Homeಅಂಕಣಗಳುಈಗ ಮೋದಿ ಹೊಗಳಬೇಕಾಗ್ಯದೆ ಏನು ಮಾಡನಾ?

ಈಗ ಮೋದಿ ಹೊಗಳಬೇಕಾಗ್ಯದೆ ಏನು ಮಾಡನಾ?

- Advertisement -
- Advertisement -

ಸಿದ್ದು ಬಿದ್ದುಬಿದ್ದು ನಕ್ಕ ಪರಿಗೆ ಎದುರಿದ್ದವರು ದಂಗುಬಡಿದು ಹೋದರಂತಲ್ಲಾ. ನಕ್ಕ ವ್ಯಕ್ತಿಯೇ ಕಾರಣ ಹೇಳಲೆಂದು ಜನ ಕಾಯ್ದ ನಂತರ ಬಾಯಿಬಿಟ್ಟ ಸಿದ್ದು “ಅಲ್ಲಾ ನಾನು ಕ್ಷೇತ್ರ ಹುಡಕ್ಕೊಂಡು ತಿರುಗ್ತಿನಿ, ನನಗೆ ಕ್ಷೇತ್ರವೇ ಇಲ್ಲ ಅಂತ ಆಡಿಕೊಳ್ಳುತ್ತಿದ್ದ ಈಶ್ವರಪ್ಪನಿಗೆ ಈಗ ಕ್ಷೇತ್ರನೂ ಇಲ್ಲ ಟಿಕೇಟೂ ಇಲ್ದಂಗಾಯ್ತು” ಅಂತ ಮತ್ತೆಮತ್ತೆ ನಕ್ಕರಂತಲ್ಲಾ. ಆಗ ಈಶ್ವರಪ್ಪನ ಮುಖ ನೆನಪಿಸಕೊಂಡವರಿಗೆ, ಈಶ್ವರಪ್ಪನ ಮುಖ ಅಡ್ವಾನಿ ಮುಖದಂತಾಗಿರುವುದು ಜ್ಞಾಪಕಕ್ಕೆ ಬಂದು, ಅದೇ ತರಹ ಸೋಮಣ್ಣನ ಮುಖವು ಆಗಿರುವುದನ್ನು ಕಂಡರಂತಲ್ಲಾ. ಸೋಮಣ್ಣನನ್ನ ಹಿಡಿದು ಸಿದ್ದು ಎದುರು ಹಾಕಲು ಕಾರಣ ಕೇಳಿದರೆ, ಸೋಮಣ್ಣ ವಸತಿ ಖಾತೆಯಿಂದ ಭಾರಿ ಲಾಭ ಮಾಡಿದ್ದು ಅದನ್ನೆಲ್ಲಾ ಸಿದ್ದು ಎದುರು ಸುರಿದು ಗೆದ್ದು ಬರಬೇಕೆಂದು ಆಜ್ಞಾಪಿಸಿದ್ದಾರಂತಲ್ಲಾ. ಇದೇನೆ ಆದರೂ ಕರ್ನಾಟಕದ ಬಿಜೆಪಿಯನ್ನ ಹೈಜಾಕ್ ಮಾಡಿರುವ ಬ್ರಾಹ್ಮಣರು 12 ಜನ ಸ್ವಜಾತಿ ಜನರಿಗೆ ಟಿಕೆಟ್ ಕೊಟ್ಟಿರುವುದಲ್ಲದೆ, 12 ಜನ ಮಹಿಳೆಯರಿಗೂ ಕೊಟ್ಟು ಗೆದ್ದು ಬಂದ ನಂತರ ಮುಂದೆ ಪ್ರಹಲ್ಲಾದ ಜೋಶಿಗೆ ಜೈ ಅನ್ನಬೇಕಂತಲ್ಲಾ, ಥೂತ್ತೇರಿ.

