Homeಮುಖಪುಟ'ದ ಕಾಶ್ಮೀರ್ ಫೈಲ್ಸ್' ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

‘ದ ಕಾಶ್ಮೀರ್ ಫೈಲ್ಸ್’ ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

- Advertisement -
- Advertisement -

ಗೋವಾದಲ್ಲಿ ಇತ್ತೀಚಿಗೆ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ, ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದ ತೀರ್ಪುಗಾರರ ಮುಖ್ಯಸ್ಥ ಇಸ್ರೇಲಿ ನಿರ್ದೇಶಕ ನದಾವ್ ಲ್ಯಾಪಿಡ್ ಅವರು ‘ದ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಬಗ್ಗೆ ಹೇಳಿದ್ದ ಮಾತುಗಳು ಸಂಘ ಪರಿವಾರ, ಕೇಂದ್ರ ಬಿಜೆಪಿ ಸರ್ಕಾರ ಮತ್ತು ಚಲನಚಿತ್ರೋತ್ಸವಕ್ಕೆ ಮುಜುಗರವನ್ನುಂಟುಮಾಡಿದ್ದವು.

ಚಿತ್ರೋತ್ಸವದಲ್ಲಿ ಪ್ರಶಸ್ತಿಗಾಗಿ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಸೆಣೆಸಿದ್ದ ಬಲಪಂಥೀಯ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರ ‘ದ ಕಾಶ್ಮೀರ್ ಫೈಲ್ಸ್’ ಆಯ್ಕೆಯಾಗಿದ್ದರ ಬಗ್ಗೆ ಲ್ಯಾಪಿಡ್ ಅಘಾತ ವ್ಯಕ್ತಪಡಿಸಿದ್ದರು. ತಮ್ಮ ಸಮಾರೋಪ ಭಾಷಣದಲ್ಲಿ ಚಲನಚಿತ್ರೋತ್ಸವದ ಮಹತ್ವ ಮತ್ತು ಒಳ್ಳೆಯ ಸಂಗತಿಗಳನ್ನು ಮೆಚ್ಚಿ ಹೊಗಳಿದ್ದ ಅವರು, ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ಸಿನಿಮಾಗಳಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಬಗ್ಗೆ ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದರು: “14 ಸಿನಿಮಾಗಳು ಅತ್ಯುತ್ತಮ ಸಿನಿಮಾ ಅನುಭವ ನೀಡಿದಂತಹವು. ಅವು ವಿಶಾಲವಾದ ಚರ್ಚೆಗೆ ಅನುವುಮಾಡಿಕೊಟ್ಟವು. ನಾವೆಲ್ಲಾ 15ನೇ ಸಿನಿಮಾದ ಬಗ್ಗೆ ಅಘಾತಗೊಂಡೆವು ಮತ್ತು ಕನಲಿದೆವು. ‘ದ ಕಾಶ್ಮೀರ್ ಫೈಲ್ಸ್’ ಅಸಭ್ಯ ಪ್ರೊಪೋಗಾಂಡಾ ಸಿನಿಮಾ ಎಂದೆನಿಸಿತು. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತವಲ್ಲ ಅನ್ನಿಸಿತು” ಎಂದಿದ್ದರು.

ಕಾಶ್ಮೀರದಿಂದ ಪಂಡಿತರನ್ನು ಒಕ್ಕಲೆಬ್ಬಿಸಿದ ವಿಚಾರವಾಗಿ ವಾಸ್ತವ ಸಂಗತಿಗಳಿಗಿಂತಲೂ ಕಪೋಲ ಕಲ್ಪಿತ ಸುಳ್ಳುಗಳನ್ನೇ ಹೆಚ್ಚು ತುಂಬಿ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸಂಘ ಪರಿವಾರದವರು ಅತಿರೇಕದಲ್ಲಿ ಸಂಭ್ರಮಿಸಿದ್ದರು. ಈ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುವಾಗ ಮುಸ್ಲಿಮರ ವಿರುದ್ಧ ಘೋಷಣೆ ಕೂಗುವುದರಿಂದ ಹಿಡಿದು, ಮುಸ್ಲಿಮ್ ಸಮುದಾಯವನ್ನು ಬಾಯ್ಕಾಟ್‌ ಮಾಡಬೇಕು ಅನ್ನುವವರೆಗೆ ಅಸಭ್ಯ ವರ್ತನೆಗೆ ಎಡೆಮಾಡಿಕೊಟ್ಟಿತ್ತು. ಹಲವು ಬಿಜೆಪಿ ಸರ್ಕಾರಗಳು ಈ ಸಿನಿಮಾಗೆ ತೆರಿಗೆ ವಿನಾಯಿತಿ ಕೊಟ್ಟಿದ್ದು ಕೂಡ ವಿವಾದಕ್ಕೆ ಕಾರಣವಾಗಿತ್ತು.

ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ‘ಪೊಲೀಸ್‌ಮ್ಯಾನ್’, ‘ದ ಕಿಂಡರ್ಗಾರ್ಟನ್ ಟೀಚರ್’ ನಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ನದಾವ್ ಲ್ಯಾಪಿಡ್ ಮೇಲಿನ ಹೇಳಿಕೆಗಳನ್ನು ನೀಡಿದ ಮೇಲೆ ಸಂಘ ಪರಿವಾರ ಮತ್ತು ಬಿಜೆಪಿ ನದಾವ್ ವಿರುದ್ಧ ಕುಪಿತಗೊಂಡಿದ್ದವು. ನದಾವ್ ಅವರ ಹೇಳಿಕೆಯ ವಿರುದ್ಧ ಇಸ್ರೇಲಿ ರಾಯಭಾರಿ ಕೂಡ ಅಸಮಧಾನ ವ್ಯಕ್ತಪಡಿಸಿದ್ದರು.

ಈ ವಿವಾದದ ಕುರಿತು ಇಂಡಿಯಾ ಟುಡೆ ಇಂಗ್ಲಿಷ್ ಸುದ್ದಿ ಚಾನೆಲ್‌ನಲ್ಲಿ ಇತ್ತೀಚಿಗೆ ನದಾವ್ ಅವರನ್ನು ಸಂದರ್ಶಿಸಲಾಗಿತ್ತು. ಚಾನೆಲ್‌ನ ಆಂಕರ್ ರಾಹುಲ್ ಕನ್ವಾಲ್ ನಡೆಸಿದ ಸಂದರ್ಶನದ ತುಣುಕೊಂದು ಈಗ ವೈರಲ್ ಅಗಿದೆ. ಆ ವಿಡಿಯೋ ಸಂಭಾಷಣೆ ಹೀಗಿದೆ.

ರಾಹುಲ್ ಕನ್ವಾಲ್: ಎಲ್ಲಾ ತೀರ್ಪುಗಾರ ಸದಸ್ಯರು ನಿಮ್ಮ ಅನಿಸಿಕೆಯನ್ನು ಅನುಮೋದನೆ ಮಾಡಿದರು ಎಂಬುದಕ್ಕೆ ಏನು ಸಾಕ್ಷಿಯಿದೆ?

ಅದಕ್ಕೆ ನದಾವ್ ಹೀಗೆ ಪ್ರತಿಕ್ರಿಯಿಸುತ್ತಾರೆ: “ನಿಮಗೊಂದು ಸಲಹೆಯಿದೆ, ನೀವು ನಿಮ್ಮನ್ನು ಹಿರಿಯ ಪತ್ರಕರ್ತರು ಎಂದು ಅಂದುಕೊಳ್ಳುವುದರಿಂದ, ನೀವು ಫ್ರೆಂಚ್ ಮತ್ತು ಸ್ಪಾನಿಷ್ ತೀರ್ಪುಗಾರ ಸದಸ್ಯರಿಗೆ ಕರೆ ಮಾಡಿ ಕೇಳಬಹುದು”.

ರಾಹುಲ್ ಕನ್ವಾಲ್: “ಅದನ್ನು ನಾವು ಮಾಡಬಹುದು……..”

ನದಾವ್: “ಮಾಡಿ ಮಾಡಿ.. ನಿಮ್ಮ ಹತ್ತಿರ ಅವರ ಈಮೇಲ್ ಮತ್ತು ಫೋನ್ ನಂಬರ್ ಇದೆ ಅಂದುಕೊಳ್ತೀನಿ”.

ಹೀಗೆ ಚಲನಚಿತ್ರೋತ್ಸವದಲ್ಲಿ ಸಿನಿಮಾ ಬಗ್ಗೆ ಪಾಠ ಮಾಡಿದ ನದಾವ್ ಅವರು ಈಗ ಇಂಗ್ಲಿಷ್ ಸುದ್ದಿ ಟಿವಿ ಚಾನೆಲ್‌ನಲ್ಲಿ ಪತ್ರಿಕೋದ್ಯಮದ ಪಾಠ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಯಾವುದು ಪ್ರೊಪೋಗಾಂಡಾ ಎಂಬುವುದನ್ನು ನಿರ್ಧರಿಸುವುದು ವಿಷಯಾಧಾರಿತವಾದದ್ದು ಆಗಿದ್ದರೂ ಸಿನಿಮಾ ಬಗ್ಗೆ ತಾವಾಡಿದ ಮಾತುಗಳಿಗೆ ಬದ್ಧನಾಗಿದ್ದೇನೆ ಮತ್ತು ಅವನ್ನು ಯಾರಾದರೂ ಹೇಳಲೇಬೇಕಿತ್ತು ಎಂದು ನದಾವ್ ಹೇಳಿದ್ದಾರೆ. ಒಟ್ಟಿನಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಸಿನಿಮಾದ ಬಗ್ಗೆ ಅಂತಾರಾಷ್ಟ್ರಿಯ ಅತಿಥಿಯ ಮಾತುಗಳಿಂದ ಮುಜುಗರ ಅನುಭವಿಸಿದ ಸಂಘ ಪರಿವಾರದ ಬೆಂಬಲಿಗರು, ಸಿನಿಮಾವನ್ನು ಸಮರ್ಥಿಸಿಕೊಳ್ಳಲು ಒದ್ದಾಡುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಗೋಚರಿಸುತ್ತಿದೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...