Homeಕರೋನಾ ತಲ್ಲಣಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆಸ್ಪತ್ರೆಗೆ ನೋಟಿಸ್

ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆಸ್ಪತ್ರೆಗೆ ನೋಟಿಸ್

ಐಸಿಎಂಆರ್‌ನ ಮಾರ್ಗಸೂಚಿಗಳು ಮತ್ತು ಸರ್ಕಾರಗಳ ಆದೇಶವನ್ನು ಉಲ್ಲಂಘಿಸಿ ಕೊರೊನಾ ಪರೀಕ್ಷೆಗೆ ಅಧಿಕವಾಗಿ ಶುಲ್ಕ ವಿಧಿಸಿದ ಆರೋಪ.

- Advertisement -
- Advertisement -

ಐಸಿಎಂಆರ್‌ನ ಮಾರ್ಗಸೂಚಿಗಳು ಮತ್ತು ಸರ್ಕಾರಗಳ ಆದೇಶವನ್ನು ಉಲ್ಲಂಘಿಸಿ ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆರೋಪದ ಮೇಲೆ ಕರ್ನಾಟಕದ ರಾಷ್ಟ್ರೀಯ ಆರೋಗ್ಯ ಮಿಷನ್, ಶೇಷಾದ್ರಿಪುರಂನ ಅಪೊಲೊ ಆಸ್ಪತ್ರೆಗಳಿಗೆ ನೋಟಿಸ್ ನೀಡಿದೆ.

ಕೋವಿಡ್ ಪರೀಕ್ಷೆಗೆ ಆಸ್ಪತ್ರೆಯು 4,500 ರೂ. ಮತ್ತು “ಮಾದರಿ ನಿರ್ವಹಣೆ” ಗಾಗಿ 1,500 ರೂ. ಒಟ್ಟು 6,000 ರೂ.ಗಳು ವಿಧಿಸಿದ್ದು, ಇದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ.

ಅಖಿಲ ಭಾರತ ಡ್ರಗ್ ಆಕ್ಷನ್ ನೆಟ್‌ವರ್ಕ್‌ನ ಸಹ-ಕನ್ವೀನರ್ ಮಾಲಿನಿ ಐಸೋಲಾ ಅವರು ಜೂನ್ 25 ರ ಬಿಲ್ಲನ್ನು ಸೋಮವಾರ ಮುಂಜಾನೆ ಟ್ವೀಟ್ ಮಾಡಿದ್ದರು. ಇದರಲ್ಲಿ ಆಸ್ಪತ್ರೆಯೂ ಅಧಿಕ ಶುಲ್ಕ ವಿಧಿಸಿರುವುದು ತೋರಿಸುತ್ತದೆ.

ಈ ಬಗ್ಗೆ ಮಾಧ್ಯಮಗಳು ರಶೀತಿಯ ಪ್ರತಿಯನ್ನು ರಾಜ್ಯ ಆರೋಗ್ಯ ಆಯುಕ್ತ ಪಂಕಜ್ ಕುಮಾರ್ ಪಾಂಡೆಗೆ ಕಳುಹಿಸಿದ್ದು ಅವರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸಂಜೆಯ ಹೊತ್ತಿಗೆ, ಕರ್ನಾಟಕದ ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕರು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಸ್ಪತ್ರೆಗೆ ನೋಟಿಸ್ ಕಳುಹಿಸಿದ್ದಾರೆ ಹಾಗೂ ನೋಟಿಸ್ ತಲುಪಿದ ಎರಡು ದಿನಗಳಲ್ಲಿ ವಿವರಣೆಯನ್ನು ಕೋರಿದ್ದಾರೆ.

“ಯಾವುದೇ ಉತ್ತರವನ್ನು ನೀಡದಿದ್ದರೆ, ನಿಯಮಗಳ ಪ್ರಕಾರ ಕ್ರಮವನ್ನು ಕೈಗೊಳ್ಳಬೇಕಾಗುತ್ತದೆ” ಎಂದು ನೋಟಿಸ್ ಎಚ್ಚರಿಸಿದೆ.

