Homeಮುಖಪುಟಕೇಂದ್ರ ಗೃಹ ಸಚಿವಾಲಯದಿಂದ ಇಂದು 'ಪೌರತ್ವ ಕಾಯ್ದೆ' ಅಧಿಸೂಚನೆ ಪ್ರಕಟಣೆ?

ಕೇಂದ್ರ ಗೃಹ ಸಚಿವಾಲಯದಿಂದ ಇಂದು ‘ಪೌರತ್ವ ಕಾಯ್ದೆ’ ಅಧಿಸೂಚನೆ ಪ್ರಕಟಣೆ?

- Advertisement -
- Advertisement -

ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ಕೇಂದ್ರ ಗೃಹ ಸಚಿವಾಲಯವು ಇಂದು ರಾತ್ರಿಯ ನಂತರ ಅಧಿಸೂಚನೆಯನ್ನು ಹೊರಡಿಸಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೂ ಮುನ್ನವೇ ಸಿಎಎ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಒತ್ತಿ ಹೇಳಿದ ಒಂದು ತಿಂಗಳೊಳಗೆ ಈ ವಿಚಾರ ಪ್ರಚಲಿತಕ್ಕೆ ಬಂದಿದೆ. ‘ಸಿಎಎ ದೇಶದ ಕಾಯಿದೆ… ಅದನ್ನು ಖಂಡಿತವಾಗಿ ಜಾರಿ ಮಾಡಲಾಗುವುದು. ಸಿಎಎ ಚುನಾವಣೆಗೂ ಮುನ್ನ ಜಾರಿಗೆ ಬರಲಿದೆ (ಮತ್ತು) ಈ ಬಗ್ಗೆ ಯಾರೂ ಗೊಂದಲಕ್ಕೀಡಾಗಬಾರದು’ ಎಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾ ಹೇಳಿದ್ದರು.

ಸಿಎಎ ಕಾಯ್ದೆಯು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ “ಕಿರುಕುಳಕ್ಕೊಳಗಾದ” ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಒದಗಿಸುತ್ತದೆ. ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಡಿಸೆಂಬರ್ 2019 ರಲ್ಲಿ ಸಂಸತ್ತಿನಲ್ಲಿ ವಿವಾದಿಯ ಕಾಯ್ದೆಯನ್ನು ಅಂಗೀಕರಿಸಲಾಯಿತು.

ಭಾರತದಾದ್ಯಂತ ಲಕ್ಷಗಟ್ಟಲೆ ಜನರು ಬೀದಿಗಿಳಿದು ವಿರೋಧ ವ್ಯಕ್ತಪಡಿಸಿದರು; ಕೋವಿಡ್ ಲಾಕ್‌ಡೌನ್‌ಗೂ ಮೊದಲು ಈ ಆಂದೋಲನಗಳ ಕೇಂದ್ರಬಿಂದುವು ದೆಹಲಿಯ ಶಾಹೀನ್ ಬಾಗ್‌ನಲ್ಲಿತ್ತು. ಅಲ್ಲಿ ಸಾವಿರಾರು ಪುರುಷರು ಮತ್ತು ಮಹಿಳೆಯರು ತಿಂಗಳ ಕಾಲ ಪ್ರತಿಭಟನೆಯನ್ನು ನಡೆಸಿದರು. ಇದು ಪಿಂಕ್ ಫ್ಲಾಯ್ಡ್ ಸಹ-ಸಂಸ್ಥಾಪಕ ರೋಜರ್ ವಾಟರ್ಸ್ ಅವರಂತಹ ಸೆಲೆಬ್ರಿಟಿಗಳ ಗಮನ ಸೆಳೆಯಿತು.

ಗೃಹ ಸಚಿವ ಅಮಿತ್ ಶಾ ಕಳೆದ ತಿಂಗಳು ಸಿಎಎ ಭಯವನ್ನು ಕಡಿಮೆ ಮಾಡಲು ಪ್ರಯತ್ನಿಸಿದರು. ‘ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ ಮತ್ತು ಪ್ರಚೋದಿಸಲಾಗುತ್ತಿದೆ (ಸಿಎಎ ವಿರುದ್ಧ), ಇದು ಕೇವಲ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡಲು ಉದ್ದೇಶಿಸಲಾಗಿದೆ; ಇದು ಯಾರ ಪೌರತ್ವವನ್ನು ಕಸಿದುಕೊಳ್ಳಲು ಅಲ್ಲ’ ಎಂದು ಹೇಳಿದ್ದರು.

