Homeಅಂತರಾಷ್ಟ್ರೀಯ17 ವರ್ಷದ ಹುಡುಗಿ ನೋವಾ ದಯಾಮರಣ ಪಡೆದು ಸಾವನಪ್ಪಿದ್ದು ತಿಳಿದರೆ ಬೇಸರಗೊಳ್ಳುತ್ತೀರಿ...

17 ವರ್ಷದ ಹುಡುಗಿ ನೋವಾ ದಯಾಮರಣ ಪಡೆದು ಸಾವನಪ್ಪಿದ್ದು ತಿಳಿದರೆ ಬೇಸರಗೊಳ್ಳುತ್ತೀರಿ…

- Advertisement -
- Advertisement -

| ಮುತ್ತುರಾಜು |

ಕಳೆದ 15 ವರ್ಷಗಳ ಹಿಂದೆ ಕರ್ನಾಟಕದ ಗ್ರಾಮವೊಂದರಲ್ಲಿ ನಡೆದಿದ್ದ ಘಟನೆ ಇದು. ಶಾಲೆ ಮುಗಿಸಿಕೊಂಡು ಬಂದಿದ್ದ 8 ವರ್ಷದ ಬಾಲಕಿ ಮನೆಯಲ್ಲಿ ಮಲಗಿದ್ದ ಸಮಯದಲ್ಲಿ ಪರಿಚಸಯಸ್ಥನೊಬ್ಬನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದಳು. ಆ ಘಟನೆ ನಡೆದ ನಂತರ ಆ ಊರಿನ ಜನರೆಲ್ಲಾ ಆ ಘಟನೆ ಬಗ್ಗೆ ಮಾತನಾಡತೊಡಗಿದರು. ಅವಳ ತಾಯಿ ಪೊಲೀಸರಿಗೆ ದೂರು ನೀಡಲು ಮುಂದಾದಾಗ ಮಾನ ಮರ್ಯಾದೆಯ ಹೆಸರೇಳಿ ದೂರು ಕೊಡುವುದನ್ನು ಜನರೇ ತಡೆದರು. ಆದರೆ ಯಾರ ಮಾತಿಗೂ ಕಿವಿಗೊಡದ ಅವರು ದೂರು ನೀಡಿದರು. ಪೊಲೀಸರು ಆರೋಪಿಯನ್ನು ಬಂಧಿಸಿ, ಕೆಲ ದಿನಗಳ ನಂತರ ಬಿಡುಗಡೆಗೊಳಿಸಿದರು. ಆದರೆ ಆ ಬಾಲಕಿಯ ಬಗ್ಗೆ ಅನುಕಂಪದ ಹೆಸರಿನಲ್ಲಿ ಕಿರಿಕಿರಿ ಉಂಟಾಗುವಂತಹ ನುಡಿ, ಅವಳ ತಾಯಿ ಮಾಡಿದ ನಿರ್ಧಾರಕ್ಕೆ ಕೊಂಕು ಮಾತುಗಳು ಸುತ್ತಮುತ್ತಲಿನವರಿಂದಲೇ ಬರುತ್ತಲೇ ಇದ್ದವು. ಕೊನೆಗೆ ಆ ಬಾಲಕಿಯನ್ನು ಬೇರೆ ಊರಿನಲ್ಲಿಟ್ಟು ಓದಿಸಬೇಕಾಯಿತು. ನಂತರದ ಅವಳ ಜೀವನ ಸರಿ ಹೋಗಲು ಸುಮಾರು 15 ವರ್ಷಗಳೇ ಬೇಕಾಯಿತು.

ನೋವಾ ದಯವಿಟ್ಟು ಕ್ಷಮಿಸಿ ಬಿಡು

ಎಷ್ಟೇ ಪ್ರಯತ್ನಿಸಿದರೂ ಸ್ಮೃತಿ ಪಟಲದಿಂದ ಮರೆಯಾಗದ ಈ ಘಟನೆ ಮತ್ತೆ ನೆನಪಾದದ್ದು ನೆದರ್ ಲೆಂಡ್ ನ ನೋವಾ ಪೊಥವನ್ ಎಂಬ ಯುವತಿಯ ದಯಾಮರಣದಿಂದ.

