Homeಮುಖಪುಟನಂಬಿದ್ರೆ ನಂಬಿ ಬಿಟ್ರೆ ಬಿಡಿ ಸತ್ಯ ಏನೆಂದರೆ 'ನೆಹರೂ ಸ್ಮಾರಕ ಸಮಿತಿ'ಗೀಗ ಮೋದಿಯೇ ಅಧ್ಯಕ್ಷ..!

ನಂಬಿದ್ರೆ ನಂಬಿ ಬಿಟ್ರೆ ಬಿಡಿ ಸತ್ಯ ಏನೆಂದರೆ ‘ನೆಹರೂ ಸ್ಮಾರಕ ಸಮಿತಿ’ಗೀಗ ಮೋದಿಯೇ ಅಧ್ಯಕ್ಷ..!

- Advertisement -
- Advertisement -

ಹೌದು ಇದು ನಂಬಲು ತುಸು ಕಷ್ಟವಾದ ಸುದ್ದಿ. ಆದರೂ ಸತ್ಯ ಏನೆಂದರೆ ನೆಹರೂ ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯನ್ನು ಕೇಂದ್ರ ಸರ್ಕಾರ ಪುನರ್‌ರಚಿಸಿದೆ. ಅದರಂತೆ ಈ ಸಮಿತಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧ್ಯಕ್ಷರಾಗಿದ್ದು, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ರವರು ಉಪಾಧ್ಯಕ್ಷರಾಗಿದ್ದಾರೆ.

ನೆಹರೂ ಕಂಡರೆ ಭಾರತದ ಪ್ರಧಾನಿ ಮೋದಿಯವರಿಗೆ ಆಗುವುದಿಲ್ಲ. ಇಂದಿನ ಹಲವು ಸಮಸ್ಯೆಗಳಿಗೆ ಮಾನ್ಯ ಮೋದಿಯವರು ನೆಹರೂರವರನ್ನು ದೂರುವುದುಂಟು. ಅಂತಹ ನೆಹರೂ ಹೆಸರಿನಲ್ಲಿ ಸ್ಮಾರಕ ಟ್ರಸ್ಟ್‌ಗೆ ಮೋದಿಯವರು ಅಧ್ಯಕ್ಷರಾಗುವುದೆಂದರೆ ಏನು ಎಂದು ಹಲವರು ಹುಬ್ಬೇರಿಸಿದ್ದಾರೆ.

ಈ ಮೊದಲು ಈ ಸಮಿತಿಯನ್ನು ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್‌ ರಮೇಶ್ ಮತ್ತು ಕರಣ್‌ ಸಿಂಗ್‌ ಪ್ರತಿನಿಧಿಸುತ್ತಿದ್ದರು. ಹೊಸದಾಗಿ ನೇಮಿಸಿರುವ ಸಮಿತಿಯಲ್ಲಿ  ಕೇಂದ್ರ ಸಚಿವರಾದ ಅಮಿತ್‌ ಶಾ, ನಿರ್ಮಲಾ ಸೀತಾರಾಮನ್‌, ರಮೇಶ್‌ ಪ್ರೋಖ್ರಿಯಾಲ್‌ ಸೇರಿದಂತೆ ಹಲವು ಸಚಿವರು ಮತ್ತು ಇಲಾಖೆಯ ಕಾರ್ಯದರ್ಶಿಗಳು, ಹಲವು ಮಂದಿ ವಿವಿಧ ವಿಭಾಗಗಳಿಂದ ಇದರ ಸದಸ್ಯರಾಗಿದ್ದಾರೆ.

ಕಾಂಗ್ರೆಸ್‌ ಮುಖಂಡ ಕರಣ್‌ ಸಿಂಗ್‌ರವರು ಮೋದಿ ಸರ್ಕಾರದ ಈ ನಡೆಯನ್ನು ತೀಷ್ಣವಾಗಿ ಟೀಕಿಸಿದ್ದಾರೆ. ನೆಹರೂರವರ ಭವ್ಯ ಇತಿಹಾಸವನ್ನು ತಿರುಚುವುದಕ್ಕಾಗಿ ಮೋದಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಆರೋಪಿಸಿದ್ದಾರೆ.

