Homeಕರೋನಾ ತಲ್ಲಣಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆಸ್ಪತ್ರೆಗೆ ನೋಟಿಸ್

ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆಸ್ಪತ್ರೆಗೆ ನೋಟಿಸ್

ಐಸಿಎಂಆರ್‌ನ ಮಾರ್ಗಸೂಚಿಗಳು ಮತ್ತು ಸರ್ಕಾರಗಳ ಆದೇಶವನ್ನು ಉಲ್ಲಂಘಿಸಿ ಕೊರೊನಾ ಪರೀಕ್ಷೆಗೆ ಅಧಿಕವಾಗಿ ಶುಲ್ಕ ವಿಧಿಸಿದ ಆರೋಪ.

- Advertisement -
- Advertisement -

ಐಸಿಎಂಆರ್‌ನ ಮಾರ್ಗಸೂಚಿಗಳು ಮತ್ತು ಸರ್ಕಾರಗಳ ಆದೇಶವನ್ನು ಉಲ್ಲಂಘಿಸಿ ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆರೋಪದ ಮೇಲೆ ಕರ್ನಾಟಕದ ರಾಷ್ಟ್ರೀಯ ಆರೋಗ್ಯ ಮಿಷನ್, ಶೇಷಾದ್ರಿಪುರಂನ ಅಪೊಲೊ ಆಸ್ಪತ್ರೆಗಳಿಗೆ ನೋಟಿಸ್ ನೀಡಿದೆ.

ಕೋವಿಡ್ ಪರೀಕ್ಷೆಗೆ ಆಸ್ಪತ್ರೆಯು 4,500 ರೂ. ಮತ್ತು “ಮಾದರಿ ನಿರ್ವಹಣೆ” ಗಾಗಿ 1,500 ರೂ. ಒಟ್ಟು 6,000 ರೂ.ಗಳು ವಿಧಿಸಿದ್ದು, ಇದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ.

ಅಖಿಲ ಭಾರತ ಡ್ರಗ್ ಆಕ್ಷನ್ ನೆಟ್‌ವರ್ಕ್‌ನ ಸಹ-ಕನ್ವೀನರ್ ಮಾಲಿನಿ ಐಸೋಲಾ ಅವರು ಜೂನ್ 25 ರ ಬಿಲ್ಲನ್ನು ಸೋಮವಾರ ಮುಂಜಾನೆ ಟ್ವೀಟ್ ಮಾಡಿದ್ದರು. ಇದರಲ್ಲಿ ಆಸ್ಪತ್ರೆಯೂ ಅಧಿಕ ಶುಲ್ಕ ವಿಧಿಸಿರುವುದು ತೋರಿಸುತ್ತದೆ.

ಈ ಬಗ್ಗೆ ಮಾಧ್ಯಮಗಳು ರಶೀತಿಯ ಪ್ರತಿಯನ್ನು ರಾಜ್ಯ ಆರೋಗ್ಯ ಆಯುಕ್ತ ಪಂಕಜ್ ಕುಮಾರ್ ಪಾಂಡೆಗೆ ಕಳುಹಿಸಿದ್ದು ಅವರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸಂಜೆಯ ಹೊತ್ತಿಗೆ, ಕರ್ನಾಟಕದ ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕರು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಸ್ಪತ್ರೆಗೆ ನೋಟಿಸ್ ಕಳುಹಿಸಿದ್ದಾರೆ ಹಾಗೂ ನೋಟಿಸ್ ತಲುಪಿದ ಎರಡು ದಿನಗಳಲ್ಲಿ ವಿವರಣೆಯನ್ನು ಕೋರಿದ್ದಾರೆ.

“ಯಾವುದೇ ಉತ್ತರವನ್ನು ನೀಡದಿದ್ದರೆ, ನಿಯಮಗಳ ಪ್ರಕಾರ ಕ್ರಮವನ್ನು ಕೈಗೊಳ್ಳಬೇಕಾಗುತ್ತದೆ” ಎಂದು ನೋಟಿಸ್ ಎಚ್ಚರಿಸಿದೆ.

