Homeಮುಖಪುಟ'ದ ಕಾಶ್ಮೀರ್ ಫೈಲ್ಸ್' ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

‘ದ ಕಾಶ್ಮೀರ್ ಫೈಲ್ಸ್’ ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

- Advertisement -
- Advertisement -

ಗೋವಾದಲ್ಲಿ ಇತ್ತೀಚಿಗೆ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ, ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದ ತೀರ್ಪುಗಾರರ ಮುಖ್ಯಸ್ಥ ಇಸ್ರೇಲಿ ನಿರ್ದೇಶಕ ನದಾವ್ ಲ್ಯಾಪಿಡ್ ಅವರು ‘ದ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಬಗ್ಗೆ ಹೇಳಿದ್ದ ಮಾತುಗಳು ಸಂಘ ಪರಿವಾರ, ಕೇಂದ್ರ ಬಿಜೆಪಿ ಸರ್ಕಾರ ಮತ್ತು ಚಲನಚಿತ್ರೋತ್ಸವಕ್ಕೆ ಮುಜುಗರವನ್ನುಂಟುಮಾಡಿದ್ದವು.

ಚಿತ್ರೋತ್ಸವದಲ್ಲಿ ಪ್ರಶಸ್ತಿಗಾಗಿ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಸೆಣೆಸಿದ್ದ ಬಲಪಂಥೀಯ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರ ‘ದ ಕಾಶ್ಮೀರ್ ಫೈಲ್ಸ್’ ಆಯ್ಕೆಯಾಗಿದ್ದರ ಬಗ್ಗೆ ಲ್ಯಾಪಿಡ್ ಅಘಾತ ವ್ಯಕ್ತಪಡಿಸಿದ್ದರು. ತಮ್ಮ ಸಮಾರೋಪ ಭಾಷಣದಲ್ಲಿ ಚಲನಚಿತ್ರೋತ್ಸವದ ಮಹತ್ವ ಮತ್ತು ಒಳ್ಳೆಯ ಸಂಗತಿಗಳನ್ನು ಮೆಚ್ಚಿ ಹೊಗಳಿದ್ದ ಅವರು, ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ಸಿನಿಮಾಗಳಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಬಗ್ಗೆ ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದರು: “14 ಸಿನಿಮಾಗಳು ಅತ್ಯುತ್ತಮ ಸಿನಿಮಾ ಅನುಭವ ನೀಡಿದಂತಹವು. ಅವು ವಿಶಾಲವಾದ ಚರ್ಚೆಗೆ ಅನುವುಮಾಡಿಕೊಟ್ಟವು. ನಾವೆಲ್ಲಾ 15ನೇ ಸಿನಿಮಾದ ಬಗ್ಗೆ ಅಘಾತಗೊಂಡೆವು ಮತ್ತು ಕನಲಿದೆವು. ‘ದ ಕಾಶ್ಮೀರ್ ಫೈಲ್ಸ್’ ಅಸಭ್ಯ ಪ್ರೊಪೋಗಾಂಡಾ ಸಿನಿಮಾ ಎಂದೆನಿಸಿತು. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತವಲ್ಲ ಅನ್ನಿಸಿತು” ಎಂದಿದ್ದರು.

ಕಾಶ್ಮೀರದಿಂದ ಪಂಡಿತರನ್ನು ಒಕ್ಕಲೆಬ್ಬಿಸಿದ ವಿಚಾರವಾಗಿ ವಾಸ್ತವ ಸಂಗತಿಗಳಿಗಿಂತಲೂ ಕಪೋಲ ಕಲ್ಪಿತ ಸುಳ್ಳುಗಳನ್ನೇ ಹೆಚ್ಚು ತುಂಬಿ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸಂಘ ಪರಿವಾರದವರು ಅತಿರೇಕದಲ್ಲಿ ಸಂಭ್ರಮಿಸಿದ್ದರು. ಈ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುವಾಗ ಮುಸ್ಲಿಮರ ವಿರುದ್ಧ ಘೋಷಣೆ ಕೂಗುವುದರಿಂದ ಹಿಡಿದು, ಮುಸ್ಲಿಮ್ ಸಮುದಾಯವನ್ನು ಬಾಯ್ಕಾಟ್‌ ಮಾಡಬೇಕು ಅನ್ನುವವರೆಗೆ ಅಸಭ್ಯ ವರ್ತನೆಗೆ ಎಡೆಮಾಡಿಕೊಟ್ಟಿತ್ತು. ಹಲವು ಬಿಜೆಪಿ ಸರ್ಕಾರಗಳು ಈ ಸಿನಿಮಾಗೆ ತೆರಿಗೆ ವಿನಾಯಿತಿ ಕೊಟ್ಟಿದ್ದು ಕೂಡ ವಿವಾದಕ್ಕೆ ಕಾರಣವಾಗಿತ್ತು.

ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ‘ಪೊಲೀಸ್‌ಮ್ಯಾನ್’, ‘ದ ಕಿಂಡರ್ಗಾರ್ಟನ್ ಟೀಚರ್’ ನಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ನದಾವ್ ಲ್ಯಾಪಿಡ್ ಮೇಲಿನ ಹೇಳಿಕೆಗಳನ್ನು ನೀಡಿದ ಮೇಲೆ ಸಂಘ ಪರಿವಾರ ಮತ್ತು ಬಿಜೆಪಿ ನದಾವ್ ವಿರುದ್ಧ ಕುಪಿತಗೊಂಡಿದ್ದವು. ನದಾವ್ ಅವರ ಹೇಳಿಕೆಯ ವಿರುದ್ಧ ಇಸ್ರೇಲಿ ರಾಯಭಾರಿ ಕೂಡ ಅಸಮಧಾನ ವ್ಯಕ್ತಪಡಿಸಿದ್ದರು.

ಈ ವಿವಾದದ ಕುರಿತು ಇಂಡಿಯಾ ಟುಡೆ ಇಂಗ್ಲಿಷ್ ಸುದ್ದಿ ಚಾನೆಲ್‌ನಲ್ಲಿ ಇತ್ತೀಚಿಗೆ ನದಾವ್ ಅವರನ್ನು ಸಂದರ್ಶಿಸಲಾಗಿತ್ತು. ಚಾನೆಲ್‌ನ ಆಂಕರ್ ರಾಹುಲ್ ಕನ್ವಾಲ್ ನಡೆಸಿದ ಸಂದರ್ಶನದ ತುಣುಕೊಂದು ಈಗ ವೈರಲ್ ಅಗಿದೆ. ಆ ವಿಡಿಯೋ ಸಂಭಾಷಣೆ ಹೀಗಿದೆ.

ರಾಹುಲ್ ಕನ್ವಾಲ್: ಎಲ್ಲಾ ತೀರ್ಪುಗಾರ ಸದಸ್ಯರು ನಿಮ್ಮ ಅನಿಸಿಕೆಯನ್ನು ಅನುಮೋದನೆ ಮಾಡಿದರು ಎಂಬುದಕ್ಕೆ ಏನು ಸಾಕ್ಷಿಯಿದೆ?

ಅದಕ್ಕೆ ನದಾವ್ ಹೀಗೆ ಪ್ರತಿಕ್ರಿಯಿಸುತ್ತಾರೆ: “ನಿಮಗೊಂದು ಸಲಹೆಯಿದೆ, ನೀವು ನಿಮ್ಮನ್ನು ಹಿರಿಯ ಪತ್ರಕರ್ತರು ಎಂದು ಅಂದುಕೊಳ್ಳುವುದರಿಂದ, ನೀವು ಫ್ರೆಂಚ್ ಮತ್ತು ಸ್ಪಾನಿಷ್ ತೀರ್ಪುಗಾರ ಸದಸ್ಯರಿಗೆ ಕರೆ ಮಾಡಿ ಕೇಳಬಹುದು”.

ರಾಹುಲ್ ಕನ್ವಾಲ್: “ಅದನ್ನು ನಾವು ಮಾಡಬಹುದು……..”

ನದಾವ್: “ಮಾಡಿ ಮಾಡಿ.. ನಿಮ್ಮ ಹತ್ತಿರ ಅವರ ಈಮೇಲ್ ಮತ್ತು ಫೋನ್ ನಂಬರ್ ಇದೆ ಅಂದುಕೊಳ್ತೀನಿ”.

ಹೀಗೆ ಚಲನಚಿತ್ರೋತ್ಸವದಲ್ಲಿ ಸಿನಿಮಾ ಬಗ್ಗೆ ಪಾಠ ಮಾಡಿದ ನದಾವ್ ಅವರು ಈಗ ಇಂಗ್ಲಿಷ್ ಸುದ್ದಿ ಟಿವಿ ಚಾನೆಲ್‌ನಲ್ಲಿ ಪತ್ರಿಕೋದ್ಯಮದ ಪಾಠ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಯಾವುದು ಪ್ರೊಪೋಗಾಂಡಾ ಎಂಬುವುದನ್ನು ನಿರ್ಧರಿಸುವುದು ವಿಷಯಾಧಾರಿತವಾದದ್ದು ಆಗಿದ್ದರೂ ಸಿನಿಮಾ ಬಗ್ಗೆ ತಾವಾಡಿದ ಮಾತುಗಳಿಗೆ ಬದ್ಧನಾಗಿದ್ದೇನೆ ಮತ್ತು ಅವನ್ನು ಯಾರಾದರೂ ಹೇಳಲೇಬೇಕಿತ್ತು ಎಂದು ನದಾವ್ ಹೇಳಿದ್ದಾರೆ. ಒಟ್ಟಿನಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಸಿನಿಮಾದ ಬಗ್ಗೆ ಅಂತಾರಾಷ್ಟ್ರಿಯ ಅತಿಥಿಯ ಮಾತುಗಳಿಂದ ಮುಜುಗರ ಅನುಭವಿಸಿದ ಸಂಘ ಪರಿವಾರದ ಬೆಂಬಲಿಗರು, ಸಿನಿಮಾವನ್ನು ಸಮರ್ಥಿಸಿಕೊಳ್ಳಲು ಒದ್ದಾಡುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಗೋಚರಿಸುತ್ತಿದೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...