Homeಮುಖಪುಟಟಿಕ್ರಿ ಗಡಿಯಲ್ಲಿ ಪೊಲೀಸರ ‘ಬೆದರಿಕೆಯ’ ಫಲಕ: ಪ್ರತಿಭಟನಾಕಾರರ ಆಕ್ರೋಶ, ಹೋರಾಟ ಇನ್ನಷ್ಟು ದೃಢ

ಟಿಕ್ರಿ ಗಡಿಯಲ್ಲಿ ಪೊಲೀಸರ ‘ಬೆದರಿಕೆಯ’ ಫಲಕ: ಪ್ರತಿಭಟನಾಕಾರರ ಆಕ್ರೋಶ, ಹೋರಾಟ ಇನ್ನಷ್ಟು ದೃಢ

- Advertisement -
- Advertisement -

ಟಿಕ್ರಿ ಗಡಿಯಲ್ಲಿ ದೆಹಲಿ ಪೊಲೀಸರು ಹಾಕಿರುವ ಫಲಕಗಳು ಪ್ರತಿಭಟನಾಕಾರರು ಮತ್ತು ಕೃಷಿ ಮುಖಂಡರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ‘ಶಾಸನಬದ್ಧ ಎಚ್ಚರಿಕೆ’ ಎಂಬ ಶೀರ್ಷಿಕೆಯಲ್ಲಿ, ಇವುಗಳಲ್ಲಿ ಹಿಂದಿ ಮತ್ತು ಪಂಜಾಬಿ ಭಾಷೆಗಳಲ್ಲಿ ಪಠ್ಯವಿದೆ: “ನಿಮ್ಮ ಸಭೆ ಕಾನೂನುಬಾಹಿರವೆಂದು ಪರಿಗಣಿಸಲಾಗಿದೆ. ನೀವು ಇಲ್ಲಿಂದ ಚದುರಬೇಕೆಂದು ನಿಮಗೆ ಎಚ್ಚರಿಕೆ ನೀಡಲಾಗುತ್ತಿದೆ, ಇಲ್ಲದಿದ್ದರೆ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.”
ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಅವರ ಸಂಕಲ್ಪವನ್ನು ಇನ್ನಷ್ಟು ದೃಢಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಈಗ ಏಕಾಏಕಿ ಈ ಫಲಕಗಳನ್ನು ಹಾಕಿಲ್ಲ, ಜನವರಿ 26 ರ ಹಿಂಸಾಚಾರದ ನಂತರ ಈ ಫಲಕಗಳನ್ನು ಇರಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ಹೊರ) ಸುಧಾನ್ಶು ಧಮಾ ಸ್ಪಷ್ಟೀಕರಣ ನೀಡಿದ್ದಾರೆ.

“ನಾವು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಗಡಿಯ ಸಮೀಪ ಹಿಂಸಾಚಾರದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಂಕ್ಷನ್‌ಗಳಲ್ಲಿ ಬೋರ್ಡ್‌ಗಳನ್ನು ಹಾಕಿದ್ದೇವೆ. ಒಂದು ವೇಳೆ ರೈತರು ಮತ್ತೆ ಕಾನೂನನ್ನು ಉಲ್ಲಂಘಿಸಿದರೆ, ಅದು ಕಾನೂನುಬಾಹಿರ ಎಂದು ಅವರು ತಿಳಿದುಕೊಳ್ಳಬೇಕು” ಎಂದಿದ್ದಾರೆ.

ಭಾರತೀಯ ಕಿಸಾನ್ ಯುನಿಯನ್-ಬಿಕೆಯು ಉಗ್ರಾಹಣ್ ವಲಯದ ಹಿರಿಯ ಉಪಾಧ್ಯಕ್ಷ ಶಿಂಗರಾ ಸಿಂಗ್ ಮಾನ್ ಮಾತನಾಡಿ “ನಾನು ಈ ಸೂಚನೆಯನ್ನು ಸೊಮವಾರ ಸಂಜೆ 5 ಗಂಟೆ ಸುಮಾರಿಗೆ ಟಿಕ್ರಿ ಗಡಿಯ ಬಳಿ, ದೆಹಲಿ ಪೊಲೀಸರ ನಾಕಾದ ಸ್ಥಳದಲ್ಲಿ ನೋಡಿದೆ. ಇದು ರಾಷ್ಟ್ರೀಯ ಹೆದ್ದಾರಿಯ ಕಂಬದಲ್ಲಿದೆ; ಅದು ಇತರ ಸ್ಥಳಗಳಲ್ಲಿಯೂ ಇರಬಹುದು. ಆದಾಗ್ಯೂ, ನಮಗೆ ತೊಂದರೆಯಾಗಿಲ್ಲ; ರೈತರು ದೃಢವಾಗಿದ್ದಾರೆ ಮತ್ತು ನಾವು ಇದರ ಬಗ್ಗೆ ವಿವಾದ ಮಾಡುವುದಿಲ್ಲ. ಕಾನೂನುಗಳನ್ನು ರದ್ದುಗೊಳಿಸುವವರೆಗೂ ನಮ್ಮ ಧರಣಿಗಳು ನಡೆಯುತ್ತವೆ” ಎಂದಿದ್ದಾರೆ.