******

ಕರ್ನಾಟಕದ ರಾಜಕಾರಣ ಶ್ಯಾನೆ ಚಮತ್ಕಾರ ಮತ್ತು ಮನರಂಜನೆಯಿಂದ ಕೂಡಿದೆಯಲ್ಲಾ. ಅಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಂತಿದ್ದ ಸುಮಲತಾರನ್ನ ಶಿವರಾಮೇಗೌಡ “ಈಕೆ ಮಾಯಾಂಗನೆ, ಕರ್ನಾಟಕದ ಜಯಲಲಿತ ಆಯ್ತಿನಿ ಅಂತ ಬಂದವುಳೆ, ಈಕೆಯನ್ನು ಸೋಲಿಸಿ ಕಳಸೋದು ನಮ್ಮ ಧರ್ಮ” ಎಂದಿದ್ದರು. ಹಾಗೆ ಹೇಳಿದ್ದ ಶಿ.ರಾ ಗೌಡ ಈಗ ತಮ್ಮ ಹೆಂಡತಿಗೆ ಬಿಜೆಪಿ ಟಿಕೆಟ್ ಪಡೆದು, ಅಕಾಲದಲ್ಲಿ ಬಿಜೆಪಿ ಸೇರಿಕೊಂಡ ಸುಮಲತಾ ಮನೆಗೆ ಹೋಗಿ ನನ್ನ ಹೆಂಡತಿ ಪರ ಕ್ಯಾನ್‌ವಾಸು ಮಾಡಿ ಎಂದು ಕರೆದಾಗ, ನನ್ನನ್ನ ಮಾಯಾಂಗನೆ ಅಂದ್ರಲ್ಲ ಶಿವರಾಮೇಗೌಡ್ರೆ ಎಂದು ಸುಮಲತಾ ಮೂದಲಿಸಿದರಂತಲ್ಲಾ. ಆಗ ಶಿ.ರಾ ಗೌಡ “ನಾನು ಆತರ ಅಂದಿದ್ಕೆ ಮೇಡಂ, ಜನ ನನ್ನ ಬಗ್ಗೆ ಸಿಟ್ಟಾಗಿ ನಿಮಗೆ ಓಟಾಕಿ ಗೆಲ್ಲಿಸಿದ್ರು” ಅಂದರಂತಲ್ಲಾ. ಇದರಿಂದ ಖುಷಿಯಾದ ಸುಮಲಾತ ಶಿ.ರಾ ಗೌಡರ ಜೊತೆ ನಾಗಮಂಗಲಕ್ಕೆ ಬಂದು ನಾಮಪತ್ರ ಸಲ್ಲಿಸುವ ಕಾರ್ಯಕ್ರಮದ ಮೆರವಣಿಗೆಯಲ್ಲಿ ಭಾಗವಹಿಸಿದ್ದನ್ನ ನೋಡಿದ ಜನ ಕಣ್ತುಂಬಿಕೊಂಡರಂತಲ್ಲಾ, ಥೂತ್ತೇರಿ.

****

ಸುಮಲಾತರ ಜೊತೆ ರಾಜಕಾರಣ ಆರಂಭಿಸಿರುವ ಶಿ.ರಾ ಗೌಡರನ್ನು ಮಾತನಾಡಿಸಿದರೆ ಹೇಗೆ ಅನ್ನಿಸಿ ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್‌ಟೋನ್ ’ಕ್ಯಂಚಾಲೊ ಮಚ್ಚಾಲೊ ಯಂಗವುಲಾ ನಿನ್ ಕನ್ಸ್‌ಗಳು ಗೋವಿಂದಾ ಜೇಡ್ರಳ್ಳಿ ಯಂಗವುಲಾ ನಿನ್ ಡವ್‌ಗಳು..’

“ಹಲೋ ಯಾರು?”

“ನಾನು ಸಾರ್ ಯಾಹು.”

“ಯಾವು ಎಲ್ಲಿದ್ದಿರಿ?”

“ಬೆಂಗಳೂರಲ್ಲಿದ್ದಿನಿ ಸಾ.”

“ನಾನು ನಾಗಮಂಗಲದಲ್ಲಿದ್ದಿನಿ, ಕಾರು ಕಳುಸ್ತಿನಿ ಬನ್ನಿ.”

“ಆ ಮ್ಯಾಲೆ ಬತ್ತಿನಿ ಸಾರ್. ಈಗೊಂದೆರಡು ಪ್ರಶ್ನೆ..”

“ಕೇಳಿ, ಸ್ವಲುಪ ತೊಂದ್ರೆಲಿದ್ದಿನಿ. ಡ್ಯಾಮೇಜು ಮಾಡೊತರ ಬರಿಬ್ಯಾಡಿ.”

“ನೀವು ಏನೇಳ್ತಿರಿ ಅದ್ನೆ ಬರಿತಿವಿ ಸಾರ್.”

“ಅದ್ನೆ ಬರ್‍ಯದಿದ್ರೆ, ಹೇಳಿದ ಮಾತನೆ ಕೇಳೋದಿದ್ರೆ ಹಿಂಗ್ಯಾಕ್ರಿ ಆಗದು? ನಾನೇನೋ ನಂಬಿಕೆಯಿಂದ ಆಡಿದ ಮಾತನ್ನೇ ವ್ಯಾಟ್ಸಾಪಿಗಾಕಿ ಜೆಡಿಎಸ್‌ನಿಂದ ತಗಿಯಂಗೆ ಮಾಡಿದ್ರು. ಅಂಗಾಗಿ ಯಾರ್ನ ನಂಬದು ಬುಡುದು ಅನ್ನಂಗಾಗ್ಯದೆ.”

