Homeಮುಖಪುಟಟಿಕ್ರಿ ಗಡಿಯಲ್ಲಿ ಪೊಲೀಸರ ‘ಬೆದರಿಕೆಯ’ ಫಲಕ: ಪ್ರತಿಭಟನಾಕಾರರ ಆಕ್ರೋಶ, ಹೋರಾಟ ಇನ್ನಷ್ಟು ದೃಢ

ಟಿಕ್ರಿ ಗಡಿಯಲ್ಲಿ ಪೊಲೀಸರ ‘ಬೆದರಿಕೆಯ’ ಫಲಕ: ಪ್ರತಿಭಟನಾಕಾರರ ಆಕ್ರೋಶ, ಹೋರಾಟ ಇನ್ನಷ್ಟು ದೃಢ

- Advertisement -
- Advertisement -

ಟಿಕ್ರಿ ಗಡಿಯಲ್ಲಿ ದೆಹಲಿ ಪೊಲೀಸರು ಹಾಕಿರುವ ಫಲಕಗಳು ಪ್ರತಿಭಟನಾಕಾರರು ಮತ್ತು ಕೃಷಿ ಮುಖಂಡರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ‘ಶಾಸನಬದ್ಧ ಎಚ್ಚರಿಕೆ’ ಎಂಬ ಶೀರ್ಷಿಕೆಯಲ್ಲಿ, ಇವುಗಳಲ್ಲಿ ಹಿಂದಿ ಮತ್ತು ಪಂಜಾಬಿ ಭಾಷೆಗಳಲ್ಲಿ ಪಠ್ಯವಿದೆ: “ನಿಮ್ಮ ಸಭೆ ಕಾನೂನುಬಾಹಿರವೆಂದು ಪರಿಗಣಿಸಲಾಗಿದೆ. ನೀವು ಇಲ್ಲಿಂದ ಚದುರಬೇಕೆಂದು ನಿಮಗೆ ಎಚ್ಚರಿಕೆ ನೀಡಲಾಗುತ್ತಿದೆ, ಇಲ್ಲದಿದ್ದರೆ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.”
ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಅವರ ಸಂಕಲ್ಪವನ್ನು ಇನ್ನಷ್ಟು ದೃಢಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಈಗ ಏಕಾಏಕಿ ಈ ಫಲಕಗಳನ್ನು ಹಾಕಿಲ್ಲ, ಜನವರಿ 26 ರ ಹಿಂಸಾಚಾರದ ನಂತರ ಈ ಫಲಕಗಳನ್ನು ಇರಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ಹೊರ) ಸುಧಾನ್ಶು ಧಮಾ ಸ್ಪಷ್ಟೀಕರಣ ನೀಡಿದ್ದಾರೆ.

“ನಾವು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಗಡಿಯ ಸಮೀಪ ಹಿಂಸಾಚಾರದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಂಕ್ಷನ್‌ಗಳಲ್ಲಿ ಬೋರ್ಡ್‌ಗಳನ್ನು ಹಾಕಿದ್ದೇವೆ. ಒಂದು ವೇಳೆ ರೈತರು ಮತ್ತೆ ಕಾನೂನನ್ನು ಉಲ್ಲಂಘಿಸಿದರೆ, ಅದು ಕಾನೂನುಬಾಹಿರ ಎಂದು ಅವರು ತಿಳಿದುಕೊಳ್ಳಬೇಕು” ಎಂದಿದ್ದಾರೆ.

ಭಾರತೀಯ ಕಿಸಾನ್ ಯುನಿಯನ್-ಬಿಕೆಯು ಉಗ್ರಾಹಣ್ ವಲಯದ ಹಿರಿಯ ಉಪಾಧ್ಯಕ್ಷ ಶಿಂಗರಾ ಸಿಂಗ್ ಮಾನ್ ಮಾತನಾಡಿ “ನಾನು ಈ ಸೂಚನೆಯನ್ನು ಸೊಮವಾರ ಸಂಜೆ 5 ಗಂಟೆ ಸುಮಾರಿಗೆ ಟಿಕ್ರಿ ಗಡಿಯ ಬಳಿ, ದೆಹಲಿ ಪೊಲೀಸರ ನಾಕಾದ ಸ್ಥಳದಲ್ಲಿ ನೋಡಿದೆ. ಇದು ರಾಷ್ಟ್ರೀಯ ಹೆದ್ದಾರಿಯ ಕಂಬದಲ್ಲಿದೆ; ಅದು ಇತರ ಸ್ಥಳಗಳಲ್ಲಿಯೂ ಇರಬಹುದು. ಆದಾಗ್ಯೂ, ನಮಗೆ ತೊಂದರೆಯಾಗಿಲ್ಲ; ರೈತರು ದೃಢವಾಗಿದ್ದಾರೆ ಮತ್ತು ನಾವು ಇದರ ಬಗ್ಗೆ ವಿವಾದ ಮಾಡುವುದಿಲ್ಲ. ಕಾನೂನುಗಳನ್ನು ರದ್ದುಗೊಳಿಸುವವರೆಗೂ ನಮ್ಮ ಧರಣಿಗಳು ನಡೆಯುತ್ತವೆ” ಎಂದಿದ್ದಾರೆ.

