Homeಮುಖಪುಟ'ದ ಕಾಶ್ಮೀರ್ ಫೈಲ್ಸ್' ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

‘ದ ಕಾಶ್ಮೀರ್ ಫೈಲ್ಸ್’ ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

- Advertisement -
- Advertisement -

ಗೋವಾದಲ್ಲಿ ಇತ್ತೀಚಿಗೆ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ, ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದ ತೀರ್ಪುಗಾರರ ಮುಖ್ಯಸ್ಥ ಇಸ್ರೇಲಿ ನಿರ್ದೇಶಕ ನದಾವ್ ಲ್ಯಾಪಿಡ್ ಅವರು ‘ದ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಬಗ್ಗೆ ಹೇಳಿದ್ದ ಮಾತುಗಳು ಸಂಘ ಪರಿವಾರ, ಕೇಂದ್ರ ಬಿಜೆಪಿ ಸರ್ಕಾರ ಮತ್ತು ಚಲನಚಿತ್ರೋತ್ಸವಕ್ಕೆ ಮುಜುಗರವನ್ನುಂಟುಮಾಡಿದ್ದವು.

ಚಿತ್ರೋತ್ಸವದಲ್ಲಿ ಪ್ರಶಸ್ತಿಗಾಗಿ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಸೆಣೆಸಿದ್ದ ಬಲಪಂಥೀಯ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರ ‘ದ ಕಾಶ್ಮೀರ್ ಫೈಲ್ಸ್’ ಆಯ್ಕೆಯಾಗಿದ್ದರ ಬಗ್ಗೆ ಲ್ಯಾಪಿಡ್ ಅಘಾತ ವ್ಯಕ್ತಪಡಿಸಿದ್ದರು. ತಮ್ಮ ಸಮಾರೋಪ ಭಾಷಣದಲ್ಲಿ ಚಲನಚಿತ್ರೋತ್ಸವದ ಮಹತ್ವ ಮತ್ತು ಒಳ್ಳೆಯ ಸಂಗತಿಗಳನ್ನು ಮೆಚ್ಚಿ ಹೊಗಳಿದ್ದ ಅವರು, ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ಸಿನಿಮಾಗಳಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಬಗ್ಗೆ ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದರು: “14 ಸಿನಿಮಾಗಳು ಅತ್ಯುತ್ತಮ ಸಿನಿಮಾ ಅನುಭವ ನೀಡಿದಂತಹವು. ಅವು ವಿಶಾಲವಾದ ಚರ್ಚೆಗೆ ಅನುವುಮಾಡಿಕೊಟ್ಟವು. ನಾವೆಲ್ಲಾ 15ನೇ ಸಿನಿಮಾದ ಬಗ್ಗೆ ಅಘಾತಗೊಂಡೆವು ಮತ್ತು ಕನಲಿದೆವು. ‘ದ ಕಾಶ್ಮೀರ್ ಫೈಲ್ಸ್’ ಅಸಭ್ಯ ಪ್ರೊಪೋಗಾಂಡಾ ಸಿನಿಮಾ ಎಂದೆನಿಸಿತು. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತವಲ್ಲ ಅನ್ನಿಸಿತು” ಎಂದಿದ್ದರು.

ಕಾಶ್ಮೀರದಿಂದ ಪಂಡಿತರನ್ನು ಒಕ್ಕಲೆಬ್ಬಿಸಿದ ವಿಚಾರವಾಗಿ ವಾಸ್ತವ ಸಂಗತಿಗಳಿಗಿಂತಲೂ ಕಪೋಲ ಕಲ್ಪಿತ ಸುಳ್ಳುಗಳನ್ನೇ ಹೆಚ್ಚು ತುಂಬಿ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸಂಘ ಪರಿವಾರದವರು ಅತಿರೇಕದಲ್ಲಿ ಸಂಭ್ರಮಿಸಿದ್ದರು. ಈ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುವಾಗ ಮುಸ್ಲಿಮರ ವಿರುದ್ಧ ಘೋಷಣೆ ಕೂಗುವುದರಿಂದ ಹಿಡಿದು, ಮುಸ್ಲಿಮ್ ಸಮುದಾಯವನ್ನು ಬಾಯ್ಕಾಟ್‌ ಮಾಡಬೇಕು ಅನ್ನುವವರೆಗೆ ಅಸಭ್ಯ ವರ್ತನೆಗೆ ಎಡೆಮಾಡಿಕೊಟ್ಟಿತ್ತು. ಹಲವು ಬಿಜೆಪಿ ಸರ್ಕಾರಗಳು ಈ ಸಿನಿಮಾಗೆ ತೆರಿಗೆ ವಿನಾಯಿತಿ ಕೊಟ್ಟಿದ್ದು ಕೂಡ ವಿವಾದಕ್ಕೆ ಕಾರಣವಾಗಿತ್ತು.

ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ‘ಪೊಲೀಸ್‌ಮ್ಯಾನ್’, ‘ದ ಕಿಂಡರ್ಗಾರ್ಟನ್ ಟೀಚರ್’ ನಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ನದಾವ್ ಲ್ಯಾಪಿಡ್ ಮೇಲಿನ ಹೇಳಿಕೆಗಳನ್ನು ನೀಡಿದ ಮೇಲೆ ಸಂಘ ಪರಿವಾರ ಮತ್ತು ಬಿಜೆಪಿ ನದಾವ್ ವಿರುದ್ಧ ಕುಪಿತಗೊಂಡಿದ್ದವು. ನದಾವ್ ಅವರ ಹೇಳಿಕೆಯ ವಿರುದ್ಧ ಇಸ್ರೇಲಿ ರಾಯಭಾರಿ ಕೂಡ ಅಸಮಧಾನ ವ್ಯಕ್ತಪಡಿಸಿದ್ದರು.

ಈ ವಿವಾದದ ಕುರಿತು ಇಂಡಿಯಾ ಟುಡೆ ಇಂಗ್ಲಿಷ್ ಸುದ್ದಿ ಚಾನೆಲ್‌ನಲ್ಲಿ ಇತ್ತೀಚಿಗೆ ನದಾವ್ ಅವರನ್ನು ಸಂದರ್ಶಿಸಲಾಗಿತ್ತು. ಚಾನೆಲ್‌ನ ಆಂಕರ್ ರಾಹುಲ್ ಕನ್ವಾಲ್ ನಡೆಸಿದ ಸಂದರ್ಶನದ ತುಣುಕೊಂದು ಈಗ ವೈರಲ್ ಅಗಿದೆ. ಆ ವಿಡಿಯೋ ಸಂಭಾಷಣೆ ಹೀಗಿದೆ.

ರಾಹುಲ್ ಕನ್ವಾಲ್: ಎಲ್ಲಾ ತೀರ್ಪುಗಾರ ಸದಸ್ಯರು ನಿಮ್ಮ ಅನಿಸಿಕೆಯನ್ನು ಅನುಮೋದನೆ ಮಾಡಿದರು ಎಂಬುದಕ್ಕೆ ಏನು ಸಾಕ್ಷಿಯಿದೆ?

ಅದಕ್ಕೆ ನದಾವ್ ಹೀಗೆ ಪ್ರತಿಕ್ರಿಯಿಸುತ್ತಾರೆ: “ನಿಮಗೊಂದು ಸಲಹೆಯಿದೆ, ನೀವು ನಿಮ್ಮನ್ನು ಹಿರಿಯ ಪತ್ರಕರ್ತರು ಎಂದು ಅಂದುಕೊಳ್ಳುವುದರಿಂದ, ನೀವು ಫ್ರೆಂಚ್ ಮತ್ತು ಸ್ಪಾನಿಷ್ ತೀರ್ಪುಗಾರ ಸದಸ್ಯರಿಗೆ ಕರೆ ಮಾಡಿ ಕೇಳಬಹುದು”.

ರಾಹುಲ್ ಕನ್ವಾಲ್: “ಅದನ್ನು ನಾವು ಮಾಡಬಹುದು……..”

ನದಾವ್: “ಮಾಡಿ ಮಾಡಿ.. ನಿಮ್ಮ ಹತ್ತಿರ ಅವರ ಈಮೇಲ್ ಮತ್ತು ಫೋನ್ ನಂಬರ್ ಇದೆ ಅಂದುಕೊಳ್ತೀನಿ”.

ಹೀಗೆ ಚಲನಚಿತ್ರೋತ್ಸವದಲ್ಲಿ ಸಿನಿಮಾ ಬಗ್ಗೆ ಪಾಠ ಮಾಡಿದ ನದಾವ್ ಅವರು ಈಗ ಇಂಗ್ಲಿಷ್ ಸುದ್ದಿ ಟಿವಿ ಚಾನೆಲ್‌ನಲ್ಲಿ ಪತ್ರಿಕೋದ್ಯಮದ ಪಾಠ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಯಾವುದು ಪ್ರೊಪೋಗಾಂಡಾ ಎಂಬುವುದನ್ನು ನಿರ್ಧರಿಸುವುದು ವಿಷಯಾಧಾರಿತವಾದದ್ದು ಆಗಿದ್ದರೂ ಸಿನಿಮಾ ಬಗ್ಗೆ ತಾವಾಡಿದ ಮಾತುಗಳಿಗೆ ಬದ್ಧನಾಗಿದ್ದೇನೆ ಮತ್ತು ಅವನ್ನು ಯಾರಾದರೂ ಹೇಳಲೇಬೇಕಿತ್ತು ಎಂದು ನದಾವ್ ಹೇಳಿದ್ದಾರೆ. ಒಟ್ಟಿನಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಸಿನಿಮಾದ ಬಗ್ಗೆ ಅಂತಾರಾಷ್ಟ್ರಿಯ ಅತಿಥಿಯ ಮಾತುಗಳಿಂದ ಮುಜುಗರ ಅನುಭವಿಸಿದ ಸಂಘ ಪರಿವಾರದ ಬೆಂಬಲಿಗರು, ಸಿನಿಮಾವನ್ನು ಸಮರ್ಥಿಸಿಕೊಳ್ಳಲು ಒದ್ದಾಡುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಗೋಚರಿಸುತ್ತಿದೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...