Homeಮುಖಪುಟಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

ಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

- Advertisement -
- Advertisement -

ಕಳೆದ ವಾರ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು, ಪ್ರಧಾನಿಗೆ-ಅದಾನಿಗೆ ಏನು ಸಂಬಂಧ ಎಂದು ಪ್ರಶ್ನಿಸಿ ಮೋದಿಯವರ ಬಗ್ಗೆ ಹೇಳಿಕೆ ನೀಡಿದ್ದರು. ಇದೀಗ ಲೋಕಸಭೆ ಸೆಕ್ರೆಟರಿಯೇಟ್, ವಿಶೇಷ ಹಕ್ಕು ಉಲ್ಲಂಘನೆಯ ನೋಟಿಸ್‌ಗೆ ಉತ್ತರ ನೀಡುವಂತೆ  ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಕೇಳಿದೆ ಎಂದು ಎನ್‌ಡಿಟಿವಿ ಭಾನುವಾರ ವರದಿ ಮಾಡಿದೆ.

ಬಿಜೆಪಿ ನಾಯಕರಾದ ಪ್ರಲ್ಹಾದ್ ಜೋಶಿ ಮತ್ತು ನಿಶಿಕಾಂತ್ ದುಬೆಅವರು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ಬುಧವಾರದೊಳಗೆ ಉತ್ತರ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್‌ಗೆ ಇದೀಗ ಸೂಚಿಸಲಾಗಿದೆ.

ಫೆಬ್ರವರಿ 7ರಂದು ಸಂಸತ್ತಿನಲ್ಲಿ ಮಾತನಾಡುತ್ತಿದ್ದಾಗ, ”ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿ ಗ್ರೂಪ್ ಪರವಾಗಿದ್ದಾರೆ” ಎಂದು ಆರೋಪಿಸಿದರು. ಅವರು, ಸೆಪ್ಟೆಂಬರ್‌ನಿಂದ ಜನವರಿವರೆಗೆ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವಾಗ ಸಾರ್ವಜನಿಕರು ಅದಾನಿ ಅವರ ಯಶಸ್ಸಿನ ಬಗ್ಗೆ ಮತ್ತು ಹಲವಾರು ಕ್ಷೇತ್ರಗಳಲ್ಲಿ ಅವರು ವ್ಯವಹಾರವನ್ನು ಹೇಗೆ ವಿಸ್ತರಿಸಲು ಸಾಧ್ಯವಾಯಿತು? ಎಂದು ಕೇಳಿದರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

“ಅದಾನಿಯವರ ವ್ಯವಹಾರವು ಈಗ ಎಂಟರಿಂದ ಹತ್ತು ವಲಯಗಳಲ್ಲಿದೆ ಮತ್ತು ಅವರ ನಿವ್ವಳ ಮೌಲ್ಯವು 2014 ಮತ್ತು 2022 ರ ನಡುವೆ 8 ಶತಕೋಟಿಯಿಂದ 140 ಶತಕೋಟಿಗೆ ಹೇಗೆ ತಲುಪಿದೆ. ಭಾರತದ ಪ್ರಧಾನ ಮಂತ್ರಿಯೊಂದಿಗೆ ಅವರ [ಅದಾನಿ] ಸಂಬಂಧ ಏನು ಎಂದು ಯುವಕರು ನಮ್ಮನ್ನು ಕೇಳಿದರು” ಎಂದು ಗಾಂಧಿ ಹೇಳಿದರು.

