Homeಮುಖಪುಟಕೇಂದ್ರ ಗೃಹ ಸಚಿವಾಲಯದಿಂದ ಇಂದು 'ಪೌರತ್ವ ಕಾಯ್ದೆ' ಅಧಿಸೂಚನೆ ಪ್ರಕಟಣೆ?

ಕೇಂದ್ರ ಗೃಹ ಸಚಿವಾಲಯದಿಂದ ಇಂದು ‘ಪೌರತ್ವ ಕಾಯ್ದೆ’ ಅಧಿಸೂಚನೆ ಪ್ರಕಟಣೆ?

- Advertisement -
- Advertisement -

ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ಕೇಂದ್ರ ಗೃಹ ಸಚಿವಾಲಯವು ಇಂದು ರಾತ್ರಿಯ ನಂತರ ಅಧಿಸೂಚನೆಯನ್ನು ಹೊರಡಿಸಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೂ ಮುನ್ನವೇ ಸಿಎಎ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಒತ್ತಿ ಹೇಳಿದ ಒಂದು ತಿಂಗಳೊಳಗೆ ಈ ವಿಚಾರ ಪ್ರಚಲಿತಕ್ಕೆ ಬಂದಿದೆ. ‘ಸಿಎಎ ದೇಶದ ಕಾಯಿದೆ… ಅದನ್ನು ಖಂಡಿತವಾಗಿ ಜಾರಿ ಮಾಡಲಾಗುವುದು. ಸಿಎಎ ಚುನಾವಣೆಗೂ ಮುನ್ನ ಜಾರಿಗೆ ಬರಲಿದೆ (ಮತ್ತು) ಈ ಬಗ್ಗೆ ಯಾರೂ ಗೊಂದಲಕ್ಕೀಡಾಗಬಾರದು’ ಎಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾ ಹೇಳಿದ್ದರು.

ಸಿಎಎ ಕಾಯ್ದೆಯು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ “ಕಿರುಕುಳಕ್ಕೊಳಗಾದ” ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಒದಗಿಸುತ್ತದೆ. ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಡಿಸೆಂಬರ್ 2019 ರಲ್ಲಿ ಸಂಸತ್ತಿನಲ್ಲಿ ವಿವಾದಿಯ ಕಾಯ್ದೆಯನ್ನು ಅಂಗೀಕರಿಸಲಾಯಿತು.

ಭಾರತದಾದ್ಯಂತ ಲಕ್ಷಗಟ್ಟಲೆ ಜನರು ಬೀದಿಗಿಳಿದು ವಿರೋಧ ವ್ಯಕ್ತಪಡಿಸಿದರು; ಕೋವಿಡ್ ಲಾಕ್‌ಡೌನ್‌ಗೂ ಮೊದಲು ಈ ಆಂದೋಲನಗಳ ಕೇಂದ್ರಬಿಂದುವು ದೆಹಲಿಯ ಶಾಹೀನ್ ಬಾಗ್‌ನಲ್ಲಿತ್ತು. ಅಲ್ಲಿ ಸಾವಿರಾರು ಪುರುಷರು ಮತ್ತು ಮಹಿಳೆಯರು ತಿಂಗಳ ಕಾಲ ಪ್ರತಿಭಟನೆಯನ್ನು ನಡೆಸಿದರು. ಇದು ಪಿಂಕ್ ಫ್ಲಾಯ್ಡ್ ಸಹ-ಸಂಸ್ಥಾಪಕ ರೋಜರ್ ವಾಟರ್ಸ್ ಅವರಂತಹ ಸೆಲೆಬ್ರಿಟಿಗಳ ಗಮನ ಸೆಳೆಯಿತು.

ಗೃಹ ಸಚಿವ ಅಮಿತ್ ಶಾ ಕಳೆದ ತಿಂಗಳು ಸಿಎಎ ಭಯವನ್ನು ಕಡಿಮೆ ಮಾಡಲು ಪ್ರಯತ್ನಿಸಿದರು. ‘ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ ಮತ್ತು ಪ್ರಚೋದಿಸಲಾಗುತ್ತಿದೆ (ಸಿಎಎ ವಿರುದ್ಧ), ಇದು ಕೇವಲ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡಲು ಉದ್ದೇಶಿಸಲಾಗಿದೆ; ಇದು ಯಾರ ಪೌರತ್ವವನ್ನು ಕಸಿದುಕೊಳ್ಳಲು ಅಲ್ಲ’ ಎಂದು ಹೇಳಿದ್ದರು.