“ನೀವು ಮಾದೇಗೌಡ್ರಿಗೆ ಬೈದ ಮಾತು ನಿಜ ಅಲವಾ ಸಾರ್?”

“ನಿಜ ಕಂಡ್ರಿ.”

“ಅವುರು ಮಂಡ್ಯ ಜಿಲ್ಲೆಯ ಧೀಮಂತ ರಾಜಕಾರಣಿ. ಅವುರ ಬಗ್ಗೆ ಹೇಳಿದ್ದು ತಪ್ಪಲವಾ?”

“ಏನು ತಪ್ಪರಿ? ಅವುನು ನನ್ನ ಬಗ್ಗೆ ಅಂಗೇ ನ್ಯಡಕಂಡಾ ಅದ್ಕೆ ಅಂಗಂದೆ.”

“ಆಡಿದ ಮಾತಿಗೆ ಪನಿಸ್ಮೆಂಟಾಯ್ತಲ್ಲ ಬುಡಿ. ಈಗ ಬಿಜೆಪಿ ಟಿಕೆಟ್ ತಗಳದೆ ಹೆಂಡತಿಗೆ ಕೊಡಿಸಿದ್ರಲ್ಲ ಯಾಕೇ?”

“ನಾನ್ಯಾಕೆ ಕೊಡಸನ್ರಿ? ಅವುರೆ ಕೊಟ್ಟವುರೆ ಪಾಪ. ನನ್ನೆಡ್ತಿಗೆ ಇಷ್ಟ ಇರಲಿಲ್ಲ. ಯರಡು ಮೂರು ದಿನ ಅತ್ತಲು.”

“ಯಾಕ್ ಸಾರ್?”

“ಅವುಳಿಗೆ ರಾಜಕಾರಣ ಎಷ್ಟು ರಿಸ್ಕು ಅನ್ನದು ಗೊತ್ತು. ಅಂತ ರಿಸ್ಕು ನನಿಗೆ ಬ್ಯಾಡ, ನಿನ್ನ ರಾಜಕಾರಣವೇ ಸಾಕು ಅಂತ ಹೇಳ್ತಳೆ. ಅದ್ಕೆ ಬಲವಂತವಾಗಿ ಯಳಕಂಡು ತಿರುಗ್ತ ಇದ್ದಿನಿ.”

“ಗೆಲ್ತಿರ ಸಾರ್?”

“ಗೆಲ್ತಿದ್ದೊ ಕಂಡ್ರಿ. ಆ ಫೈಟರ್ ರವಿ ಬ್ಯಾರೆ ನಿಂತವುನೆ.”

“ಅವುನ್ಯಾಕ್ ನಿಂತ ಸಾ?”

“ಆ ಸುರೇಶ್‌ಗೌಡನ್ನ ತಗಿಬೇಕಂತೆ.”

“ನಿಮ್ಮ ಅಪೇಕ್ಷೆನೂ ಅದೇ ಅಂತಲ್ಲ ಸಾರ್?”

“ಊ ಕಂಡ್ರಿ ಅವುನ್ನ ತಂದಿದ್ದು ನಾನೆಯ. ನನಿಗೆ ಗೂಟ ಮಡಗಿದ. ನಾನಾಡಿದ ಮಾತ ವ್ಯಾಟ್ಸಾಪ್‌ಗಾಕಿ ನನ್ನನ್ನ ಕೇವಲ ಯರಡು ಮೂರು ಗಂಟೆಲಿ ಜೆಡಿಎಸ್ ನಿಂದ ತಗಿಯಂಗೆ ಮಾಡಿದ. ಅದಕ್ಕೆ ನಾವು ಸೋಲದಕಿಂತ ಅವುನು ಗೆಲ್ಲಬಾರ್ದು.”

“ಸುರೇಶ್‌ಗೌಡನ್ನ ಸೋಲಿಸದು ಕಷ್ಟ. ಅವುರತ್ರ ಬಾರಿ ದುಡ್ಡದೆ.”

ಇದನ್ನೂ ಓದಿ: ಮೂರು ಪಾರ್ಟಿಯವರೂ ಅಳುತ್ತಿದ್ದಾರಲ್ಲಾ!

