Homeಚಳವಳಿಆರೇ ಅರಣ್ಯ ಪ್ರದೇಶದಲ್ಲಿ ZOO ಕಟ್ಟಲು ಮುಂದಾದ ಸರ್ಕಾರ: ಬೀಳಲಿದೆ ಮತ್ತಷ್ಟು ಮರಗಳಿಗೆ ಕೊಡಲಿಯೇಟು...

ಆರೇ ಅರಣ್ಯ ಪ್ರದೇಶದಲ್ಲಿ ZOO ಕಟ್ಟಲು ಮುಂದಾದ ಸರ್ಕಾರ: ಬೀಳಲಿದೆ ಮತ್ತಷ್ಟು ಮರಗಳಿಗೆ ಕೊಡಲಿಯೇಟು…

- Advertisement -
- Advertisement -

ಮುಂಬೈ ಮೆಟ್ರೋಗೆ ಕಾರ್ ಶೆಡ್ ನಿರ್ಮಿಸುವ ಸಲುವಾಗಿ ತೀವ್ರ ವಿರೋಧದ ನಡುವೆಯೂ ಸಾವಿರಾರು ಮರಗಳು ಧರೆಗುರಿಳಿದ್ದು ಮಾಸುವ ಮುನ್ನವೇ ಮಹಾರಾಷ್ಟ್ರ ಸರ್ಕಾರ ಮತ್ತೆ ಮರಗಳ ಮಾರಣಹೋಮಕ್ಕೆ ಸಿದ್ದವಾಗಿದೆ. ಆರೇ ಅರಣ್ಯದಲ್ಲಿ ಈ ಬಾರಿ ಮೃಗಾಲಯ ಕಟ್ಟಲು ಮುಂದಾಗಿರುವ ಸರ್ಕಾರ ಅದಕ್ಕೆ ಮತ್ತಷ್ಟು ಮರಗಳನ್ನು ಕಡಿಯಲು ನಿರ್ಧರಿಸಿದೆ.

ಅರಣ್ಯ ಇಲಾಖೆಯ ಅಕ್ಟೋಬರ್ 9ರ ಸರ್ಕಾರದ ನಿರ್ಣಯದಲ್ಲಿ ಮೃಗಾಲಯದ ಸಂರಕ್ಷಣಾ ಗೋಡೆಗೆ 60 ಲಕ್ಷ ರೂ. ಬಿಡುಗಡೆ ಮಾಡಿದ್ದು ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ.

ಗೋರೆಗಾಂವ್‌ನ ಆರೇ ಮಿಲ್ಕ್ ಕಾಲೋನಿಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಮೃಗಾಲಯವನ್ನು ಸ್ಥಾಪಿಸಲು ರಾಜ್ಯವು ಜುಲೈನಲ್ಲಿ ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಯೊಂದಿಗೆ ಒಪ್ಪಂದ ಮಾಡಿಕೊಂಡಿತ್ತು.

2009 ರಿಂದ ಚರ್ಚೆಯಲ್ಲಿರುವ ಈ ಯೋಜನೆಗೆ ಸರ್ಕಾರವು ನಗರದ ಹಸಿರು ಶ್ವಾಸಕೋಶ ಎಂದು ಕರೆಯುವ ಆರೇಯಲ್ಲಿ 190 ಎಕರೆ ಭೂಮಿಯನ್ನು ಹಸ್ತಾಂತರಿಸಿದೆ. ಯೋಜನೆಯ ಒಟ್ಟು ವೆಚ್ಚ 500 ಕೋಟಿ ರೂ ಎಂದು ಅಂದಾಜಿಸಲಾಗಿದೆ ಮತ್ತು ಇದು ನಾಲ್ಕರಿಂದ ಐದು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಈ ಹಿಂದೆಯೇ ಸ್ಥಳೀಯರು, ಆದಿವಾಸಿಗಳು, ಮೃಗಾಲಯಕ್ಕಾಗಿ ಆರೇಯಲ್ಲಿ ಜಮೀನನ್ನು ಮಂಜೂರು ಮಾಡುವ ರಾಜ್ಯ ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ಪ್ರತಿಭಟಿಸಿದ್ದರು. ಮೃಗಾಲಯವನ್ನು ನಿರ್ಮಿಸುವ ಬದಲು ಇಡೀ ಆರೇ ಕಾಲೋನಿಯನ್ನು ಮೀಸಲು ಅರಣ್ಯವೆಂದು ಘೋಷಿಸಬೇಕು ಮತ್ತು ನೆರೆಯ ಎಸ್‌ಜಿಎನ್‌ಪಿ ಯೊಂದಿಗೆ ವಿಲೀನಗೊಳಿಸಬೇಕು ಎಂದು ಪರಿಸರವಾದಿಗಳು ಒತ್ತಾಯಿಸಿದ್ದರು.

