Homeಚಳವಳಿಆರೇ ಅರಣ್ಯ ಪ್ರದೇಶದಲ್ಲಿ ZOO ಕಟ್ಟಲು ಮುಂದಾದ ಸರ್ಕಾರ: ಬೀಳಲಿದೆ ಮತ್ತಷ್ಟು ಮರಗಳಿಗೆ ಕೊಡಲಿಯೇಟು...

ಆರೇ ಅರಣ್ಯ ಪ್ರದೇಶದಲ್ಲಿ ZOO ಕಟ್ಟಲು ಮುಂದಾದ ಸರ್ಕಾರ: ಬೀಳಲಿದೆ ಮತ್ತಷ್ಟು ಮರಗಳಿಗೆ ಕೊಡಲಿಯೇಟು…

- Advertisement -
- Advertisement -

ಮುಂಬೈ ಮೆಟ್ರೋಗೆ ಕಾರ್ ಶೆಡ್ ನಿರ್ಮಿಸುವ ಸಲುವಾಗಿ ತೀವ್ರ ವಿರೋಧದ ನಡುವೆಯೂ ಸಾವಿರಾರು ಮರಗಳು ಧರೆಗುರಿಳಿದ್ದು ಮಾಸುವ ಮುನ್ನವೇ ಮಹಾರಾಷ್ಟ್ರ ಸರ್ಕಾರ ಮತ್ತೆ ಮರಗಳ ಮಾರಣಹೋಮಕ್ಕೆ ಸಿದ್ದವಾಗಿದೆ. ಆರೇ ಅರಣ್ಯದಲ್ಲಿ ಈ ಬಾರಿ ಮೃಗಾಲಯ ಕಟ್ಟಲು ಮುಂದಾಗಿರುವ ಸರ್ಕಾರ ಅದಕ್ಕೆ ಮತ್ತಷ್ಟು ಮರಗಳನ್ನು ಕಡಿಯಲು ನಿರ್ಧರಿಸಿದೆ.

ಅರಣ್ಯ ಇಲಾಖೆಯ ಅಕ್ಟೋಬರ್ 9ರ ಸರ್ಕಾರದ ನಿರ್ಣಯದಲ್ಲಿ ಮೃಗಾಲಯದ ಸಂರಕ್ಷಣಾ ಗೋಡೆಗೆ 60 ಲಕ್ಷ ರೂ. ಬಿಡುಗಡೆ ಮಾಡಿದ್ದು ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ.

ಗೋರೆಗಾಂವ್‌ನ ಆರೇ ಮಿಲ್ಕ್ ಕಾಲೋನಿಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಮೃಗಾಲಯವನ್ನು ಸ್ಥಾಪಿಸಲು ರಾಜ್ಯವು ಜುಲೈನಲ್ಲಿ ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಯೊಂದಿಗೆ ಒಪ್ಪಂದ ಮಾಡಿಕೊಂಡಿತ್ತು.

2009 ರಿಂದ ಚರ್ಚೆಯಲ್ಲಿರುವ ಈ ಯೋಜನೆಗೆ ಸರ್ಕಾರವು ನಗರದ ಹಸಿರು ಶ್ವಾಸಕೋಶ ಎಂದು ಕರೆಯುವ ಆರೇಯಲ್ಲಿ 190 ಎಕರೆ ಭೂಮಿಯನ್ನು ಹಸ್ತಾಂತರಿಸಿದೆ. ಯೋಜನೆಯ ಒಟ್ಟು ವೆಚ್ಚ 500 ಕೋಟಿ ರೂ ಎಂದು ಅಂದಾಜಿಸಲಾಗಿದೆ ಮತ್ತು ಇದು ನಾಲ್ಕರಿಂದ ಐದು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಈ ಹಿಂದೆಯೇ ಸ್ಥಳೀಯರು, ಆದಿವಾಸಿಗಳು, ಮೃಗಾಲಯಕ್ಕಾಗಿ ಆರೇಯಲ್ಲಿ ಜಮೀನನ್ನು ಮಂಜೂರು ಮಾಡುವ ರಾಜ್ಯ ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ಪ್ರತಿಭಟಿಸಿದ್ದರು. ಮೃಗಾಲಯವನ್ನು ನಿರ್ಮಿಸುವ ಬದಲು ಇಡೀ ಆರೇ ಕಾಲೋನಿಯನ್ನು ಮೀಸಲು ಅರಣ್ಯವೆಂದು ಘೋಷಿಸಬೇಕು ಮತ್ತು ನೆರೆಯ ಎಸ್‌ಜಿಎನ್‌ಪಿ ಯೊಂದಿಗೆ ವಿಲೀನಗೊಳಿಸಬೇಕು ಎಂದು ಪರಿಸರವಾದಿಗಳು ಒತ್ತಾಯಿಸಿದ್ದರು.