“ಇಲ್ಲಿ ನಮಿಗೂ ಪಾರ್ಟಿ ಕೊಡುತ್ತೆ. ಈ ಬಿಜೆಪಿ ಹೇಳಿಕಳೊ ಅಂತ ಯಾವ ಕ್ಯಲಸನೂ ಮಾಡಿಲ್ಲ. ಅದ್ಕೆ ಓಟರ್‌ನ ಸೆಳೆಯಕ್ಕೆ ಯಾವ್ಯಾವ ತಂತ್ರ ಬೇಕೋ ಅದನ್ನೆಲ್ಲ ಮಾಡ್ತಾ ಐತೆ. ನಾವೇನು ಹೆದರತಾಯಿಲ್ಲ.”

“ಅಂದಾಜೆಷ್ಟು ಕೊಡಬಹುದು?”

“ಗೆಲ್ಲಕ್ಕೆ ಎಷ್ಟು ಬೇಕು ಅಂತ ಹೇಳ್ತಿವಿ, ಅಷ್ಟು ಕೊಡ್ತರೆ.”

“ಫೈಟರ್ ರವಿನು ಖರ್ಚು ಮಾಡ್ತಾ ಇದಾನಲ್ಲವ?”

“ಅವುನು ಕೊಡ್ತನೆ, ಸುರೇಶ್‌ಗೌಡನೂ ಕೊಡ್ತನೆ, ಅಷ್ಟೊ ಇಷ್ಟೊ ಚಲುವರಾಯಸ್ವಾಮಿನೂ ಕೊಡ್ತನೆ. ನಾವು ಯಲ್ಲಾರಿಗಿಂತ್ಲೂ ಜಾಸ್ತಿ ಕೊಡ್ತಿವಿ”

“ಕಾರ್ಯಕರ್ತರಿಗೆ ಇನ್ನ ಕೊಟ್ಟಿಲ್ಲವಂತೆ?”

“ಈಗ್ಲೆ ಕೊಟ್ರೆ ಈಸಗಂಡು ಹೋಗಿಬುಡ್ತವೆ. ಅದ್ಕೆ ಕಡೆಲಿ ಕೊಡನ ಅಂತ ಇದ್ದಿವಿ.”

“ಬೇರೆ ಕಡೆ ಹೋದ್ರೆ?”

“ಹಿಡಕಂಡು ಬಂದ ನಾಯಿ ಪರಾರಿ ಆಗಕ್ಕೆ ಟೈಂ ನೋಡ್ತವೆ. ಅಂಗೆ ಹೋಗವೇನಾರ ಇದ್ರೆ ಹೋಗ್ಲಿ. ಕಡೆಲಿ ಉಳಕತ್ತವಲ್ಲ ಅವುಕೆ ಕೊಡನ ಅಂತ ಇದ್ದಿನಿ.”

“ನೀವು ಮದ್ಲಿಂದ ಜಾತಿವಾದಿಯಲ್ಲ, ಕುಟುಂಬವಾದಿನೂ ಅಲ್ಲ. ಆದ್ರು ಬಿಜೆಪಿಲ್ಯಂಗೆ ಇರತಿರಿ?”

“ಇರಬಹುದು. ಅಂತ ಎಸ್ಸೆಂ ಕೃಷ್ಣನೆ ಬಿಜೆಪಿಗೋಗಲಿಲ್ಲವಾ? ಇನ್ನ ಶೆಟ್ಟರ್‌ಗಿಂತ ಬಿಜೆಪಿ ಮನ್ಸ ಇದ್ದನೆ? ಇವತ್ತು ಸೋನಿಯಾ ರಾಹುಲ್ ಅನ್ನಬೇಕಾಗ್ಯದೆ. ನಮ್ಮದ್ಯಲ್ಲ ಡ್ರಾಮ. ಪಾತ್ರಕ್ಕೆ ತಕ್ಕಂಗೆ ವೇಶ ಹಾಕ್ಕಂಡು ಕುಣಿತಿವಿ. ಸುಸ್ತಾದಾಗ ವೇಶ ಬಿಚ್ಚಿ ಯಸಿತಿವಿ. ನನ್ನ ಶರೀರ ನಿಜವೇ ಹೊರತು ವೇಶ ಸುಳ್ಳು. ಸುಧಾ ಸೋತ್ರು, ಬಿಜೆಪಿಗಳು ನನಿಗೇನಾರ ಅನುಕೂಲ ಮಾಡ್ತರೆ. ಅಂಗಾಗಿ ನಾನೀಗ ಬಿಜೆಪಿ.”

“ಮೋದಿಗೆ ಹಿಗ್ಗಾಮುಗ್ಗ ಬೋದಿದ್ರಿ.”

“ಈಗ ಬೈಯ್ಯಕ್ಕಾಯ್ತದ? ಹೊಗಳಬೇಕೆ ನಮ್ಮಣೆಬರ ಏನು ಮಾಡನ..”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...