Homeಚಳವಳಿಆರೇ ಅರಣ್ಯ ಪ್ರದೇಶದಲ್ಲಿ ZOO ಕಟ್ಟಲು ಮುಂದಾದ ಸರ್ಕಾರ: ಬೀಳಲಿದೆ ಮತ್ತಷ್ಟು ಮರಗಳಿಗೆ ಕೊಡಲಿಯೇಟು...

ಆರೇ ಅರಣ್ಯ ಪ್ರದೇಶದಲ್ಲಿ ZOO ಕಟ್ಟಲು ಮುಂದಾದ ಸರ್ಕಾರ: ಬೀಳಲಿದೆ ಮತ್ತಷ್ಟು ಮರಗಳಿಗೆ ಕೊಡಲಿಯೇಟು…

- Advertisement -
- Advertisement -

ಮುಂಬೈ ಮೆಟ್ರೋಗೆ ಕಾರ್ ಶೆಡ್ ನಿರ್ಮಿಸುವ ಸಲುವಾಗಿ ತೀವ್ರ ವಿರೋಧದ ನಡುವೆಯೂ ಸಾವಿರಾರು ಮರಗಳು ಧರೆಗುರಿಳಿದ್ದು ಮಾಸುವ ಮುನ್ನವೇ ಮಹಾರಾಷ್ಟ್ರ ಸರ್ಕಾರ ಮತ್ತೆ ಮರಗಳ ಮಾರಣಹೋಮಕ್ಕೆ ಸಿದ್ದವಾಗಿದೆ. ಆರೇ ಅರಣ್ಯದಲ್ಲಿ ಈ ಬಾರಿ ಮೃಗಾಲಯ ಕಟ್ಟಲು ಮುಂದಾಗಿರುವ ಸರ್ಕಾರ ಅದಕ್ಕೆ ಮತ್ತಷ್ಟು ಮರಗಳನ್ನು ಕಡಿಯಲು ನಿರ್ಧರಿಸಿದೆ.

ಅರಣ್ಯ ಇಲಾಖೆಯ ಅಕ್ಟೋಬರ್ 9ರ ಸರ್ಕಾರದ ನಿರ್ಣಯದಲ್ಲಿ ಮೃಗಾಲಯದ ಸಂರಕ್ಷಣಾ ಗೋಡೆಗೆ 60 ಲಕ್ಷ ರೂ. ಬಿಡುಗಡೆ ಮಾಡಿದ್ದು ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ.

ಗೋರೆಗಾಂವ್‌ನ ಆರೇ ಮಿಲ್ಕ್ ಕಾಲೋನಿಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಮೃಗಾಲಯವನ್ನು ಸ್ಥಾಪಿಸಲು ರಾಜ್ಯವು ಜುಲೈನಲ್ಲಿ ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಯೊಂದಿಗೆ ಒಪ್ಪಂದ ಮಾಡಿಕೊಂಡಿತ್ತು.

2009 ರಿಂದ ಚರ್ಚೆಯಲ್ಲಿರುವ ಈ ಯೋಜನೆಗೆ ಸರ್ಕಾರವು ನಗರದ ಹಸಿರು ಶ್ವಾಸಕೋಶ ಎಂದು ಕರೆಯುವ ಆರೇಯಲ್ಲಿ 190 ಎಕರೆ ಭೂಮಿಯನ್ನು ಹಸ್ತಾಂತರಿಸಿದೆ. ಯೋಜನೆಯ ಒಟ್ಟು ವೆಚ್ಚ 500 ಕೋಟಿ ರೂ ಎಂದು ಅಂದಾಜಿಸಲಾಗಿದೆ ಮತ್ತು ಇದು ನಾಲ್ಕರಿಂದ ಐದು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಈ ಹಿಂದೆಯೇ ಸ್ಥಳೀಯರು, ಆದಿವಾಸಿಗಳು, ಮೃಗಾಲಯಕ್ಕಾಗಿ ಆರೇಯಲ್ಲಿ ಜಮೀನನ್ನು ಮಂಜೂರು ಮಾಡುವ ರಾಜ್ಯ ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ಪ್ರತಿಭಟಿಸಿದ್ದರು. ಮೃಗಾಲಯವನ್ನು ನಿರ್ಮಿಸುವ ಬದಲು ಇಡೀ ಆರೇ ಕಾಲೋನಿಯನ್ನು ಮೀಸಲು ಅರಣ್ಯವೆಂದು ಘೋಷಿಸಬೇಕು ಮತ್ತು ನೆರೆಯ ಎಸ್‌ಜಿಎನ್‌ಪಿ ಯೊಂದಿಗೆ ವಿಲೀನಗೊಳಿಸಬೇಕು ಎಂದು ಪರಿಸರವಾದಿಗಳು ಒತ್ತಾಯಿಸಿದ್ದರು.