ಈ ಬಗ್ಗೆ ಅಪೊಲೊ ಆಸ್ಪತ್ರೆಗಳ ಘಟಕದ ಮುಖ್ಯಸ್ಥ ಶೇಷಾದ್ರಿಪುರಂ ಉದಯ್ ದಾವ್ಡಾ ಮಾತನಾಡಿ “ನಾವು ನಮ್ಮ ಮಾದರಿಗಳನ್ನು ಕ್ಯಾನ್ಸೈಟ್ ಪ್ರಯೋಗಾಲಯಕ್ಕೆ ಹೊರಗುತ್ತಿಗೆ ನೀಡುತ್ತೇವೆ, ಅವರು ನಮಗೆ 4,500 ರೂ. ಶುಲ್ಕ ವಿಧಿಸುತ್ತಾರೆ. ಅವರು ಮಾದರಿಗಳನ್ನು ಸಾಗಿಸುವ ಹಾಗೂ ಪಿಪಿಇ ವೆಚ್ಚವನ್ನು ಸರಿದೂಗಿಸುವ ಸೌಲಭ್ಯವನ್ನು ನೀಡುತ್ತಿಲ್ಲ. ಅದನ್ನು ನಾವು ರೋಗಿಗಳಿಗೆ ನಿರ್ವಹಣಾ ಶುಲ್ಕವೆಂದು ಹಾಕುತ್ತೇವೆ” ಎಂದು ಹೇಳಿದ್ದಾರೆ.

ಈ ಶುಲ್ಕ ವಿಧಿಸದಂತೆ ಆರೋಗ್ಯ ಇಲಾಖೆ ಕೇಳಿಕೊಂಡಿದೆ ಆದ್ದರಿಂದ ಆಸ್ಪತ್ರೆಯು ಈಗ ನಿರ್ವಹಣಾ ಶುಲ್ಕವನ್ನು ಭರಿಸಲಿದೆ ಎಂದು ಅವರು ಹೇಳಿದರು.

“ಕೋವಿಡ್ ಪರೀಕ್ಷೆಗೆ ಒಳಗಾದ ಎಲ್ಲಾ ರೋಗಿಗಳ ಮಾಹಿತಿಯನ್ನು ಪಡೆದು, ರೋಗಿಗಳಿಗೆ ಮರುಪಾವತಿ ಮಾಡಲು ನಾನು ಕೇಳಿಕೊಂಡಿದ್ದೇನೆ. ರೋಗಿಯ ಕುಟುಂಬದೊಂದಿಗೆ ನಾನು ಮಾತನಾಡಿದ್ದೇನೆ. ಇನ್ನುಮುಂದೆ, ನಾವು ನಿರ್ವಹಣಾ ಶುಲ್ಕವನ್ನು ಭರಿಸುತ್ತೇವೆ” ಎಂದು ಅವರು ಹೇಳಿದರು.

“ನಾವು ಈಗಾಗಲೇ ಮರುಪಾವತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ದರಗಳನ್ನು ಪರಿಷ್ಕರಿಸಲಾಗಿದೆ.” ಎಂದು ಆಸ್ಪತ್ರೆ ಹೇಳಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪ್ರಸ್ತುತ, ಸರ್ಕಾರವು ಖಾಸಗಿ ಪ್ರಯೋಗಾಲಯಗಳಿಗೆ ಕಳುಹಿಸಿದ ಮಾದರಿಗಳಿಗೆ ಬೆಲೆ 2,250 ರೂ. ಆಗಿದ್ದು, ಇದು ಸ್ಕ್ರೀನಿಂಗ್ ಪರೀಕ್ಷೆಯ ವೆಚ್ಚ ಮತ್ತು ದೃಡೀಕರಣ ಪರೀಕ್ಷೆಯನ್ನು ಒಳಗೊಂಡಿದೆ.


ಓದಿ: ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...