Homeಅಂಕಣಗಳುಈಗ ಮೋದಿ ಹೊಗಳಬೇಕಾಗ್ಯದೆ ಏನು ಮಾಡನಾ?

ಈಗ ಮೋದಿ ಹೊಗಳಬೇಕಾಗ್ಯದೆ ಏನು ಮಾಡನಾ?

- Advertisement -
- Advertisement -

ಸಿದ್ದು ಬಿದ್ದುಬಿದ್ದು ನಕ್ಕ ಪರಿಗೆ ಎದುರಿದ್ದವರು ದಂಗುಬಡಿದು ಹೋದರಂತಲ್ಲಾ. ನಕ್ಕ ವ್ಯಕ್ತಿಯೇ ಕಾರಣ ಹೇಳಲೆಂದು ಜನ ಕಾಯ್ದ ನಂತರ ಬಾಯಿಬಿಟ್ಟ ಸಿದ್ದು “ಅಲ್ಲಾ ನಾನು ಕ್ಷೇತ್ರ ಹುಡಕ್ಕೊಂಡು ತಿರುಗ್ತಿನಿ, ನನಗೆ ಕ್ಷೇತ್ರವೇ ಇಲ್ಲ ಅಂತ ಆಡಿಕೊಳ್ಳುತ್ತಿದ್ದ ಈಶ್ವರಪ್ಪನಿಗೆ ಈಗ ಕ್ಷೇತ್ರನೂ ಇಲ್ಲ ಟಿಕೇಟೂ ಇಲ್ದಂಗಾಯ್ತು” ಅಂತ ಮತ್ತೆಮತ್ತೆ ನಕ್ಕರಂತಲ್ಲಾ. ಆಗ ಈಶ್ವರಪ್ಪನ ಮುಖ ನೆನಪಿಸಕೊಂಡವರಿಗೆ, ಈಶ್ವರಪ್ಪನ ಮುಖ ಅಡ್ವಾನಿ ಮುಖದಂತಾಗಿರುವುದು ಜ್ಞಾಪಕಕ್ಕೆ ಬಂದು, ಅದೇ ತರಹ ಸೋಮಣ್ಣನ ಮುಖವು ಆಗಿರುವುದನ್ನು ಕಂಡರಂತಲ್ಲಾ. ಸೋಮಣ್ಣನನ್ನ ಹಿಡಿದು ಸಿದ್ದು ಎದುರು ಹಾಕಲು ಕಾರಣ ಕೇಳಿದರೆ, ಸೋಮಣ್ಣ ವಸತಿ ಖಾತೆಯಿಂದ ಭಾರಿ ಲಾಭ ಮಾಡಿದ್ದು ಅದನ್ನೆಲ್ಲಾ ಸಿದ್ದು ಎದುರು ಸುರಿದು ಗೆದ್ದು ಬರಬೇಕೆಂದು ಆಜ್ಞಾಪಿಸಿದ್ದಾರಂತಲ್ಲಾ. ಇದೇನೆ ಆದರೂ ಕರ್ನಾಟಕದ ಬಿಜೆಪಿಯನ್ನ ಹೈಜಾಕ್ ಮಾಡಿರುವ ಬ್ರಾಹ್ಮಣರು 12 ಜನ ಸ್ವಜಾತಿ ಜನರಿಗೆ ಟಿಕೆಟ್ ಕೊಟ್ಟಿರುವುದಲ್ಲದೆ, 12 ಜನ ಮಹಿಳೆಯರಿಗೂ ಕೊಟ್ಟು ಗೆದ್ದು ಬಂದ ನಂತರ ಮುಂದೆ ಪ್ರಹಲ್ಲಾದ ಜೋಶಿಗೆ ಜೈ ಅನ್ನಬೇಕಂತಲ್ಲಾ, ಥೂತ್ತೇರಿ.

