Homeಮುಖಪುಟಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ

ಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ

- Advertisement -
- Advertisement -

ಬಜರಂಗದಳದ ಕಾರ್ಯಕರ್ತನ ಕೊಲೆ ಹಿನ್ನೆಲೆಯಲ್ಲಿ ಉದ್ವಿಗ್ನಗೊಂಡಿದ್ದ ಶಿವಮೊಗ್ಗದ ಪರಿಸ್ಥಿತಿ ಈಗ ಶಾಂತವಾಗಿದೆ. ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಹೇರಲಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ವ್ಯಾಪರ ವಹಿವಾಟು ಬಂದ್ ಆಗಿದೆ.

ಸೋಮವಾರ ಕೊಲೆ ಹಿನ್ನೆಲೆಯಲ್ಲಿ 144 ಸೆಕ್ಷನ್ ಹೇರಿದ್ದರೂ ಸಹ ಶವದ ಮೆರವಣಿಗೆಗೆ ಅವಕಾಶ ಕೊಟ್ಟಿದ್ದು, ಸಚಿವ ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರ ಮೆರವಣಿಗೆಯ ನೇತೃತ್ವ ವಹಿಸಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಬಿಜೆಪಿ-ಆರ್‌ಎಸ್‌ಎಸ್‌ ಕಾರ್ಯಕರ್ತರು ಮುಸ್ಲಿಂ ಮಾಲಿಕತ್ವದ ಸುಮಾರು 300 ಅಂಗಡಿ-ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. 45 ಜನರ ಮೇಲೆ ಹಲ್ಲೆಯಾಗಿದ್ದು, ಇಬ್ಬರೂ ಪತ್ರಕರ್ತರು ಸಹ ಗಾಯಗೊಂಡಿದ್ದಾರೆ. ಶಿವಮೊಗ್ಗದ ಹಳೆ ಟೌನ್‌ನಲ್ಲಿ ದಾಂಧಲೆ ನಡೆಸಿ ಟೈರ್‌ಗಳಿಗೆ ಬೆಂಕಿ ಹಚ್ಚಿದ್ದರು. ಹಾಗಾಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು. ಈ ಪೊಲೀಸ್ ವೈಫಲ್ಯದ ಕುರಿತು ಸಾರ್ವಜನಿಕರಿಂದ ತೀವ್ರ ಟೀಕೆ ಕೇಳಿಬಂದಿತ್ತು. ಆಡಳಿತ ಸರ್ಕಾರ ಬೇಕಂತಲೆ ಗಲಭೆಗೆ ಅವಕಾಶ ಮಾಡಿಕೊಡುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಲಾಗಿತ್ತು. ಸಚಿವ ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರರವರು ಬೇಕಂತಲೆ ಪರಿಸ್ಥಿತಿ ಉದ್ವಿಗ್ವಗೊಳಿಸಿದರು. ಅವರು ಸುಮ್ಮನಿದ್ದರೆ ಈ ಅನಾಹುತ ತಡೆಯಬಹುದಿತ್ತು, ಅದೇ ಜಿಲ್ಲೆಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸಹ ಇದಕ್ಕೆಲ್ಲ ಅವಕಾಶ ಕೊಡಬಾರದಿತ್ತು ಎಂಬ ಅಭಿಪ್ರಾಯಗಳು ಕೇಳಿಬಂದಿವೆ.

ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಬೇರೆ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸ್ ಬಲ ಕರೆಸಿಕೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದೆ. ರ್ಯಾಪಿಡ್ ಆಕ್ಷನ್ ಫೋರ್ಸ್ ಶಿವಮೊಗ್ಗದಲ್ಲಿ ಬೀಡುಬಿಟ್ಟಿದೆ. ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಮುಂದುವರೆಸಿದೆ. ಹಲವೆಡೆ ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು ಆಸ್ಪತ್ರೆ-ಔಷಧಿಯಂತಹ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

“ಕೊಲೆ ನಂತರ ನಡೆದಿರುವ ಹಿಂಸಾಚಾರದ ಬಗ್ಗೆ ಮಾಹಿತಿ ಕಲೆ ಹಾಕಿದ್ದೇವೆ. ಸುಮಾರು 13 ಸ್ಥಳಗಳಲ್ಲಿ ಅಹಿತಕರ ಘಟನೆಗಳು ನಡೆದಿವೆ. ಕೆಲವೆಡೆ ವಾಹನಗಳಿಗೆ ಬೆಂಕಿ ಹಾಕಿದ್ದು, ಸಂಪೂರ್ಣ ಭಸ್ಮಗೊಂಡಿವೆ. ಹಾಗಾಗಿ ವಾಹನ ಮಾಲೀಕರನ್ನು ಗುರುತಿಸುವ ಕೆಲಸ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತೇವೆ, ಹಿಂಸಾಚಾರದಲ್ಲಿ ಭಾಗಿಯಾದವರನ್ನು ಬಂಧಿಸುತ್ತೇವೆ” ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬುಧವಾರ ಬೆಳಗಿನ ಜಾವ 6 ಗಂಟೆಯ ತನಕ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಜನರು ಶಾಂತ ರೀತಿಯಿಂದ ವರ್ತಿಸಬೇಕೆಂದು ಮನವಿ ಮಾಡಿದ್ದಾರೆ. ಇನ್ನೊಂದೆಡೆ ಪೊಲೀಸರು ತನಿಖಾ ಕಾರ್ಯದಲ್ಲಿ ನಿರತರಾಗಿದ್ದು, ಇದುವರೆಗೂ ಮೂವರನ್ನು ಬಂಧಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಇತರ 12 ಮಂದಿಯನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಮೃತನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ಹಿಂದೂ, ಹಿಂದುತ್ವ ಎಂದಿದ್ದಕ್ಕೆ ನನ್ನ ತಮ್ಮ ಆ ಪರಿಸ್ಥಿತಿಯಲ್ಲಿ ಬಿದ್ದಿದ್ದಾನೆ. ದಯವಿಟ್ಟು ಎಲ್ಲರೂ ಒಂದು ಸಲ ನೋಡಿ, ಎಲ್ಲಾ ನನ್ನ ಅಣ್ಣ-ತಮ್ಮಂದಿರಿಗೂ ಕೈಮುಗಿದು ಬೇಡಿಕೊಳ್ಳುತ್ತೇನೆ, ಮುಸ್ಲಿಂ, ಹಿಂದೂ ಎಲ್ಲಾ ಸಹೋದರರಿಗೆ ಬೇಡಿಕೊಳ್ಳುತ್ತೇನೆ. ನಿಮ್ಮ ಅಪ್ಪ ಅಮ್ಮನಿಗೆ ಒಳ್ಳೆಯ ಮಕ್ಕಳಾಗಿರಿ ಹೊರತು, ಇದನ್ನೆಲ್ಲ ಮಾಡಿಕೊಳ್ಳಲು ಹೋಗಬೇಡಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ; ಹರ್ಷ ಕೊಲೆ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...