ಬಾಲ್ಯದಲ್ಲಿಯೇ ಅತ್ಯಾಚಾರಕ್ಕೊಳಗಾಗಿ ಖಿನ್ನತೆ ಹಾಗು ಮಾನಸಿಕವಾಗಿ ತೊಳಲಾಟದಲ್ಲಿದ್ದ 17 ವರ್ಷದ ಯುವತಿ ನೋವಾ ಪೊಥವನ್ ಕೊನೆಗೂ ದಯಾಮರಣ ಪಡೆದು ಸಾವನ್ನಪ್ಪಿರುವ ಘಟನೆ ಇತ್ತೀಚೆಗೆ ನೆದರ್ಲೆಂಡ್ಸ್ ನಲ್ಲಿ ನಡೆದಿದೆ.

ಈ ಕುರಿತು ಸಾವಿಗೂ ಒಂದು ದಿನ ಮೊದಲು ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿರುವ ನೋವಾ ‘ನಾನು ಇನ್ನು ಹತ್ತು ದಿನಗಳಲ್ಲಿ ಸಾಯುತ್ತೇನೆ. ಕೆಲ ವರ್ಷಗಳ ನನ್ನ ನೋವು ಕೊನೆಗೊಳ್ಳಲಿದೆ. ಹಲವು ದಿನಗಳಿಂದ ನಾನು ಆಹಾರ ಸೇವನೆಯನ್ನು ನಿಲ್ಲಿಸಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ಈ ಕುರಿತು ಹಲವು ಮಾಧ್ಯಮಗಳು ವರದಿ ಮಾಡಿದ್ದವು.

11 ನೇ ವಯಸ್ಸಿನಲ್ಲಿ ಶಾಲೆಯಲ್ಲಿ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ನೋವಾ ಪೊಥವನ್, ಎರಡು ವರ್ಷಗಳ ನಂತರ ಮತ್ತೆ ಇಬ್ಬರು ಕಾಮುಕರಿಂದ ಅತ್ಯಾಚಾರಕ್ಕೊಳಗಾಗಿದ್ದಳು. ಈ ಘಟನೆಯು ಅವಳನ್ನು ಮಾನಸಿಕವಾಗಿ ಆಘಾತಗೊಳಿಸಿತ್ತು. ಆ ನೋವಿನಿಂದ ಹೊರಬರಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಪದೇ ಪದೇ ಕಾಡುವ ಆ ಘಟನೆಗಳಿಂದ ಮುಕ್ತಿ ಪಡೆಯಲು ಕಡೆಗೆ ಇದ್ದುದ್ದು ಸಾವು ಮಾತ್ರ ಎಂದು ನಿರ್ಧರಿಸಿ ಇಹಲೋಕ ತ್ಯಜಿಸಿದ್ದಾಳೆ. ನಮ್ಮ ಭಾರತದಲ್ಲಿ ದಯಾಮರಣ ವಿಷಯ ಇನ್ನೂ ಇತ್ಯರ್ಥವಾಗಿಲ್ಲ. ಆದರೆ ನೆದರ್ ಲ್ಯಾಂಡ್ ನಲ್ಲಿ ಅದಕ್ಕೆ ಅವಕಾಶವಿದೆ.

ಘಟನೆಯ ನಂತರದ ದಿನಗಳಲ್ಲಿ ಅವಳು ಬರೆದ ಡೈರಿ ಆತ್ಮಕಥನವಾಗಿ ಪುಸ್ತಕ ರೂಪ ಪಡೆದಿದೆ. ಲೈಂಗಿಕ ದಾಳಿಗೊಳಗಾದ ನಂತರ ಅವಳು ಅನುಭವಿಸಿದ ಮಾನಸಿಕ ಒತ್ತಡ, ಖಿನ್ನತೆ, ಘಟನೆಯಿಂದ ಹೊರಬರಲು ತನ್ನವರಿಂದ ಬಯಸಿದ ಮಾನಸಿಕ ಬೆಂಬಲ ಇವೆಲ್ಲವನ್ನೂ ಪುಸ್ತಕದಲ್ಲಿ ವಿವರಿಸಿದ್ದಾಳೆ.

