Homeಮುಖಪುಟ'ದ ಕಾಶ್ಮೀರ್ ಫೈಲ್ಸ್' ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

‘ದ ಕಾಶ್ಮೀರ್ ಫೈಲ್ಸ್’ ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

- Advertisement -
- Advertisement -

ಗೋವಾದಲ್ಲಿ ಇತ್ತೀಚಿಗೆ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ, ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದ ತೀರ್ಪುಗಾರರ ಮುಖ್ಯಸ್ಥ ಇಸ್ರೇಲಿ ನಿರ್ದೇಶಕ ನದಾವ್ ಲ್ಯಾಪಿಡ್ ಅವರು ‘ದ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಬಗ್ಗೆ ಹೇಳಿದ್ದ ಮಾತುಗಳು ಸಂಘ ಪರಿವಾರ, ಕೇಂದ್ರ ಬಿಜೆಪಿ ಸರ್ಕಾರ ಮತ್ತು ಚಲನಚಿತ್ರೋತ್ಸವಕ್ಕೆ ಮುಜುಗರವನ್ನುಂಟುಮಾಡಿದ್ದವು.

ಚಿತ್ರೋತ್ಸವದಲ್ಲಿ ಪ್ರಶಸ್ತಿಗಾಗಿ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಸೆಣೆಸಿದ್ದ ಬಲಪಂಥೀಯ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರ ‘ದ ಕಾಶ್ಮೀರ್ ಫೈಲ್ಸ್’ ಆಯ್ಕೆಯಾಗಿದ್ದರ ಬಗ್ಗೆ ಲ್ಯಾಪಿಡ್ ಅಘಾತ ವ್ಯಕ್ತಪಡಿಸಿದ್ದರು. ತಮ್ಮ ಸಮಾರೋಪ ಭಾಷಣದಲ್ಲಿ ಚಲನಚಿತ್ರೋತ್ಸವದ ಮಹತ್ವ ಮತ್ತು ಒಳ್ಳೆಯ ಸಂಗತಿಗಳನ್ನು ಮೆಚ್ಚಿ ಹೊಗಳಿದ್ದ ಅವರು, ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ಸಿನಿಮಾಗಳಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಬಗ್ಗೆ ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದರು: “14 ಸಿನಿಮಾಗಳು ಅತ್ಯುತ್ತಮ ಸಿನಿಮಾ ಅನುಭವ ನೀಡಿದಂತಹವು. ಅವು ವಿಶಾಲವಾದ ಚರ್ಚೆಗೆ ಅನುವುಮಾಡಿಕೊಟ್ಟವು. ನಾವೆಲ್ಲಾ 15ನೇ ಸಿನಿಮಾದ ಬಗ್ಗೆ ಅಘಾತಗೊಂಡೆವು ಮತ್ತು ಕನಲಿದೆವು. ‘ದ ಕಾಶ್ಮೀರ್ ಫೈಲ್ಸ್’ ಅಸಭ್ಯ ಪ್ರೊಪೋಗಾಂಡಾ ಸಿನಿಮಾ ಎಂದೆನಿಸಿತು. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತವಲ್ಲ ಅನ್ನಿಸಿತು” ಎಂದಿದ್ದರು.

ಕಾಶ್ಮೀರದಿಂದ ಪಂಡಿತರನ್ನು ಒಕ್ಕಲೆಬ್ಬಿಸಿದ ವಿಚಾರವಾಗಿ ವಾಸ್ತವ ಸಂಗತಿಗಳಿಗಿಂತಲೂ ಕಪೋಲ ಕಲ್ಪಿತ ಸುಳ್ಳುಗಳನ್ನೇ ಹೆಚ್ಚು ತುಂಬಿ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸಂಘ ಪರಿವಾರದವರು ಅತಿರೇಕದಲ್ಲಿ ಸಂಭ್ರಮಿಸಿದ್ದರು. ಈ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುವಾಗ ಮುಸ್ಲಿಮರ ವಿರುದ್ಧ ಘೋಷಣೆ ಕೂಗುವುದರಿಂದ ಹಿಡಿದು, ಮುಸ್ಲಿಮ್ ಸಮುದಾಯವನ್ನು ಬಾಯ್ಕಾಟ್‌ ಮಾಡಬೇಕು ಅನ್ನುವವರೆಗೆ ಅಸಭ್ಯ ವರ್ತನೆಗೆ ಎಡೆಮಾಡಿಕೊಟ್ಟಿತ್ತು. ಹಲವು ಬಿಜೆಪಿ ಸರ್ಕಾರಗಳು ಈ ಸಿನಿಮಾಗೆ ತೆರಿಗೆ ವಿನಾಯಿತಿ ಕೊಟ್ಟಿದ್ದು ಕೂಡ ವಿವಾದಕ್ಕೆ ಕಾರಣವಾಗಿತ್ತು.

ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ‘ಪೊಲೀಸ್‌ಮ್ಯಾನ್’, ‘ದ ಕಿಂಡರ್ಗಾರ್ಟನ್ ಟೀಚರ್’ ನಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ನದಾವ್ ಲ್ಯಾಪಿಡ್ ಮೇಲಿನ ಹೇಳಿಕೆಗಳನ್ನು ನೀಡಿದ ಮೇಲೆ ಸಂಘ ಪರಿವಾರ ಮತ್ತು ಬಿಜೆಪಿ ನದಾವ್ ವಿರುದ್ಧ ಕುಪಿತಗೊಂಡಿದ್ದವು. ನದಾವ್ ಅವರ ಹೇಳಿಕೆಯ ವಿರುದ್ಧ ಇಸ್ರೇಲಿ ರಾಯಭಾರಿ ಕೂಡ ಅಸಮಧಾನ ವ್ಯಕ್ತಪಡಿಸಿದ್ದರು.

ಈ ವಿವಾದದ ಕುರಿತು ಇಂಡಿಯಾ ಟುಡೆ ಇಂಗ್ಲಿಷ್ ಸುದ್ದಿ ಚಾನೆಲ್‌ನಲ್ಲಿ ಇತ್ತೀಚಿಗೆ ನದಾವ್ ಅವರನ್ನು ಸಂದರ್ಶಿಸಲಾಗಿತ್ತು. ಚಾನೆಲ್‌ನ ಆಂಕರ್ ರಾಹುಲ್ ಕನ್ವಾಲ್ ನಡೆಸಿದ ಸಂದರ್ಶನದ ತುಣುಕೊಂದು ಈಗ ವೈರಲ್ ಅಗಿದೆ. ಆ ವಿಡಿಯೋ ಸಂಭಾಷಣೆ ಹೀಗಿದೆ.

ರಾಹುಲ್ ಕನ್ವಾಲ್: ಎಲ್ಲಾ ತೀರ್ಪುಗಾರ ಸದಸ್ಯರು ನಿಮ್ಮ ಅನಿಸಿಕೆಯನ್ನು ಅನುಮೋದನೆ ಮಾಡಿದರು ಎಂಬುದಕ್ಕೆ ಏನು ಸಾಕ್ಷಿಯಿದೆ?

ಅದಕ್ಕೆ ನದಾವ್ ಹೀಗೆ ಪ್ರತಿಕ್ರಿಯಿಸುತ್ತಾರೆ: “ನಿಮಗೊಂದು ಸಲಹೆಯಿದೆ, ನೀವು ನಿಮ್ಮನ್ನು ಹಿರಿಯ ಪತ್ರಕರ್ತರು ಎಂದು ಅಂದುಕೊಳ್ಳುವುದರಿಂದ, ನೀವು ಫ್ರೆಂಚ್ ಮತ್ತು ಸ್ಪಾನಿಷ್ ತೀರ್ಪುಗಾರ ಸದಸ್ಯರಿಗೆ ಕರೆ ಮಾಡಿ ಕೇಳಬಹುದು”.

ರಾಹುಲ್ ಕನ್ವಾಲ್: “ಅದನ್ನು ನಾವು ಮಾಡಬಹುದು……..”

ನದಾವ್: “ಮಾಡಿ ಮಾಡಿ.. ನಿಮ್ಮ ಹತ್ತಿರ ಅವರ ಈಮೇಲ್ ಮತ್ತು ಫೋನ್ ನಂಬರ್ ಇದೆ ಅಂದುಕೊಳ್ತೀನಿ”.

ಹೀಗೆ ಚಲನಚಿತ್ರೋತ್ಸವದಲ್ಲಿ ಸಿನಿಮಾ ಬಗ್ಗೆ ಪಾಠ ಮಾಡಿದ ನದಾವ್ ಅವರು ಈಗ ಇಂಗ್ಲಿಷ್ ಸುದ್ದಿ ಟಿವಿ ಚಾನೆಲ್‌ನಲ್ಲಿ ಪತ್ರಿಕೋದ್ಯಮದ ಪಾಠ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಯಾವುದು ಪ್ರೊಪೋಗಾಂಡಾ ಎಂಬುವುದನ್ನು ನಿರ್ಧರಿಸುವುದು ವಿಷಯಾಧಾರಿತವಾದದ್ದು ಆಗಿದ್ದರೂ ಸಿನಿಮಾ ಬಗ್ಗೆ ತಾವಾಡಿದ ಮಾತುಗಳಿಗೆ ಬದ್ಧನಾಗಿದ್ದೇನೆ ಮತ್ತು ಅವನ್ನು ಯಾರಾದರೂ ಹೇಳಲೇಬೇಕಿತ್ತು ಎಂದು ನದಾವ್ ಹೇಳಿದ್ದಾರೆ. ಒಟ್ಟಿನಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಸಿನಿಮಾದ ಬಗ್ಗೆ ಅಂತಾರಾಷ್ಟ್ರಿಯ ಅತಿಥಿಯ ಮಾತುಗಳಿಂದ ಮುಜುಗರ ಅನುಭವಿಸಿದ ಸಂಘ ಪರಿವಾರದ ಬೆಂಬಲಿಗರು, ಸಿನಿಮಾವನ್ನು ಸಮರ್ಥಿಸಿಕೊಳ್ಳಲು ಒದ್ದಾಡುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಗೋಚರಿಸುತ್ತಿದೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...