ಈ ಬಗ್ಗೆ ಅಪೊಲೊ ಆಸ್ಪತ್ರೆಗಳ ಘಟಕದ ಮುಖ್ಯಸ್ಥ ಶೇಷಾದ್ರಿಪುರಂ ಉದಯ್ ದಾವ್ಡಾ ಮಾತನಾಡಿ “ನಾವು ನಮ್ಮ ಮಾದರಿಗಳನ್ನು ಕ್ಯಾನ್ಸೈಟ್ ಪ್ರಯೋಗಾಲಯಕ್ಕೆ ಹೊರಗುತ್ತಿಗೆ ನೀಡುತ್ತೇವೆ, ಅವರು ನಮಗೆ 4,500 ರೂ. ಶುಲ್ಕ ವಿಧಿಸುತ್ತಾರೆ. ಅವರು ಮಾದರಿಗಳನ್ನು ಸಾಗಿಸುವ ಹಾಗೂ ಪಿಪಿಇ ವೆಚ್ಚವನ್ನು ಸರಿದೂಗಿಸುವ ಸೌಲಭ್ಯವನ್ನು ನೀಡುತ್ತಿಲ್ಲ. ಅದನ್ನು ನಾವು ರೋಗಿಗಳಿಗೆ ನಿರ್ವಹಣಾ ಶುಲ್ಕವೆಂದು ಹಾಕುತ್ತೇವೆ” ಎಂದು ಹೇಳಿದ್ದಾರೆ.

ಈ ಶುಲ್ಕ ವಿಧಿಸದಂತೆ ಆರೋಗ್ಯ ಇಲಾಖೆ ಕೇಳಿಕೊಂಡಿದೆ ಆದ್ದರಿಂದ ಆಸ್ಪತ್ರೆಯು ಈಗ ನಿರ್ವಹಣಾ ಶುಲ್ಕವನ್ನು ಭರಿಸಲಿದೆ ಎಂದು ಅವರು ಹೇಳಿದರು.

“ಕೋವಿಡ್ ಪರೀಕ್ಷೆಗೆ ಒಳಗಾದ ಎಲ್ಲಾ ರೋಗಿಗಳ ಮಾಹಿತಿಯನ್ನು ಪಡೆದು, ರೋಗಿಗಳಿಗೆ ಮರುಪಾವತಿ ಮಾಡಲು ನಾನು ಕೇಳಿಕೊಂಡಿದ್ದೇನೆ. ರೋಗಿಯ ಕುಟುಂಬದೊಂದಿಗೆ ನಾನು ಮಾತನಾಡಿದ್ದೇನೆ. ಇನ್ನುಮುಂದೆ, ನಾವು ನಿರ್ವಹಣಾ ಶುಲ್ಕವನ್ನು ಭರಿಸುತ್ತೇವೆ” ಎಂದು ಅವರು ಹೇಳಿದರು.

“ನಾವು ಈಗಾಗಲೇ ಮರುಪಾವತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ದರಗಳನ್ನು ಪರಿಷ್ಕರಿಸಲಾಗಿದೆ.” ಎಂದು ಆಸ್ಪತ್ರೆ ಹೇಳಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪ್ರಸ್ತುತ, ಸರ್ಕಾರವು ಖಾಸಗಿ ಪ್ರಯೋಗಾಲಯಗಳಿಗೆ ಕಳುಹಿಸಿದ ಮಾದರಿಗಳಿಗೆ ಬೆಲೆ 2,250 ರೂ. ಆಗಿದ್ದು, ಇದು ಸ್ಕ್ರೀನಿಂಗ್ ಪರೀಕ್ಷೆಯ ವೆಚ್ಚ ಮತ್ತು ದೃಡೀಕರಣ ಪರೀಕ್ಷೆಯನ್ನು ಒಳಗೊಂಡಿದೆ.


ಓದಿ: ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...