Homeಅಂಕಣಗಳುಈಗ ಮೋದಿ ಹೊಗಳಬೇಕಾಗ್ಯದೆ ಏನು ಮಾಡನಾ?

ಈಗ ಮೋದಿ ಹೊಗಳಬೇಕಾಗ್ಯದೆ ಏನು ಮಾಡನಾ?

- Advertisement -
- Advertisement -

ಸಿದ್ದು ಬಿದ್ದುಬಿದ್ದು ನಕ್ಕ ಪರಿಗೆ ಎದುರಿದ್ದವರು ದಂಗುಬಡಿದು ಹೋದರಂತಲ್ಲಾ. ನಕ್ಕ ವ್ಯಕ್ತಿಯೇ ಕಾರಣ ಹೇಳಲೆಂದು ಜನ ಕಾಯ್ದ ನಂತರ ಬಾಯಿಬಿಟ್ಟ ಸಿದ್ದು “ಅಲ್ಲಾ ನಾನು ಕ್ಷೇತ್ರ ಹುಡಕ್ಕೊಂಡು ತಿರುಗ್ತಿನಿ, ನನಗೆ ಕ್ಷೇತ್ರವೇ ಇಲ್ಲ ಅಂತ ಆಡಿಕೊಳ್ಳುತ್ತಿದ್ದ ಈಶ್ವರಪ್ಪನಿಗೆ ಈಗ ಕ್ಷೇತ್ರನೂ ಇಲ್ಲ ಟಿಕೇಟೂ ಇಲ್ದಂಗಾಯ್ತು” ಅಂತ ಮತ್ತೆಮತ್ತೆ ನಕ್ಕರಂತಲ್ಲಾ. ಆಗ ಈಶ್ವರಪ್ಪನ ಮುಖ ನೆನಪಿಸಕೊಂಡವರಿಗೆ, ಈಶ್ವರಪ್ಪನ ಮುಖ ಅಡ್ವಾನಿ ಮುಖದಂತಾಗಿರುವುದು ಜ್ಞಾಪಕಕ್ಕೆ ಬಂದು, ಅದೇ ತರಹ ಸೋಮಣ್ಣನ ಮುಖವು ಆಗಿರುವುದನ್ನು ಕಂಡರಂತಲ್ಲಾ. ಸೋಮಣ್ಣನನ್ನ ಹಿಡಿದು ಸಿದ್ದು ಎದುರು ಹಾಕಲು ಕಾರಣ ಕೇಳಿದರೆ, ಸೋಮಣ್ಣ ವಸತಿ ಖಾತೆಯಿಂದ ಭಾರಿ ಲಾಭ ಮಾಡಿದ್ದು ಅದನ್ನೆಲ್ಲಾ ಸಿದ್ದು ಎದುರು ಸುರಿದು ಗೆದ್ದು ಬರಬೇಕೆಂದು ಆಜ್ಞಾಪಿಸಿದ್ದಾರಂತಲ್ಲಾ. ಇದೇನೆ ಆದರೂ ಕರ್ನಾಟಕದ ಬಿಜೆಪಿಯನ್ನ ಹೈಜಾಕ್ ಮಾಡಿರುವ ಬ್ರಾಹ್ಮಣರು 12 ಜನ ಸ್ವಜಾತಿ ಜನರಿಗೆ ಟಿಕೆಟ್ ಕೊಟ್ಟಿರುವುದಲ್ಲದೆ, 12 ಜನ ಮಹಿಳೆಯರಿಗೂ ಕೊಟ್ಟು ಗೆದ್ದು ಬಂದ ನಂತರ ಮುಂದೆ ಪ್ರಹಲ್ಲಾದ ಜೋಶಿಗೆ ಜೈ ಅನ್ನಬೇಕಂತಲ್ಲಾ, ಥೂತ್ತೇರಿ.