ಕೃಷಿ ಸಚಿವ ನರೇಂದ್ರ ತೋಮರ್, ಅತಿ ಹೆಚ್ಚು ಜನ ಪ್ರತಿಭಟಿಸಿದ ಕಾರಣಕ್ಕೆ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ ನಂತರ ಈ ಸೂಚನೆ ಬಂದಿದೆ. “ಅವರು ಈ ಜನಸಮೂಹದೊಂದಿಗೆ 11 ಸಭೆಗಳನ್ನು ನಡೆಸಿದ್ದು ನಿಜಕ್ಕೂ ಆಶ್ಚರ್ಯಕರವಾಗಿದೆ ಮತ್ತು ಶಾಂತಿಯನ್ನು ಕಾಪಾಡಿಕೊಂಡಿದ್ದಕ್ಕಾಗಿ ಮತ್ತು ಈ ಧರಣಿಯನ್ನು ರಾಜಕೀಯ-ರಹಿತವಾಗಿ ನೋಡಿಕೊಂಡಿದ್ದಕ್ಕಾಗಿ ಸಚಿವರೇ ನಮ್ಮನ್ನು ಅಭಿನಂದಿಸಿದ್ದರು. ನಮ್ಮ ಸಭೆಗಳಲ್ಲಿ ಅವರು ಇದನ್ನು ‘ಕಿಸಾನ್ ಆಂದೋಲನ್’ ಎಂದು ಕರೆಯುತ್ತಿದ್ದರು ಮತ್ತು ಈಗ ನಾವು ಅವರ ಪಾಲಿಗೆ ಬರೀ ಜನಸಮೂಹವಾಗಿದ್ದೇವೆ” ಎಂದಿದ್ದಾರೆ.

ಸಂಯುಕ್ತ್ ಕಿಸಾನ್ ಮೋರ್ಚಾದ ಸದಸ್ಯ ಡಾ. ದರ್ಶನ್ ಪಾಲ್, “ನಾವು ಇಂತಹ ಕ್ರಮಗಳನ್ನು ಬಲವಾಗಿ ಖಂಡಿಸುತ್ತೇವೆ. ಗಡಿಯಲ್ಲಿ 90 ದಿನಗಳ ಕಾಲ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ. ನಾವು ದೆಹಲಿಯೊಳಗೇನೂ ಕುಳಿತಿಲ್ಲ” ಎಂದಿದ್ದಾರೆ.

ಮಂಗಳವಾರ ಟಿಕ್ರಿ ಗಡಿಯಲ್ಲಿ, ಪೊಲೀಸ್ ನಿಯೋಜನೆಯ ನೆರಳಿನಲ್ಲಿಯೇ ರೈತರು ಎಂದಿನಂತೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು. ಅನಿಲ್ ಮಲಿಕ್ ಎಂಬ ರೈತ ಮಾತನಾಡಿ “ಅವರು ಇದನ್ನು ಈಗಾಗಲೇ ಗಾಜಿಪುರದಲ್ಲಿ ಪ್ರಯತ್ನಿಸಿದ್ದಾರೆ. ಆದರೆ ಅದು ಹಿಮ್ಮೆಟ್ಟಿತು. ನಾವು ಎಲ್ಲಿಯೂ ಹೋಗುವುದಿಲ್ಲ. ಯಾವುದೇ ಸುಳಿವು ಇದ್ದರೆ ಪೊಲೀಸ್ ಕ್ರಮ ಜರುಗಿಸಲಿ. ಹೆಚ್ಚಿನ ಜನರು ನಮ್ಮೊಂದಿಗೆ ಸೇರಲು ಬರುತ್ತಲೇ ಇದ್ದಾರೆ..” ಎಂದಿದ್ದಾರೆ.


ಇದನ್ನೂ ಓದಿ: ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...