ಕೃಷಿ ಸಚಿವ ನರೇಂದ್ರ ತೋಮರ್, ಅತಿ ಹೆಚ್ಚು ಜನ ಪ್ರತಿಭಟಿಸಿದ ಕಾರಣಕ್ಕೆ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ ನಂತರ ಈ ಸೂಚನೆ ಬಂದಿದೆ. “ಅವರು ಈ ಜನಸಮೂಹದೊಂದಿಗೆ 11 ಸಭೆಗಳನ್ನು ನಡೆಸಿದ್ದು ನಿಜಕ್ಕೂ ಆಶ್ಚರ್ಯಕರವಾಗಿದೆ ಮತ್ತು ಶಾಂತಿಯನ್ನು ಕಾಪಾಡಿಕೊಂಡಿದ್ದಕ್ಕಾಗಿ ಮತ್ತು ಈ ಧರಣಿಯನ್ನು ರಾಜಕೀಯ-ರಹಿತವಾಗಿ ನೋಡಿಕೊಂಡಿದ್ದಕ್ಕಾಗಿ ಸಚಿವರೇ ನಮ್ಮನ್ನು ಅಭಿನಂದಿಸಿದ್ದರು. ನಮ್ಮ ಸಭೆಗಳಲ್ಲಿ ಅವರು ಇದನ್ನು ‘ಕಿಸಾನ್ ಆಂದೋಲನ್’ ಎಂದು ಕರೆಯುತ್ತಿದ್ದರು ಮತ್ತು ಈಗ ನಾವು ಅವರ ಪಾಲಿಗೆ ಬರೀ ಜನಸಮೂಹವಾಗಿದ್ದೇವೆ” ಎಂದಿದ್ದಾರೆ.

ಸಂಯುಕ್ತ್ ಕಿಸಾನ್ ಮೋರ್ಚಾದ ಸದಸ್ಯ ಡಾ. ದರ್ಶನ್ ಪಾಲ್, “ನಾವು ಇಂತಹ ಕ್ರಮಗಳನ್ನು ಬಲವಾಗಿ ಖಂಡಿಸುತ್ತೇವೆ. ಗಡಿಯಲ್ಲಿ 90 ದಿನಗಳ ಕಾಲ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ. ನಾವು ದೆಹಲಿಯೊಳಗೇನೂ ಕುಳಿತಿಲ್ಲ” ಎಂದಿದ್ದಾರೆ.

ಮಂಗಳವಾರ ಟಿಕ್ರಿ ಗಡಿಯಲ್ಲಿ, ಪೊಲೀಸ್ ನಿಯೋಜನೆಯ ನೆರಳಿನಲ್ಲಿಯೇ ರೈತರು ಎಂದಿನಂತೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು. ಅನಿಲ್ ಮಲಿಕ್ ಎಂಬ ರೈತ ಮಾತನಾಡಿ “ಅವರು ಇದನ್ನು ಈಗಾಗಲೇ ಗಾಜಿಪುರದಲ್ಲಿ ಪ್ರಯತ್ನಿಸಿದ್ದಾರೆ. ಆದರೆ ಅದು ಹಿಮ್ಮೆಟ್ಟಿತು. ನಾವು ಎಲ್ಲಿಯೂ ಹೋಗುವುದಿಲ್ಲ. ಯಾವುದೇ ಸುಳಿವು ಇದ್ದರೆ ಪೊಲೀಸ್ ಕ್ರಮ ಜರುಗಿಸಲಿ. ಹೆಚ್ಚಿನ ಜನರು ನಮ್ಮೊಂದಿಗೆ ಸೇರಲು ಬರುತ್ತಲೇ ಇದ್ದಾರೆ..” ಎಂದಿದ್ದಾರೆ.


ಇದನ್ನೂ ಓದಿ: ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...