Homeಮುಖಪುಟಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ

ಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ

- Advertisement -
- Advertisement -

ಬಜರಂಗದಳದ ಕಾರ್ಯಕರ್ತನ ಕೊಲೆ ಹಿನ್ನೆಲೆಯಲ್ಲಿ ಉದ್ವಿಗ್ನಗೊಂಡಿದ್ದ ಶಿವಮೊಗ್ಗದ ಪರಿಸ್ಥಿತಿ ಈಗ ಶಾಂತವಾಗಿದೆ. ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಹೇರಲಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ವ್ಯಾಪರ ವಹಿವಾಟು ಬಂದ್ ಆಗಿದೆ.

ಸೋಮವಾರ ಕೊಲೆ ಹಿನ್ನೆಲೆಯಲ್ಲಿ 144 ಸೆಕ್ಷನ್ ಹೇರಿದ್ದರೂ ಸಹ ಶವದ ಮೆರವಣಿಗೆಗೆ ಅವಕಾಶ ಕೊಟ್ಟಿದ್ದು, ಸಚಿವ ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರ ಮೆರವಣಿಗೆಯ ನೇತೃತ್ವ ವಹಿಸಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಬಿಜೆಪಿ-ಆರ್‌ಎಸ್‌ಎಸ್‌ ಕಾರ್ಯಕರ್ತರು ಮುಸ್ಲಿಂ ಮಾಲಿಕತ್ವದ ಸುಮಾರು 300 ಅಂಗಡಿ-ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. 45 ಜನರ ಮೇಲೆ ಹಲ್ಲೆಯಾಗಿದ್ದು, ಇಬ್ಬರೂ ಪತ್ರಕರ್ತರು ಸಹ ಗಾಯಗೊಂಡಿದ್ದಾರೆ. ಶಿವಮೊಗ್ಗದ ಹಳೆ ಟೌನ್‌ನಲ್ಲಿ ದಾಂಧಲೆ ನಡೆಸಿ ಟೈರ್‌ಗಳಿಗೆ ಬೆಂಕಿ ಹಚ್ಚಿದ್ದರು. ಹಾಗಾಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು. ಈ ಪೊಲೀಸ್ ವೈಫಲ್ಯದ ಕುರಿತು ಸಾರ್ವಜನಿಕರಿಂದ ತೀವ್ರ ಟೀಕೆ ಕೇಳಿಬಂದಿತ್ತು. ಆಡಳಿತ ಸರ್ಕಾರ ಬೇಕಂತಲೆ ಗಲಭೆಗೆ ಅವಕಾಶ ಮಾಡಿಕೊಡುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಲಾಗಿತ್ತು. ಸಚಿವ ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರರವರು ಬೇಕಂತಲೆ ಪರಿಸ್ಥಿತಿ ಉದ್ವಿಗ್ವಗೊಳಿಸಿದರು. ಅವರು ಸುಮ್ಮನಿದ್ದರೆ ಈ ಅನಾಹುತ ತಡೆಯಬಹುದಿತ್ತು, ಅದೇ ಜಿಲ್ಲೆಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸಹ ಇದಕ್ಕೆಲ್ಲ ಅವಕಾಶ ಕೊಡಬಾರದಿತ್ತು ಎಂಬ ಅಭಿಪ್ರಾಯಗಳು ಕೇಳಿಬಂದಿವೆ.

ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಬೇರೆ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸ್ ಬಲ ಕರೆಸಿಕೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದೆ. ರ್ಯಾಪಿಡ್ ಆಕ್ಷನ್ ಫೋರ್ಸ್ ಶಿವಮೊಗ್ಗದಲ್ಲಿ ಬೀಡುಬಿಟ್ಟಿದೆ. ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಮುಂದುವರೆಸಿದೆ. ಹಲವೆಡೆ ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು ಆಸ್ಪತ್ರೆ-ಔಷಧಿಯಂತಹ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

“ಕೊಲೆ ನಂತರ ನಡೆದಿರುವ ಹಿಂಸಾಚಾರದ ಬಗ್ಗೆ ಮಾಹಿತಿ ಕಲೆ ಹಾಕಿದ್ದೇವೆ. ಸುಮಾರು 13 ಸ್ಥಳಗಳಲ್ಲಿ ಅಹಿತಕರ ಘಟನೆಗಳು ನಡೆದಿವೆ. ಕೆಲವೆಡೆ ವಾಹನಗಳಿಗೆ ಬೆಂಕಿ ಹಾಕಿದ್ದು, ಸಂಪೂರ್ಣ ಭಸ್ಮಗೊಂಡಿವೆ. ಹಾಗಾಗಿ ವಾಹನ ಮಾಲೀಕರನ್ನು ಗುರುತಿಸುವ ಕೆಲಸ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತೇವೆ, ಹಿಂಸಾಚಾರದಲ್ಲಿ ಭಾಗಿಯಾದವರನ್ನು ಬಂಧಿಸುತ್ತೇವೆ” ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬುಧವಾರ ಬೆಳಗಿನ ಜಾವ 6 ಗಂಟೆಯ ತನಕ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಜನರು ಶಾಂತ ರೀತಿಯಿಂದ ವರ್ತಿಸಬೇಕೆಂದು ಮನವಿ ಮಾಡಿದ್ದಾರೆ. ಇನ್ನೊಂದೆಡೆ ಪೊಲೀಸರು ತನಿಖಾ ಕಾರ್ಯದಲ್ಲಿ ನಿರತರಾಗಿದ್ದು, ಇದುವರೆಗೂ ಮೂವರನ್ನು ಬಂಧಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಇತರ 12 ಮಂದಿಯನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಮೃತನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ಹಿಂದೂ, ಹಿಂದುತ್ವ ಎಂದಿದ್ದಕ್ಕೆ ನನ್ನ ತಮ್ಮ ಆ ಪರಿಸ್ಥಿತಿಯಲ್ಲಿ ಬಿದ್ದಿದ್ದಾನೆ. ದಯವಿಟ್ಟು ಎಲ್ಲರೂ ಒಂದು ಸಲ ನೋಡಿ, ಎಲ್ಲಾ ನನ್ನ ಅಣ್ಣ-ತಮ್ಮಂದಿರಿಗೂ ಕೈಮುಗಿದು ಬೇಡಿಕೊಳ್ಳುತ್ತೇನೆ, ಮುಸ್ಲಿಂ, ಹಿಂದೂ ಎಲ್ಲಾ ಸಹೋದರರಿಗೆ ಬೇಡಿಕೊಳ್ಳುತ್ತೇನೆ. ನಿಮ್ಮ ಅಪ್ಪ ಅಮ್ಮನಿಗೆ ಒಳ್ಳೆಯ ಮಕ್ಕಳಾಗಿರಿ ಹೊರತು, ಇದನ್ನೆಲ್ಲ ಮಾಡಿಕೊಳ್ಳಲು ಹೋಗಬೇಡಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ; ಹರ್ಷ ಕೊಲೆ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...