ಈ ಮೊದಲು ಮೆಟ್ರೋಗಾಗಿ ಆರೇ ಪ್ರದೇಶದ ಮರಗಳನ್ನು ಕಡಿಯಬಾರದೆಂದು ಪರಿಸರಪ್ರೇಮಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಹಾರಾಷ್ಟ್ರ ಹೈಕೋರ್ಟ್‌‌ ತಿರಸ್ಕರಿಸಿತ್ತು. ಕೂಡಲೇ ಮಹಾರಾಷ್ಟ್ರ ಸರ್ಕಾರ ಮರಗಳ ಮಾರಣಹೋಮ ನಡೆಸಿತ್ತು. ಸುಪ್ರೀಂ ಕೋರ್ಟ್‌ ಅಕ್ಟೋಬರ್ 16ರವರೆಗೂ ಮರಗಳನ್ನು ಕಡಿಯಬಾರದೆಂದು ಆದೇಶ ನೀಡುವಷ್ಟರಲ್ಲಿ ಬಹುಪಾಲು ಮರಗಳು ಅಸುನೀಗಿದ್ದವು.

ಸುಪ್ರೀಂ ನೀಡಿದ್ದ ಗಡುವು ಇಂದು ಮುಗಿದ ಕೂಡಲೇ ಮಹಾರಾಷ್ಟ್ರ ಸರ್ಕಾರ ಮತ್ತೆ ಮರಗಳನ್ನು ಉರುಳಿಸಲು ಸಜ್ಜಾಗಿದೆ. ಆರೇ ಅರಣ್ಯದಲ್ಲಿಯೇ ZOO ಕಟ್ಟಲು ಮುಂದಾಗಿದೆ. ಇದಕ್ಕೆ ಬಹಳಷ್ಟು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಖ್ಯಾತ ಯೂಟ್ಯೂಬರ್ ಧೃವ್‌ರಾಠೀ “ಮೆಟ್ರೋ ನೆಟ್ಟಿದ್ದ 1800 ಗಿಡಗಳಲ್ಲಿ 800 ಗಿಡಗಳು ಈಗಾಗಲೇ ಸತ್ತುಹೋಗಿವೆ. ಇಂತಹ ಸಂದರ್ಭದಲ್ಲಿ ಮಹರಾಷ್ಟ್ರ ಸರ್ಕಾರ ZOO ಕಟ್ಟಲು ಮುಂದಾದರೆ ಮತ್ತಷ್ಟು ಮರಗಳು ಕೊನೆಯುಸಿರೆಳೆಯುತ್ತವೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಆರೇ ಉಳಿಸುವ ಹೋರಾಟ ಕೇವಲ 2700 ಮರಗಳನ್ನು ಉಳಿಸಲು ಮಾತ್ರವಲ್ಲ ಎಂದು ಪರಿಸರ ಕಾರ್ಯಕರ್ತರು ಪದೇ ಪದೇ ಎಚ್ಚರಿಸಿದ್ದರು. ಅದು ರಿಯಲ್ ಎಸ್ಟೇಟ್ ಮಾಫಿಯಾದ “ವಿಕಾಸ”ಕ್ಕಾಗಿ ಇಡೀ ಅರಣ್ಯವನ್ನು ಅಪಹರಿಸುವ ಯೋಜನೆಯಾಗಿತ್ತು! ಎಂದು ಅವರು ಟ್ವಿಟ್ಟರ್‌ ಮತ್ತು ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...