Homeಮುಖಪುಟ'ದ ಕಾಶ್ಮೀರ್ ಫೈಲ್ಸ್' ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

‘ದ ಕಾಶ್ಮೀರ್ ಫೈಲ್ಸ್’ ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

- Advertisement -
- Advertisement -

ಗೋವಾದಲ್ಲಿ ಇತ್ತೀಚಿಗೆ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ, ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದ ತೀರ್ಪುಗಾರರ ಮುಖ್ಯಸ್ಥ ಇಸ್ರೇಲಿ ನಿರ್ದೇಶಕ ನದಾವ್ ಲ್ಯಾಪಿಡ್ ಅವರು ‘ದ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಬಗ್ಗೆ ಹೇಳಿದ್ದ ಮಾತುಗಳು ಸಂಘ ಪರಿವಾರ, ಕೇಂದ್ರ ಬಿಜೆಪಿ ಸರ್ಕಾರ ಮತ್ತು ಚಲನಚಿತ್ರೋತ್ಸವಕ್ಕೆ ಮುಜುಗರವನ್ನುಂಟುಮಾಡಿದ್ದವು.

ಚಿತ್ರೋತ್ಸವದಲ್ಲಿ ಪ್ರಶಸ್ತಿಗಾಗಿ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಸೆಣೆಸಿದ್ದ ಬಲಪಂಥೀಯ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರ ‘ದ ಕಾಶ್ಮೀರ್ ಫೈಲ್ಸ್’ ಆಯ್ಕೆಯಾಗಿದ್ದರ ಬಗ್ಗೆ ಲ್ಯಾಪಿಡ್ ಅಘಾತ ವ್ಯಕ್ತಪಡಿಸಿದ್ದರು. ತಮ್ಮ ಸಮಾರೋಪ ಭಾಷಣದಲ್ಲಿ ಚಲನಚಿತ್ರೋತ್ಸವದ ಮಹತ್ವ ಮತ್ತು ಒಳ್ಳೆಯ ಸಂಗತಿಗಳನ್ನು ಮೆಚ್ಚಿ ಹೊಗಳಿದ್ದ ಅವರು, ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ಸಿನಿಮಾಗಳಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಬಗ್ಗೆ ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದರು: “14 ಸಿನಿಮಾಗಳು ಅತ್ಯುತ್ತಮ ಸಿನಿಮಾ ಅನುಭವ ನೀಡಿದಂತಹವು. ಅವು ವಿಶಾಲವಾದ ಚರ್ಚೆಗೆ ಅನುವುಮಾಡಿಕೊಟ್ಟವು. ನಾವೆಲ್ಲಾ 15ನೇ ಸಿನಿಮಾದ ಬಗ್ಗೆ ಅಘಾತಗೊಂಡೆವು ಮತ್ತು ಕನಲಿದೆವು. ‘ದ ಕಾಶ್ಮೀರ್ ಫೈಲ್ಸ್’ ಅಸಭ್ಯ ಪ್ರೊಪೋಗಾಂಡಾ ಸಿನಿಮಾ ಎಂದೆನಿಸಿತು. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತವಲ್ಲ ಅನ್ನಿಸಿತು” ಎಂದಿದ್ದರು.

ಕಾಶ್ಮೀರದಿಂದ ಪಂಡಿತರನ್ನು ಒಕ್ಕಲೆಬ್ಬಿಸಿದ ವಿಚಾರವಾಗಿ ವಾಸ್ತವ ಸಂಗತಿಗಳಿಗಿಂತಲೂ ಕಪೋಲ ಕಲ್ಪಿತ ಸುಳ್ಳುಗಳನ್ನೇ ಹೆಚ್ಚು ತುಂಬಿ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸಂಘ ಪರಿವಾರದವರು ಅತಿರೇಕದಲ್ಲಿ ಸಂಭ್ರಮಿಸಿದ್ದರು. ಈ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುವಾಗ ಮುಸ್ಲಿಮರ ವಿರುದ್ಧ ಘೋಷಣೆ ಕೂಗುವುದರಿಂದ ಹಿಡಿದು, ಮುಸ್ಲಿಮ್ ಸಮುದಾಯವನ್ನು ಬಾಯ್ಕಾಟ್‌ ಮಾಡಬೇಕು ಅನ್ನುವವರೆಗೆ ಅಸಭ್ಯ ವರ್ತನೆಗೆ ಎಡೆಮಾಡಿಕೊಟ್ಟಿತ್ತು. ಹಲವು ಬಿಜೆಪಿ ಸರ್ಕಾರಗಳು ಈ ಸಿನಿಮಾಗೆ ತೆರಿಗೆ ವಿನಾಯಿತಿ ಕೊಟ್ಟಿದ್ದು ಕೂಡ ವಿವಾದಕ್ಕೆ ಕಾರಣವಾಗಿತ್ತು.

ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ‘ಪೊಲೀಸ್‌ಮ್ಯಾನ್’, ‘ದ ಕಿಂಡರ್ಗಾರ್ಟನ್ ಟೀಚರ್’ ನಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ನದಾವ್ ಲ್ಯಾಪಿಡ್ ಮೇಲಿನ ಹೇಳಿಕೆಗಳನ್ನು ನೀಡಿದ ಮೇಲೆ ಸಂಘ ಪರಿವಾರ ಮತ್ತು ಬಿಜೆಪಿ ನದಾವ್ ವಿರುದ್ಧ ಕುಪಿತಗೊಂಡಿದ್ದವು. ನದಾವ್ ಅವರ ಹೇಳಿಕೆಯ ವಿರುದ್ಧ ಇಸ್ರೇಲಿ ರಾಯಭಾರಿ ಕೂಡ ಅಸಮಧಾನ ವ್ಯಕ್ತಪಡಿಸಿದ್ದರು.

ಈ ವಿವಾದದ ಕುರಿತು ಇಂಡಿಯಾ ಟುಡೆ ಇಂಗ್ಲಿಷ್ ಸುದ್ದಿ ಚಾನೆಲ್‌ನಲ್ಲಿ ಇತ್ತೀಚಿಗೆ ನದಾವ್ ಅವರನ್ನು ಸಂದರ್ಶಿಸಲಾಗಿತ್ತು. ಚಾನೆಲ್‌ನ ಆಂಕರ್ ರಾಹುಲ್ ಕನ್ವಾಲ್ ನಡೆಸಿದ ಸಂದರ್ಶನದ ತುಣುಕೊಂದು ಈಗ ವೈರಲ್ ಅಗಿದೆ. ಆ ವಿಡಿಯೋ ಸಂಭಾಷಣೆ ಹೀಗಿದೆ.

ರಾಹುಲ್ ಕನ್ವಾಲ್: ಎಲ್ಲಾ ತೀರ್ಪುಗಾರ ಸದಸ್ಯರು ನಿಮ್ಮ ಅನಿಸಿಕೆಯನ್ನು ಅನುಮೋದನೆ ಮಾಡಿದರು ಎಂಬುದಕ್ಕೆ ಏನು ಸಾಕ್ಷಿಯಿದೆ?

ಅದಕ್ಕೆ ನದಾವ್ ಹೀಗೆ ಪ್ರತಿಕ್ರಿಯಿಸುತ್ತಾರೆ: “ನಿಮಗೊಂದು ಸಲಹೆಯಿದೆ, ನೀವು ನಿಮ್ಮನ್ನು ಹಿರಿಯ ಪತ್ರಕರ್ತರು ಎಂದು ಅಂದುಕೊಳ್ಳುವುದರಿಂದ, ನೀವು ಫ್ರೆಂಚ್ ಮತ್ತು ಸ್ಪಾನಿಷ್ ತೀರ್ಪುಗಾರ ಸದಸ್ಯರಿಗೆ ಕರೆ ಮಾಡಿ ಕೇಳಬಹುದು”.

ರಾಹುಲ್ ಕನ್ವಾಲ್: “ಅದನ್ನು ನಾವು ಮಾಡಬಹುದು……..”

ನದಾವ್: “ಮಾಡಿ ಮಾಡಿ.. ನಿಮ್ಮ ಹತ್ತಿರ ಅವರ ಈಮೇಲ್ ಮತ್ತು ಫೋನ್ ನಂಬರ್ ಇದೆ ಅಂದುಕೊಳ್ತೀನಿ”.

ಹೀಗೆ ಚಲನಚಿತ್ರೋತ್ಸವದಲ್ಲಿ ಸಿನಿಮಾ ಬಗ್ಗೆ ಪಾಠ ಮಾಡಿದ ನದಾವ್ ಅವರು ಈಗ ಇಂಗ್ಲಿಷ್ ಸುದ್ದಿ ಟಿವಿ ಚಾನೆಲ್‌ನಲ್ಲಿ ಪತ್ರಿಕೋದ್ಯಮದ ಪಾಠ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಯಾವುದು ಪ್ರೊಪೋಗಾಂಡಾ ಎಂಬುವುದನ್ನು ನಿರ್ಧರಿಸುವುದು ವಿಷಯಾಧಾರಿತವಾದದ್ದು ಆಗಿದ್ದರೂ ಸಿನಿಮಾ ಬಗ್ಗೆ ತಾವಾಡಿದ ಮಾತುಗಳಿಗೆ ಬದ್ಧನಾಗಿದ್ದೇನೆ ಮತ್ತು ಅವನ್ನು ಯಾರಾದರೂ ಹೇಳಲೇಬೇಕಿತ್ತು ಎಂದು ನದಾವ್ ಹೇಳಿದ್ದಾರೆ. ಒಟ್ಟಿನಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಸಿನಿಮಾದ ಬಗ್ಗೆ ಅಂತಾರಾಷ್ಟ್ರಿಯ ಅತಿಥಿಯ ಮಾತುಗಳಿಂದ ಮುಜುಗರ ಅನುಭವಿಸಿದ ಸಂಘ ಪರಿವಾರದ ಬೆಂಬಲಿಗರು, ಸಿನಿಮಾವನ್ನು ಸಮರ್ಥಿಸಿಕೊಳ್ಳಲು ಒದ್ದಾಡುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಗೋಚರಿಸುತ್ತಿದೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...