Homeಕರೋನಾ ತಲ್ಲಣಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆಸ್ಪತ್ರೆಗೆ ನೋಟಿಸ್

ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆಸ್ಪತ್ರೆಗೆ ನೋಟಿಸ್

ಐಸಿಎಂಆರ್‌ನ ಮಾರ್ಗಸೂಚಿಗಳು ಮತ್ತು ಸರ್ಕಾರಗಳ ಆದೇಶವನ್ನು ಉಲ್ಲಂಘಿಸಿ ಕೊರೊನಾ ಪರೀಕ್ಷೆಗೆ ಅಧಿಕವಾಗಿ ಶುಲ್ಕ ವಿಧಿಸಿದ ಆರೋಪ.

- Advertisement -
- Advertisement -

ಐಸಿಎಂಆರ್‌ನ ಮಾರ್ಗಸೂಚಿಗಳು ಮತ್ತು ಸರ್ಕಾರಗಳ ಆದೇಶವನ್ನು ಉಲ್ಲಂಘಿಸಿ ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆರೋಪದ ಮೇಲೆ ಕರ್ನಾಟಕದ ರಾಷ್ಟ್ರೀಯ ಆರೋಗ್ಯ ಮಿಷನ್, ಶೇಷಾದ್ರಿಪುರಂನ ಅಪೊಲೊ ಆಸ್ಪತ್ರೆಗಳಿಗೆ ನೋಟಿಸ್ ನೀಡಿದೆ.

ಕೋವಿಡ್ ಪರೀಕ್ಷೆಗೆ ಆಸ್ಪತ್ರೆಯು 4,500 ರೂ. ಮತ್ತು “ಮಾದರಿ ನಿರ್ವಹಣೆ” ಗಾಗಿ 1,500 ರೂ. ಒಟ್ಟು 6,000 ರೂ.ಗಳು ವಿಧಿಸಿದ್ದು, ಇದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ.

ಅಖಿಲ ಭಾರತ ಡ್ರಗ್ ಆಕ್ಷನ್ ನೆಟ್‌ವರ್ಕ್‌ನ ಸಹ-ಕನ್ವೀನರ್ ಮಾಲಿನಿ ಐಸೋಲಾ ಅವರು ಜೂನ್ 25 ರ ಬಿಲ್ಲನ್ನು ಸೋಮವಾರ ಮುಂಜಾನೆ ಟ್ವೀಟ್ ಮಾಡಿದ್ದರು. ಇದರಲ್ಲಿ ಆಸ್ಪತ್ರೆಯೂ ಅಧಿಕ ಶುಲ್ಕ ವಿಧಿಸಿರುವುದು ತೋರಿಸುತ್ತದೆ.

ಈ ಬಗ್ಗೆ ಮಾಧ್ಯಮಗಳು ರಶೀತಿಯ ಪ್ರತಿಯನ್ನು ರಾಜ್ಯ ಆರೋಗ್ಯ ಆಯುಕ್ತ ಪಂಕಜ್ ಕುಮಾರ್ ಪಾಂಡೆಗೆ ಕಳುಹಿಸಿದ್ದು ಅವರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸಂಜೆಯ ಹೊತ್ತಿಗೆ, ಕರ್ನಾಟಕದ ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕರು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಸ್ಪತ್ರೆಗೆ ನೋಟಿಸ್ ಕಳುಹಿಸಿದ್ದಾರೆ ಹಾಗೂ ನೋಟಿಸ್ ತಲುಪಿದ ಎರಡು ದಿನಗಳಲ್ಲಿ ವಿವರಣೆಯನ್ನು ಕೋರಿದ್ದಾರೆ.

“ಯಾವುದೇ ಉತ್ತರವನ್ನು ನೀಡದಿದ್ದರೆ, ನಿಯಮಗಳ ಪ್ರಕಾರ ಕ್ರಮವನ್ನು ಕೈಗೊಳ್ಳಬೇಕಾಗುತ್ತದೆ” ಎಂದು ನೋಟಿಸ್ ಎಚ್ಚರಿಸಿದೆ.

