Homeಮುಖಪುಟಟಿಕ್ರಿ ಗಡಿಯಲ್ಲಿ ಪೊಲೀಸರ ‘ಬೆದರಿಕೆಯ’ ಫಲಕ: ಪ್ರತಿಭಟನಾಕಾರರ ಆಕ್ರೋಶ, ಹೋರಾಟ ಇನ್ನಷ್ಟು ದೃಢ

ಟಿಕ್ರಿ ಗಡಿಯಲ್ಲಿ ಪೊಲೀಸರ ‘ಬೆದರಿಕೆಯ’ ಫಲಕ: ಪ್ರತಿಭಟನಾಕಾರರ ಆಕ್ರೋಶ, ಹೋರಾಟ ಇನ್ನಷ್ಟು ದೃಢ

- Advertisement -
- Advertisement -

ಟಿಕ್ರಿ ಗಡಿಯಲ್ಲಿ ದೆಹಲಿ ಪೊಲೀಸರು ಹಾಕಿರುವ ಫಲಕಗಳು ಪ್ರತಿಭಟನಾಕಾರರು ಮತ್ತು ಕೃಷಿ ಮುಖಂಡರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ‘ಶಾಸನಬದ್ಧ ಎಚ್ಚರಿಕೆ’ ಎಂಬ ಶೀರ್ಷಿಕೆಯಲ್ಲಿ, ಇವುಗಳಲ್ಲಿ ಹಿಂದಿ ಮತ್ತು ಪಂಜಾಬಿ ಭಾಷೆಗಳಲ್ಲಿ ಪಠ್ಯವಿದೆ: “ನಿಮ್ಮ ಸಭೆ ಕಾನೂನುಬಾಹಿರವೆಂದು ಪರಿಗಣಿಸಲಾಗಿದೆ. ನೀವು ಇಲ್ಲಿಂದ ಚದುರಬೇಕೆಂದು ನಿಮಗೆ ಎಚ್ಚರಿಕೆ ನೀಡಲಾಗುತ್ತಿದೆ, ಇಲ್ಲದಿದ್ದರೆ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.”
ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಅವರ ಸಂಕಲ್ಪವನ್ನು ಇನ್ನಷ್ಟು ದೃಢಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಈಗ ಏಕಾಏಕಿ ಈ ಫಲಕಗಳನ್ನು ಹಾಕಿಲ್ಲ, ಜನವರಿ 26 ರ ಹಿಂಸಾಚಾರದ ನಂತರ ಈ ಫಲಕಗಳನ್ನು ಇರಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ಹೊರ) ಸುಧಾನ್ಶು ಧಮಾ ಸ್ಪಷ್ಟೀಕರಣ ನೀಡಿದ್ದಾರೆ.

“ನಾವು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಗಡಿಯ ಸಮೀಪ ಹಿಂಸಾಚಾರದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಂಕ್ಷನ್‌ಗಳಲ್ಲಿ ಬೋರ್ಡ್‌ಗಳನ್ನು ಹಾಕಿದ್ದೇವೆ. ಒಂದು ವೇಳೆ ರೈತರು ಮತ್ತೆ ಕಾನೂನನ್ನು ಉಲ್ಲಂಘಿಸಿದರೆ, ಅದು ಕಾನೂನುಬಾಹಿರ ಎಂದು ಅವರು ತಿಳಿದುಕೊಳ್ಳಬೇಕು” ಎಂದಿದ್ದಾರೆ.

ಭಾರತೀಯ ಕಿಸಾನ್ ಯುನಿಯನ್-ಬಿಕೆಯು ಉಗ್ರಾಹಣ್ ವಲಯದ ಹಿರಿಯ ಉಪಾಧ್ಯಕ್ಷ ಶಿಂಗರಾ ಸಿಂಗ್ ಮಾನ್ ಮಾತನಾಡಿ “ನಾನು ಈ ಸೂಚನೆಯನ್ನು ಸೊಮವಾರ ಸಂಜೆ 5 ಗಂಟೆ ಸುಮಾರಿಗೆ ಟಿಕ್ರಿ ಗಡಿಯ ಬಳಿ, ದೆಹಲಿ ಪೊಲೀಸರ ನಾಕಾದ ಸ್ಥಳದಲ್ಲಿ ನೋಡಿದೆ. ಇದು ರಾಷ್ಟ್ರೀಯ ಹೆದ್ದಾರಿಯ ಕಂಬದಲ್ಲಿದೆ; ಅದು ಇತರ ಸ್ಥಳಗಳಲ್ಲಿಯೂ ಇರಬಹುದು. ಆದಾಗ್ಯೂ, ನಮಗೆ ತೊಂದರೆಯಾಗಿಲ್ಲ; ರೈತರು ದೃಢವಾಗಿದ್ದಾರೆ ಮತ್ತು ನಾವು ಇದರ ಬಗ್ಗೆ ವಿವಾದ ಮಾಡುವುದಿಲ್ಲ. ಕಾನೂನುಗಳನ್ನು ರದ್ದುಗೊಳಿಸುವವರೆಗೂ ನಮ್ಮ ಧರಣಿಗಳು ನಡೆಯುತ್ತವೆ” ಎಂದಿದ್ದಾರೆ.