******

ಕರ್ನಾಟಕದ ರಾಜಕಾರಣ ಶ್ಯಾನೆ ಚಮತ್ಕಾರ ಮತ್ತು ಮನರಂಜನೆಯಿಂದ ಕೂಡಿದೆಯಲ್ಲಾ. ಅಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಂತಿದ್ದ ಸುಮಲತಾರನ್ನ ಶಿವರಾಮೇಗೌಡ “ಈಕೆ ಮಾಯಾಂಗನೆ, ಕರ್ನಾಟಕದ ಜಯಲಲಿತ ಆಯ್ತಿನಿ ಅಂತ ಬಂದವುಳೆ, ಈಕೆಯನ್ನು ಸೋಲಿಸಿ ಕಳಸೋದು ನಮ್ಮ ಧರ್ಮ” ಎಂದಿದ್ದರು. ಹಾಗೆ ಹೇಳಿದ್ದ ಶಿ.ರಾ ಗೌಡ ಈಗ ತಮ್ಮ ಹೆಂಡತಿಗೆ ಬಿಜೆಪಿ ಟಿಕೆಟ್ ಪಡೆದು, ಅಕಾಲದಲ್ಲಿ ಬಿಜೆಪಿ ಸೇರಿಕೊಂಡ ಸುಮಲತಾ ಮನೆಗೆ ಹೋಗಿ ನನ್ನ ಹೆಂಡತಿ ಪರ ಕ್ಯಾನ್‌ವಾಸು ಮಾಡಿ ಎಂದು ಕರೆದಾಗ, ನನ್ನನ್ನ ಮಾಯಾಂಗನೆ ಅಂದ್ರಲ್ಲ ಶಿವರಾಮೇಗೌಡ್ರೆ ಎಂದು ಸುಮಲತಾ ಮೂದಲಿಸಿದರಂತಲ್ಲಾ. ಆಗ ಶಿ.ರಾ ಗೌಡ “ನಾನು ಆತರ ಅಂದಿದ್ಕೆ ಮೇಡಂ, ಜನ ನನ್ನ ಬಗ್ಗೆ ಸಿಟ್ಟಾಗಿ ನಿಮಗೆ ಓಟಾಕಿ ಗೆಲ್ಲಿಸಿದ್ರು” ಅಂದರಂತಲ್ಲಾ. ಇದರಿಂದ ಖುಷಿಯಾದ ಸುಮಲಾತ ಶಿ.ರಾ ಗೌಡರ ಜೊತೆ ನಾಗಮಂಗಲಕ್ಕೆ ಬಂದು ನಾಮಪತ್ರ ಸಲ್ಲಿಸುವ ಕಾರ್ಯಕ್ರಮದ ಮೆರವಣಿಗೆಯಲ್ಲಿ ಭಾಗವಹಿಸಿದ್ದನ್ನ ನೋಡಿದ ಜನ ಕಣ್ತುಂಬಿಕೊಂಡರಂತಲ್ಲಾ, ಥೂತ್ತೇರಿ.

****

ಸುಮಲಾತರ ಜೊತೆ ರಾಜಕಾರಣ ಆರಂಭಿಸಿರುವ ಶಿ.ರಾ ಗೌಡರನ್ನು ಮಾತನಾಡಿಸಿದರೆ ಹೇಗೆ ಅನ್ನಿಸಿ ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್‌ಟೋನ್ ’ಕ್ಯಂಚಾಲೊ ಮಚ್ಚಾಲೊ ಯಂಗವುಲಾ ನಿನ್ ಕನ್ಸ್‌ಗಳು ಗೋವಿಂದಾ ಜೇಡ್ರಳ್ಳಿ ಯಂಗವುಲಾ ನಿನ್ ಡವ್‌ಗಳು..’

“ಹಲೋ ಯಾರು?”

“ನಾನು ಸಾರ್ ಯಾಹು.”

“ಯಾವು ಎಲ್ಲಿದ್ದಿರಿ?”

“ಬೆಂಗಳೂರಲ್ಲಿದ್ದಿನಿ ಸಾ.”

“ನಾನು ನಾಗಮಂಗಲದಲ್ಲಿದ್ದಿನಿ, ಕಾರು ಕಳುಸ್ತಿನಿ ಬನ್ನಿ.”

“ಆ ಮ್ಯಾಲೆ ಬತ್ತಿನಿ ಸಾರ್. ಈಗೊಂದೆರಡು ಪ್ರಶ್ನೆ..”

“ಕೇಳಿ, ಸ್ವಲುಪ ತೊಂದ್ರೆಲಿದ್ದಿನಿ. ಡ್ಯಾಮೇಜು ಮಾಡೊತರ ಬರಿಬ್ಯಾಡಿ.”

“ನೀವು ಏನೇಳ್ತಿರಿ ಅದ್ನೆ ಬರಿತಿವಿ ಸಾರ್.”

“ಅದ್ನೆ ಬರ್‍ಯದಿದ್ರೆ, ಹೇಳಿದ ಮಾತನೆ ಕೇಳೋದಿದ್ರೆ ಹಿಂಗ್ಯಾಕ್ರಿ ಆಗದು? ನಾನೇನೋ ನಂಬಿಕೆಯಿಂದ ಆಡಿದ ಮಾತನ್ನೇ ವ್ಯಾಟ್ಸಾಪಿಗಾಕಿ ಜೆಡಿಎಸ್‌ನಿಂದ ತಗಿಯಂಗೆ ಮಾಡಿದ್ರು. ಅಂಗಾಗಿ ಯಾರ್ನ ನಂಬದು ಬುಡುದು ಅನ್ನಂಗಾಗ್ಯದೆ.”