ಸಿಎಎ ಅಧಿಸೂಚನೆ (ಅನುಷ್ಠಾನ) ಸಮೀಪಿಸುತ್ತಿದ್ದಂತೆ, ವಿರೋಧ ಪಕ್ಷದ ರಾಜಕಾರಣಿಗಳು ತಮ್ಮ ಪ್ರದೇಶಗಳಲ್ಲಿ ಅದನ್ನು ಜಾರಿಗೊಳಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನವರಿಯಲ್ಲಿ ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರ ಪಡೆಯುವುದಕ್ಕಾಗಿ ಈ ವಿಷಯವನ್ನು ಎತ್ತಿದ್ದಾರೆ ಎಂದಿದ್ದರು.

‘ಚುನಾವಣೆಗಳು ಸಮೀಪಿಸುತ್ತಿರುವಾಗ, ರಾಜಕೀಯ ಲಾಭ ಪಡೆಯಲು ಬಿಜೆಪಿ ಮತ್ತೆ ಸಿಎಎ ವಿಷಯವನ್ನು ತರಾಟೆಗೆ ತೆಗೆದುಕೊಂಡಿದೆ. ಆದರೆ ನಾನು ಅದನ್ನು ಸ್ಪಷ್ಟವಾಗಿ ಹೇಳುತ್ತೇನೆ, ನಾನು ಜೀವಂತವಾಗಿರುವವರೆಗೆ, ಬಂಗಾಳದಲ್ಲಿ ಅದರ ಅನುಷ್ಠಾನಕ್ಕೆ ನಾನು ಅವಕಾಶ ನೀಡುವುದಿಲ್ಲ’ ಎಂದು ಅವರು ಉತ್ತರ ದಿಂಜಾಪುರ ಜಿಲ್ಲೆಯಲ್ಲಿ ನಡೆದಿದ್ದ ಸಾರ್ವಜನಿಕ ಸಮಾರಂಭದಲ್ಲಿ ಹೇಳಿದರು.

ಬ್ಯಾನರ್ಜಿಯವರ ನಂತರ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಇದೇ ರೀತಿ ಹೇಳಿದರು. ಬಿಜೆಪಿ ನೇತೃತ್ವದ ಸರ್ಕಾರದ ಕ್ರಮಗಳು “ಕೋಮು ಸೌಹಾರ್ದತೆಗೆ ವಿರುದ್ಧವಾಗಿದೆ” ಎಂದು ಆರೋಪಿಸಿದ ಡಿಎಂಕೆ ಮುಖ್ಯಸ್ಥರು, ತಮ್ಮ ಆಡಳಿತವು ಕಾನೂನನ್ನು ಎಂದಿಗೂ ಜಾರಿಗೆ ತರುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.

ಕೇರಳ ಮತ್ತು ಪಂಜಾಬ್‌ನಂತಹ ಹಲವಾರು ಇತರ ಬಿಜೆಪಿಯೇತರ ಆಡಳಿತದ ರಾಜ್ಯಗಳು ಸಹ ಸಿಎಎ ಅನ್ನು ವಿರೋಧಿಸಿದವು, ಅನೇಕ ರಾಜ್ಯಗಳು ತಮ್ಮ ವಿಧಾನಸಭೆಯಲ್ಲಿ ನಿರ್ಣಯಗಳನ್ನು ಅಂಗೀಕರಿಸಿದವು; ಬಂಗಾಳ ಮತ್ತು ಕೇರಳ ಕೂಡ ಎಲ್ಲ ಕಡೆ ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಕೆಲಸಗಳನ್ನು ನಿಲ್ಲಿಸಿವೆ.

ಇದನ್ನೂ ಓದಿ; ಬಿಜೆಪಿ ಸಂಸದರ ಸಂವಿಧಾನ ಬದಲಾವಣೆ ಹೇಳಿಕೆ: ‘ಇದು ಆರ್‌ಎಸ್‌ಎಸ್‌ ತೆಗೆದುಕೊಂಡ ಪ್ರತಿಜ್ಞೆ’ ಎಂದ ಪ್ರಕಾಶ್ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...