ನೆದರ್ ಲೆಂಡ್ ನಲ್ಲಿ ನಡೆದಿರುವ ಘಟನೆಗೂ ಕರ್ನಾಟಕದಲ್ಲಿ ನಡೆದಿರುವ ಘಟನೆಗೂ ಏನು ಸಂಬಂಧ ಎಂದುಕೊಳ್ಳುತ್ತಿದ್ದೀರಾ? ದೇಶ ಯಾವುದಾದರೇನು ಲೈಂಗಿಕ ದೌರ್ಜನ್ಯದಂತಹ ಅಮಾನವೀಯ ಹಲ್ಲೆಗೆ ಎಲ್ಲೆಯಿಲ್ಲ. ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಆಘಾತಕ್ಕೊಳಗಾಗಿರುತ್ತಾರೆ. ಅದರಿಂದ ಹೊರಬರುವುದು ಅಷ್ಟು ಸುಲಭವಲ್ಲ. ಸಂತ್ರಸ್ಥೆಯ ಕುಟುಂಬ, ಅಕ್ಕ ಪಕ್ಕದ ಮನೆಯವರು, ಸುತ್ತಮುತ್ತಲ ಸಮಾಜ ಎಲ್ಲರೂ ಒಂದಾಗಿ ಪ್ರೀತಿಯ ಹಾಗೂ ವಿಶ್ವಾಸದ ಸಾಂತ್ವಾನ ಹೇಳಿದಾಗ, ಬದುಕಿನ ಹೊಸ ಭರವಸೆ ತುಂಬಿದಾಗ ಮಾತ್ರ ಸಂತ್ರಸ್ಥೆ ಅದರಿಂದ ಹೊರಬರಲು ಸಾಧ್ಯ. ಇಲ್ಲವಾದರೇ ತನ್ನದಲ್ಲದ ತಪ್ಪಿಗೆ ಇಡೀ ಜೀವನ ಆ ಘಟನೆಯಿಂದ ಮಾನಸಿಕವಾಗಿ ಖಿನ್ನತೆ ಅನುಭವಿಸುತ್ತಲೇ ಇರುತ್ತಾರೆ. ಆದರೆ ನೋವಾಳ ನೋವು ಕೊನೆಯಾದದ್ದು ಸಾವಿನ ಮೂಲಕ ಎಂಬುದು ನೋವಿನ ಸಂಗತಿ.

ನೋವಾಳ ಘಟನೆ ಅತ್ಯಾಚಾರದ ನಂತರ ಸಂತ್ರಸ್ಥೆಗೆ ಒದಗಿಸಬೇಕಾದ ದೈಹಿಕ ಹಾಗೂ ಮಾನಸಿಕ ಚಿಕಿತ್ಸೆಯ ಬಗ್ಗೆ ಪ್ರಶ್ನೆಯೆತ್ತುತ್ತದೆ. ಜೊತೆಗೆ ಅತ್ಯಾಚಾರವನ್ನು ಹೇಗೆ ನೋಡಬೇಕು ಎಂಬುದನ್ನು ಚರ್ಚಿಸುತ್ತದೆ. ಅತ್ಯಾಚಾರ ನಡೆದು ಮೂರ್ನಾಲ್ಕು ವರ್ಷಗಳೇ ಕಳೆದಿದ್ದರೂ ಆ ಘಟನೆಯಿಂದ ಹೊರಬರಲಾರದೇ ಮಾನಸಿಕವಾಗಿ ಖಿನ್ನತೆ ಅನುಭವಿಸಿ ಕೊನೆಗೆ ಬದುಕಲು ಆಸೆಯೇ ಇಲ್ಲ ಎಂದು ದಯಾಮರಣ ಕೋರಿರುವುದು ದುರಂತವೇ ಸರಿ.

ಒಂದು ಅತ್ಯಾಚಾರ ಘಟನೆ ನಡೆದರೆ ಅದರಲ್ಲಿ ತಪ್ಪು ಅತ್ಯಾಚಾರವೆಸಗಿದವನದೇ ಎಂಬುದನ್ನು ಒತ್ತಿ ಒತ್ತಿ ಹೇಳಬೇಕಿದೆ. ಜೊತೆಗೆ ಮಾನ ಹೋಗುವುದು ಅಂದರೆ ಆತನದೇ ಹೊರತು ಸಂತ್ರಸ್ತೆಯದಲ್ಲ ಎಂಬುದನ್ನು ಈ ಸಮಾಜದಲ್ಲಿ ಸಾರಿ ಹೇಳಬೇಕಿದೆ. ಶೀಲ, ಪಾವಿತ್ರ್ಯ ಎಂಬುದು ಹೆಣ್ಣಿಗೆ ಮಾತ್ರ ಏಕೆ? ಅದೆಲ್ಲ ಕೇವಲ ಪೊಳ್ಳು ಮಾತು ಎಂಬುದನ್ನು ಸಂತ್ರಸ್ತೆಗೆ ತಿಳಿಸಿ ಅದರಿಂದ ಹೊರಬಂದು ಧೈರ್ಯದಿಂದ ಇರುವಂತೆ ಮಾಡಬೇಕಿದೆ. ಈ ಬಗ್ಗೆ ನೆದರ್ ಲೆಂಡ್ ಸರ್ಕಾರ ಈಗಲಾದರೂ ಯೋಚಿಸಲಿ. ಲೈಂಗಿಕ ದೌರ್ಜನ್ಯಕ್ಕೊಳಗಾಗುವವರಿಗೆ ಆಪ್ತ ಸಮಾಲೋಚನೆ ನಡೆಸಬೇಕು, ಮುಂದೆ ಯಾರಿಗೂ ಆ ಘಟನೆ ನಡೆಯದಂತೆ ಗಂಭೀರವಾಗಿ ತೆಗೆದುಕೊಳ್ಳಲಿ.