ಕೃಷಿ ಸಚಿವ ನರೇಂದ್ರ ತೋಮರ್, ಅತಿ ಹೆಚ್ಚು ಜನ ಪ್ರತಿಭಟಿಸಿದ ಕಾರಣಕ್ಕೆ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ ನಂತರ ಈ ಸೂಚನೆ ಬಂದಿದೆ. “ಅವರು ಈ ಜನಸಮೂಹದೊಂದಿಗೆ 11 ಸಭೆಗಳನ್ನು ನಡೆಸಿದ್ದು ನಿಜಕ್ಕೂ ಆಶ್ಚರ್ಯಕರವಾಗಿದೆ ಮತ್ತು ಶಾಂತಿಯನ್ನು ಕಾಪಾಡಿಕೊಂಡಿದ್ದಕ್ಕಾಗಿ ಮತ್ತು ಈ ಧರಣಿಯನ್ನು ರಾಜಕೀಯ-ರಹಿತವಾಗಿ ನೋಡಿಕೊಂಡಿದ್ದಕ್ಕಾಗಿ ಸಚಿವರೇ ನಮ್ಮನ್ನು ಅಭಿನಂದಿಸಿದ್ದರು. ನಮ್ಮ ಸಭೆಗಳಲ್ಲಿ ಅವರು ಇದನ್ನು ‘ಕಿಸಾನ್ ಆಂದೋಲನ್’ ಎಂದು ಕರೆಯುತ್ತಿದ್ದರು ಮತ್ತು ಈಗ ನಾವು ಅವರ ಪಾಲಿಗೆ ಬರೀ ಜನಸಮೂಹವಾಗಿದ್ದೇವೆ” ಎಂದಿದ್ದಾರೆ.

ಸಂಯುಕ್ತ್ ಕಿಸಾನ್ ಮೋರ್ಚಾದ ಸದಸ್ಯ ಡಾ. ದರ್ಶನ್ ಪಾಲ್, “ನಾವು ಇಂತಹ ಕ್ರಮಗಳನ್ನು ಬಲವಾಗಿ ಖಂಡಿಸುತ್ತೇವೆ. ಗಡಿಯಲ್ಲಿ 90 ದಿನಗಳ ಕಾಲ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ. ನಾವು ದೆಹಲಿಯೊಳಗೇನೂ ಕುಳಿತಿಲ್ಲ” ಎಂದಿದ್ದಾರೆ.

ಮಂಗಳವಾರ ಟಿಕ್ರಿ ಗಡಿಯಲ್ಲಿ, ಪೊಲೀಸ್ ನಿಯೋಜನೆಯ ನೆರಳಿನಲ್ಲಿಯೇ ರೈತರು ಎಂದಿನಂತೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು. ಅನಿಲ್ ಮಲಿಕ್ ಎಂಬ ರೈತ ಮಾತನಾಡಿ “ಅವರು ಇದನ್ನು ಈಗಾಗಲೇ ಗಾಜಿಪುರದಲ್ಲಿ ಪ್ರಯತ್ನಿಸಿದ್ದಾರೆ. ಆದರೆ ಅದು ಹಿಮ್ಮೆಟ್ಟಿತು. ನಾವು ಎಲ್ಲಿಯೂ ಹೋಗುವುದಿಲ್ಲ. ಯಾವುದೇ ಸುಳಿವು ಇದ್ದರೆ ಪೊಲೀಸ್ ಕ್ರಮ ಜರುಗಿಸಲಿ. ಹೆಚ್ಚಿನ ಜನರು ನಮ್ಮೊಂದಿಗೆ ಸೇರಲು ಬರುತ್ತಲೇ ಇದ್ದಾರೆ..” ಎಂದಿದ್ದಾರೆ.


ಇದನ್ನೂ ಓದಿ: ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...