Homeಮುಖಪುಟ'ದ ಕಾಶ್ಮೀರ್ ಫೈಲ್ಸ್' ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

‘ದ ಕಾಶ್ಮೀರ್ ಫೈಲ್ಸ್’ ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

- Advertisement -
- Advertisement -

ಗೋವಾದಲ್ಲಿ ಇತ್ತೀಚಿಗೆ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ, ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದ ತೀರ್ಪುಗಾರರ ಮುಖ್ಯಸ್ಥ ಇಸ್ರೇಲಿ ನಿರ್ದೇಶಕ ನದಾವ್ ಲ್ಯಾಪಿಡ್ ಅವರು ‘ದ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಬಗ್ಗೆ ಹೇಳಿದ್ದ ಮಾತುಗಳು ಸಂಘ ಪರಿವಾರ, ಕೇಂದ್ರ ಬಿಜೆಪಿ ಸರ್ಕಾರ ಮತ್ತು ಚಲನಚಿತ್ರೋತ್ಸವಕ್ಕೆ ಮುಜುಗರವನ್ನುಂಟುಮಾಡಿದ್ದವು.

ಚಿತ್ರೋತ್ಸವದಲ್ಲಿ ಪ್ರಶಸ್ತಿಗಾಗಿ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಸೆಣೆಸಿದ್ದ ಬಲಪಂಥೀಯ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರ ‘ದ ಕಾಶ್ಮೀರ್ ಫೈಲ್ಸ್’ ಆಯ್ಕೆಯಾಗಿದ್ದರ ಬಗ್ಗೆ ಲ್ಯಾಪಿಡ್ ಅಘಾತ ವ್ಯಕ್ತಪಡಿಸಿದ್ದರು. ತಮ್ಮ ಸಮಾರೋಪ ಭಾಷಣದಲ್ಲಿ ಚಲನಚಿತ್ರೋತ್ಸವದ ಮಹತ್ವ ಮತ್ತು ಒಳ್ಳೆಯ ಸಂಗತಿಗಳನ್ನು ಮೆಚ್ಚಿ ಹೊಗಳಿದ್ದ ಅವರು, ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ಸಿನಿಮಾಗಳಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಬಗ್ಗೆ ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದರು: “14 ಸಿನಿಮಾಗಳು ಅತ್ಯುತ್ತಮ ಸಿನಿಮಾ ಅನುಭವ ನೀಡಿದಂತಹವು. ಅವು ವಿಶಾಲವಾದ ಚರ್ಚೆಗೆ ಅನುವುಮಾಡಿಕೊಟ್ಟವು. ನಾವೆಲ್ಲಾ 15ನೇ ಸಿನಿಮಾದ ಬಗ್ಗೆ ಅಘಾತಗೊಂಡೆವು ಮತ್ತು ಕನಲಿದೆವು. ‘ದ ಕಾಶ್ಮೀರ್ ಫೈಲ್ಸ್’ ಅಸಭ್ಯ ಪ್ರೊಪೋಗಾಂಡಾ ಸಿನಿಮಾ ಎಂದೆನಿಸಿತು. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತವಲ್ಲ ಅನ್ನಿಸಿತು” ಎಂದಿದ್ದರು.

ಕಾಶ್ಮೀರದಿಂದ ಪಂಡಿತರನ್ನು ಒಕ್ಕಲೆಬ್ಬಿಸಿದ ವಿಚಾರವಾಗಿ ವಾಸ್ತವ ಸಂಗತಿಗಳಿಗಿಂತಲೂ ಕಪೋಲ ಕಲ್ಪಿತ ಸುಳ್ಳುಗಳನ್ನೇ ಹೆಚ್ಚು ತುಂಬಿ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸಂಘ ಪರಿವಾರದವರು ಅತಿರೇಕದಲ್ಲಿ ಸಂಭ್ರಮಿಸಿದ್ದರು. ಈ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುವಾಗ ಮುಸ್ಲಿಮರ ವಿರುದ್ಧ ಘೋಷಣೆ ಕೂಗುವುದರಿಂದ ಹಿಡಿದು, ಮುಸ್ಲಿಮ್ ಸಮುದಾಯವನ್ನು ಬಾಯ್ಕಾಟ್‌ ಮಾಡಬೇಕು ಅನ್ನುವವರೆಗೆ ಅಸಭ್ಯ ವರ್ತನೆಗೆ ಎಡೆಮಾಡಿಕೊಟ್ಟಿತ್ತು. ಹಲವು ಬಿಜೆಪಿ ಸರ್ಕಾರಗಳು ಈ ಸಿನಿಮಾಗೆ ತೆರಿಗೆ ವಿನಾಯಿತಿ ಕೊಟ್ಟಿದ್ದು ಕೂಡ ವಿವಾದಕ್ಕೆ ಕಾರಣವಾಗಿತ್ತು.

ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ‘ಪೊಲೀಸ್‌ಮ್ಯಾನ್’, ‘ದ ಕಿಂಡರ್ಗಾರ್ಟನ್ ಟೀಚರ್’ ನಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ನದಾವ್ ಲ್ಯಾಪಿಡ್ ಮೇಲಿನ ಹೇಳಿಕೆಗಳನ್ನು ನೀಡಿದ ಮೇಲೆ ಸಂಘ ಪರಿವಾರ ಮತ್ತು ಬಿಜೆಪಿ ನದಾವ್ ವಿರುದ್ಧ ಕುಪಿತಗೊಂಡಿದ್ದವು. ನದಾವ್ ಅವರ ಹೇಳಿಕೆಯ ವಿರುದ್ಧ ಇಸ್ರೇಲಿ ರಾಯಭಾರಿ ಕೂಡ ಅಸಮಧಾನ ವ್ಯಕ್ತಪಡಿಸಿದ್ದರು.

ಈ ವಿವಾದದ ಕುರಿತು ಇಂಡಿಯಾ ಟುಡೆ ಇಂಗ್ಲಿಷ್ ಸುದ್ದಿ ಚಾನೆಲ್‌ನಲ್ಲಿ ಇತ್ತೀಚಿಗೆ ನದಾವ್ ಅವರನ್ನು ಸಂದರ್ಶಿಸಲಾಗಿತ್ತು. ಚಾನೆಲ್‌ನ ಆಂಕರ್ ರಾಹುಲ್ ಕನ್ವಾಲ್ ನಡೆಸಿದ ಸಂದರ್ಶನದ ತುಣುಕೊಂದು ಈಗ ವೈರಲ್ ಅಗಿದೆ. ಆ ವಿಡಿಯೋ ಸಂಭಾಷಣೆ ಹೀಗಿದೆ.

ರಾಹುಲ್ ಕನ್ವಾಲ್: ಎಲ್ಲಾ ತೀರ್ಪುಗಾರ ಸದಸ್ಯರು ನಿಮ್ಮ ಅನಿಸಿಕೆಯನ್ನು ಅನುಮೋದನೆ ಮಾಡಿದರು ಎಂಬುದಕ್ಕೆ ಏನು ಸಾಕ್ಷಿಯಿದೆ?

ಅದಕ್ಕೆ ನದಾವ್ ಹೀಗೆ ಪ್ರತಿಕ್ರಿಯಿಸುತ್ತಾರೆ: “ನಿಮಗೊಂದು ಸಲಹೆಯಿದೆ, ನೀವು ನಿಮ್ಮನ್ನು ಹಿರಿಯ ಪತ್ರಕರ್ತರು ಎಂದು ಅಂದುಕೊಳ್ಳುವುದರಿಂದ, ನೀವು ಫ್ರೆಂಚ್ ಮತ್ತು ಸ್ಪಾನಿಷ್ ತೀರ್ಪುಗಾರ ಸದಸ್ಯರಿಗೆ ಕರೆ ಮಾಡಿ ಕೇಳಬಹುದು”.

ರಾಹುಲ್ ಕನ್ವಾಲ್: “ಅದನ್ನು ನಾವು ಮಾಡಬಹುದು……..”

ನದಾವ್: “ಮಾಡಿ ಮಾಡಿ.. ನಿಮ್ಮ ಹತ್ತಿರ ಅವರ ಈಮೇಲ್ ಮತ್ತು ಫೋನ್ ನಂಬರ್ ಇದೆ ಅಂದುಕೊಳ್ತೀನಿ”.

ಹೀಗೆ ಚಲನಚಿತ್ರೋತ್ಸವದಲ್ಲಿ ಸಿನಿಮಾ ಬಗ್ಗೆ ಪಾಠ ಮಾಡಿದ ನದಾವ್ ಅವರು ಈಗ ಇಂಗ್ಲಿಷ್ ಸುದ್ದಿ ಟಿವಿ ಚಾನೆಲ್‌ನಲ್ಲಿ ಪತ್ರಿಕೋದ್ಯಮದ ಪಾಠ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಯಾವುದು ಪ್ರೊಪೋಗಾಂಡಾ ಎಂಬುವುದನ್ನು ನಿರ್ಧರಿಸುವುದು ವಿಷಯಾಧಾರಿತವಾದದ್ದು ಆಗಿದ್ದರೂ ಸಿನಿಮಾ ಬಗ್ಗೆ ತಾವಾಡಿದ ಮಾತುಗಳಿಗೆ ಬದ್ಧನಾಗಿದ್ದೇನೆ ಮತ್ತು ಅವನ್ನು ಯಾರಾದರೂ ಹೇಳಲೇಬೇಕಿತ್ತು ಎಂದು ನದಾವ್ ಹೇಳಿದ್ದಾರೆ. ಒಟ್ಟಿನಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಸಿನಿಮಾದ ಬಗ್ಗೆ ಅಂತಾರಾಷ್ಟ್ರಿಯ ಅತಿಥಿಯ ಮಾತುಗಳಿಂದ ಮುಜುಗರ ಅನುಭವಿಸಿದ ಸಂಘ ಪರಿವಾರದ ಬೆಂಬಲಿಗರು, ಸಿನಿಮಾವನ್ನು ಸಮರ್ಥಿಸಿಕೊಳ್ಳಲು ಒದ್ದಾಡುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಗೋಚರಿಸುತ್ತಿದೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...