Homeಮುಖಪುಟ'ದ ಕಾಶ್ಮೀರ್ ಫೈಲ್ಸ್' ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

‘ದ ಕಾಶ್ಮೀರ್ ಫೈಲ್ಸ್’ ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

- Advertisement -
- Advertisement -

ಗೋವಾದಲ್ಲಿ ಇತ್ತೀಚಿಗೆ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ, ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದ ತೀರ್ಪುಗಾರರ ಮುಖ್ಯಸ್ಥ ಇಸ್ರೇಲಿ ನಿರ್ದೇಶಕ ನದಾವ್ ಲ್ಯಾಪಿಡ್ ಅವರು ‘ದ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಬಗ್ಗೆ ಹೇಳಿದ್ದ ಮಾತುಗಳು ಸಂಘ ಪರಿವಾರ, ಕೇಂದ್ರ ಬಿಜೆಪಿ ಸರ್ಕಾರ ಮತ್ತು ಚಲನಚಿತ್ರೋತ್ಸವಕ್ಕೆ ಮುಜುಗರವನ್ನುಂಟುಮಾಡಿದ್ದವು.

ಚಿತ್ರೋತ್ಸವದಲ್ಲಿ ಪ್ರಶಸ್ತಿಗಾಗಿ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಸೆಣೆಸಿದ್ದ ಬಲಪಂಥೀಯ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರ ‘ದ ಕಾಶ್ಮೀರ್ ಫೈಲ್ಸ್’ ಆಯ್ಕೆಯಾಗಿದ್ದರ ಬಗ್ಗೆ ಲ್ಯಾಪಿಡ್ ಅಘಾತ ವ್ಯಕ್ತಪಡಿಸಿದ್ದರು. ತಮ್ಮ ಸಮಾರೋಪ ಭಾಷಣದಲ್ಲಿ ಚಲನಚಿತ್ರೋತ್ಸವದ ಮಹತ್ವ ಮತ್ತು ಒಳ್ಳೆಯ ಸಂಗತಿಗಳನ್ನು ಮೆಚ್ಚಿ ಹೊಗಳಿದ್ದ ಅವರು, ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ಸಿನಿಮಾಗಳಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಬಗ್ಗೆ ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದರು: “14 ಸಿನಿಮಾಗಳು ಅತ್ಯುತ್ತಮ ಸಿನಿಮಾ ಅನುಭವ ನೀಡಿದಂತಹವು. ಅವು ವಿಶಾಲವಾದ ಚರ್ಚೆಗೆ ಅನುವುಮಾಡಿಕೊಟ್ಟವು. ನಾವೆಲ್ಲಾ 15ನೇ ಸಿನಿಮಾದ ಬಗ್ಗೆ ಅಘಾತಗೊಂಡೆವು ಮತ್ತು ಕನಲಿದೆವು. ‘ದ ಕಾಶ್ಮೀರ್ ಫೈಲ್ಸ್’ ಅಸಭ್ಯ ಪ್ರೊಪೋಗಾಂಡಾ ಸಿನಿಮಾ ಎಂದೆನಿಸಿತು. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತವಲ್ಲ ಅನ್ನಿಸಿತು” ಎಂದಿದ್ದರು.

ಕಾಶ್ಮೀರದಿಂದ ಪಂಡಿತರನ್ನು ಒಕ್ಕಲೆಬ್ಬಿಸಿದ ವಿಚಾರವಾಗಿ ವಾಸ್ತವ ಸಂಗತಿಗಳಿಗಿಂತಲೂ ಕಪೋಲ ಕಲ್ಪಿತ ಸುಳ್ಳುಗಳನ್ನೇ ಹೆಚ್ಚು ತುಂಬಿ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸಂಘ ಪರಿವಾರದವರು ಅತಿರೇಕದಲ್ಲಿ ಸಂಭ್ರಮಿಸಿದ್ದರು. ಈ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುವಾಗ ಮುಸ್ಲಿಮರ ವಿರುದ್ಧ ಘೋಷಣೆ ಕೂಗುವುದರಿಂದ ಹಿಡಿದು, ಮುಸ್ಲಿಮ್ ಸಮುದಾಯವನ್ನು ಬಾಯ್ಕಾಟ್‌ ಮಾಡಬೇಕು ಅನ್ನುವವರೆಗೆ ಅಸಭ್ಯ ವರ್ತನೆಗೆ ಎಡೆಮಾಡಿಕೊಟ್ಟಿತ್ತು. ಹಲವು ಬಿಜೆಪಿ ಸರ್ಕಾರಗಳು ಈ ಸಿನಿಮಾಗೆ ತೆರಿಗೆ ವಿನಾಯಿತಿ ಕೊಟ್ಟಿದ್ದು ಕೂಡ ವಿವಾದಕ್ಕೆ ಕಾರಣವಾಗಿತ್ತು.

ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ‘ಪೊಲೀಸ್‌ಮ್ಯಾನ್’, ‘ದ ಕಿಂಡರ್ಗಾರ್ಟನ್ ಟೀಚರ್’ ನಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ನದಾವ್ ಲ್ಯಾಪಿಡ್ ಮೇಲಿನ ಹೇಳಿಕೆಗಳನ್ನು ನೀಡಿದ ಮೇಲೆ ಸಂಘ ಪರಿವಾರ ಮತ್ತು ಬಿಜೆಪಿ ನದಾವ್ ವಿರುದ್ಧ ಕುಪಿತಗೊಂಡಿದ್ದವು. ನದಾವ್ ಅವರ ಹೇಳಿಕೆಯ ವಿರುದ್ಧ ಇಸ್ರೇಲಿ ರಾಯಭಾರಿ ಕೂಡ ಅಸಮಧಾನ ವ್ಯಕ್ತಪಡಿಸಿದ್ದರು.

ಈ ವಿವಾದದ ಕುರಿತು ಇಂಡಿಯಾ ಟುಡೆ ಇಂಗ್ಲಿಷ್ ಸುದ್ದಿ ಚಾನೆಲ್‌ನಲ್ಲಿ ಇತ್ತೀಚಿಗೆ ನದಾವ್ ಅವರನ್ನು ಸಂದರ್ಶಿಸಲಾಗಿತ್ತು. ಚಾನೆಲ್‌ನ ಆಂಕರ್ ರಾಹುಲ್ ಕನ್ವಾಲ್ ನಡೆಸಿದ ಸಂದರ್ಶನದ ತುಣುಕೊಂದು ಈಗ ವೈರಲ್ ಅಗಿದೆ. ಆ ವಿಡಿಯೋ ಸಂಭಾಷಣೆ ಹೀಗಿದೆ.

ರಾಹುಲ್ ಕನ್ವಾಲ್: ಎಲ್ಲಾ ತೀರ್ಪುಗಾರ ಸದಸ್ಯರು ನಿಮ್ಮ ಅನಿಸಿಕೆಯನ್ನು ಅನುಮೋದನೆ ಮಾಡಿದರು ಎಂಬುದಕ್ಕೆ ಏನು ಸಾಕ್ಷಿಯಿದೆ?

ಅದಕ್ಕೆ ನದಾವ್ ಹೀಗೆ ಪ್ರತಿಕ್ರಿಯಿಸುತ್ತಾರೆ: “ನಿಮಗೊಂದು ಸಲಹೆಯಿದೆ, ನೀವು ನಿಮ್ಮನ್ನು ಹಿರಿಯ ಪತ್ರಕರ್ತರು ಎಂದು ಅಂದುಕೊಳ್ಳುವುದರಿಂದ, ನೀವು ಫ್ರೆಂಚ್ ಮತ್ತು ಸ್ಪಾನಿಷ್ ತೀರ್ಪುಗಾರ ಸದಸ್ಯರಿಗೆ ಕರೆ ಮಾಡಿ ಕೇಳಬಹುದು”.

ರಾಹುಲ್ ಕನ್ವಾಲ್: “ಅದನ್ನು ನಾವು ಮಾಡಬಹುದು……..”

ನದಾವ್: “ಮಾಡಿ ಮಾಡಿ.. ನಿಮ್ಮ ಹತ್ತಿರ ಅವರ ಈಮೇಲ್ ಮತ್ತು ಫೋನ್ ನಂಬರ್ ಇದೆ ಅಂದುಕೊಳ್ತೀನಿ”.

ಹೀಗೆ ಚಲನಚಿತ್ರೋತ್ಸವದಲ್ಲಿ ಸಿನಿಮಾ ಬಗ್ಗೆ ಪಾಠ ಮಾಡಿದ ನದಾವ್ ಅವರು ಈಗ ಇಂಗ್ಲಿಷ್ ಸುದ್ದಿ ಟಿವಿ ಚಾನೆಲ್‌ನಲ್ಲಿ ಪತ್ರಿಕೋದ್ಯಮದ ಪಾಠ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಯಾವುದು ಪ್ರೊಪೋಗಾಂಡಾ ಎಂಬುವುದನ್ನು ನಿರ್ಧರಿಸುವುದು ವಿಷಯಾಧಾರಿತವಾದದ್ದು ಆಗಿದ್ದರೂ ಸಿನಿಮಾ ಬಗ್ಗೆ ತಾವಾಡಿದ ಮಾತುಗಳಿಗೆ ಬದ್ಧನಾಗಿದ್ದೇನೆ ಮತ್ತು ಅವನ್ನು ಯಾರಾದರೂ ಹೇಳಲೇಬೇಕಿತ್ತು ಎಂದು ನದಾವ್ ಹೇಳಿದ್ದಾರೆ. ಒಟ್ಟಿನಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಸಿನಿಮಾದ ಬಗ್ಗೆ ಅಂತಾರಾಷ್ಟ್ರಿಯ ಅತಿಥಿಯ ಮಾತುಗಳಿಂದ ಮುಜುಗರ ಅನುಭವಿಸಿದ ಸಂಘ ಪರಿವಾರದ ಬೆಂಬಲಿಗರು, ಸಿನಿಮಾವನ್ನು ಸಮರ್ಥಿಸಿಕೊಳ್ಳಲು ಒದ್ದಾಡುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಗೋಚರಿಸುತ್ತಿದೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...