿದ್ದರು. ಇದರಲ್ಲಿ ಆಸ್ಪತ್ರೆಯೂ ಅಧಿಕ ಶುಲ್ಕ ವಿಧಿಸಿರುವುದು ತೋರಿಸುತ್ತದೆ.

ಈ ಬಗ್ಗೆ ಮಾಧ್ಯಮಗಳು ರಶೀತಿಯ ಪ್ರತಿಯನ್ನು ರಾಜ್ಯ ಆರೋಗ್ಯ ಆಯುಕ್ತ ಪಂಕಜ್ ಕುಮಾರ್ ಪಾಂಡೆಗೆ ಕಳುಹಿಸಿದ್ದು ಅವರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸಂಜೆಯ ಹೊತ್ತಿಗೆ, ಕರ್ನಾಟಕದ ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕರು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಸ್ಪತ್ರೆಗೆ ನೋಟಿಸ್ ಕಳುಹಿಸಿದ್ದಾರೆ ಹಾಗೂ ನೋಟಿಸ್ ತಲುಪಿದ ಎರಡು ದಿನಗಳಲ್ಲಿ ವಿವರಣೆಯನ್ನು ಕೋರಿದ್ದಾರೆ.

“ಯಾವುದೇ ಉತ್ತರವನ್ನು ನೀಡದಿದ್ದರೆ, ನಿಯಮಗಳ ಪ್ರಕಾರ ಕ್ರಮವನ್ನು ಕೈಗೊಳ್ಳಬೇಕಾಗುತ್ತದೆ” ಎಂದು ನೋಟಿಸ್ ಎಚ್ಚರಿಸಿದೆ.

ಈ ಬಗ್ಗೆ ಅಪೊಲೊ ಆಸ್ಪತ್ರೆಗಳ ಘಟಕದ ಮುಖ್ಯಸ್ಥ ಶೇಷಾದ್ರಿಪುರಂ ಉದಯ್ ದಾವ್ಡಾ ಮಾತನಾಡಿ “ನಾವು ನಮ್ಮ ಮಾದರಿಗಳನ್ನು ಕ್ಯಾನ್ಸೈಟ್ ಪ್ರಯೋಗಾಲಯಕ್ಕೆ ಹೊರಗುತ್ತಿಗೆ ನೀಡುತ್ತೇವೆ, ಅವರು ನಮಗೆ 4,500 ರೂ. ಶುಲ್ಕ ವಿಧಿಸುತ್ತಾರೆ. ಅವರು ಮಾದರಿಗಳನ್ನು ಸಾಗಿಸುವ ಹಾಗೂ ಪಿಪಿಇ ವೆಚ್ಚವನ್ನು ಸರಿದೂಗಿಸುವ ಸೌಲಭ್ಯವನ್ನು ನೀಡುತ್ತಿಲ್ಲ. ಅದನ್ನು ನಾವು ರೋಗಿಗಳಿಗೆ ನಿರ್ವಹಣಾ ಶುಲ್ಕವೆಂದು ಹಾಕುತ್ತೇವೆ” ಎಂದು ಹೇಳಿದ್ದಾರೆ.

ಈ ಶುಲ್ಕ ವಿಧಿಸದಂತೆ ಆರೋಗ್ಯ ಇಲಾಖೆ ಕೇಳಿಕೊಂಡಿದೆ ಆದ್ದರಿಂದ ಆಸ್ಪತ್ರೆಯು ಈಗ ನಿರ್ವಹಣಾ ಶುಲ್ಕವನ್ನು ಭರಿಸಲಿದೆ ಎಂದು ಅವರು ಹೇಳಿದರು.

“ಕೋವಿಡ್ ಪರೀಕ್ಷೆಗೆ ಒಳಗಾದ ಎಲ್ಲಾ ರೋಗಿಗಳ ಮಾಹಿತಿಯನ್ನು ಪಡೆದು, ರೋಗಿಗಳಿಗೆ ಮರುಪಾವತಿ ಮಾಡಲು ನಾನು ಕೇಳಿಕೊಂಡಿದ್ದೇನೆ. ರೋಗಿಯ ಕುಟುಂಬದೊಂದಿಗೆ ನಾನು ಮಾತನಾಡಿದ್ದೇನೆ. ಇನ್ನುಮುಂದೆ, ನಾವು ನಿರ್ವಹಣಾ ಶುಲ್ಕವನ್ನು ಭರಿಸುತ್ತೇವೆ” ಎಂದು ಅವರು ಹೇಳಿದರು.

“ನಾವು ಈಗಾಗಲೇ ಮರುಪಾವತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ದರಗಳನ್ನು ಪರಿಷ್ಕರಿಸಲಾಗಿದೆ.” ಎಂದು ಆಸ್ಪತ್ರೆ ಹೇಳಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪ್ರಸ್ತುತ, ಸರ್ಕಾರವು ಖಾಸಗಿ ಪ್ರಯೋಗಾಲಯಗಳಿಗೆ ಕಳುಹಿಸಿದ ಮಾದರಿಗಳಿಗೆ ಬೆಲೆ 2,250 ರೂ. ಆಗಿದ್ದು, ಇದು ಸ್ಕ್ರೀನಿಂಗ್ ಪರೀಕ್ಷೆಯ ವೆಚ್ಚ ಮತ್ತು ದೃಡೀಕರಣ ಪರೀಕ್ಷೆಯನ್ನು ಒಳಗೊಂಡಿದೆ.


ಓದಿ: ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...