ಈ ಬಗ್ಗೆ ಅಪೊಲೊ ಆಸ್ಪತ್ರೆಗಳ ಘಟಕದ ಮುಖ್ಯಸ್ಥ ಶೇಷಾದ್ರಿಪುರಂ ಉದಯ್ ದಾವ್ಡಾ ಮಾತನಾಡಿ “ನಾವು ನಮ್ಮ ಮಾದರಿಗಳನ್ನು ಕ್ಯಾನ್ಸೈಟ್ ಪ್ರಯೋಗಾಲಯಕ್ಕೆ ಹೊರಗುತ್ತಿಗೆ ನೀಡುತ್ತೇವೆ, ಅವರು ನಮಗೆ 4,500 ರೂ. ಶುಲ್ಕ ವಿಧಿಸುತ್ತಾರೆ. ಅವರು ಮಾದರಿಗಳನ್ನು ಸಾಗಿಸುವ ಹಾಗೂ ಪಿಪಿಇ ವೆಚ್ಚವನ್ನು ಸರಿದೂಗಿಸುವ ಸೌಲಭ್ಯವನ್ನು ನೀಡುತ್ತಿಲ್ಲ. ಅದನ್ನು ನಾವು ರೋಗಿಗಳಿಗೆ ನಿರ್ವಹಣಾ ಶುಲ್ಕವೆಂದು ಹಾಕುತ್ತೇವೆ” ಎಂದು ಹೇಳಿದ್ದಾರೆ.

ಈ ಶುಲ್ಕ ವಿಧಿಸದಂತೆ ಆರೋಗ್ಯ ಇಲಾಖೆ ಕೇಳಿಕೊಂಡಿದೆ ಆದ್ದರಿಂದ ಆಸ್ಪತ್ರೆಯು ಈಗ ನಿರ್ವಹಣಾ ಶುಲ್ಕವನ್ನು ಭರಿಸಲಿದೆ ಎಂದು ಅವರು ಹೇಳಿದರು.

“ಕೋವಿಡ್ ಪರೀಕ್ಷೆಗೆ ಒಳಗಾದ ಎಲ್ಲಾ ರೋಗಿಗಳ ಮಾಹಿತಿಯನ್ನು ಪಡೆದು, ರೋಗಿಗಳಿಗೆ ಮರುಪಾವತಿ ಮಾಡಲು ನಾನು ಕೇಳಿಕೊಂಡಿದ್ದೇನೆ. ರೋಗಿಯ ಕುಟುಂಬದೊಂದಿಗೆ ನಾನು ಮಾತನಾಡಿದ್ದೇನೆ. ಇನ್ನುಮುಂದೆ, ನಾವು ನಿರ್ವಹಣಾ ಶುಲ್ಕವನ್ನು ಭರಿಸುತ್ತೇವೆ” ಎಂದು ಅವರು ಹೇಳಿದರು.

“ನಾವು ಈಗಾಗಲೇ ಮರುಪಾವತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ದರಗಳನ್ನು ಪರಿಷ್ಕರಿಸಲಾಗಿದೆ.” ಎಂದು ಆಸ್ಪತ್ರೆ ಹೇಳಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪ್ರಸ್ತುತ, ಸರ್ಕಾರವು ಖಾಸಗಿ ಪ್ರಯೋಗಾಲಯಗಳಿಗೆ ಕಳುಹಿಸಿದ ಮಾದರಿಗಳಿಗೆ ಬೆಲೆ 2,250 ರೂ. ಆಗಿದ್ದು, ಇದು ಸ್ಕ್ರೀನಿಂಗ್ ಪರೀಕ್ಷೆಯ ವೆಚ್ಚ ಮತ್ತು ದೃಡೀಕರಣ ಪರೀಕ್ಷೆಯನ್ನು ಒಳಗೊಂಡಿದೆ.


ಓದಿ: ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...