Homeಮುಖಪುಟಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

- Advertisement -
- Advertisement -

ಬಿಜೆಪಿಯೊಳಗಿನ ಬಿಜೆಪಿ ಟೀಕಾಕಾರದಲ್ಲಿ ಹೆಸರುವಾಸಿಯಾದ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮತ್ತೆ ಪ್ರಧಾನಿ ಮೋದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊರೊನಾ ಪ್ರಕರಣಗಳ ಸಂಖ್ಯೆ ಕುಸಿಯುತ್ತಿದ್ದಾಗ ಅಂಧಭಕ್ತರು ಮತ್ತು ಗಂಧಭಕ್ತರು ಆ ಕ್ರೆಡಿಟ್‌ ಅನ್ನು ಯಾರಿಗೆ ಕೊಟ್ಟಿದ್ದರು? ಈಗ ಮತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ ಅಂದರೆ ಅದಕ್ಕೆ ಅವರೇ ಕಾರಣರಲ್ಲವೇ ಎಂದು ಪರೋಕ್ಷವಾಗಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಕೊರೊನಾ ವೈರಸ್ ಸಾಂಕ್ರಾಮಿಕದ ಕಾಲದಲ್ಲಿ 2020ರ ಏಪ್ರಿಲ್ ಮಧ್ಯಭಾಗದಿಂದ ದಿನಕ್ಕೆ ಒಂದು ಲಕ್ಷ ಪ್ರಕರಣಗಳು ವರದಿಯಾಗುತ್ತಿದ್ದವು ಮತ್ತು ನವೆಂಬರ್ ವೇಳೆಗೆ 10 ಸಾವಿರಕ್ಕೆ ಇಳಿದಿದ್ದವು. ಆಗ ಅಂಧಭಕ್ತರು ಮತ್ತು ಗಂಧಭಕ್ತರಿಂದ ಅದರ ಕ್ರೆಡಿಟ್ ಪಡೆದವರು ಯಾರು? ಈಗ ಕೊರೊನಾ ಪ್ರಕರಣಗಳು ದಿನಕ್ಕೆ ಒಂದು ಲಕ್ಷ ವರದಿಯಾಗುತ್ತಿವೆ ಅಂದರೆ ಅದರ ಕ್ರೆಡಿಟ್ ಯಾರಿಗೆ ಕೊಡಬೇಕು?” ಎಂದು ವ್ಯಂಗ್ಯವಾಡಿದ್ದಾರೆ.

ಮುಂದುವರಿದು ಗುರುದತ್ ಶೆಟ್ಟಿ ಕಾರ್ಕಳ ಎಂಬುವವರು ಮಾಡಿರುವ ಟ್ವೀಟ್ ಅನ್ನು ಸುಬ್ರಮಣಿಯನ್ ಸ್ವಾಮಿ ರೀಟ್ವೀಟ್ ಮಾಡಿದ್ದಾರೆ. ಅದರಲ್ಲಿ

“ಅಂಧಭಕ್ತ ಅಭಿವೃದ್ದಿ ಮಂಡಳಿ ಸದಸ್ಯರ ಪ್ರಕಾರ,
60 ವರ್ಷಗಳ ಕಾಲ ಕಾಂಗ್ರೆಸ್ ಆಡಳಿತವಿದ್ದರಿಂದ ಕೊರೊನಾ ಈಗ ಹೆಚ್ಚುತ್ತಿದೆ.
ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗುವುದು ಮಾತ್ರ ಮೋದಿಯವರಿಂದ.
ಮತ್ತು ಇದನ್ನು ಪ್ರಶ್ನಿಸುವ ಜನರು ರಾಷ್ಟ್ರ ವಿರೋಧಿಗಳು,
ಚೀನಾದ ಬಗ್ಗೆ ಮೌನವಾಗಿರುವುದು ಒಂದು ಮಾಸ್ಟರ್ ಸ್ಟ್ರೋಕ್,
ಪಾಕ್‌ಗೆ ಪತ್ರ ಬರೆಯುವುದರ ಕುರಿತು ಕಾದುನೋಡಬೇಕು” ಎಂದು ವ್ಯಂಗ್ಯವಾಡಲಾಗಿದೆ.

ಕಳೆದ ತಿಂಗಳು ಸಹ ಸುಬ್ರಮಣಿಯನ್ ಸ್ವಾಮಿ ತಮಿಳುನಾಡು ಬಿಜೆಪಿಯ ಪರಿಸ್ಥಿತಿ ಕುರಿತು ವ್ಯಂಗ್ಯವಾಡಿದ್ದರು. “ಬಿಜೆಪಿ-ಎಐಎಡಿಎಂಕೆ ಜೊತೆಗಿನ ಮೈತ್ರಿಯಲ್ಲಿ ಬಿಜೆಪಿಗೆ 20 ಸ್ಥಾನಗಳು ದೊರೆತಿದ್ದು ಅದರಲ್ಲಿ 18 ಸ್ಥಾನಗಳನ್ನು ಬೇರೆ ಪಕ್ಷದಿಂದ ಬಿಜೆಪಿಗೆ ಪಕ್ಷಾಂತರಗೊಂಡವರಿಗೆ ಟಿಕೆಟ್ ನೀಡಲಾಗಿದೆ. ಇದು ಬಿಜೆಪಿ ತಲುಪಿರುವ ಪರಿಸ್ಥಿತಿ” ಎಂದು ಗೇಲಿ ಮಾಡಿದ್ದರು.


ಇದನ್ನೂ ಓದಿ: 18 ಪಕ್ಷಾಂತರಿಗಳಿಗೆ ಟಿಕೆಟ್, ತಮಿಳುನಾಡು BJP ಪರಿಸ್ಥಿತಿ ಇಲ್ಲಿಗೆ ಬಂತು: ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...