“ನೀವು ಮಾದೇಗೌಡ್ರಿಗೆ ಬೈದ ಮಾತು ನಿಜ ಅಲವಾ ಸಾರ್?”

“ನಿಜ ಕಂಡ್ರಿ.”

“ಅವುರು ಮಂಡ್ಯ ಜಿಲ್ಲೆಯ ಧೀಮಂತ ರಾಜಕಾರಣಿ. ಅವುರ ಬಗ್ಗೆ ಹೇಳಿದ್ದು ತಪ್ಪಲವಾ?”

“ಏನು ತಪ್ಪರಿ? ಅವುನು ನನ್ನ ಬಗ್ಗೆ ಅಂಗೇ ನ್ಯಡಕಂಡಾ ಅದ್ಕೆ ಅಂಗಂದೆ.”

“ಆಡಿದ ಮಾತಿಗೆ ಪನಿಸ್ಮೆಂಟಾಯ್ತಲ್ಲ ಬುಡಿ. ಈಗ ಬಿಜೆಪಿ ಟಿಕೆಟ್ ತಗಳದೆ ಹೆಂಡತಿಗೆ ಕೊಡಿಸಿದ್ರಲ್ಲ ಯಾಕೇ?”

“ನಾನ್ಯಾಕೆ ಕೊಡಸನ್ರಿ? ಅವುರೆ ಕೊಟ್ಟವುರೆ ಪಾಪ. ನನ್ನೆಡ್ತಿಗೆ ಇಷ್ಟ ಇರಲಿಲ್ಲ. ಯರಡು ಮೂರು ದಿನ ಅತ್ತಲು.”

“ಯಾಕ್ ಸಾರ್?”

“ಅವುಳಿಗೆ ರಾಜಕಾರಣ ಎಷ್ಟು ರಿಸ್ಕು ಅನ್ನದು ಗೊತ್ತು. ಅಂತ ರಿಸ್ಕು ನನಿಗೆ ಬ್ಯಾಡ, ನಿನ್ನ ರಾಜಕಾರಣವೇ ಸಾಕು ಅಂತ ಹೇಳ್ತಳೆ. ಅದ್ಕೆ ಬಲವಂತವಾಗಿ ಯಳಕಂಡು ತಿರುಗ್ತ ಇದ್ದಿನಿ.”

“ಗೆಲ್ತಿರ ಸಾರ್?”

“ಗೆಲ್ತಿದ್ದೊ ಕಂಡ್ರಿ. ಆ ಫೈಟರ್ ರವಿ ಬ್ಯಾರೆ ನಿಂತವುನೆ.”

“ಅವುನ್ಯಾಕ್ ನಿಂತ ಸಾ?”

“ಆ ಸುರೇಶ್‌ಗೌಡನ್ನ ತಗಿಬೇಕಂತೆ.”

“ನಿಮ್ಮ ಅಪೇಕ್ಷೆನೂ ಅದೇ ಅಂತಲ್ಲ ಸಾರ್?”

“ಊ ಕಂಡ್ರಿ ಅವುನ್ನ ತಂದಿದ್ದು ನಾನೆಯ. ನನಿಗೆ ಗೂಟ ಮಡಗಿದ. ನಾನಾಡಿದ ಮಾತ ವ್ಯಾಟ್ಸಾಪ್‌ಗಾಕಿ ನನ್ನನ್ನ ಕೇವಲ ಯರಡು ಮೂರು ಗಂಟೆಲಿ ಜೆಡಿಎಸ್ ನಿಂದ ತಗಿಯಂಗೆ ಮಾಡಿದ. ಅದಕ್ಕೆ ನಾವು ಸೋಲದಕಿಂತ ಅವುನು ಗೆಲ್ಲಬಾರ್ದು.”

“ಸುರೇಶ್‌ಗೌಡನ್ನ ಸೋಲಿಸದು ಕಷ್ಟ. ಅವುರತ್ರ ಬಾರಿ ದುಡ್ಡದೆ.”

ಇದನ್ನೂ ಓದಿ: ಮೂರು ಪಾರ್ಟಿಯವರೂ ಅಳುತ್ತಿದ್ದಾರಲ್ಲಾ!

