Homeಮುಖಪುಟ'ದ ಕಾಶ್ಮೀರ್ ಫೈಲ್ಸ್' ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

‘ದ ಕಾಶ್ಮೀರ್ ಫೈಲ್ಸ್’ ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

- Advertisement -
- Advertisement -

ಗೋವಾದಲ್ಲಿ ಇತ್ತೀಚಿಗೆ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ, ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದ ತೀರ್ಪುಗಾರರ ಮುಖ್ಯಸ್ಥ ಇಸ್ರೇಲಿ ನಿರ್ದೇಶಕ ನದಾವ್ ಲ್ಯಾಪಿಡ್ ಅವರು ‘ದ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಬಗ್ಗೆ ಹೇಳಿದ್ದ ಮಾತುಗಳು ಸಂಘ ಪರಿವಾರ, ಕೇಂದ್ರ ಬಿಜೆಪಿ ಸರ್ಕಾರ ಮತ್ತು ಚಲನಚಿತ್ರೋತ್ಸವಕ್ಕೆ ಮುಜುಗರವನ್ನುಂಟುಮಾಡಿದ್ದವು.

ಚಿತ್ರೋತ್ಸವದಲ್ಲಿ ಪ್ರಶಸ್ತಿಗಾಗಿ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಸೆಣೆಸಿದ್ದ ಬಲಪಂಥೀಯ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರ ‘ದ ಕಾಶ್ಮೀರ್ ಫೈಲ್ಸ್’ ಆಯ್ಕೆಯಾಗಿದ್ದರ ಬಗ್ಗೆ ಲ್ಯಾಪಿಡ್ ಅಘಾತ ವ್ಯಕ್ತಪಡಿಸಿದ್ದರು. ತಮ್ಮ ಸಮಾರೋಪ ಭಾಷಣದಲ್ಲಿ ಚಲನಚಿತ್ರೋತ್ಸವದ ಮಹತ್ವ ಮತ್ತು ಒಳ್ಳೆಯ ಸಂಗತಿಗಳನ್ನು ಮೆಚ್ಚಿ ಹೊಗಳಿದ್ದ ಅವರು, ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ಸಿನಿಮಾಗಳಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಬಗ್ಗೆ ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದರು: “14 ಸಿನಿಮಾಗಳು ಅತ್ಯುತ್ತಮ ಸಿನಿಮಾ ಅನುಭವ ನೀಡಿದಂತಹವು. ಅವು ವಿಶಾಲವಾದ ಚರ್ಚೆಗೆ ಅನುವುಮಾಡಿಕೊಟ್ಟವು. ನಾವೆಲ್ಲಾ 15ನೇ ಸಿನಿಮಾದ ಬಗ್ಗೆ ಅಘಾತಗೊಂಡೆವು ಮತ್ತು ಕನಲಿದೆವು. ‘ದ ಕಾಶ್ಮೀರ್ ಫೈಲ್ಸ್’ ಅಸಭ್ಯ ಪ್ರೊಪೋಗಾಂಡಾ ಸಿನಿಮಾ ಎಂದೆನಿಸಿತು. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತವಲ್ಲ ಅನ್ನಿಸಿತು” ಎಂದಿದ್ದರು.

ಕಾಶ್ಮೀರದಿಂದ ಪಂಡಿತರನ್ನು ಒಕ್ಕಲೆಬ್ಬಿಸಿದ ವಿಚಾರವಾಗಿ ವಾಸ್ತವ ಸಂಗತಿಗಳಿಗಿಂತಲೂ ಕಪೋಲ ಕಲ್ಪಿತ ಸುಳ್ಳುಗಳನ್ನೇ ಹೆಚ್ಚು ತುಂಬಿ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸಂಘ ಪರಿವಾರದವರು ಅತಿರೇಕದಲ್ಲಿ ಸಂಭ್ರಮಿಸಿದ್ದರು. ಈ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುವಾಗ ಮುಸ್ಲಿಮರ ವಿರುದ್ಧ ಘೋಷಣೆ ಕೂಗುವುದರಿಂದ ಹಿಡಿದು, ಮುಸ್ಲಿಮ್ ಸಮುದಾಯವನ್ನು ಬಾಯ್ಕಾಟ್‌ ಮಾಡಬೇಕು ಅನ್ನುವವರೆಗೆ ಅಸಭ್ಯ ವರ್ತನೆಗೆ ಎಡೆಮಾಡಿಕೊಟ್ಟಿತ್ತು. ಹಲವು ಬಿಜೆಪಿ ಸರ್ಕಾರಗಳು ಈ ಸಿನಿಮಾಗೆ ತೆರಿಗೆ ವಿನಾಯಿತಿ ಕೊಟ್ಟಿದ್ದು ಕೂಡ ವಿವಾದಕ್ಕೆ ಕಾರಣವಾಗಿತ್ತು.

ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ‘ಪೊಲೀಸ್‌ಮ್ಯಾನ್’, ‘ದ ಕಿಂಡರ್ಗಾರ್ಟನ್ ಟೀಚರ್’ ನಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ನದಾವ್ ಲ್ಯಾಪಿಡ್ ಮೇಲಿನ ಹೇಳಿಕೆಗಳನ್ನು ನೀಡಿದ ಮೇಲೆ ಸಂಘ ಪರಿವಾರ ಮತ್ತು ಬಿಜೆಪಿ ನದಾವ್ ವಿರುದ್ಧ ಕುಪಿತಗೊಂಡಿದ್ದವು. ನದಾವ್ ಅವರ ಹೇಳಿಕೆಯ ವಿರುದ್ಧ ಇಸ್ರೇಲಿ ರಾಯಭಾರಿ ಕೂಡ ಅಸಮಧಾನ ವ್ಯಕ್ತಪಡಿಸಿದ್ದರು.

ಈ ವಿವಾದದ ಕುರಿತು ಇಂಡಿಯಾ ಟುಡೆ ಇಂಗ್ಲಿಷ್ ಸುದ್ದಿ ಚಾನೆಲ್‌ನಲ್ಲಿ ಇತ್ತೀಚಿಗೆ ನದಾವ್ ಅವರನ್ನು ಸಂದರ್ಶಿಸಲಾಗಿತ್ತು. ಚಾನೆಲ್‌ನ ಆಂಕರ್ ರಾಹುಲ್ ಕನ್ವಾಲ್ ನಡೆಸಿದ ಸಂದರ್ಶನದ ತುಣುಕೊಂದು ಈಗ ವೈರಲ್ ಅಗಿದೆ. ಆ ವಿಡಿಯೋ ಸಂಭಾಷಣೆ ಹೀಗಿದೆ.

ರಾಹುಲ್ ಕನ್ವಾಲ್: ಎಲ್ಲಾ ತೀರ್ಪುಗಾರ ಸದಸ್ಯರು ನಿಮ್ಮ ಅನಿಸಿಕೆಯನ್ನು ಅನುಮೋದನೆ ಮಾಡಿದರು ಎಂಬುದಕ್ಕೆ ಏನು ಸಾಕ್ಷಿಯಿದೆ?

ಅದಕ್ಕೆ ನದಾವ್ ಹೀಗೆ ಪ್ರತಿಕ್ರಿಯಿಸುತ್ತಾರೆ: “ನಿಮಗೊಂದು ಸಲಹೆಯಿದೆ, ನೀವು ನಿಮ್ಮನ್ನು ಹಿರಿಯ ಪತ್ರಕರ್ತರು ಎಂದು ಅಂದುಕೊಳ್ಳುವುದರಿಂದ, ನೀವು ಫ್ರೆಂಚ್ ಮತ್ತು ಸ್ಪಾನಿಷ್ ತೀರ್ಪುಗಾರ ಸದಸ್ಯರಿಗೆ ಕರೆ ಮಾಡಿ ಕೇಳಬಹುದು”.

ರಾಹುಲ್ ಕನ್ವಾಲ್: “ಅದನ್ನು ನಾವು ಮಾಡಬಹುದು……..”

ನದಾವ್: “ಮಾಡಿ ಮಾಡಿ.. ನಿಮ್ಮ ಹತ್ತಿರ ಅವರ ಈಮೇಲ್ ಮತ್ತು ಫೋನ್ ನಂಬರ್ ಇದೆ ಅಂದುಕೊಳ್ತೀನಿ”.

ಹೀಗೆ ಚಲನಚಿತ್ರೋತ್ಸವದಲ್ಲಿ ಸಿನಿಮಾ ಬಗ್ಗೆ ಪಾಠ ಮಾಡಿದ ನದಾವ್ ಅವರು ಈಗ ಇಂಗ್ಲಿಷ್ ಸುದ್ದಿ ಟಿವಿ ಚಾನೆಲ್‌ನಲ್ಲಿ ಪತ್ರಿಕೋದ್ಯಮದ ಪಾಠ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಯಾವುದು ಪ್ರೊಪೋಗಾಂಡಾ ಎಂಬುವುದನ್ನು ನಿರ್ಧರಿಸುವುದು ವಿಷಯಾಧಾರಿತವಾದದ್ದು ಆಗಿದ್ದರೂ ಸಿನಿಮಾ ಬಗ್ಗೆ ತಾವಾಡಿದ ಮಾತುಗಳಿಗೆ ಬದ್ಧನಾಗಿದ್ದೇನೆ ಮತ್ತು ಅವನ್ನು ಯಾರಾದರೂ ಹೇಳಲೇಬೇಕಿತ್ತು ಎಂದು ನದಾವ್ ಹೇಳಿದ್ದಾರೆ. ಒಟ್ಟಿನಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಸಿನಿಮಾದ ಬಗ್ಗೆ ಅಂತಾರಾಷ್ಟ್ರಿಯ ಅತಿಥಿಯ ಮಾತುಗಳಿಂದ ಮುಜುಗರ ಅನುಭವಿಸಿದ ಸಂಘ ಪರಿವಾರದ ಬೆಂಬಲಿಗರು, ಸಿನಿಮಾವನ್ನು ಸಮರ್ಥಿಸಿಕೊಳ್ಳಲು ಒದ್ದಾಡುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಗೋಚರಿಸುತ್ತಿದೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...