ಇನ್ನು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ “ಉದಾರವಾದಿ ದನಿಗಳನ್ನು ಮತ್ತು ನೆಹರು ಸಿದ್ದಾಂತವನ್ನು ನಂಬಿದ್ದ ಎಲ್ಲರನ್ನು ಸಮಿತಿಯಿಂದ ಕೈಬಿಟ್ಟಿರುವುದು ಖಂಡನೀಯ” ಎಂದಿದ್ದಾರೆ.

ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ “ಕೇಂದ್ರ ಸರ್ಕಾರವು ಎಲ್ಲವನ್ನು ರಾಜಕೀಯವಾಗಿ ನೋಡುವುದು ಸರಿಯಲ್ಲ, ಏಕಾಏಕಿ ಸದಸ್ಯರನ್ನು ಕೈಬಿಟ್ಟಿರುವುದು ಅನಿರೀಕ್ಷಿತ” ಎಂದಿದ್ದಾರೆ.

ಈ ಬಾರಿ ನೆಹರೂ ಸ್ಮಾರಕ ಮ್ಯೂಸಿಯಂ ಅನ್ನು ಮೇಲ್ದರ್ಜೆಗೇರಿಸಲು ಯೋಜಿಸಲಾಗಿದೆ. ಅಲ್ಲದೇ ಭಾರತದ ಎಲ್ಲಾ ಪ್ರಧಾನಿಗಳಿಗೂ ಮ್ಯೂಸಿಂ ಮಾಡುವ ಉದ್ದೇಶವಿದೆ. ಈ ಹಿನ್ನೆಲೆಯಲ್ಲಿ ಹೊಸ ಸಮಿತಿ ಕೆಲಸ ಮಾಡಲಿದೆ. ಹಾಗಾಗಿ ಬದಲಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಸ್ವತಂತ್ರ ನಂತರ ಆಧುನಿಕ ಭಾರತದ ನಿರ್ಮಾತೃ ಎಂದು ನೆಹರೂರವರನ್ನು ಅನೇಕರು ಸ್ಮರಿಸುತ್ತಾರೆ. ಮುಖ್ಯವಾಗಿ ಭಾರತದ ಸಾರ್ವಜನಿಕ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದು, ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಿದ್ದು, ವೈಜ್ಞಾನಿಕ, ವೈಚಾರಿಕ ವಾತವರಣ ನಿರ್ಮಿಸಿದ್ದು ನೆಹರೂ ಸಾಧನೆಗಳಾಗಿವೆ ಎನ್ನುತ್ತಾರೆ. ಆದರೆ ಭಾರತದ ಅತಿ ಜನಪ್ರಿಯ ಪ್ರಧಾನಿಯೆನಿಸಿಕೊಳ್ಳಬೇಕು ಎಂಬ ಆಸೆಯಿರುವ ಮೋದಿಯವರಿಗೆ ಇದು ಪಥ್ಯವಲ್ಲ. ಹಾಗಾಗಿ ಸಂದರ್ಭ ಸಿಕ್ಕಾಗಲೆಲ್ಲಾ ನೆಹರೂರವರನ್ನು ಹಣಿಸುವ ಮೋದಿಯವರು ಈ ನೆಹರೂ ಸ್ಮಾರಕ ಸಮಿತಿಗೆ ಅಧ್ಯಕ್ಷರಾಗುತ್ತಿರುವುದು ಆಶ್ಚರ್‍ಯವಾಗಿದೆ.

ಮುಂದಿನ ದಿನಗಳಲ್ಲಿ ನೆಹರೂರವರನ್ನು ಯಾವ ರೀತಿ ಬಿಂಬಿಸಲಾಗುತ್ತದೆ ಎಂದು ಈಗಲೇ ಹೇಳಲಾಗುವುದಿಲ್ಲ. ಕಾದು ನೋಡಬೇಕಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...