Homeಮುಖಪುಟನಂಬಿದ್ರೆ ನಂಬಿ ಬಿಟ್ರೆ ಬಿಡಿ ಸತ್ಯ ಏನೆಂದರೆ 'ನೆಹರೂ ಸ್ಮಾರಕ ಸಮಿತಿ'ಗೀಗ ಮೋದಿಯೇ ಅಧ್ಯಕ್ಷ..!

ನಂಬಿದ್ರೆ ನಂಬಿ ಬಿಟ್ರೆ ಬಿಡಿ ಸತ್ಯ ಏನೆಂದರೆ ‘ನೆಹರೂ ಸ್ಮಾರಕ ಸಮಿತಿ’ಗೀಗ ಮೋದಿಯೇ ಅಧ್ಯಕ್ಷ..!

- Advertisement -
- Advertisement -

ಹೌದು ಇದು ನಂಬಲು ತುಸು ಕಷ್ಟವಾದ ಸುದ್ದಿ. ಆದರೂ ಸತ್ಯ ಏನೆಂದರೆ ನೆಹರೂ ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯನ್ನು ಕೇಂದ್ರ ಸರ್ಕಾರ ಪುನರ್‌ರಚಿಸಿದೆ. ಅದರಂತೆ ಈ ಸಮಿತಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧ್ಯಕ್ಷರಾಗಿದ್ದು, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ರವರು ಉಪಾಧ್ಯಕ್ಷರಾಗಿದ್ದಾರೆ.

ನೆಹರೂ ಕಂಡರೆ ಭಾರತದ ಪ್ರಧಾನಿ ಮೋದಿಯವರಿಗೆ ಆಗುವುದಿಲ್ಲ. ಇಂದಿನ ಹಲವು ಸಮಸ್ಯೆಗಳಿಗೆ ಮಾನ್ಯ ಮೋದಿಯವರು ನೆಹರೂರವರನ್ನು ದೂರುವುದುಂಟು. ಅಂತಹ ನೆಹರೂ ಹೆಸರಿನಲ್ಲಿ ಸ್ಮಾರಕ ಟ್ರಸ್ಟ್‌ಗೆ ಮೋದಿಯವರು ಅಧ್ಯಕ್ಷರಾಗುವುದೆಂದರೆ ಏನು ಎಂದು ಹಲವರು ಹುಬ್ಬೇರಿಸಿದ್ದಾರೆ.

ಈ ಮೊದಲು ಈ ಸಮಿತಿಯನ್ನು ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್‌ ರಮೇಶ್ ಮತ್ತು ಕರಣ್‌ ಸಿಂಗ್‌ ಪ್ರತಿನಿಧಿಸುತ್ತಿದ್ದರು. ಹೊಸದಾಗಿ ನೇಮಿಸಿರುವ ಸಮಿತಿಯಲ್ಲಿ  ಕೇಂದ್ರ ಸಚಿವರಾದ ಅಮಿತ್‌ ಶಾ, ನಿರ್ಮಲಾ ಸೀತಾರಾಮನ್‌, ರಮೇಶ್‌ ಪ್ರೋಖ್ರಿಯಾಲ್‌ ಸೇರಿದಂತೆ ಹಲವು ಸಚಿವರು ಮತ್ತು ಇಲಾಖೆಯ ಕಾರ್ಯದರ್ಶಿಗಳು, ಹಲವು ಮಂದಿ ವಿವಿಧ ವಿಭಾಗಗಳಿಂದ ಇದರ ಸದಸ್ಯರಾಗಿದ್ದಾರೆ.

ಕಾಂಗ್ರೆಸ್‌ ಮುಖಂಡ ಕರಣ್‌ ಸಿಂಗ್‌ರವರು ಮೋದಿ ಸರ್ಕಾರದ ಈ ನಡೆಯನ್ನು ತೀಷ್ಣವಾಗಿ ಟೀಕಿಸಿದ್ದಾರೆ. ನೆಹರೂರವರ ಭವ್ಯ ಇತಿಹಾಸವನ್ನು ತಿರುಚುವುದಕ್ಕಾಗಿ ಮೋದಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಆರೋಪಿಸಿದ್ದಾರೆ.