ಇದನ್ನೂ ಓದಿ: ಅದಾನಿಗೂ ಪ್ರಧಾನಿ ಮೋದಿಗೂ ಇರುವ ಸಂಬಂಧವೇನು? ಸಂಸತ್ತಿನಲ್ಲಿ ರಾಹುಲ್ ಗಾಂಧಿ ಪ್ರಶ್ನೆ

ಈ ವೇಳೆ ರಾಹುಲ್ ಗಾಂಧಿ ಅವರು ಒಂದು ಚಿತ್ರವನ್ನು ಹೊರತಗೆದರು. ಅದು, ಖಾಸಗಿ ಜೆಟ್‌ನಲ್ಲಿ ಉದ್ಯಮಿ ಅದಾನಿ ಮತ್ತು ಪ್ರಧಾನ ಮಂತ್ರಿ ಕುಳಿತಿರುವ ಚಿತ್ರವಾಗಿತ್ತು. “ಹಾಗಾದರೆ ಈ ಸಂಬಂಧ ಏನು?” ಎಂದು ರಾಹುಲ್ ಕೇಳಿದರು.

ಮರುದಿನ ಸದನದ ಕಲಾಪ ಆರಂಭವಾಗುತ್ತಿದ್ದಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸ್ಪೀಕರ್‌ಗೆ ನಿಯಮಗಳ ಪ್ರಕಾರ ಯಾವುದೇ ಸಂಸದರು ಇನ್ನೊಬ್ಬರ ವಿರುದ್ಧ ಆರೋಪ ಮಾಡಲು ಬಯಸಿದರೆ ಮುಂಚಿತವಾಗಿ ನೋಟಿಸ್ ನೀಡಬೇಕಾಗುತ್ತದೆ ಎಂದು ಹೇಳಿದರು. ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಯಾವುದೇ ದಾಖಲೆ ಪುರಾವೆಗಳಿಲ್ಲದೆ ಮೋದಿಯವರ ಮೇಲೆ ಕ್ರೋನಿ ಕ್ಯಾಪಿಟಲಿಸಂ ಎಂದು ಆರೋಪಿಸುವ ಮೂಲಕ ಸದನವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣದಲ್ಲಿ ಹದಿನೆಂಟು ಟೀಕೆಗಳನ್ನು ಮಾಡಿದ್ದರು ಅವೆಲ್ಲವೂ ಅದಾನಿಗೆ ಸಂಬಂಧಿಸಿವೆ.

ಸಂಸತ್ತಿನ ಬಜೆಟ್ ಅಧಿವೇಶನವು ಪದೇ ಪದೇ ಗದ್ದಲ ಗಲಾಟೆಗಳಿಂದಾಗಿ ಮುಂದೂಡಲಾಗುತ್ತಿದೆ. ಅದಾನಿ ಗ್ರೂಪ್‌ ಹಗರಣದ ಆರೋಪದ ಕುರಿತು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ ಆದರೆ ಸರ್ಕಾರ ಮಾತ್ರ ತನಿಖೆ ಬಗ್ಗೆಒಂದು ಪದವನ್ನು ಮಾತನಾಡುತ್ತಿಲ್ಲ.

ಜನವರಿ 24 ರಂದು ಅಮೇರಿಕನ್ ಕಿರು-ಮಾರಾಟಗಾರ ಹಿಂಡೆನ್‌ಬರ್ಗ್ ರಿಸರ್ಚ್‌ ವರದಿಯು, ಭಾರತದ ಎರಡನೇ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ನೇತೃತ್ವದ ಸಂಘಟಿತ ಸಂಸ್ಥೆಯು ಕಾರ್ಪೊರೇಟ್ ಇತಿಹಾಸದಲ್ಲಿ ಅತಿದೊಡ್ಡ ವಂಚನೆ ಮಾಡಿದೆ ಎಂದು ಆರೋಪಿಸಿದೆ. ಈ ವರದಿ ಹೊರಬಂದ ಬಳಿಕ ಅದಾನಿ ಗ್ರೂಪ್ ಕಂಪನಿಗಳು ಸ್ಟಾಕ್ ಮಾರುಕಟ್ಟೆಗಳಲ್ಲಿ 100 ಶತಕೋಟಿಗಿಂತ ಹೆಚ್ಚಿನ ನಷ್ಟವನ್ನು ಅನುಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...