******

ಕರ್ನಾಟಕದ ರಾಜಕಾರಣ ಶ್ಯಾನೆ ಚಮತ್ಕಾರ ಮತ್ತು ಮನರಂಜನೆಯಿಂದ ಕೂಡಿದೆಯಲ್ಲಾ. ಅಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಂತಿದ್ದ ಸುಮಲತಾರನ್ನ ಶಿವರಾಮೇಗೌಡ “ಈಕೆ ಮಾಯಾಂಗನೆ, ಕರ್ನಾಟಕದ ಜಯಲಲಿತ ಆಯ್ತಿನಿ ಅಂತ ಬಂದವುಳೆ, ಈಕೆಯನ್ನು ಸೋಲಿಸಿ ಕಳಸೋದು ನಮ್ಮ ಧರ್ಮ” ಎಂದಿದ್ದರು. ಹಾಗೆ ಹೇಳಿದ್ದ ಶಿ.ರಾ ಗೌಡ ಈಗ ತಮ್ಮ ಹೆಂಡತಿಗೆ ಬಿಜೆಪಿ ಟಿಕೆಟ್ ಪಡೆದು, ಅಕಾಲದಲ್ಲಿ ಬಿಜೆಪಿ ಸೇರಿಕೊಂಡ ಸುಮಲತಾ ಮನೆಗೆ ಹೋಗಿ ನನ್ನ ಹೆಂಡತಿ ಪರ ಕ್ಯಾನ್‌ವಾಸು ಮಾಡಿ ಎಂದು ಕರೆದಾಗ, ನನ್ನನ್ನ ಮಾಯಾಂಗನೆ ಅಂದ್ರಲ್ಲ ಶಿವರಾಮೇಗೌಡ್ರೆ ಎಂದು ಸುಮಲತಾ ಮೂದಲಿಸಿದರಂತಲ್ಲಾ. ಆಗ ಶಿ.ರಾ ಗೌಡ “ನಾನು ಆತರ ಅಂದಿದ್ಕೆ ಮೇಡಂ, ಜನ ನನ್ನ ಬಗ್ಗೆ ಸಿಟ್ಟಾಗಿ ನಿಮಗೆ ಓಟಾಕಿ ಗೆಲ್ಲಿಸಿದ್ರು” ಅಂದರಂತಲ್ಲಾ. ಇದರಿಂದ ಖುಷಿಯಾದ ಸುಮಲಾತ ಶಿ.ರಾ ಗೌಡರ ಜೊತೆ ನಾಗಮಂಗಲಕ್ಕೆ ಬಂದು ನಾಮಪತ್ರ ಸಲ್ಲಿಸುವ ಕಾರ್ಯಕ್ರಮದ ಮೆರವಣಿಗೆಯಲ್ಲಿ ಭಾಗವಹಿಸಿದ್ದನ್ನ ನೋಡಿದ ಜನ ಕಣ್ತುಂಬಿಕೊಂಡರಂತಲ್ಲಾ, ಥೂತ್ತೇರಿ.

****

ಸುಮಲಾತರ ಜೊತೆ ರಾಜಕಾರಣ ಆರಂಭಿಸಿರುವ ಶಿ.ರಾ ಗೌಡರನ್ನು ಮಾತನಾಡಿಸಿದರೆ ಹೇಗೆ ಅನ್ನಿಸಿ ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್‌ಟೋನ್ ’ಕ್ಯಂಚಾಲೊ ಮಚ್ಚಾಲೊ ಯಂಗವುಲಾ ನಿನ್ ಕನ್ಸ್‌ಗಳು ಗೋವಿಂದಾ ಜೇಡ್ರಳ್ಳಿ ಯಂಗವುಲಾ ನಿನ್ ಡವ್‌ಗಳು..’

“ಹಲೋ ಯಾರು?”

“ನಾನು ಸಾರ್ ಯಾಹು.”

“ಯಾವು ಎಲ್ಲಿದ್ದಿರಿ?”

“ಬೆಂಗಳೂರಲ್ಲಿದ್ದಿನಿ ಸಾ.”

“ನಾನು ನಾಗಮಂಗಲದಲ್ಲಿದ್ದಿನಿ, ಕಾರು ಕಳುಸ್ತಿನಿ ಬನ್ನಿ.”

“ಆ ಮ್ಯಾಲೆ ಬತ್ತಿನಿ ಸಾರ್. ಈಗೊಂದೆರಡು ಪ್ರಶ್ನೆ..”

“ಕೇಳಿ, ಸ್ವಲುಪ ತೊಂದ್ರೆಲಿದ್ದಿನಿ. ಡ್ಯಾಮೇಜು ಮಾಡೊತರ ಬರಿಬ್ಯಾಡಿ.”

“ನೀವು ಏನೇಳ್ತಿರಿ ಅದ್ನೆ ಬರಿತಿವಿ ಸಾರ್.”

“ಅದ್ನೆ ಬರ್‍ಯದಿದ್ರೆ, ಹೇಳಿದ ಮಾತನೆ ಕೇಳೋದಿದ್ರೆ ಹಿಂಗ್ಯಾಕ್ರಿ ಆಗದು? ನಾನೇನೋ ನಂಬಿಕೆಯಿಂದ ಆಡಿದ ಮಾತನ್ನೇ ವ್ಯಾಟ್ಸಾಪಿಗಾಕಿ ಜೆಡಿಎಸ್‌ನಿಂದ ತಗಿಯಂಗೆ ಮಾಡಿದ್ರು. ಅಂಗಾಗಿ ಯಾರ್ನ ನಂಬದು ಬುಡುದು ಅನ್ನಂಗಾಗ್ಯದೆ.”

