Homeಚಳವಳಿಆರೇ ಅರಣ್ಯ ಪ್ರದೇಶದಲ್ಲಿ ZOO ಕಟ್ಟಲು ಮುಂದಾದ ಸರ್ಕಾರ: ಬೀಳಲಿದೆ ಮತ್ತಷ್ಟು ಮರಗಳಿಗೆ ಕೊಡಲಿಯೇಟು...

ಆರೇ ಅರಣ್ಯ ಪ್ರದೇಶದಲ್ಲಿ ZOO ಕಟ್ಟಲು ಮುಂದಾದ ಸರ್ಕಾರ: ಬೀಳಲಿದೆ ಮತ್ತಷ್ಟು ಮರಗಳಿಗೆ ಕೊಡಲಿಯೇಟು…

- Advertisement -
- Advertisement -

ಮುಂಬೈ ಮೆಟ್ರೋಗೆ ಕಾರ್ ಶೆಡ್ ನಿರ್ಮಿಸುವ ಸಲುವಾಗಿ ತೀವ್ರ ವಿರೋಧದ ನಡುವೆಯೂ ಸಾವಿರಾರು ಮರಗಳು ಧರೆಗುರಿಳಿದ್ದು ಮಾಸುವ ಮುನ್ನವೇ ಮಹಾರಾಷ್ಟ್ರ ಸರ್ಕಾರ ಮತ್ತೆ ಮರಗಳ ಮಾರಣಹೋಮಕ್ಕೆ ಸಿದ್ದವಾಗಿದೆ. ಆರೇ ಅರಣ್ಯದಲ್ಲಿ ಈ ಬಾರಿ ಮೃಗಾಲಯ ಕಟ್ಟಲು ಮುಂದಾಗಿರುವ ಸರ್ಕಾರ ಅದಕ್ಕೆ ಮತ್ತಷ್ಟು ಮರಗಳನ್ನು ಕಡಿಯಲು ನಿರ್ಧರಿಸಿದೆ.

ಅರಣ್ಯ ಇಲಾಖೆಯ ಅಕ್ಟೋಬರ್ 9ರ ಸರ್ಕಾರದ ನಿರ್ಣಯದಲ್ಲಿ ಮೃಗಾಲಯದ ಸಂರಕ್ಷಣಾ ಗೋಡೆಗೆ 60 ಲಕ್ಷ ರೂ. ಬಿಡುಗಡೆ ಮಾಡಿದ್ದು ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ.

ಗೋರೆಗಾಂವ್‌ನ ಆರೇ ಮಿಲ್ಕ್ ಕಾಲೋನಿಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಮೃಗಾಲಯವನ್ನು ಸ್ಥಾಪಿಸಲು ರಾಜ್ಯವು ಜುಲೈನಲ್ಲಿ ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಯೊಂದಿಗೆ ಒಪ್ಪಂದ ಮಾಡಿಕೊಂಡಿತ್ತು.

2009 ರಿಂದ ಚರ್ಚೆಯಲ್ಲಿರುವ ಈ ಯೋಜನೆಗೆ ಸರ್ಕಾರವು ನಗರದ ಹಸಿರು ಶ್ವಾಸಕೋಶ ಎಂದು ಕರೆಯುವ ಆರೇಯಲ್ಲಿ 190 ಎಕರೆ ಭೂಮಿಯನ್ನು ಹಸ್ತಾಂತರಿಸಿದೆ. ಯೋಜನೆಯ ಒಟ್ಟು ವೆಚ್ಚ 500 ಕೋಟಿ ರೂ ಎಂದು ಅಂದಾಜಿಸಲಾಗಿದೆ ಮತ್ತು ಇದು ನಾಲ್ಕರಿಂದ ಐದು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಈ ಹಿಂದೆಯೇ ಸ್ಥಳೀಯರು, ಆದಿವಾಸಿಗಳು, ಮೃಗಾಲಯಕ್ಕಾಗಿ ಆರೇಯಲ್ಲಿ ಜಮೀನನ್ನು ಮಂಜೂರು ಮಾಡುವ ರಾಜ್ಯ ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ಪ್ರತಿಭಟಿಸಿದ್ದರು. ಮೃಗಾಲಯವನ್ನು ನಿರ್ಮಿಸುವ ಬದಲು ಇಡೀ ಆರೇ ಕಾಲೋನಿಯನ್ನು ಮೀಸಲು ಅರಣ್ಯವೆಂದು ಘೋಷಿಸಬೇಕು ಮತ್ತು ನೆರೆಯ ಎಸ್‌ಜಿಎನ್‌ಪಿ ಯೊಂದಿಗೆ ವಿಲೀನಗೊಳಿಸಬೇಕು ಎಂದು ಪರಿಸರವಾದಿಗಳು ಒತ್ತಾಯಿಸಿದ್ದರು.