ಈ ಮೊದಲು ಮೆಟ್ರೋಗಾಗಿ ಆರೇ ಪ್ರದೇಶದ ಮರಗಳನ್ನು ಕಡಿಯಬಾರದೆಂದು ಪರಿಸರಪ್ರೇಮಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಹಾರಾಷ್ಟ್ರ ಹೈಕೋರ್ಟ್‌‌ ತಿರಸ್ಕರಿಸಿತ್ತು. ಕೂಡಲೇ ಮಹಾರಾಷ್ಟ್ರ ಸರ್ಕಾರ ಮರಗಳ ಮಾರಣಹೋಮ ನಡೆಸಿತ್ತು. ಸುಪ್ರೀಂ ಕೋರ್ಟ್‌ ಅಕ್ಟೋಬರ್ 16ರವರೆಗೂ ಮರಗಳನ್ನು ಕಡಿಯಬಾರದೆಂದು ಆದೇಶ ನೀಡುವಷ್ಟರಲ್ಲಿ ಬಹುಪಾಲು ಮರಗಳು ಅಸುನೀಗಿದ್ದವು.

ಸುಪ್ರೀಂ ನೀಡಿದ್ದ ಗಡುವು ಇಂದು ಮುಗಿದ ಕೂಡಲೇ ಮಹಾರಾಷ್ಟ್ರ ಸರ್ಕಾರ ಮತ್ತೆ ಮರಗಳನ್ನು ಉರುಳಿಸಲು ಸಜ್ಜಾಗಿದೆ. ಆರೇ ಅರಣ್ಯದಲ್ಲಿಯೇ ZOO ಕಟ್ಟಲು ಮುಂದಾಗಿದೆ. ಇದಕ್ಕೆ ಬಹಳಷ್ಟು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಖ್ಯಾತ ಯೂಟ್ಯೂಬರ್ ಧೃವ್‌ರಾಠೀ “ಮೆಟ್ರೋ ನೆಟ್ಟಿದ್ದ 1800 ಗಿಡಗಳಲ್ಲಿ 800 ಗಿಡಗಳು ಈಗಾಗಲೇ ಸತ್ತುಹೋಗಿವೆ. ಇಂತಹ ಸಂದರ್ಭದಲ್ಲಿ ಮಹರಾಷ್ಟ್ರ ಸರ್ಕಾರ ZOO ಕಟ್ಟಲು ಮುಂದಾದರೆ ಮತ್ತಷ್ಟು ಮರಗಳು ಕೊನೆಯುಸಿರೆಳೆಯುತ್ತವೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಆರೇ ಉಳಿಸುವ ಹೋರಾಟ ಕೇವಲ 2700 ಮರಗಳನ್ನು ಉಳಿಸಲು ಮಾತ್ರವಲ್ಲ ಎಂದು ಪರಿಸರ ಕಾರ್ಯಕರ್ತರು ಪದೇ ಪದೇ ಎಚ್ಚರಿಸಿದ್ದರು. ಅದು ರಿಯಲ್ ಎಸ್ಟೇಟ್ ಮಾಫಿಯಾದ “ವಿಕಾಸ”ಕ್ಕಾಗಿ ಇಡೀ ಅರಣ್ಯವನ್ನು ಅಪಹರಿಸುವ ಯೋಜನೆಯಾಗಿತ್ತು! ಎಂದು ಅವರು ಟ್ವಿಟ್ಟರ್‌ ಮತ್ತು ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...