ಈ ಮೊದಲು ಮೆಟ್ರೋಗಾಗಿ ಆರೇ ಪ್ರದೇಶದ ಮರಗಳನ್ನು ಕಡಿಯಬಾರದೆಂದು ಪರಿಸರಪ್ರೇಮಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಹಾರಾಷ್ಟ್ರ ಹೈಕೋರ್ಟ್‌‌ ತಿರಸ್ಕರಿಸಿತ್ತು. ಕೂಡಲೇ ಮಹಾರಾಷ್ಟ್ರ ಸರ್ಕಾರ ಮರಗಳ ಮಾರಣಹೋಮ ನಡೆಸಿತ್ತು. ಸುಪ್ರೀಂ ಕೋರ್ಟ್‌ ಅಕ್ಟೋಬರ್ 16ರವರೆಗೂ ಮರಗಳನ್ನು ಕಡಿಯಬಾರದೆಂದು ಆದೇಶ ನೀಡುವಷ್ಟರಲ್ಲಿ ಬಹುಪಾಲು ಮರಗಳು ಅಸುನೀಗಿದ್ದವು.

ಸುಪ್ರೀಂ ನೀಡಿದ್ದ ಗಡುವು ಇಂದು ಮುಗಿದ ಕೂಡಲೇ ಮಹಾರಾಷ್ಟ್ರ ಸರ್ಕಾರ ಮತ್ತೆ ಮರಗಳನ್ನು ಉರುಳಿಸಲು ಸಜ್ಜಾಗಿದೆ. ಆರೇ ಅರಣ್ಯದಲ್ಲಿಯೇ ZOO ಕಟ್ಟಲು ಮುಂದಾಗಿದೆ. ಇದಕ್ಕೆ ಬಹಳಷ್ಟು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಖ್ಯಾತ ಯೂಟ್ಯೂಬರ್ ಧೃವ್‌ರಾಠೀ “ಮೆಟ್ರೋ ನೆಟ್ಟಿದ್ದ 1800 ಗಿಡಗಳಲ್ಲಿ 800 ಗಿಡಗಳು ಈಗಾಗಲೇ ಸತ್ತುಹೋಗಿವೆ. ಇಂತಹ ಸಂದರ್ಭದಲ್ಲಿ ಮಹರಾಷ್ಟ್ರ ಸರ್ಕಾರ ZOO ಕಟ್ಟಲು ಮುಂದಾದರೆ ಮತ್ತಷ್ಟು ಮರಗಳು ಕೊನೆಯುಸಿರೆಳೆಯುತ್ತವೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಆರೇ ಉಳಿಸುವ ಹೋರಾಟ ಕೇವಲ 2700 ಮರಗಳನ್ನು ಉಳಿಸಲು ಮಾತ್ರವಲ್ಲ ಎಂದು ಪರಿಸರ ಕಾರ್ಯಕರ್ತರು ಪದೇ ಪದೇ ಎಚ್ಚರಿಸಿದ್ದರು. ಅದು ರಿಯಲ್ ಎಸ್ಟೇಟ್ ಮಾಫಿಯಾದ “ವಿಕಾಸ”ಕ್ಕಾಗಿ ಇಡೀ ಅರಣ್ಯವನ್ನು ಅಪಹರಿಸುವ ಯೋಜನೆಯಾಗಿತ್ತು! ಎಂದು ಅವರು ಟ್ವಿಟ್ಟರ್‌ ಮತ್ತು ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...