ಭಾರತದ ಪ್ರಸ್ತುತ ಸಂದರ್ಭವನ್ನು ನೋಡುವುದಾದರೆ  ಲೈಂಗಿಕ ದೌರ್ಜನ್ಯ ಪ್ರಕರಣಗಳು  ಬೆಳಕಿಗೆ ಬರಲಾರಂಭಿಸಿವೆ. ಜನರು ಪೊಲೀಸ್ ಠಾಣೆಗೆ ದೂರು ನೀಡಲು ಬರುತ್ತಿದ್ದಾರೆ. ಇತ್ತೀಚಿನ ವರದಿಗಳು ಕೂಡ ಅತಿ ಹೆಚ್ಚು ಅತ್ಯಾಚಾರಗಳು ನಡೆಯುತ್ತಿರುವುದು ಪರಿಚಯಸ್ಥರು ಹಾಗೂ ಸಂಬಂಧಿಕರಿಂದಲೇ ಎಂಬುದನ್ನು ವಿವರಿಸಿವೆ. ಆದರೆ ಕುಟುಂಬದೊಳಗೆ ನಡೆಯುವ ಅತ್ಯಾಚಾರಗಳು “ಮಾನ’ಮರ್ಯಾದೆ”ಯ ಕಾರಣಕ್ಕಾಗಿ ಗೌಣವಾಗಿಯೇ ಉಳಿಯುತ್ತವೆ.

ಇನ್ನು ಪೊಲೀಸ್ ಠಾಣೆ ಮೆಟ್ಟಿಲೇರುವ ಪ್ರಕರಣಗಳಲ್ಲಿ, ಅಪರಾಧಿಗೆ ಶಿಕ್ಷೆಯಾಗಿ ಸಂತ್ರಸ್ತೆಗೆ ನ್ಯಾಯ ದೊರಕುವುದು ಒಂದು ರೀತಿಯ ಹರಸಾಹಸವೆಂಬಂತಾಗಿದೆ. ವರ್ಷಗಟ್ಟಲೇ ನಡೆಯುವ ವಿಚಾರಣೆ, ಪದೇ ಪದೇ ಕೋರ್ಟಿನ ಮೆಟ್ಟಿಲೇರುವುದು ಇವೆಲ್ಲವೂ ಸಂತ್ರಸ್ತೆಯ ಕುಟುಂಬವನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಿರುತ್ತದೆ. ಹಾಗಾಗಿ ಇನ್ನೆಲ್ಲಿ ಆಪ್ತ ಸಮಾಲೋಚನೆ?

ಭಾರತದಲ್ಲಿ ಅತ್ಯಾಚಾರದಂತಹ ಅಮಾನವೀಯ ಘಟನೆಗಳನ್ನು ತಡೆಗಟ್ಟಲು, 376, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಘಟನೆಗಳಿಗೆ ಶಿಕ್ಷೆ ನೀಡಲು ಪೋಕ್ಸೊ ಕಾಯ್ದೆ ಇದೆ. 18 ವರ್ಷದೊಳಗಿನ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ 3 ವರ್ಷದಿಂದ ಮರಣ ದಂಡನೆಯಂತಹ ಕಠಿಣ ಶಿಕ್ಷೆ ನೀಡಬಹುದಾದ ಕಾನೂನು ‘ಪುಸ್ತಕದಲ್ಲಿದೆ’. ಆದರೂ ಈ ವರೆಗೂ ಅತ್ಯಾಚಾರಗಳ ಪ್ರಮಾಣ ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಅತ್ಯಾಚಾರದಂತಹ ಕ್ರೌರ್ಯ ಹೆಚ್ಚುತ್ತಲೇ ಇವೆ. ಏಕೆಂದರೆ ಸರ್ಕಾರದ ಕಾನೂನುಗಳು ಸಮರ್ಪಕವಾಗಿ ಜಾರಿಗೊಳಿಸಿಲ್ಲ. ಇತರ ಸಾಮಾಜಿಕ ಕಾರಣಗಳನ್ನು ಹುಡುಕಿ ಬಗೆಹರಿಸುವಲ್ಲಿ ಬೇಕಾದ ಇಚ್ಛಾಶಕ್ತಿ ಇಲ್ಲದಿರುವುದು ಬೇಸರದ ಸಂಗತಿ.