ಈ ಮೊದಲು ಮೆಟ್ರೋಗಾಗಿ ಆರೇ ಪ್ರದೇಶದ ಮರಗಳನ್ನು ಕಡಿಯಬಾರದೆಂದು ಪರಿಸರಪ್ರೇಮಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಹಾರಾಷ್ಟ್ರ ಹೈಕೋರ್ಟ್‌‌ ತಿರಸ್ಕರಿಸಿತ್ತು. ಕೂಡಲೇ ಮಹಾರಾಷ್ಟ್ರ ಸರ್ಕಾರ ಮರಗಳ ಮಾರಣಹೋಮ ನಡೆಸಿತ್ತು. ಸುಪ್ರೀಂ ಕೋರ್ಟ್‌ ಅಕ್ಟೋಬರ್ 16ರವರೆಗೂ ಮರಗಳನ್ನು ಕಡಿಯಬಾರದೆಂದು ಆದೇಶ ನೀಡುವಷ್ಟರಲ್ಲಿ ಬಹುಪಾಲು ಮರಗಳು ಅಸುನೀಗಿದ್ದವು.

ಸುಪ್ರೀಂ ನೀಡಿದ್ದ ಗಡುವು ಇಂದು ಮುಗಿದ ಕೂಡಲೇ ಮಹಾರಾಷ್ಟ್ರ ಸರ್ಕಾರ ಮತ್ತೆ ಮರಗಳನ್ನು ಉರುಳಿಸಲು ಸಜ್ಜಾಗಿದೆ. ಆರೇ ಅರಣ್ಯದಲ್ಲಿಯೇ ZOO ಕಟ್ಟಲು ಮುಂದಾಗಿದೆ. ಇದಕ್ಕೆ ಬಹಳಷ್ಟು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಖ್ಯಾತ ಯೂಟ್ಯೂಬರ್ ಧೃವ್‌ರಾಠೀ “ಮೆಟ್ರೋ ನೆಟ್ಟಿದ್ದ 1800 ಗಿಡಗಳಲ್ಲಿ 800 ಗಿಡಗಳು ಈಗಾಗಲೇ ಸತ್ತುಹೋಗಿವೆ. ಇಂತಹ ಸಂದರ್ಭದಲ್ಲಿ ಮಹರಾಷ್ಟ್ರ ಸರ್ಕಾರ ZOO ಕಟ್ಟಲು ಮುಂದಾದರೆ ಮತ್ತಷ್ಟು ಮರಗಳು ಕೊನೆಯುಸಿರೆಳೆಯುತ್ತವೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಆರೇ ಉಳಿಸುವ ಹೋರಾಟ ಕೇವಲ 2700 ಮರಗಳನ್ನು ಉಳಿಸಲು ಮಾತ್ರವಲ್ಲ ಎಂದು ಪರಿಸರ ಕಾರ್ಯಕರ್ತರು ಪದೇ ಪದೇ ಎಚ್ಚರಿಸಿದ್ದರು. ಅದು ರಿಯಲ್ ಎಸ್ಟೇಟ್ ಮಾಫಿಯಾದ “ವಿಕಾಸ”ಕ್ಕಾಗಿ ಇಡೀ ಅರಣ್ಯವನ್ನು ಅಪಹರಿಸುವ ಯೋಜನೆಯಾಗಿತ್ತು! ಎಂದು ಅವರು ಟ್ವಿಟ್ಟರ್‌ ಮತ್ತು ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...