“ಇಲ್ಲಿ ನಮಿಗೂ ಪಾರ್ಟಿ ಕೊಡುತ್ತೆ. ಈ ಬಿಜೆಪಿ ಹೇಳಿಕಳೊ ಅಂತ ಯಾವ ಕ್ಯಲಸನೂ ಮಾಡಿಲ್ಲ. ಅದ್ಕೆ ಓಟರ್‌ನ ಸೆಳೆಯಕ್ಕೆ ಯಾವ್ಯಾವ ತಂತ್ರ ಬೇಕೋ ಅದನ್ನೆಲ್ಲ ಮಾಡ್ತಾ ಐತೆ. ನಾವೇನು ಹೆದರತಾಯಿಲ್ಲ.”

“ಅಂದಾಜೆಷ್ಟು ಕೊಡಬಹುದು?”

“ಗೆಲ್ಲಕ್ಕೆ ಎಷ್ಟು ಬೇಕು ಅಂತ ಹೇಳ್ತಿವಿ, ಅಷ್ಟು ಕೊಡ್ತರೆ.”

“ಫೈಟರ್ ರವಿನು ಖರ್ಚು ಮಾಡ್ತಾ ಇದಾನಲ್ಲವ?”

“ಅವುನು ಕೊಡ್ತನೆ, ಸುರೇಶ್‌ಗೌಡನೂ ಕೊಡ್ತನೆ, ಅಷ್ಟೊ ಇಷ್ಟೊ ಚಲುವರಾಯಸ್ವಾಮಿನೂ ಕೊಡ್ತನೆ. ನಾವು ಯಲ್ಲಾರಿಗಿಂತ್ಲೂ ಜಾಸ್ತಿ ಕೊಡ್ತಿವಿ”

“ಕಾರ್ಯಕರ್ತರಿಗೆ ಇನ್ನ ಕೊಟ್ಟಿಲ್ಲವಂತೆ?”

“ಈಗ್ಲೆ ಕೊಟ್ರೆ ಈಸಗಂಡು ಹೋಗಿಬುಡ್ತವೆ. ಅದ್ಕೆ ಕಡೆಲಿ ಕೊಡನ ಅಂತ ಇದ್ದಿವಿ.”

“ಬೇರೆ ಕಡೆ ಹೋದ್ರೆ?”

“ಹಿಡಕಂಡು ಬಂದ ನಾಯಿ ಪರಾರಿ ಆಗಕ್ಕೆ ಟೈಂ ನೋಡ್ತವೆ. ಅಂಗೆ ಹೋಗವೇನಾರ ಇದ್ರೆ ಹೋಗ್ಲಿ. ಕಡೆಲಿ ಉಳಕತ್ತವಲ್ಲ ಅವುಕೆ ಕೊಡನ ಅಂತ ಇದ್ದಿನಿ.”

“ನೀವು ಮದ್ಲಿಂದ ಜಾತಿವಾದಿಯಲ್ಲ, ಕುಟುಂಬವಾದಿನೂ ಅಲ್ಲ. ಆದ್ರು ಬಿಜೆಪಿಲ್ಯಂಗೆ ಇರತಿರಿ?”

“ಇರಬಹುದು. ಅಂತ ಎಸ್ಸೆಂ ಕೃಷ್ಣನೆ ಬಿಜೆಪಿಗೋಗಲಿಲ್ಲವಾ? ಇನ್ನ ಶೆಟ್ಟರ್‌ಗಿಂತ ಬಿಜೆಪಿ ಮನ್ಸ ಇದ್ದನೆ? ಇವತ್ತು ಸೋನಿಯಾ ರಾಹುಲ್ ಅನ್ನಬೇಕಾಗ್ಯದೆ. ನಮ್ಮದ್ಯಲ್ಲ ಡ್ರಾಮ. ಪಾತ್ರಕ್ಕೆ ತಕ್ಕಂಗೆ ವೇಶ ಹಾಕ್ಕಂಡು ಕುಣಿತಿವಿ. ಸುಸ್ತಾದಾಗ ವೇಶ ಬಿಚ್ಚಿ ಯಸಿತಿವಿ. ನನ್ನ ಶರೀರ ನಿಜವೇ ಹೊರತು ವೇಶ ಸುಳ್ಳು. ಸುಧಾ ಸೋತ್ರು, ಬಿಜೆಪಿಗಳು ನನಿಗೇನಾರ ಅನುಕೂಲ ಮಾಡ್ತರೆ. ಅಂಗಾಗಿ ನಾನೀಗ ಬಿಜೆಪಿ.”

“ಮೋದಿಗೆ ಹಿಗ್ಗಾಮುಗ್ಗ ಬೋದಿದ್ರಿ.”

“ಈಗ ಬೈಯ್ಯಕ್ಕಾಯ್ತದ? ಹೊಗಳಬೇಕೆ ನಮ್ಮಣೆಬರ ಏನು ಮಾಡನ..”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...