Homeಚಳವಳಿಆರೇ ಅರಣ್ಯ ಪ್ರದೇಶದಲ್ಲಿ ZOO ಕಟ್ಟಲು ಮುಂದಾದ ಸರ್ಕಾರ: ಬೀಳಲಿದೆ ಮತ್ತಷ್ಟು ಮರಗಳಿಗೆ ಕೊಡಲಿಯೇಟು...

ಆರೇ ಅರಣ್ಯ ಪ್ರದೇಶದಲ್ಲಿ ZOO ಕಟ್ಟಲು ಮುಂದಾದ ಸರ್ಕಾರ: ಬೀಳಲಿದೆ ಮತ್ತಷ್ಟು ಮರಗಳಿಗೆ ಕೊಡಲಿಯೇಟು…

- Advertisement -
- Advertisement -

ಮುಂಬೈ ಮೆಟ್ರೋಗೆ ಕಾರ್ ಶೆಡ್ ನಿರ್ಮಿಸುವ ಸಲುವಾಗಿ ತೀವ್ರ ವಿರೋಧದ ನಡುವೆಯೂ ಸಾವಿರಾರು ಮರಗಳು ಧರೆಗುರಿಳಿದ್ದು ಮಾಸುವ ಮುನ್ನವೇ ಮಹಾರಾಷ್ಟ್ರ ಸರ್ಕಾರ ಮತ್ತೆ ಮರಗಳ ಮಾರಣಹೋಮಕ್ಕೆ ಸಿದ್ದವಾಗಿದೆ. ಆರೇ ಅರಣ್ಯದಲ್ಲಿ ಈ ಬಾರಿ ಮೃಗಾಲಯ ಕಟ್ಟಲು ಮುಂದಾಗಿರುವ ಸರ್ಕಾರ ಅದಕ್ಕೆ ಮತ್ತಷ್ಟು ಮರಗಳನ್ನು ಕಡಿಯಲು ನಿರ್ಧರಿಸಿದೆ.

ಅರಣ್ಯ ಇಲಾಖೆಯ ಅಕ್ಟೋಬರ್ 9ರ ಸರ್ಕಾರದ ನಿರ್ಣಯದಲ್ಲಿ ಮೃಗಾಲಯದ ಸಂರಕ್ಷಣಾ ಗೋಡೆಗೆ 60 ಲಕ್ಷ ರೂ. ಬಿಡುಗಡೆ ಮಾಡಿದ್ದು ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ.

ಗೋರೆಗಾಂವ್‌ನ ಆರೇ ಮಿಲ್ಕ್ ಕಾಲೋನಿಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಮೃಗಾಲಯವನ್ನು ಸ್ಥಾಪಿಸಲು ರಾಜ್ಯವು ಜುಲೈನಲ್ಲಿ ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಯೊಂದಿಗೆ ಒಪ್ಪಂದ ಮಾಡಿಕೊಂಡಿತ್ತು.

2009 ರಿಂದ ಚರ್ಚೆಯಲ್ಲಿರುವ ಈ ಯೋಜನೆಗೆ ಸರ್ಕಾರವು ನಗರದ ಹಸಿರು ಶ್ವಾಸಕೋಶ ಎಂದು ಕರೆಯುವ ಆರೇಯಲ್ಲಿ 190 ಎಕರೆ ಭೂಮಿಯನ್ನು ಹಸ್ತಾಂತರಿಸಿದೆ. ಯೋಜನೆಯ ಒಟ್ಟು ವೆಚ್ಚ 500 ಕೋಟಿ ರೂ ಎಂದು ಅಂದಾಜಿಸಲಾಗಿದೆ ಮತ್ತು ಇದು ನಾಲ್ಕರಿಂದ ಐದು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಈ ಹಿಂದೆಯೇ ಸ್ಥಳೀಯರು, ಆದಿವಾಸಿಗಳು, ಮೃಗಾಲಯಕ್ಕಾಗಿ ಆರೇಯಲ್ಲಿ ಜಮೀನನ್ನು ಮಂಜೂರು ಮಾಡುವ ರಾಜ್ಯ ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ಪ್ರತಿಭಟಿಸಿದ್ದರು. ಮೃಗಾಲಯವನ್ನು ನಿರ್ಮಿಸುವ ಬದಲು ಇಡೀ ಆರೇ ಕಾಲೋನಿಯನ್ನು ಮೀಸಲು ಅರಣ್ಯವೆಂದು ಘೋಷಿಸಬೇಕು ಮತ್ತು ನೆರೆಯ ಎಸ್‌ಜಿಎನ್‌ಪಿ ಯೊಂದಿಗೆ ವಿಲೀನಗೊಳಿಸಬೇಕು ಎಂದು ಪರಿಸರವಾದಿಗಳು ಒತ್ತಾಯಿಸಿದ್ದರು.

