Homeಮುಖಪುಟಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ

ಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ

- Advertisement -
- Advertisement -

ಬಜರಂಗದಳದ ಕಾರ್ಯಕರ್ತನ ಕೊಲೆ ಹಿನ್ನೆಲೆಯಲ್ಲಿ ಉದ್ವಿಗ್ನಗೊಂಡಿದ್ದ ಶಿವಮೊಗ್ಗದ ಪರಿಸ್ಥಿತಿ ಈಗ ಶಾಂತವಾಗಿದೆ. ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಹೇರಲಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ವ್ಯಾಪರ ವಹಿವಾಟು ಬಂದ್ ಆಗಿದೆ.

ಸೋಮವಾರ ಕೊಲೆ ಹಿನ್ನೆಲೆಯಲ್ಲಿ 144 ಸೆಕ್ಷನ್ ಹೇರಿದ್ದರೂ ಸಹ ಶವದ ಮೆರವಣಿಗೆಗೆ ಅವಕಾಶ ಕೊಟ್ಟಿದ್ದು, ಸಚಿವ ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರ ಮೆರವಣಿಗೆಯ ನೇತೃತ್ವ ವಹಿಸಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಬಿಜೆಪಿ-ಆರ್‌ಎಸ್‌ಎಸ್‌ ಕಾರ್ಯಕರ್ತರು ಮುಸ್ಲಿಂ ಮಾಲಿಕತ್ವದ ಸುಮಾರು 300 ಅಂಗಡಿ-ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. 45 ಜನರ ಮೇಲೆ ಹಲ್ಲೆಯಾಗಿದ್ದು, ಇಬ್ಬರೂ ಪತ್ರಕರ್ತರು ಸಹ ಗಾಯಗೊಂಡಿದ್ದಾರೆ. ಶಿವಮೊಗ್ಗದ ಹಳೆ ಟೌನ್‌ನಲ್ಲಿ ದಾಂಧಲೆ ನಡೆಸಿ ಟೈರ್‌ಗಳಿಗೆ ಬೆಂಕಿ ಹಚ್ಚಿದ್ದರು. ಹಾಗಾಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು. ಈ ಪೊಲೀಸ್ ವೈಫಲ್ಯದ ಕುರಿತು ಸಾರ್ವಜನಿಕರಿಂದ ತೀವ್ರ ಟೀಕೆ ಕೇಳಿಬಂದಿತ್ತು. ಆಡಳಿತ ಸರ್ಕಾರ ಬೇಕಂತಲೆ ಗಲಭೆಗೆ ಅವಕಾಶ ಮಾಡಿಕೊಡುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಲಾಗಿತ್ತು. ಸಚಿವ ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರರವರು ಬೇಕಂತಲೆ ಪರಿಸ್ಥಿತಿ ಉದ್ವಿಗ್ವಗೊಳಿಸಿದರು. ಅವರು ಸುಮ್ಮನಿದ್ದರೆ ಈ ಅನಾಹುತ ತಡೆಯಬಹುದಿತ್ತು, ಅದೇ ಜಿಲ್ಲೆಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸಹ ಇದಕ್ಕೆಲ್ಲ ಅವಕಾಶ ಕೊಡಬಾರದಿತ್ತು ಎಂಬ ಅಭಿಪ್ರಾಯಗಳು ಕೇಳಿಬಂದಿವೆ.

ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಬೇರೆ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸ್ ಬಲ ಕರೆಸಿಕೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದೆ. ರ್ಯಾಪಿಡ್ ಆಕ್ಷನ್ ಫೋರ್ಸ್ ಶಿವಮೊಗ್ಗದಲ್ಲಿ ಬೀಡುಬಿಟ್ಟಿದೆ. ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಮುಂದುವರೆಸಿದೆ. ಹಲವೆಡೆ ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು ಆಸ್ಪತ್ರೆ-ಔಷಧಿಯಂತಹ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

“ಕೊಲೆ ನಂತರ ನಡೆದಿರುವ ಹಿಂಸಾಚಾರದ ಬಗ್ಗೆ ಮಾಹಿತಿ ಕಲೆ ಹಾಕಿದ್ದೇವೆ. ಸುಮಾರು 13 ಸ್ಥಳಗಳಲ್ಲಿ ಅಹಿತಕರ ಘಟನೆಗಳು ನಡೆದಿವೆ. ಕೆಲವೆಡೆ ವಾಹನಗಳಿಗೆ ಬೆಂಕಿ ಹಾಕಿದ್ದು, ಸಂಪೂರ್ಣ ಭಸ್ಮಗೊಂಡಿವೆ. ಹಾಗಾಗಿ ವಾಹನ ಮಾಲೀಕರನ್ನು ಗುರುತಿಸುವ ಕೆಲಸ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತೇವೆ, ಹಿಂಸಾಚಾರದಲ್ಲಿ ಭಾಗಿಯಾದವರನ್ನು ಬಂಧಿಸುತ್ತೇವೆ” ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬುಧವಾರ ಬೆಳಗಿನ ಜಾವ 6 ಗಂಟೆಯ ತನಕ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಜನರು ಶಾಂತ ರೀತಿಯಿಂದ ವರ್ತಿಸಬೇಕೆಂದು ಮನವಿ ಮಾಡಿದ್ದಾರೆ. ಇನ್ನೊಂದೆಡೆ ಪೊಲೀಸರು ತನಿಖಾ ಕಾರ್ಯದಲ್ಲಿ ನಿರತರಾಗಿದ್ದು, ಇದುವರೆಗೂ ಮೂವರನ್ನು ಬಂಧಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಇತರ 12 ಮಂದಿಯನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಮೃತನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ಹಿಂದೂ, ಹಿಂದುತ್ವ ಎಂದಿದ್ದಕ್ಕೆ ನನ್ನ ತಮ್ಮ ಆ ಪರಿಸ್ಥಿತಿಯಲ್ಲಿ ಬಿದ್ದಿದ್ದಾನೆ. ದಯವಿಟ್ಟು ಎಲ್ಲರೂ ಒಂದು ಸಲ ನೋಡಿ, ಎಲ್ಲಾ ನನ್ನ ಅಣ್ಣ-ತಮ್ಮಂದಿರಿಗೂ ಕೈಮುಗಿದು ಬೇಡಿಕೊಳ್ಳುತ್ತೇನೆ, ಮುಸ್ಲಿಂ, ಹಿಂದೂ ಎಲ್ಲಾ ಸಹೋದರರಿಗೆ ಬೇಡಿಕೊಳ್ಳುತ್ತೇನೆ. ನಿಮ್ಮ ಅಪ್ಪ ಅಮ್ಮನಿಗೆ ಒಳ್ಳೆಯ ಮಕ್ಕಳಾಗಿರಿ ಹೊರತು, ಇದನ್ನೆಲ್ಲ ಮಾಡಿಕೊಳ್ಳಲು ಹೋಗಬೇಡಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ; ಹರ್ಷ ಕೊಲೆ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...