Homeಮುಖಪುಟಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

- Advertisement -
- Advertisement -

ಬಿಜೆಪಿಯೊಳಗಿನ ಬಿಜೆಪಿ ಟೀಕಾಕಾರದಲ್ಲಿ ಹೆಸರುವಾಸಿಯಾದ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮತ್ತೆ ಪ್ರಧಾನಿ ಮೋದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊರೊನಾ ಪ್ರಕರಣಗಳ ಸಂಖ್ಯೆ ಕುಸಿಯುತ್ತಿದ್ದಾಗ ಅಂಧಭಕ್ತರು ಮತ್ತು ಗಂಧಭಕ್ತರು ಆ ಕ್ರೆಡಿಟ್‌ ಅನ್ನು ಯಾರಿಗೆ ಕೊಟ್ಟಿದ್ದರು? ಈಗ ಮತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ ಅಂದರೆ ಅದಕ್ಕೆ ಅವರೇ ಕಾರಣರಲ್ಲವೇ ಎಂದು ಪರೋಕ್ಷವಾಗಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಕೊರೊನಾ ವೈರಸ್ ಸಾಂಕ್ರಾಮಿಕದ ಕಾಲದಲ್ಲಿ 2020ರ ಏಪ್ರಿಲ್ ಮಧ್ಯಭಾಗದಿಂದ ದಿನಕ್ಕೆ ಒಂದು ಲಕ್ಷ ಪ್ರಕರಣಗಳು ವರದಿಯಾಗುತ್ತಿದ್ದವು ಮತ್ತು ನವೆಂಬರ್ ವೇಳೆಗೆ 10 ಸಾವಿರಕ್ಕೆ ಇಳಿದಿದ್ದವು. ಆಗ ಅಂಧಭಕ್ತರು ಮತ್ತು ಗಂಧಭಕ್ತರಿಂದ ಅದರ ಕ್ರೆಡಿಟ್ ಪಡೆದವರು ಯಾರು? ಈಗ ಕೊರೊನಾ ಪ್ರಕರಣಗಳು ದಿನಕ್ಕೆ ಒಂದು ಲಕ್ಷ ವರದಿಯಾಗುತ್ತಿವೆ ಅಂದರೆ ಅದರ ಕ್ರೆಡಿಟ್ ಯಾರಿಗೆ ಕೊಡಬೇಕು?” ಎಂದು ವ್ಯಂಗ್ಯವಾಡಿದ್ದಾರೆ.

ಮುಂದುವರಿದು ಗುರುದತ್ ಶೆಟ್ಟಿ ಕಾರ್ಕಳ ಎಂಬುವವರು ಮಾಡಿರುವ ಟ್ವೀಟ್ ಅನ್ನು ಸುಬ್ರಮಣಿಯನ್ ಸ್ವಾಮಿ ರೀಟ್ವೀಟ್ ಮಾಡಿದ್ದಾರೆ. ಅದರಲ್ಲಿ

“ಅಂಧಭಕ್ತ ಅಭಿವೃದ್ದಿ ಮಂಡಳಿ ಸದಸ್ಯರ ಪ್ರಕಾರ,
60 ವರ್ಷಗಳ ಕಾಲ ಕಾಂಗ್ರೆಸ್ ಆಡಳಿತವಿದ್ದರಿಂದ ಕೊರೊನಾ ಈಗ ಹೆಚ್ಚುತ್ತಿದೆ.
ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗುವುದು ಮಾತ್ರ ಮೋದಿಯವರಿಂದ.
ಮತ್ತು ಇದನ್ನು ಪ್ರಶ್ನಿಸುವ ಜನರು ರಾಷ್ಟ್ರ ವಿರೋಧಿಗಳು,
ಚೀನಾದ ಬಗ್ಗೆ ಮೌನವಾಗಿರುವುದು ಒಂದು ಮಾಸ್ಟರ್ ಸ್ಟ್ರೋಕ್,
ಪಾಕ್‌ಗೆ ಪತ್ರ ಬರೆಯುವುದರ ಕುರಿತು ಕಾದುನೋಡಬೇಕು” ಎಂದು ವ್ಯಂಗ್ಯವಾಡಲಾಗಿದೆ.

ಕಳೆದ ತಿಂಗಳು ಸಹ ಸುಬ್ರಮಣಿಯನ್ ಸ್ವಾಮಿ ತಮಿಳುನಾಡು ಬಿಜೆಪಿಯ ಪರಿಸ್ಥಿತಿ ಕುರಿತು ವ್ಯಂಗ್ಯವಾಡಿದ್ದರು. “ಬಿಜೆಪಿ-ಎಐಎಡಿಎಂಕೆ ಜೊತೆಗಿನ ಮೈತ್ರಿಯಲ್ಲಿ ಬಿಜೆಪಿಗೆ 20 ಸ್ಥಾನಗಳು ದೊರೆತಿದ್ದು ಅದರಲ್ಲಿ 18 ಸ್ಥಾನಗಳನ್ನು ಬೇರೆ ಪಕ್ಷದಿಂದ ಬಿಜೆಪಿಗೆ ಪಕ್ಷಾಂತರಗೊಂಡವರಿಗೆ ಟಿಕೆಟ್ ನೀಡಲಾಗಿದೆ. ಇದು ಬಿಜೆಪಿ ತಲುಪಿರುವ ಪರಿಸ್ಥಿತಿ” ಎಂದು ಗೇಲಿ ಮಾಡಿದ್ದರು.


ಇದನ್ನೂ ಓದಿ: 18 ಪಕ್ಷಾಂತರಿಗಳಿಗೆ ಟಿಕೆಟ್, ತಮಿಳುನಾಡು BJP ಪರಿಸ್ಥಿತಿ ಇಲ್ಲಿಗೆ ಬಂತು: ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...