ಈ ಮೊದಲು ಮೆಟ್ರೋಗಾಗಿ ಆರೇ ಪ್ರದೇಶದ ಮರಗಳನ್ನು ಕಡಿಯಬಾರದೆಂದು ಪರಿಸರಪ್ರೇಮಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಹಾರಾಷ್ಟ್ರ ಹೈಕೋರ್ಟ್‌‌ ತಿರಸ್ಕರಿಸಿತ್ತು. ಕೂಡಲೇ ಮಹಾರಾಷ್ಟ್ರ ಸರ್ಕಾರ ಮರಗಳ ಮಾರಣಹೋಮ ನಡೆಸಿತ್ತು. ಸುಪ್ರೀಂ ಕೋರ್ಟ್‌ ಅಕ್ಟೋಬರ್ 16ರವರೆಗೂ ಮರಗಳನ್ನು ಕಡಿಯಬಾರದೆಂದು ಆದೇಶ ನೀಡುವಷ್ಟರಲ್ಲಿ ಬಹುಪಾಲು ಮರಗಳು ಅಸುನೀಗಿದ್ದವು.

ಸುಪ್ರೀಂ ನೀಡಿದ್ದ ಗಡುವು ಇಂದು ಮುಗಿದ ಕೂಡಲೇ ಮಹಾರಾಷ್ಟ್ರ ಸರ್ಕಾರ ಮತ್ತೆ ಮರಗಳನ್ನು ಉರುಳಿಸಲು ಸಜ್ಜಾಗಿದೆ. ಆರೇ ಅರಣ್ಯದಲ್ಲಿಯೇ ZOO ಕಟ್ಟಲು ಮುಂದಾಗಿದೆ. ಇದಕ್ಕೆ ಬಹಳಷ್ಟು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಖ್ಯಾತ ಯೂಟ್ಯೂಬರ್ ಧೃವ್‌ರಾಠೀ “ಮೆಟ್ರೋ ನೆಟ್ಟಿದ್ದ 1800 ಗಿಡಗಳಲ್ಲಿ 800 ಗಿಡಗಳು ಈಗಾಗಲೇ ಸತ್ತುಹೋಗಿವೆ. ಇಂತಹ ಸಂದರ್ಭದಲ್ಲಿ ಮಹರಾಷ್ಟ್ರ ಸರ್ಕಾರ ZOO ಕಟ್ಟಲು ಮುಂದಾದರೆ ಮತ್ತಷ್ಟು ಮರಗಳು ಕೊನೆಯುಸಿರೆಳೆಯುತ್ತವೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಆರೇ ಉಳಿಸುವ ಹೋರಾಟ ಕೇವಲ 2700 ಮರಗಳನ್ನು ಉಳಿಸಲು ಮಾತ್ರವಲ್ಲ ಎಂದು ಪರಿಸರ ಕಾರ್ಯಕರ್ತರು ಪದೇ ಪದೇ ಎಚ್ಚರಿಸಿದ್ದರು. ಅದು ರಿಯಲ್ ಎಸ್ಟೇಟ್ ಮಾಫಿಯಾದ “ವಿಕಾಸ”ಕ್ಕಾಗಿ ಇಡೀ ಅರಣ್ಯವನ್ನು ಅಪಹರಿಸುವ ಯೋಜನೆಯಾಗಿತ್ತು! ಎಂದು ಅವರು ಟ್ವಿಟ್ಟರ್‌ ಮತ್ತು ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...