ಇನ್ನು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ “ಉದಾರವಾದಿ ದನಿಗಳನ್ನು ಮತ್ತು ನೆಹರು ಸಿದ್ದಾಂತವನ್ನು ನಂಬಿದ್ದ ಎಲ್ಲರನ್ನು ಸಮಿತಿಯಿಂದ ಕೈಬಿಟ್ಟಿರುವುದು ಖಂಡನೀಯ” ಎಂದಿದ್ದಾರೆ.

ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ “ಕೇಂದ್ರ ಸರ್ಕಾರವು ಎಲ್ಲವನ್ನು ರಾಜಕೀಯವಾಗಿ ನೋಡುವುದು ಸರಿಯಲ್ಲ, ಏಕಾಏಕಿ ಸದಸ್ಯರನ್ನು ಕೈಬಿಟ್ಟಿರುವುದು ಅನಿರೀಕ್ಷಿತ” ಎಂದಿದ್ದಾರೆ.

ಈ ಬಾರಿ ನೆಹರೂ ಸ್ಮಾರಕ ಮ್ಯೂಸಿಯಂ ಅನ್ನು ಮೇಲ್ದರ್ಜೆಗೇರಿಸಲು ಯೋಜಿಸಲಾಗಿದೆ. ಅಲ್ಲದೇ ಭಾರತದ ಎಲ್ಲಾ ಪ್ರಧಾನಿಗಳಿಗೂ ಮ್ಯೂಸಿಂ ಮಾಡುವ ಉದ್ದೇಶವಿದೆ. ಈ ಹಿನ್ನೆಲೆಯಲ್ಲಿ ಹೊಸ ಸಮಿತಿ ಕೆಲಸ ಮಾಡಲಿದೆ. ಹಾಗಾಗಿ ಬದಲಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಸ್ವತಂತ್ರ ನಂತರ ಆಧುನಿಕ ಭಾರತದ ನಿರ್ಮಾತೃ ಎಂದು ನೆಹರೂರವರನ್ನು ಅನೇಕರು ಸ್ಮರಿಸುತ್ತಾರೆ. ಮುಖ್ಯವಾಗಿ ಭಾರತದ ಸಾರ್ವಜನಿಕ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದು, ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಿದ್ದು, ವೈಜ್ಞಾನಿಕ, ವೈಚಾರಿಕ ವಾತವರಣ ನಿರ್ಮಿಸಿದ್ದು ನೆಹರೂ ಸಾಧನೆಗಳಾಗಿವೆ ಎನ್ನುತ್ತಾರೆ. ಆದರೆ ಭಾರತದ ಅತಿ ಜನಪ್ರಿಯ ಪ್ರಧಾನಿಯೆನಿಸಿಕೊಳ್ಳಬೇಕು ಎಂಬ ಆಸೆಯಿರುವ ಮೋದಿಯವರಿಗೆ ಇದು ಪಥ್ಯವಲ್ಲ. ಹಾಗಾಗಿ ಸಂದರ್ಭ ಸಿಕ್ಕಾಗಲೆಲ್ಲಾ ನೆಹರೂರವರನ್ನು ಹಣಿಸುವ ಮೋದಿಯವರು ಈ ನೆಹರೂ ಸ್ಮಾರಕ ಸಮಿತಿಗೆ ಅಧ್ಯಕ್ಷರಾಗುತ್ತಿರುವುದು ಆಶ್ಚರ್‍ಯವಾಗಿದೆ.

ಮುಂದಿನ ದಿನಗಳಲ್ಲಿ ನೆಹರೂರವರನ್ನು ಯಾವ ರೀತಿ ಬಿಂಬಿಸಲಾಗುತ್ತದೆ ಎಂದು ಈಗಲೇ ಹೇಳಲಾಗುವುದಿಲ್ಲ. ಕಾದು ನೋಡಬೇಕಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...