Homeಮುಖಪುಟ'ದ ಕಾಶ್ಮೀರ್ ಫೈಲ್ಸ್' ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

‘ದ ಕಾಶ್ಮೀರ್ ಫೈಲ್ಸ್’ ಟೀಕಿಸಿದ್ದ ಇಸ್ರೇಲಿ ನಿರ್ದೇಶಕರಿಂದ ಪತ್ರಿಕೋದ್ಯಮ ಪಾಠ; ವೈರಲ್ ಆದ ವಿಡಿಯೋ

- Advertisement -
- Advertisement -

ಗೋವಾದಲ್ಲಿ ಇತ್ತೀಚಿಗೆ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ, ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದ ತೀರ್ಪುಗಾರರ ಮುಖ್ಯಸ್ಥ ಇಸ್ರೇಲಿ ನಿರ್ದೇಶಕ ನದಾವ್ ಲ್ಯಾಪಿಡ್ ಅವರು ‘ದ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಬಗ್ಗೆ ಹೇಳಿದ್ದ ಮಾತುಗಳು ಸಂಘ ಪರಿವಾರ, ಕೇಂದ್ರ ಬಿಜೆಪಿ ಸರ್ಕಾರ ಮತ್ತು ಚಲನಚಿತ್ರೋತ್ಸವಕ್ಕೆ ಮುಜುಗರವನ್ನುಂಟುಮಾಡಿದ್ದವು.

ಚಿತ್ರೋತ್ಸವದಲ್ಲಿ ಪ್ರಶಸ್ತಿಗಾಗಿ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಸೆಣೆಸಿದ್ದ ಬಲಪಂಥೀಯ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರ ‘ದ ಕಾಶ್ಮೀರ್ ಫೈಲ್ಸ್’ ಆಯ್ಕೆಯಾಗಿದ್ದರ ಬಗ್ಗೆ ಲ್ಯಾಪಿಡ್ ಅಘಾತ ವ್ಯಕ್ತಪಡಿಸಿದ್ದರು. ತಮ್ಮ ಸಮಾರೋಪ ಭಾಷಣದಲ್ಲಿ ಚಲನಚಿತ್ರೋತ್ಸವದ ಮಹತ್ವ ಮತ್ತು ಒಳ್ಳೆಯ ಸಂಗತಿಗಳನ್ನು ಮೆಚ್ಚಿ ಹೊಗಳಿದ್ದ ಅವರು, ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ಸಿನಿಮಾಗಳಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಬಗ್ಗೆ ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದರು: “14 ಸಿನಿಮಾಗಳು ಅತ್ಯುತ್ತಮ ಸಿನಿಮಾ ಅನುಭವ ನೀಡಿದಂತಹವು. ಅವು ವಿಶಾಲವಾದ ಚರ್ಚೆಗೆ ಅನುವುಮಾಡಿಕೊಟ್ಟವು. ನಾವೆಲ್ಲಾ 15ನೇ ಸಿನಿಮಾದ ಬಗ್ಗೆ ಅಘಾತಗೊಂಡೆವು ಮತ್ತು ಕನಲಿದೆವು. ‘ದ ಕಾಶ್ಮೀರ್ ಫೈಲ್ಸ್’ ಅಸಭ್ಯ ಪ್ರೊಪೋಗಾಂಡಾ ಸಿನಿಮಾ ಎಂದೆನಿಸಿತು. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತವಲ್ಲ ಅನ್ನಿಸಿತು” ಎಂದಿದ್ದರು.

ಕಾಶ್ಮೀರದಿಂದ ಪಂಡಿತರನ್ನು ಒಕ್ಕಲೆಬ್ಬಿಸಿದ ವಿಚಾರವಾಗಿ ವಾಸ್ತವ ಸಂಗತಿಗಳಿಗಿಂತಲೂ ಕಪೋಲ ಕಲ್ಪಿತ ಸುಳ್ಳುಗಳನ್ನೇ ಹೆಚ್ಚು ತುಂಬಿ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸಂಘ ಪರಿವಾರದವರು ಅತಿರೇಕದಲ್ಲಿ ಸಂಭ್ರಮಿಸಿದ್ದರು. ಈ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುವಾಗ ಮುಸ್ಲಿಮರ ವಿರುದ್ಧ ಘೋಷಣೆ ಕೂಗುವುದರಿಂದ ಹಿಡಿದು, ಮುಸ್ಲಿಮ್ ಸಮುದಾಯವನ್ನು ಬಾಯ್ಕಾಟ್‌ ಮಾಡಬೇಕು ಅನ್ನುವವರೆಗೆ ಅಸಭ್ಯ ವರ್ತನೆಗೆ ಎಡೆಮಾಡಿಕೊಟ್ಟಿತ್ತು. ಹಲವು ಬಿಜೆಪಿ ಸರ್ಕಾರಗಳು ಈ ಸಿನಿಮಾಗೆ ತೆರಿಗೆ ವಿನಾಯಿತಿ ಕೊಟ್ಟಿದ್ದು ಕೂಡ ವಿವಾದಕ್ಕೆ ಕಾರಣವಾಗಿತ್ತು.

ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ‘ಪೊಲೀಸ್‌ಮ್ಯಾನ್’, ‘ದ ಕಿಂಡರ್ಗಾರ್ಟನ್ ಟೀಚರ್’ ನಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ನದಾವ್ ಲ್ಯಾಪಿಡ್ ಮೇಲಿನ ಹೇಳಿಕೆಗಳನ್ನು ನೀಡಿದ ಮೇಲೆ ಸಂಘ ಪರಿವಾರ ಮತ್ತು ಬಿಜೆಪಿ ನದಾವ್ ವಿರುದ್ಧ ಕುಪಿತಗೊಂಡಿದ್ದವು. ನದಾವ್ ಅವರ ಹೇಳಿಕೆಯ ವಿರುದ್ಧ ಇಸ್ರೇಲಿ ರಾಯಭಾರಿ ಕೂಡ ಅಸಮಧಾನ ವ್ಯಕ್ತಪಡಿಸಿದ್ದರು.

ಈ ವಿವಾದದ ಕುರಿತು ಇಂಡಿಯಾ ಟುಡೆ ಇಂಗ್ಲಿಷ್ ಸುದ್ದಿ ಚಾನೆಲ್‌ನಲ್ಲಿ ಇತ್ತೀಚಿಗೆ ನದಾವ್ ಅವರನ್ನು ಸಂದರ್ಶಿಸಲಾಗಿತ್ತು. ಚಾನೆಲ್‌ನ ಆಂಕರ್ ರಾಹುಲ್ ಕನ್ವಾಲ್ ನಡೆಸಿದ ಸಂದರ್ಶನದ ತುಣುಕೊಂದು ಈಗ ವೈರಲ್ ಅಗಿದೆ. ಆ ವಿಡಿಯೋ ಸಂಭಾಷಣೆ ಹೀಗಿದೆ.

ರಾಹುಲ್ ಕನ್ವಾಲ್: ಎಲ್ಲಾ ತೀರ್ಪುಗಾರ ಸದಸ್ಯರು ನಿಮ್ಮ ಅನಿಸಿಕೆಯನ್ನು ಅನುಮೋದನೆ ಮಾಡಿದರು ಎಂಬುದಕ್ಕೆ ಏನು ಸಾಕ್ಷಿಯಿದೆ?

ಅದಕ್ಕೆ ನದಾವ್ ಹೀಗೆ ಪ್ರತಿಕ್ರಿಯಿಸುತ್ತಾರೆ: “ನಿಮಗೊಂದು ಸಲಹೆಯಿದೆ, ನೀವು ನಿಮ್ಮನ್ನು ಹಿರಿಯ ಪತ್ರಕರ್ತರು ಎಂದು ಅಂದುಕೊಳ್ಳುವುದರಿಂದ, ನೀವು ಫ್ರೆಂಚ್ ಮತ್ತು ಸ್ಪಾನಿಷ್ ತೀರ್ಪುಗಾರ ಸದಸ್ಯರಿಗೆ ಕರೆ ಮಾಡಿ ಕೇಳಬಹುದು”.

ರಾಹುಲ್ ಕನ್ವಾಲ್: “ಅದನ್ನು ನಾವು ಮಾಡಬಹುದು……..”

ನದಾವ್: “ಮಾಡಿ ಮಾಡಿ.. ನಿಮ್ಮ ಹತ್ತಿರ ಅವರ ಈಮೇಲ್ ಮತ್ತು ಫೋನ್ ನಂಬರ್ ಇದೆ ಅಂದುಕೊಳ್ತೀನಿ”.

ಹೀಗೆ ಚಲನಚಿತ್ರೋತ್ಸವದಲ್ಲಿ ಸಿನಿಮಾ ಬಗ್ಗೆ ಪಾಠ ಮಾಡಿದ ನದಾವ್ ಅವರು ಈಗ ಇಂಗ್ಲಿಷ್ ಸುದ್ದಿ ಟಿವಿ ಚಾನೆಲ್‌ನಲ್ಲಿ ಪತ್ರಿಕೋದ್ಯಮದ ಪಾಠ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಯಾವುದು ಪ್ರೊಪೋಗಾಂಡಾ ಎಂಬುವುದನ್ನು ನಿರ್ಧರಿಸುವುದು ವಿಷಯಾಧಾರಿತವಾದದ್ದು ಆಗಿದ್ದರೂ ಸಿನಿಮಾ ಬಗ್ಗೆ ತಾವಾಡಿದ ಮಾತುಗಳಿಗೆ ಬದ್ಧನಾಗಿದ್ದೇನೆ ಮತ್ತು ಅವನ್ನು ಯಾರಾದರೂ ಹೇಳಲೇಬೇಕಿತ್ತು ಎಂದು ನದಾವ್ ಹೇಳಿದ್ದಾರೆ. ಒಟ್ಟಿನಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಸಿನಿಮಾದ ಬಗ್ಗೆ ಅಂತಾರಾಷ್ಟ್ರಿಯ ಅತಿಥಿಯ ಮಾತುಗಳಿಂದ ಮುಜುಗರ ಅನುಭವಿಸಿದ ಸಂಘ ಪರಿವಾರದ ಬೆಂಬಲಿಗರು, ಸಿನಿಮಾವನ್ನು ಸಮರ್ಥಿಸಿಕೊಳ್ಳಲು ಒದ್ದಾಡುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಗೋಚರಿಸುತ್ತಿದೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...