ಅತ್ಯಾಚಾರಕ್ಕೊಳಗಾಗುವ ಸಂತ್ರಸ್ತೆಗೆ ಕುಟುಂಬದವರು, ಸರ್ಕಾರ ಹಾಗೂ ಸಮಾಜ ಎಲ್ಲರೂ ಧೈರ್ಯ ನೀಡಬೇಕು. ಜೊತೆಯಾಗಿ ನಿಲ್ಲಬೇಕು. ಇದು ನಮ್ಮ ನಿಮ್ಮೆಲ್ಲರ ಹಾಗೂ ಸರ್ಕಾರದ ಆದ್ಯ ಕರ್ತವ್ಯ. ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ದೂರು ದಾಖಲಾದಾಗಿನಿಂದ ಅಪರಾಧಿಗೆ ಶಿಕ್ಷೆಯಾಗುವವರೆಗೂ ತ್ವರಿತಗತಿಯಲ್ಲಿಯಲ್ಲಿ ವಿಚಾರಣೆ ನಡೆಯುವಂತೆ ಸರ್ಕಾರ ನೋಡಿಕೊಳ್ಳಬೇಕು. ಸಂತ್ರಸ್ತೆಗೆ ಬೇಕಾಗುವಂತಹ ನೆರವನ್ನು ಸರ್ಕಾರವೇ ನೋಡಿಕೊಳ್ಳುವಂತಾಗಬೇಕು. ಇವೆಲ್ಲವೂ ಸರಿಯಾಗಿ ನಡೆಯುತ್ತಿದೆಯೇ ಎಂಬುದರ ಬಗ್ಗೆ ಗಮನಹರಿಸಲು ಒಂದು ಸಮಿತಿಯನ್ನು ಸರ್ಕಾರ ರಚಿಸಬೇಕು.

ಮುಖ್ಯವಾಗಿ ಪ್ರಾಥಮಿಕ ಶಿಕ್ಷಣ ಹಂತದಲ್ಲಿಯೇ ಮಕ್ಕಳಿಗೆ ಲೈಂಗಿಕತೆಯ ಬಗ್ಗೆ ಪಠ್ಯವಿರಬೇಕು. ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಪಾಠಗಳು ಇರಬೇಕಾದದ್ದು ಕಡ್ಡಾಯ ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಮನಹರಿಸಲೇಬೇಕು. ಸರ್ಕಾರ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಪೋಷಕರೂ ಕೂಡ ಈ ಬಗ್ಗೆ ಜಾಗೃತರಾಗಿ ಮಕ್ಕಳನ್ನು ಸ್ನೇಹಿತರಂತೆ ಮಾತನಾಡಿಸುತ್ತಾ, ಸರಿಯಾವುದು, ತಪ್ಪು ಯಾವುದು ಎಂಬುದನ್ನು ಹೇಳಬೇಕಾದ ಜವಾಬ್ದಾರಿಯಿದೆ.

ಸರ್ಕಾರಕ್ಕಿಂತ ಸಂತ್ರಸ್ತೆಯ ಕುಟುಂಬದವರು ಹಾಗೂ ಸಮಾಜದ ನಾಗರಿಕರಾದ ನಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಕುಟುಂಬದವರು, ನೆರೆಹೊರೆಯವರು ಕೂಡ ಅನುಕಂಪದ ಹೆಸರಿನಲ್ಲಿ ಮಗುವಿಗೆ ನೋವಾಗುವಂತೆ ಮಾತನಾಡದೇ ಆ ಘಟನೆಯನ್ನು ಮರೆಯುವಂತೆ ಮಾಡಬೇಕು. ಅದಕ್ಕೂ ಮುಖ್ಯವಾಗಿ ಅತ್ಯಾಚಾರಗಳು ನಡೆಯದಂತೆ ತಡೆಯಬೇಕು. ನಮ್ಮ ಮುಂದಿನ ತಲೆಮಾರಿನವರಿಗಾಗಿ ಅತ್ಯಾಚಾರ ಮುಕ್ತ ಸಮಾಜ ನಿರ್ಮಿಸುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...