ಸಿಎಎ ಅಧಿಸೂಚನೆ (ಅನುಷ್ಠಾನ) ಸಮೀಪಿಸುತ್ತಿದ್ದಂತೆ, ವಿರೋಧ ಪಕ್ಷದ ರಾಜಕಾರಣಿಗಳು ತಮ್ಮ ಪ್ರದೇಶಗಳಲ್ಲಿ ಅದನ್ನು ಜಾರಿಗೊಳಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನವರಿಯಲ್ಲಿ ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರ ಪಡೆಯುವುದಕ್ಕಾಗಿ ಈ ವಿಷಯವನ್ನು ಎತ್ತಿದ್ದಾರೆ ಎಂದಿದ್ದರು.

‘ಚುನಾವಣೆಗಳು ಸಮೀಪಿಸುತ್ತಿರುವಾಗ, ರಾಜಕೀಯ ಲಾಭ ಪಡೆಯಲು ಬಿಜೆಪಿ ಮತ್ತೆ ಸಿಎಎ ವಿಷಯವನ್ನು ತರಾಟೆಗೆ ತೆಗೆದುಕೊಂಡಿದೆ. ಆದರೆ ನಾನು ಅದನ್ನು ಸ್ಪಷ್ಟವಾಗಿ ಹೇಳುತ್ತೇನೆ, ನಾನು ಜೀವಂತವಾಗಿರುವವರೆಗೆ, ಬಂಗಾಳದಲ್ಲಿ ಅದರ ಅನುಷ್ಠಾನಕ್ಕೆ ನಾನು ಅವಕಾಶ ನೀಡುವುದಿಲ್ಲ’ ಎಂದು ಅವರು ಉತ್ತರ ದಿಂಜಾಪುರ ಜಿಲ್ಲೆಯಲ್ಲಿ ನಡೆದಿದ್ದ ಸಾರ್ವಜನಿಕ ಸಮಾರಂಭದಲ್ಲಿ ಹೇಳಿದರು.

ಬ್ಯಾನರ್ಜಿಯವರ ನಂತರ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಇದೇ ರೀತಿ ಹೇಳಿದರು. ಬಿಜೆಪಿ ನೇತೃತ್ವದ ಸರ್ಕಾರದ ಕ್ರಮಗಳು “ಕೋಮು ಸೌಹಾರ್ದತೆಗೆ ವಿರುದ್ಧವಾಗಿದೆ” ಎಂದು ಆರೋಪಿಸಿದ ಡಿಎಂಕೆ ಮುಖ್ಯಸ್ಥರು, ತಮ್ಮ ಆಡಳಿತವು ಕಾನೂನನ್ನು ಎಂದಿಗೂ ಜಾರಿಗೆ ತರುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.

ಕೇರಳ ಮತ್ತು ಪಂಜಾಬ್‌ನಂತಹ ಹಲವಾರು ಇತರ ಬಿಜೆಪಿಯೇತರ ಆಡಳಿತದ ರಾಜ್ಯಗಳು ಸಹ ಸಿಎಎ ಅನ್ನು ವಿರೋಧಿಸಿದವು, ಅನೇಕ ರಾಜ್ಯಗಳು ತಮ್ಮ ವಿಧಾನಸಭೆಯಲ್ಲಿ ನಿರ್ಣಯಗಳನ್ನು ಅಂಗೀಕರಿಸಿದವು; ಬಂಗಾಳ ಮತ್ತು ಕೇರಳ ಕೂಡ ಎಲ್ಲ ಕಡೆ ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಕೆಲಸಗಳನ್ನು ನಿಲ್ಲಿಸಿವೆ.

ಇದನ್ನೂ ಓದಿ; ಬಿಜೆಪಿ ಸಂಸದರ ಸಂವಿಧಾನ ಬದಲಾವಣೆ ಹೇಳಿಕೆ: ‘ಇದು ಆರ್‌ಎಸ್‌ಎಸ್‌ ತೆಗೆದುಕೊಂಡ ಪ್ರತಿಜ್ಞೆ’ ಎಂದ ಪ್ರಕಾಶ್ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...