“ನೀವು ಮಾದೇಗೌಡ್ರಿಗೆ ಬೈದ ಮಾತು ನಿಜ ಅಲವಾ ಸಾರ್?”

“ನಿಜ ಕಂಡ್ರಿ.”

“ಅವುರು ಮಂಡ್ಯ ಜಿಲ್ಲೆಯ ಧೀಮಂತ ರಾಜಕಾರಣಿ. ಅವುರ ಬಗ್ಗೆ ಹೇಳಿದ್ದು ತಪ್ಪಲವಾ?”

“ಏನು ತಪ್ಪರಿ? ಅವುನು ನನ್ನ ಬಗ್ಗೆ ಅಂಗೇ ನ್ಯಡಕಂಡಾ ಅದ್ಕೆ ಅಂಗಂದೆ.”

“ಆಡಿದ ಮಾತಿಗೆ ಪನಿಸ್ಮೆಂಟಾಯ್ತಲ್ಲ ಬುಡಿ. ಈಗ ಬಿಜೆಪಿ ಟಿಕೆಟ್ ತಗಳದೆ ಹೆಂಡತಿಗೆ ಕೊಡಿಸಿದ್ರಲ್ಲ ಯಾಕೇ?”

“ನಾನ್ಯಾಕೆ ಕೊಡಸನ್ರಿ? ಅವುರೆ ಕೊಟ್ಟವುರೆ ಪಾಪ. ನನ್ನೆಡ್ತಿಗೆ ಇಷ್ಟ ಇರಲಿಲ್ಲ. ಯರಡು ಮೂರು ದಿನ ಅತ್ತಲು.”

“ಯಾಕ್ ಸಾರ್?”

“ಅವುಳಿಗೆ ರಾಜಕಾರಣ ಎಷ್ಟು ರಿಸ್ಕು ಅನ್ನದು ಗೊತ್ತು. ಅಂತ ರಿಸ್ಕು ನನಿಗೆ ಬ್ಯಾಡ, ನಿನ್ನ ರಾಜಕಾರಣವೇ ಸಾಕು ಅಂತ ಹೇಳ್ತಳೆ. ಅದ್ಕೆ ಬಲವಂತವಾಗಿ ಯಳಕಂಡು ತಿರುಗ್ತ ಇದ್ದಿನಿ.”

“ಗೆಲ್ತಿರ ಸಾರ್?”

“ಗೆಲ್ತಿದ್ದೊ ಕಂಡ್ರಿ. ಆ ಫೈಟರ್ ರವಿ ಬ್ಯಾರೆ ನಿಂತವುನೆ.”

“ಅವುನ್ಯಾಕ್ ನಿಂತ ಸಾ?”

“ಆ ಸುರೇಶ್‌ಗೌಡನ್ನ ತಗಿಬೇಕಂತೆ.”

“ನಿಮ್ಮ ಅಪೇಕ್ಷೆನೂ ಅದೇ ಅಂತಲ್ಲ ಸಾರ್?”

“ಊ ಕಂಡ್ರಿ ಅವುನ್ನ ತಂದಿದ್ದು ನಾನೆಯ. ನನಿಗೆ ಗೂಟ ಮಡಗಿದ. ನಾನಾಡಿದ ಮಾತ ವ್ಯಾಟ್ಸಾಪ್‌ಗಾಕಿ ನನ್ನನ್ನ ಕೇವಲ ಯರಡು ಮೂರು ಗಂಟೆಲಿ ಜೆಡಿಎಸ್ ನಿಂದ ತಗಿಯಂಗೆ ಮಾಡಿದ. ಅದಕ್ಕೆ ನಾವು ಸೋಲದಕಿಂತ ಅವುನು ಗೆಲ್ಲಬಾರ್ದು.”

“ಸುರೇಶ್‌ಗೌಡನ್ನ ಸೋಲಿಸದು ಕಷ್ಟ. ಅವುರತ್ರ ಬಾರಿ ದುಡ್ಡದೆ.”

ಇದನ್ನೂ ಓದಿ: ಮೂರು ಪಾರ್ಟಿಯವರೂ ಅಳುತ್ತಿದ್ದಾರಲ್ಲಾ!

