Homeಮುಖಪುಟಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

- Advertisement -
- Advertisement -

ಬಿಜೆಪಿಯೊಳಗಿನ ಬಿಜೆಪಿ ಟೀಕಾಕಾರದಲ್ಲಿ ಹೆಸರುವಾಸಿಯಾದ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮತ್ತೆ ಪ್ರಧಾನಿ ಮೋದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊರೊನಾ ಪ್ರಕರಣಗಳ ಸಂಖ್ಯೆ ಕುಸಿಯುತ್ತಿದ್ದಾಗ ಅಂಧಭಕ್ತರು ಮತ್ತು ಗಂಧಭಕ್ತರು ಆ ಕ್ರೆಡಿಟ್‌ ಅನ್ನು ಯಾರಿಗೆ ಕೊಟ್ಟಿದ್ದರು? ಈಗ ಮತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ ಅಂದರೆ ಅದಕ್ಕೆ ಅವರೇ ಕಾರಣರಲ್ಲವೇ ಎಂದು ಪರೋಕ್ಷವಾಗಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಕೊರೊನಾ ವೈರಸ್ ಸಾಂಕ್ರಾಮಿಕದ ಕಾಲದಲ್ಲಿ 2020ರ ಏಪ್ರಿಲ್ ಮಧ್ಯಭಾಗದಿಂದ ದಿನಕ್ಕೆ ಒಂದು ಲಕ್ಷ ಪ್ರಕರಣಗಳು ವರದಿಯಾಗುತ್ತಿದ್ದವು ಮತ್ತು ನವೆಂಬರ್ ವೇಳೆಗೆ 10 ಸಾವಿರಕ್ಕೆ ಇಳಿದಿದ್ದವು. ಆಗ ಅಂಧಭಕ್ತರು ಮತ್ತು ಗಂಧಭಕ್ತರಿಂದ ಅದರ ಕ್ರೆಡಿಟ್ ಪಡೆದವರು ಯಾರು? ಈಗ ಕೊರೊನಾ ಪ್ರಕರಣಗಳು ದಿನಕ್ಕೆ ಒಂದು ಲಕ್ಷ ವರದಿಯಾಗುತ್ತಿವೆ ಅಂದರೆ ಅದರ ಕ್ರೆಡಿಟ್ ಯಾರಿಗೆ ಕೊಡಬೇಕು?” ಎಂದು ವ್ಯಂಗ್ಯವಾಡಿದ್ದಾರೆ.

ಮುಂದುವರಿದು ಗುರುದತ್ ಶೆಟ್ಟಿ ಕಾರ್ಕಳ ಎಂಬುವವರು ಮಾಡಿರುವ ಟ್ವೀಟ್ ಅನ್ನು ಸುಬ್ರಮಣಿಯನ್ ಸ್ವಾಮಿ ರೀಟ್ವೀಟ್ ಮಾಡಿದ್ದಾರೆ. ಅದರಲ್ಲಿ

“ಅಂಧಭಕ್ತ ಅಭಿವೃದ್ದಿ ಮಂಡಳಿ ಸದಸ್ಯರ ಪ್ರಕಾರ,
60 ವರ್ಷಗಳ ಕಾಲ ಕಾಂಗ್ರೆಸ್ ಆಡಳಿತವಿದ್ದರಿಂದ ಕೊರೊನಾ ಈಗ ಹೆಚ್ಚುತ್ತಿದೆ.
ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗುವುದು ಮಾತ್ರ ಮೋದಿಯವರಿಂದ.
ಮತ್ತು ಇದನ್ನು ಪ್ರಶ್ನಿಸುವ ಜನರು ರಾಷ್ಟ್ರ ವಿರೋಧಿಗಳು,
ಚೀನಾದ ಬಗ್ಗೆ ಮೌನವಾಗಿರುವುದು ಒಂದು ಮಾಸ್ಟರ್ ಸ್ಟ್ರೋಕ್,
ಪಾಕ್‌ಗೆ ಪತ್ರ ಬರೆಯುವುದರ ಕುರಿತು ಕಾದುನೋಡಬೇಕು” ಎಂದು ವ್ಯಂಗ್ಯವಾಡಲಾಗಿದೆ.

ಕಳೆದ ತಿಂಗಳು ಸಹ ಸುಬ್ರಮಣಿಯನ್ ಸ್ವಾಮಿ ತಮಿಳುನಾಡು ಬಿಜೆಪಿಯ ಪರಿಸ್ಥಿತಿ ಕುರಿತು ವ್ಯಂಗ್ಯವಾಡಿದ್ದರು. “ಬಿಜೆಪಿ-ಎಐಎಡಿಎಂಕೆ ಜೊತೆಗಿನ ಮೈತ್ರಿಯಲ್ಲಿ ಬಿಜೆಪಿಗೆ 20 ಸ್ಥಾನಗಳು ದೊರೆತಿದ್ದು ಅದರಲ್ಲಿ 18 ಸ್ಥಾನಗಳನ್ನು ಬೇರೆ ಪಕ್ಷದಿಂದ ಬಿಜೆಪಿಗೆ ಪಕ್ಷಾಂತರಗೊಂಡವರಿಗೆ ಟಿಕೆಟ್ ನೀಡಲಾಗಿದೆ. ಇದು ಬಿಜೆಪಿ ತಲುಪಿರುವ ಪರಿಸ್ಥಿತಿ” ಎಂದು ಗೇಲಿ ಮಾಡಿದ್ದರು.


ಇದನ್ನೂ ಓದಿ: 18 ಪಕ್ಷಾಂತರಿಗಳಿಗೆ ಟಿಕೆಟ್, ತಮಿಳುನಾಡು BJP ಪರಿಸ್ಥಿತಿ ಇಲ್ಲಿಗೆ ಬಂತು: ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...