“ಇಲ್ಲಿ ನಮಿಗೂ ಪಾರ್ಟಿ ಕೊಡುತ್ತೆ. ಈ ಬಿಜೆಪಿ ಹೇಳಿಕಳೊ ಅಂತ ಯಾವ ಕ್ಯಲಸನೂ ಮಾಡಿಲ್ಲ. ಅದ್ಕೆ ಓಟರ್‌ನ ಸೆಳೆಯಕ್ಕೆ ಯಾವ್ಯಾವ ತಂತ್ರ ಬೇಕೋ ಅದನ್ನೆಲ್ಲ ಮಾಡ್ತಾ ಐತೆ. ನಾವೇನು ಹೆದರತಾಯಿಲ್ಲ.”

“ಅಂದಾಜೆಷ್ಟು ಕೊಡಬಹುದು?”

“ಗೆಲ್ಲಕ್ಕೆ ಎಷ್ಟು ಬೇಕು ಅಂತ ಹೇಳ್ತಿವಿ, ಅಷ್ಟು ಕೊಡ್ತರೆ.”

“ಫೈಟರ್ ರವಿನು ಖರ್ಚು ಮಾಡ್ತಾ ಇದಾನಲ್ಲವ?”

“ಅವುನು ಕೊಡ್ತನೆ, ಸುರೇಶ್‌ಗೌಡನೂ ಕೊಡ್ತನೆ, ಅಷ್ಟೊ ಇಷ್ಟೊ ಚಲುವರಾಯಸ್ವಾಮಿನೂ ಕೊಡ್ತನೆ. ನಾವು ಯಲ್ಲಾರಿಗಿಂತ್ಲೂ ಜಾಸ್ತಿ ಕೊಡ್ತಿವಿ”

“ಕಾರ್ಯಕರ್ತರಿಗೆ ಇನ್ನ ಕೊಟ್ಟಿಲ್ಲವಂತೆ?”

“ಈಗ್ಲೆ ಕೊಟ್ರೆ ಈಸಗಂಡು ಹೋಗಿಬುಡ್ತವೆ. ಅದ್ಕೆ ಕಡೆಲಿ ಕೊಡನ ಅಂತ ಇದ್ದಿವಿ.”

“ಬೇರೆ ಕಡೆ ಹೋದ್ರೆ?”

“ಹಿಡಕಂಡು ಬಂದ ನಾಯಿ ಪರಾರಿ ಆಗಕ್ಕೆ ಟೈಂ ನೋಡ್ತವೆ. ಅಂಗೆ ಹೋಗವೇನಾರ ಇದ್ರೆ ಹೋಗ್ಲಿ. ಕಡೆಲಿ ಉಳಕತ್ತವಲ್ಲ ಅವುಕೆ ಕೊಡನ ಅಂತ ಇದ್ದಿನಿ.”

“ನೀವು ಮದ್ಲಿಂದ ಜಾತಿವಾದಿಯಲ್ಲ, ಕುಟುಂಬವಾದಿನೂ ಅಲ್ಲ. ಆದ್ರು ಬಿಜೆಪಿಲ್ಯಂಗೆ ಇರತಿರಿ?”

“ಇರಬಹುದು. ಅಂತ ಎಸ್ಸೆಂ ಕೃಷ್ಣನೆ ಬಿಜೆಪಿಗೋಗಲಿಲ್ಲವಾ? ಇನ್ನ ಶೆಟ್ಟರ್‌ಗಿಂತ ಬಿಜೆಪಿ ಮನ್ಸ ಇದ್ದನೆ? ಇವತ್ತು ಸೋನಿಯಾ ರಾಹುಲ್ ಅನ್ನಬೇಕಾಗ್ಯದೆ. ನಮ್ಮದ್ಯಲ್ಲ ಡ್ರಾಮ. ಪಾತ್ರಕ್ಕೆ ತಕ್ಕಂಗೆ ವೇಶ ಹಾಕ್ಕಂಡು ಕುಣಿತಿವಿ. ಸುಸ್ತಾದಾಗ ವೇಶ ಬಿಚ್ಚಿ ಯಸಿತಿವಿ. ನನ್ನ ಶರೀರ ನಿಜವೇ ಹೊರತು ವೇಶ ಸುಳ್ಳು. ಸುಧಾ ಸೋತ್ರು, ಬಿಜೆಪಿಗಳು ನನಿಗೇನಾರ ಅನುಕೂಲ ಮಾಡ್ತರೆ. ಅಂಗಾಗಿ ನಾನೀಗ ಬಿಜೆಪಿ.”

“ಮೋದಿಗೆ ಹಿಗ್ಗಾಮುಗ್ಗ ಬೋದಿದ್ರಿ.”

“ಈಗ ಬೈಯ್ಯಕ್ಕಾಯ್ತದ? ಹೊಗಳಬೇಕೆ ನಮ್ಮಣೆಬರ ಏನು ಮಾಡನ..”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...